Homeಮುಖಪುಟಮಣಿಪುರ | ಅತಿದೊಡ್ಡ ಶರಣಾಗತಿ : 246 ಶಸ್ತ್ರಾಸ್ತ್ರಗಳನ್ನು ಭದ್ರತಾ ಪಡೆಗಳಿಗೆ ಒಪ್ಪಿಸಿದ ಮೈತೇಯಿ ಗುಂಪಿನ...

ಮಣಿಪುರ | ಅತಿದೊಡ್ಡ ಶರಣಾಗತಿ : 246 ಶಸ್ತ್ರಾಸ್ತ್ರಗಳನ್ನು ಭದ್ರತಾ ಪಡೆಗಳಿಗೆ ಒಪ್ಪಿಸಿದ ಮೈತೇಯಿ ಗುಂಪಿನ ಆರಂಬೈ ತೆಂಗೋಲ್

- Advertisement -
- Advertisement -

ಮಣಿಪುರದಲ್ಲಿ ಜನಾಂಗೀಯ ಸಂಘರ್ಷದ ಸಂದರ್ಭದಲ್ಲಿ ರಾಜ್ಯದ ಶಸ್ತ್ರಾಸ್ತ್ರ ಸಂಗ್ರಹಾಲಯಗಳಿಂದ ಲೂಟಿ ಮಾಡಿದ ಶಸ್ತ್ರಾಸ್ತ್ರಗಳನ್ನು ತಂದೊಪ್ಪಿಸಲು ರಾಜ್ಯಪಾಲ ಅಜಯ್ ಕುಮಾರ್ ಭಲ್ಲಾ ಅವರು ನಿಗದಿಪಡಿಸಿದ ಗಡುವಿನ ಕೊನೆಯ ದಿನವಾದ ಗುರುವಾರ (ಫೆ.27) ಮೈತೇಯಿ ಗುಂಪಿನ ಆರಂಬೈ ತೆಂಗೋಲ್ ಇಂಫಾಲ್‌ನಲ್ಲಿ ಭದ್ರತಾ ಪಡೆಗಳ ಮುಂದೆ 246 ಶಸ್ತ್ರಾಸ್ತ್ರಗಳನ್ನು ಶರಣಾಗಿಸಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಇಂಫಾಲ್ ಪಶ್ಚಿಮದಲ್ಲಿ 1ನೇ ಮಣಿಪುರ ರೈಫಲ್ಸ್ ಪಡೆಗೆ ಆರಂಬೈ ತೆಂಗೋಲ್ ಶಸ್ತ್ರಾಸ್ತ್ರಗಳನ್ನು ಶರಣಾಗಿಸಿದೆ. ರಾಜ್ಯದಾದ್ಯಂತ ಹಲವಾರು ಸ್ಥಳಗಳಲ್ಲಿ ಇನ್ನೂ 61 ಶಸ್ತ್ರಾಸ್ತ್ರಗಳನ್ನು ಶರಣಾಗಿಸಲಾಗಿದ್ದು, ಒಟ್ಟು ಶರಣಾಗಿಸಿದ ಶಸ್ತ್ರಾಸ್ತ್ರಗಳ ಸಂಖ್ಯೆ 307ಕ್ಕೆ ತಲುಪಿದೆ.

“ಇಂತಹ ಸ್ವಯಂಪ್ರೇರಿತ ಶಸ್ತ್ರಾಸ್ತ್ರಗಳ ಶರಣಾಗತಿಯು ರಾಜ್ಯದಲ್ಲಿ ಶಾಂತಿ, ಕೋಮು ಸೌಹಾರ್ದತೆ ಮತ್ತು ಕಾನೂನು ಸುವ್ಯವಸ್ಥೆಯನ್ನು ಪುನಃಸ್ಥಾಪಿಸಲು ಸಹಾಯ ಮಾಡುತ್ತದೆ” ಎಂದು ಮಣಿಪುರ ಪೊಲೀಸರು ತಿಳಿಸಿದ್ದಾರೆ.

