Homeಮುಖಪುಟಮಣಿಪುರ | ಜನಾಂಗೀಯ ಹಿಂಸಾಚಾರದ ವೇಳೆ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ ಕುಕಿ ಯುವತಿ ಸಾವು

ಮಣಿಪುರ | ಜನಾಂಗೀಯ ಹಿಂಸಾಚಾರದ ವೇಳೆ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ ಕುಕಿ ಯುವತಿ ಸಾವು

- Advertisement -
- Advertisement -

ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರದ ವೇಳೆ, ಅಂದರೆ ಮೇ 2023ರಲ್ಲಿ ಸಾಮೂಹಿಕ ಅತ್ಯಾಚಾರಕ್ಕೊಳಗಾದ 20 ವರ್ಷದ ಕುಕಿ ಸಮುದಾಯದ ಯುವತಿ, ದೀರ್ಘಕಾಲದ ಅನಾರೋಗ್ಯದ ನಂತರ ಜನವರಿ 10ರಂದು ನಿಧನರಾದರು ಎಂದು ನ್ಯೂಸ್‌ಲಾಂಡ್ರಿ ಶನಿವಾರ (ಜ.17) ವರದಿ ಮಾಡಿದೆ.

ತನ್ನ ಮೇಲೆ ನಡೆದ ದೌರ್ಜನ್ಯದಿಂದ ಉಂಟಾದ ದೈಹಿಕ ಗಾಯ ಮತ್ತು ಮಾನಸಿಕ ಆಘಾತದಿಂದ ಆಕೆ ಸಂಪೂರ್ಣವಾಗಿ ಚೇತರಿಸಿಕೊಂಡಿರಲಿಲ್ಲ ಎಂದು ಕುಟುಂಬಸ್ಥರು ಹೇಳಿರುವುದಾಗಿ ವರದಿ ಉಲ್ಲೇಖಿಸಿದೆ.

ಮೇ 15, 2023ರಂದು ಇಂಫಾಲದಲ್ಲಿ ಎಟಿಎಂನಿಂದ ಹಣ ಪಡೆಯಲು ತೆರಳಿದ್ದಾಗ ಯುವತಿಯನ್ನು ಅಪಹರಿಸಲಾಗಿತ್ತು. ಆಕೆಯ ಹೇಳಿಕೆಯ ಪ್ರಕಾರ, ಹಲವು ಗಂಟೆಗಳ ಕಾಲ ಇಂಫಾಲ ನಗರದ ಹಲವು ಕಡೆಗಳಲ್ಲಿ ಆಕೆಯ ಮೇಲೆ ದೌರ್ಜನ್ಯ ನಡೆಸಲಾಗಿತ್ತು. ಗುಂಪು ಗುಂಪಾಗಿ ಪುರುಷರು ಆಕೆಯನ್ನು ಬಲವಂತವಾಗಿ ವಾಹನಕ್ಕೆ ಹತ್ತಿಸಿಕೊಂಡು ಹೋಗಿದ್ದರು. ಅವರಲ್ಲಿ ಕೆಲವರು, ತೀವ್ರಗಾಮಿ ಮೈತೆಯಿ ಸಂಘಟನೆಯಾದ ‘ಆರಂಬೈ ತೆಂಗೋಲ್‌’ಗೆ ಸಂಬಂಧಿಸಿದವರೆಂದು ಆರೋಪಿಸಲಾಗಿದೆ. ಕೊನೆಗೆ ಯುವತಿ ಒಬ್ಬರು ಆಟೋ-ರಿಕ್ಷಾ ಚಾಲಕನ ಸಹಾಯದಿಂದ ತಪ್ಪಿಸಿಕೊಂಡು ಬಂದಿದ್ದರು.

ಯುವತಿಯನ್ನು ಮೊದಲು ಕಾಂಗ್ಪೋಕ್ಪಿ ಜಿಲ್ಲೆಯ ಪರಿಹಾರ ಶಿಬಿರಗಳಿಗೆ ಕರೆದೊಯ್ಯಲಾಗಿತ್ತು. ನಂತರ ಮಣಿಪುರ ಮತ್ತು ನಾಗಾಲ್ಯಾಂಡ್‌ನ ಆಸ್ಪತ್ರೆಗಳಲ್ಲಿ ವೈದ್ಯಕೀಯ ಚಿಕಿತ್ಸೆ ನೀಡಲಾಗಿತ್ತು. ನಾವು ಸ್ವತಂತ್ರವಾಗಿ ಪರಿಶೀಲಿಸಿದ ಕೊಹಿಮಾದ ವೈದ್ಯಕೀಯ ವರದಿಯು ಆಕೆಯ ಗಾಯಗಳನ್ನು ‘ಆಕ್ರಮಣ ಮತ್ತು ಅತ್ಯಾಚಾರದ ಆರೋಪದ ಪ್ರಕರಣ’ ಎಂದು ದಾಖಲಿಸಿದೆ ಎಂದು scroll.in ವರದಿ ಮಾಡಿದೆ.

