Homeಮುಖಪುಟಮಣಿಪುರ | ಜನಾಂಗೀಯ ಹಿಂಸಾಚಾರದ ವೇಳೆ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ ಕುಕಿ ಯುವತಿ ಸಾವು

ಮಣಿಪುರ | ಜನಾಂಗೀಯ ಹಿಂಸಾಚಾರದ ವೇಳೆ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ ಕುಕಿ ಯುವತಿ ಸಾವು

- Advertisement -
- Advertisement -

ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರದ ವೇಳೆ, ಅಂದರೆ ಮೇ 2023ರಲ್ಲಿ ಸಾಮೂಹಿಕ ಅತ್ಯಾಚಾರಕ್ಕೊಳಗಾದ 20 ವರ್ಷದ ಕುಕಿ ಸಮುದಾಯದ ಯುವತಿ, ದೀರ್ಘಕಾಲದ ಅನಾರೋಗ್ಯದ ನಂತರ ಜನವರಿ 10ರಂದು ನಿಧನರಾದರು ಎಂದು ನ್ಯೂಸ್‌ಲಾಂಡ್ರಿ ಶನಿವಾರ (ಜ.17) ವರದಿ ಮಾಡಿದೆ.

ತನ್ನ ಮೇಲೆ ನಡೆದ ದೌರ್ಜನ್ಯದಿಂದ ಉಂಟಾದ ದೈಹಿಕ ಗಾಯ ಮತ್ತು ಮಾನಸಿಕ ಆಘಾತದಿಂದ ಆಕೆ ಸಂಪೂರ್ಣವಾಗಿ ಚೇತರಿಸಿಕೊಂಡಿರಲಿಲ್ಲ ಎಂದು ಕುಟುಂಬಸ್ಥರು ಹೇಳಿರುವುದಾಗಿ ವರದಿ ಉಲ್ಲೇಖಿಸಿದೆ.

ಮೇ 15, 2023ರಂದು ಇಂಫಾಲದಲ್ಲಿ ಎಟಿಎಂನಿಂದ ಹಣ ಪಡೆಯಲು ತೆರಳಿದ್ದಾಗ ಯುವತಿಯನ್ನು ಅಪಹರಿಸಲಾಗಿತ್ತು. ಆಕೆಯ ಹೇಳಿಕೆಯ ಪ್ರಕಾರ, ಹಲವು ಗಂಟೆಗಳ ಕಾಲ ಇಂಫಾಲ ನಗರದ ಹಲವು ಕಡೆಗಳಲ್ಲಿ ಆಕೆಯ ಮೇಲೆ ದೌರ್ಜನ್ಯ ನಡೆಸಲಾಗಿತ್ತು. ಗುಂಪು ಗುಂಪಾಗಿ ಪುರುಷರು ಆಕೆಯನ್ನು ಬಲವಂತವಾಗಿ ವಾಹನಕ್ಕೆ ಹತ್ತಿಸಿಕೊಂಡು ಹೋಗಿದ್ದರು. ಅವರಲ್ಲಿ ಕೆಲವರು, ತೀವ್ರಗಾಮಿ ಮೈತೆಯಿ ಸಂಘಟನೆಯಾದ ‘ಆರಂಬೈ ತೆಂಗೋಲ್‌’ಗೆ ಸಂಬಂಧಿಸಿದವರೆಂದು ಆರೋಪಿಸಲಾಗಿದೆ. ಕೊನೆಗೆ ಯುವತಿ ಒಬ್ಬರು ಆಟೋ-ರಿಕ್ಷಾ ಚಾಲಕನ ಸಹಾಯದಿಂದ ತಪ್ಪಿಸಿಕೊಂಡು ಬಂದಿದ್ದರು.

ಯುವತಿಯನ್ನು ಮೊದಲು ಕಾಂಗ್ಪೋಕ್ಪಿ ಜಿಲ್ಲೆಯ ಪರಿಹಾರ ಶಿಬಿರಗಳಿಗೆ ಕರೆದೊಯ್ಯಲಾಗಿತ್ತು. ನಂತರ ಮಣಿಪುರ ಮತ್ತು ನಾಗಾಲ್ಯಾಂಡ್‌ನ ಆಸ್ಪತ್ರೆಗಳಲ್ಲಿ ವೈದ್ಯಕೀಯ ಚಿಕಿತ್ಸೆ ನೀಡಲಾಗಿತ್ತು. ನಾವು ಸ್ವತಂತ್ರವಾಗಿ ಪರಿಶೀಲಿಸಿದ ಕೊಹಿಮಾದ ವೈದ್ಯಕೀಯ ವರದಿಯು ಆಕೆಯ ಗಾಯಗಳನ್ನು ‘ಆಕ್ರಮಣ ಮತ್ತು ಅತ್ಯಾಚಾರದ ಆರೋಪದ ಪ್ರಕರಣ’ ಎಂದು ದಾಖಲಿಸಿದೆ ಎಂದು scroll.in ವರದಿ ಮಾಡಿದೆ.