ಮಣಿಪುರದಲ್ಲಿ ಸಂಘರ್ಷ ಪ್ರಾರಂಭವಾದಾಗಿನಿಂದ ಶರಣಾಗಿಸಿದ ಅಕ್ರಮವಾಗಿ ಹೊಂದಿದ್ದ ಶಸ್ತ್ರಾಸ್ತ್ರಗಳ ಅತಿದೊಡ್ಡ ಸೆಟ್ ಇದಾಗಿದೆ.

ಎಲ್ಲಾ ಸಮುದಾಯಗಳ ಜನರು ಒಂದು ವಾರದೊಳಗೆ ಭದ್ರತಾ ಸಂಸ್ಥೆಗಳಿಗೆ ಲೂಟಿ ಮಾಡಿದ ಶಸ್ತ್ರಾಸ್ತ್ರಗಳನ್ನು ಒಪ್ಪಿಸುವಂತೆ ಫೆಬ್ರವರಿ 20ರಂದು ರಾಜ್ಯಪಾಲ ಭಲ್ಲಾ ಅವರು ಮನವಿ ಮಾಡಿದ್ದರು. ನಿಗದಿತ ಸಮಯದೊಳಗೆ ಶಸ್ತ್ರಾಸ್ತ್ರ ತಂದೊಪ್ಪಿಸುವವರ ಮೇಲೆ ಯಾವುದೇ ದಂಡನಾತ್ಮಕ ಕ್ರಮ ಕೈಗೊಳ್ಳುವುದಿಲ್ಲ ಎಂದು ಭರವಸೆ ನೀಡಿದ್ದರು. ಗಡುವಿನ ನಂತರ ಶಸ್ತ್ರಾಸ್ತ್ರಗಳನ್ನು ಹೊಂದಿದ್ದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದ್ದರು.

ಮಣಿಪುರದಲ್ಲಿ ಸಂಘರ್ಷ ಪ್ರಾರಂಭವಾದಾಗಿನಿಂದ, ರಾಜ್ಯದ ಶಸ್ತ್ರಾಗಾರಗಳಿಂದ ಸುಮಾರು 6,000 ಶಸ್ತ್ರಾಸ್ತ್ರಗಳನ್ನು ಲೂಟಿ ಮಾಡಲಾಗಿದೆ ಎಂದು ವರದಿಯಾಗಿತ್ತು. ಸೆಪ್ಟೆಂಬರ್‌ನಲ್ಲಿ ಭದ್ರತಾ ಸಲಹೆಗಾರ ಕುಲದೀಪ್ ಸಿಂಗ್ ಒದಗಿಸಿದ ಮಾಹಿತಿ ಪ್ರಕಾರ, ಭದ್ರತಾ ಕಾರ್ಯಾಚರಣೆಗಳಲ್ಲಿ ಈ ಶಸ್ತ್ರಾಸ್ತ್ರಗಳ ಪೈಕಿ ಸುಮಾರು 1,200 ಅನ್ನು ವಶಪಡಿಸಿಕೊಳ್ಳಲಾಗಿದೆ.

ಫೆಬ್ರವರಿ 25ರಂದು, ಆರಂಬೈ ತೆಂಗೋಲ್ ರಾಜ್ಯಪಾಲ ಭಲ್ಲಾ ಅವರನ್ನು ಭೇಟಿಯಾಗಿ ಲೂಟಿ ಮಾಡಿದ ಶಸ್ತ್ರಾಸ್ತ್ರಗಳನ್ನು ಒಪ್ಪಿಸಲು ಷರತ್ತುಗಳನ್ನು ವಿಧಿಸಿತ್ತು.