ಈ ಪ್ರಕರಣವನ್ನು ಮೊದಲು ಜೂನ್ 2023ರಲ್ಲಿ ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ವರದಿ ಮಾಡಲಾಗಿತ್ತು ಎಂದು ನ್ಯೂಸ್ ಲಾಂಡ್ರಿ ವರದಿ ಮಾಡಿದೆ.

ಜುಲೈ 2023ರಲ್ಲಿ ಯುವತಿ ಪೊಲೀಸ್ ಹೇಳಿಕೆಯನ್ನು ಸಲ್ಲಿಸಿದ್ದರು. ಪ್ರಕರಣವನ್ನು ಕೇಂದ್ರ ತನಿಖಾ ದಳಕ್ಕೆ ವರ್ಗಾಯಿಸುವ ಮೊದಲು ಶೂನ್ಯ ಎಫ್‌ಐಆರ್ ದಾಖಲಿಸಲಾಗಿತ್ತು. ಅಪರಾಧ ಎಲ್ಲಿ ಸಂಭವಿಸಿದೆ ಎಂಬುವುದನ್ನು ಲೆಕ್ಕಿಸದೆ ಪೊಲೀಸರು ಶೂನ್ಯ ಎಫ್‌ಐಆರ್ ದಾಖಲಿಸಬಹುದು. ನಂತರ ಅದನ್ನು ಈ ವಿಷಯದ ಬಗ್ಗೆ ನ್ಯಾಯವ್ಯಾಪ್ತಿಯನ್ನು ಹೊಂದಿರುವ ಪೊಲೀಸ್ ಠಾಣೆಗೆ ವರ್ಗಾಯಿಸಬೇಕು.

ಘಟನೆ ನಡೆದು ಎರಡು ವರ್ಷಗಳಿಗೂ ಹೆಚ್ಚು ಸಮಯ ಕಳೆದರೂ, ಇದುವರೆಗೆ ಯಾವುದೇ ಆರೋಪಿಗಳನ್ನು ಬಂಧಿಸಿಲ್ಲ ಎಂದು ವರದಿಗಳು ಹೇಳಿವೆ.

ತನ್ನ ಮೇಲೆ ನಡೆದ ದೌರ್ಜನ್ಯದ ಆಘಾತದಿಂದಾಗಿ ನನ್ನ ಮಗಳು ಉಸಿರಾಟದ ತೊಂದರೆ, ನಿದ್ರಾಹೀನತೆ ಮತ್ತು ಮಾನಸಿಕ ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದಳು ಎಂದು ಸಂತ್ರಸ್ತೆಯ ತಾಯಿ ಲಿಂಗ್ನೆಯ್ ಹಾವೋಕಿಪ್ ಹೇಳಿದ್ದಾಗಿ ನ್ಯೂಸ್‌ಲಾಂಡ್ರಿ ವರದಿ ಮಾಡಿದೆ.

“ಕಳೆದ ಎರಡು ವರ್ಷಗಳಿಂದ ಆಕೆ ನಿರಂತರ ಭಯದಲ್ಲಿ ಬದುಕುತ್ತಿದ್ದಳು. ಆಕೆ ಇನ್ನು ಮುಂದೆ ಬದುಕಲು ಬಯಸುವುದಿಲ್ಲ ಎಂದು ನನಗೆ ಹೇಳುತ್ತಿದ್ದಳು. ಒಮ್ಮೆ, ತನಗೆ ಏನಾಯಿತು ಎಂದು ಎಲ್ಲರಿಗೂ ತಿಳಿದಿದೆ. ಅದರಿಂದ ಆಕೆ ತುಂಬಾ ದುರ್ಬಲಳಾಗಿದ್ದಾಳೆಂದು ನನಗೆ ಹೇಳಿದ್ದಳು” ಎಂದು ಹಾವೋಕಿಪ್ ತಿಳಿಸಿದ್ದಾಗಿ ವರದಿ ಉಲ್ಲೇಖಿಸಿದೆ.

ಯುವತಿಗೆ ಸಂತಾಪ ಸೂಚಿಸಿ ಕುಕಿ-ಝೋ ಸಮುದಾಯವು ಶನಿವಾರ ಚುರಚಂದಪುರದಲ್ಲಿ ಕ್ಯಾಂಡಲ್ ಮಾರ್ಚ್ ನಡೆಸಿದೆ.

ಮಣಿಪುರದಲ್ಲಿ ಮೇ 2023ರಲ್ಲಿ ಮೈತೇಯಿ ಮತ್ತು ಕುಕಿ-ಝೋ ಸಮುದಾಯಗಳ ನಡುವೆ ಜನಾಂಗೀಯ ಘರ್ಷಣೆಗಳು ಭುಗಿಲೆದ್ದ ನಂತರ ಕನಿಷ್ಠ 260 ಜನರು ಸಾವನ್ನಪ್ಪಿದ್ದಾರೆ ಮತ್ತು 59,000ಕ್ಕೂ ಹೆಚ್ಚು ಜನರು ಸ್ಥಳಾಂತರಗೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...