ಈ ಪ್ರಕರಣವನ್ನು ಮೊದಲು ಜೂನ್ 2023ರಲ್ಲಿ ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ವರದಿ ಮಾಡಲಾಗಿತ್ತು ಎಂದು ನ್ಯೂಸ್ ಲಾಂಡ್ರಿ ವರದಿ ಮಾಡಿದೆ.

ಜುಲೈ 2023ರಲ್ಲಿ ಯುವತಿ ಪೊಲೀಸ್ ಹೇಳಿಕೆಯನ್ನು ಸಲ್ಲಿಸಿದ್ದರು. ಪ್ರಕರಣವನ್ನು ಕೇಂದ್ರ ತನಿಖಾ ದಳಕ್ಕೆ ವರ್ಗಾಯಿಸುವ ಮೊದಲು ಶೂನ್ಯ ಎಫ್‌ಐಆರ್ ದಾಖಲಿಸಲಾಗಿತ್ತು. ಅಪರಾಧ ಎಲ್ಲಿ ಸಂಭವಿಸಿದೆ ಎಂಬುವುದನ್ನು ಲೆಕ್ಕಿಸದೆ ಪೊಲೀಸರು ಶೂನ್ಯ ಎಫ್‌ಐಆರ್ ದಾಖಲಿಸಬಹುದು. ನಂತರ ಅದನ್ನು ಈ ವಿಷಯದ ಬಗ್ಗೆ ನ್ಯಾಯವ್ಯಾಪ್ತಿಯನ್ನು ಹೊಂದಿರುವ ಪೊಲೀಸ್ ಠಾಣೆಗೆ ವರ್ಗಾಯಿಸಬೇಕು.

ಘಟನೆ ನಡೆದು ಎರಡು ವರ್ಷಗಳಿಗೂ ಹೆಚ್ಚು ಸಮಯ ಕಳೆದರೂ, ಇದುವರೆಗೆ ಯಾವುದೇ ಆರೋಪಿಗಳನ್ನು ಬಂಧಿಸಿಲ್ಲ ಎಂದು ವರದಿಗಳು ಹೇಳಿವೆ.

ತನ್ನ ಮೇಲೆ ನಡೆದ ದೌರ್ಜನ್ಯದ ಆಘಾತದಿಂದಾಗಿ ನನ್ನ ಮಗಳು ಉಸಿರಾಟದ ತೊಂದರೆ, ನಿದ್ರಾಹೀನತೆ ಮತ್ತು ಮಾನಸಿಕ ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದಳು ಎಂದು ಸಂತ್ರಸ್ತೆಯ ತಾಯಿ ಲಿಂಗ್ನೆಯ್ ಹಾವೋಕಿಪ್ ಹೇಳಿದ್ದಾಗಿ ನ್ಯೂಸ್‌ಲಾಂಡ್ರಿ ವರದಿ ಮಾಡಿದೆ.

“ಕಳೆದ ಎರಡು ವರ್ಷಗಳಿಂದ ಆಕೆ ನಿರಂತರ ಭಯದಲ್ಲಿ ಬದುಕುತ್ತಿದ್ದಳು. ಆಕೆ ಇನ್ನು ಮುಂದೆ ಬದುಕಲು ಬಯಸುವುದಿಲ್ಲ ಎಂದು ನನಗೆ ಹೇಳುತ್ತಿದ್ದಳು. ಒಮ್ಮೆ, ತನಗೆ ಏನಾಯಿತು ಎಂದು ಎಲ್ಲರಿಗೂ ತಿಳಿದಿದೆ. ಅದರಿಂದ ಆಕೆ ತುಂಬಾ ದುರ್ಬಲಳಾಗಿದ್ದಾಳೆಂದು ನನಗೆ ಹೇಳಿದ್ದಳು” ಎಂದು ಹಾವೋಕಿಪ್ ತಿಳಿಸಿದ್ದಾಗಿ ವರದಿ ಉಲ್ಲೇಖಿಸಿದೆ.

ಯುವತಿಗೆ ಸಂತಾಪ ಸೂಚಿಸಿ ಕುಕಿ-ಝೋ ಸಮುದಾಯವು ಶನಿವಾರ ಚುರಚಂದಪುರದಲ್ಲಿ ಕ್ಯಾಂಡಲ್ ಮಾರ್ಚ್ ನಡೆಸಿದೆ.

ಮಣಿಪುರದಲ್ಲಿ ಮೇ 2023ರಲ್ಲಿ ಮೈತೇಯಿ ಮತ್ತು ಕುಕಿ-ಝೋ ಸಮುದಾಯಗಳ ನಡುವೆ ಜನಾಂಗೀಯ ಘರ್ಷಣೆಗಳು ಭುಗಿಲೆದ್ದ ನಂತರ ಕನಿಷ್ಠ 260 ಜನರು ಸಾವನ್ನಪ್ಪಿದ್ದಾರೆ ಮತ್ತು 59,000ಕ್ಕೂ ಹೆಚ್ಚು ಜನರು ಸ್ಥಳಾಂತರಗೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...