ಮ್ಯಾನ್ಮಾರ್ -ಭಾರತದ ಗಡಿಯಲ್ಲಿ ಬೇಲಿ ನಿರ್ಮಾಣ, 1951 ಅನ್ನು ಮೂಲ ವರ್ಷವಾಗಿಟ್ಟುಕೊಂಡು ರಾಜ್ಯದಲ್ಲಿ ರಾಷ್ಟ್ರೀಯ ನಾಗರಿಕರ ನೋಂದಣಿಯನ್ನು (ಎನ್‌ಆರ್‌ಸಿ) ಅನುಷ್ಠಾನಗೊಳಿಸುವುದು, ಎಲ್ಲಾ ಅಕ್ರಮ ವಲಸಿಗರನ್ನು ಅವರ ಮೂಲ ಸ್ಥಳಗಳಿಗೆ ಗಡಿಪಾರು ಮಾಡುವುದು ಮತ್ತು ಮೈತೇಯಿ ಸಮುದಾಯಕ್ಕೆ ಪರಿಶಿಷ್ಟ ಪಂಗಡದ ಸ್ಥಾನಮಾನವನ್ನು ‘ಮರುಸ್ಥಾಪಿಸುವುದು’ ಈ ಷರತ್ತುಗಳಲ್ಲಿ ಸೇರಿವೆ.

ಮೈತೇಯಿಯನ್ನು ಪರಿಶಿಷ್ಟ ಪಂಗಡಗಳ ಪಟ್ಟಿಗೆ ಸೇರಿಸುವುದನ್ನು ಪರಿಗಣಿಸುವಂತೆ ರಾಜ್ಯ ಸರ್ಕಾರಕ್ಕೆ ಮಾರ್ಚ್ 2023ರಲ್ಲಿ ಮಣಿಪುರ ಹೈಕೋರ್ಟ್ ನಿರ್ದೇಶನ ನೀಡಿತ್ತು. ಇದಕ್ಕೆ ಕುಕಿ-ಝೋ ಬುಡಕಟ್ಟು ಗುಂಪು ವಿರೋಧ ವ್ಯಕ್ತಪಡಿಸಿ ಪ್ರತಿಭಟನೆ ಪ್ರಾರಂಭಿಸಿದ ಬಳಿಕ ಹಿಂಸಾಚಾರ ಉಂಟಾಗಿತ್ತು.

ಸುಮಾರು ಎರಡು ವರ್ಷಗಳ ಮೈತೇಯಿ ಮತ್ತು ಕುಕಿ-ಝೋ ಸಮುದಾಯಗಳ ನಡುವಿನ ಜನಾಂಗೀಯ ಹಿಂಸಾಚಾರದಲ್ಲಿ ಇದುವರೆಗೆ 258 ಜನರು ಬಲಿಯಾಗಿದ್ದಾರೆ. ಸುಮಾರು 59,000ಕ್ಕೂ ಹೆಚ್ಚು ಜನರು ನಿರಾಶ್ರಿತರಾಗಿದ್ದಾರೆ ಅಥವಾ ತಮ್ಮ ಮನೆಗಳಿಂದ ಸ್ಥಳಾಂತರಗೊಂಡಿದ್ದಾರೆ.

ಹಿಂಸಾಚಾರ ತೀವ್ರಗೊಂಡಾಗ, ಫೆಬ್ರವರಿ 2024ರಲ್ಲಿ ಹೈಕೋರ್ಟ್ ತನ್ನ ನಿರ್ದೇಶನಗಳನ್ನು ಹೊಂದಿರುವ ಪ್ಯಾರಾಗ್ರಾಫ್ ಅನ್ನು ತೆಗೆದುಹಾಕಲು ಆದೇಶಿಸಿದೆ.

ಕುಕಿ-ಝೋ ಗುಂಪಿನ ಜೊತೆ ಮಾಡಿಕೊಂಡಿರುವ ಶಾಂತಿ ಒಪ್ಪಂದವನ್ನು ರದ್ದುಗೊಳಿಸಿ, ಅವರ ವಿರುದ್ದ ನೇರ ಕಾರ್ಯಾಚರಣೆ ನಡೆಸುವಂತೆ ಫೆಬ್ರವರಿ, 25 2025ರಂದು ರಾಜ್ಯಪಾಲರನ್ನು ಭೇಟಿಯಾದ ವೇಳೆ ಮೈತೇಯಿ ಗುಂಪು ಆಗ್ರಹಿಸಿದೆ.

2008ರಲ್ಲಿ ಕೇಂದ್ರ ಸರ್ಕಾರ, ಮಣಿಪುರ ಸರ್ಕಾರ ಮತ್ತು ಕುಕಿ ಗುಂಪಿನ ಎರಡು ಸಂಘಟನೆಗಳಾದ ಕುಕಿ ನ್ಯಾಷನಲ್ ಆರ್ಗನೈಸೇಷನ್ ಮತ್ತು ಯುನೈಟೆಡ್ ಪೀಪಲ್ಸ್ ಫ್ರಂಟ್ ಜೊತೆ ಕಾರ್ಯಾಚರಣೆ ಸ್ಥಗಿತ ಶಾಂತಿ  ಒಪ್ಪಂದಕ್ಕೆ ಸಹಿ ಹಾಕಿದೆ.

ಒಪ್ಪಂದದ ಪ್ರಕಾರ, ಭದ್ರತಾ ಪಡೆಗಳು ಮತ್ತು ಕುಕಿ ಗುಂಪುಗಳು ಪರಸ್ಪರ ಯಾವುದೇ ಕಾರ್ಯಾಚರಣೆಗಳನ್ನು ಪ್ರಾರಂಭಿಸುವುದನ್ನು ನಿಷೇಧಿಸಲಾಗಿದೆ. ಕುಕಿ ಗುಂಪುಗಳು ನೆಲದ ಕಾನೂನುಗಳನ್ನು ಪಾಲಿಸಬೇಕು ಮತ್ತು ಕೇಂದ್ರ ಸರ್ಕಾರ ಗೊತ್ತುಪಡಿಸಿದ ಶಿಬಿರಗಳಿಗೆ ಸೀಮಿತವಾಗಿರಬೇಕು.

ಮಣಿಪುರ ರೈಫಲ್ಸ್ ಕಾಂಪ್ಲೆಕ್ಸ್‌ನಿಂದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ಲೂಟಿ ಮಾಡಿದ ಪ್ರಕರಣ ಸೇರಿದಂತೆ ಹಲವಾರು ಪ್ರಕರಣಗಳಿಗೆ ಸಂಬಂಧಿಸಿದಂತೆ ಆರಂಬೈ ತೆಂಗೋಲ್ ಮತ್ತು ಅದರ ಮುಖ್ಯಸ್ಥ ಕೊರೌಂಗನ್ಬಾ ಖುಮಾನ್ ಅವರ ವಿರುದ್ದ ರಾಷ್ಟ್ರೀಯ ತನಿಖಾ ಸಂಸ್ಥೆ ತನಿಖೆ ನಡೆಸುತ್ತಿದೆ.

ಮೇ 2023ರಲ್ಲಿ ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ ಪ್ರಾರಂಭವಾದಾಗಿನಿಂದ ಮೈತೇಯಿ ಗುಂಪೇ ಕುಕಿ-ಝೋ ಸಮುದಾಯದ ವಿರುದ್ಧ ಹಿಂಸಾಚಾರವನ್ನು ಸಂಘಟಿಸಿದೆ ಎಂದು ಆರೋಪಿಸಲಾಗಿದೆ.

26/11ರ ಮುಂಬೈ ದಾಳಿ ಪ್ರಕರಣ: ಖುಲಾಸೆಗೊಂಡ ವ್ಯಕ್ತಿ ಜೀವನೋಪಾಯಕ್ಕಾಗಿ ಹೈಕೋರ್ಟ್ ಮೊರೆ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...