Homeಮುಖಪುಟಮಣಿಪುರ | ಅತಿದೊಡ್ಡ ಶರಣಾಗತಿ : 246 ಶಸ್ತ್ರಾಸ್ತ್ರಗಳನ್ನು ಭದ್ರತಾ ಪಡೆಗಳಿಗೆ ಒಪ್ಪಿಸಿದ ಮೈತೇಯಿ ಗುಂಪಿನ...

ಮಣಿಪುರ | ಅತಿದೊಡ್ಡ ಶರಣಾಗತಿ : 246 ಶಸ್ತ್ರಾಸ್ತ್ರಗಳನ್ನು ಭದ್ರತಾ ಪಡೆಗಳಿಗೆ ಒಪ್ಪಿಸಿದ ಮೈತೇಯಿ ಗುಂಪಿನ ಆರಂಬೈ ತೆಂಗೋಲ್

- Advertisement -
- Advertisement -

ಮಣಿಪುರದಲ್ಲಿ ಜನಾಂಗೀಯ ಸಂಘರ್ಷದ ಸಂದರ್ಭದಲ್ಲಿ ರಾಜ್ಯದ ಶಸ್ತ್ರಾಸ್ತ್ರ ಸಂಗ್ರಹಾಲಯಗಳಿಂದ ಲೂಟಿ ಮಾಡಿದ ಶಸ್ತ್ರಾಸ್ತ್ರಗಳನ್ನು ತಂದೊಪ್ಪಿಸಲು ರಾಜ್ಯಪಾಲ ಅಜಯ್ ಕುಮಾರ್ ಭಲ್ಲಾ ಅವರು ನಿಗದಿಪಡಿಸಿದ ಗಡುವಿನ ಕೊನೆಯ ದಿನವಾದ ಗುರುವಾರ (ಫೆ.27) ಮೈತೇಯಿ ಗುಂಪಿನ ಆರಂಬೈ ತೆಂಗೋಲ್ ಇಂಫಾಲ್‌ನಲ್ಲಿ ಭದ್ರತಾ ಪಡೆಗಳ ಮುಂದೆ 246 ಶಸ್ತ್ರಾಸ್ತ್ರಗಳನ್ನು ಶರಣಾಗಿಸಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಇಂಫಾಲ್ ಪಶ್ಚಿಮದಲ್ಲಿ 1ನೇ ಮಣಿಪುರ ರೈಫಲ್ಸ್ ಪಡೆಗೆ ಆರಂಬೈ ತೆಂಗೋಲ್ ಶಸ್ತ್ರಾಸ್ತ್ರಗಳನ್ನು ಶರಣಾಗಿಸಿದೆ. ರಾಜ್ಯದಾದ್ಯಂತ ಹಲವಾರು ಸ್ಥಳಗಳಲ್ಲಿ ಇನ್ನೂ 61 ಶಸ್ತ್ರಾಸ್ತ್ರಗಳನ್ನು ಶರಣಾಗಿಸಲಾಗಿದ್ದು, ಒಟ್ಟು ಶರಣಾಗಿಸಿದ ಶಸ್ತ್ರಾಸ್ತ್ರಗಳ ಸಂಖ್ಯೆ 307ಕ್ಕೆ ತಲುಪಿದೆ.

“ಇಂತಹ ಸ್ವಯಂಪ್ರೇರಿತ ಶಸ್ತ್ರಾಸ್ತ್ರಗಳ ಶರಣಾಗತಿಯು ರಾಜ್ಯದಲ್ಲಿ ಶಾಂತಿ, ಕೋಮು ಸೌಹಾರ್ದತೆ ಮತ್ತು ಕಾನೂನು ಸುವ್ಯವಸ್ಥೆಯನ್ನು ಪುನಃಸ್ಥಾಪಿಸಲು ಸಹಾಯ ಮಾಡುತ್ತದೆ” ಎಂದು ಮಣಿಪುರ ಪೊಲೀಸರು ತಿಳಿಸಿದ್ದಾರೆ.

ಮಣಿಪುರದಲ್ಲಿ ಸಂಘರ್ಷ ಪ್ರಾರಂಭವಾದಾಗಿನಿಂದ ಶರಣಾಗಿಸಿದ ಅಕ್ರಮವಾಗಿ ಹೊಂದಿದ್ದ ಶಸ್ತ್ರಾಸ್ತ್ರಗಳ ಅತಿದೊಡ್ಡ ಸೆಟ್ ಇದಾಗಿದೆ.

ಎಲ್ಲಾ ಸಮುದಾಯಗಳ ಜನರು ಒಂದು ವಾರದೊಳಗೆ ಭದ್ರತಾ ಸಂಸ್ಥೆಗಳಿಗೆ ಲೂಟಿ ಮಾಡಿದ ಶಸ್ತ್ರಾಸ್ತ್ರಗಳನ್ನು ಒಪ್ಪಿಸುವಂತೆ ಫೆಬ್ರವರಿ 20ರಂದು ರಾಜ್ಯಪಾಲ ಭಲ್ಲಾ ಅವರು ಮನವಿ ಮಾಡಿದ್ದರು. ನಿಗದಿತ ಸಮಯದೊಳಗೆ ಶಸ್ತ್ರಾಸ್ತ್ರ ತಂದೊಪ್ಪಿಸುವವರ ಮೇಲೆ ಯಾವುದೇ ದಂಡನಾತ್ಮಕ ಕ್ರಮ ಕೈಗೊಳ್ಳುವುದಿಲ್ಲ ಎಂದು ಭರವಸೆ ನೀಡಿದ್ದರು. ಗಡುವಿನ ನಂತರ ಶಸ್ತ್ರಾಸ್ತ್ರಗಳನ್ನು ಹೊಂದಿದ್ದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದ್ದರು.

ಮಣಿಪುರದಲ್ಲಿ ಸಂಘರ್ಷ ಪ್ರಾರಂಭವಾದಾಗಿನಿಂದ, ರಾಜ್ಯದ ಶಸ್ತ್ರಾಗಾರಗಳಿಂದ ಸುಮಾರು 6,000 ಶಸ್ತ್ರಾಸ್ತ್ರಗಳನ್ನು ಲೂಟಿ ಮಾಡಲಾಗಿದೆ ಎಂದು ವರದಿಯಾಗಿತ್ತು. ಸೆಪ್ಟೆಂಬರ್‌ನಲ್ಲಿ ಭದ್ರತಾ ಸಲಹೆಗಾರ ಕುಲದೀಪ್ ಸಿಂಗ್ ಒದಗಿಸಿದ ಮಾಹಿತಿ ಪ್ರಕಾರ, ಭದ್ರತಾ ಕಾರ್ಯಾಚರಣೆಗಳಲ್ಲಿ ಈ ಶಸ್ತ್ರಾಸ್ತ್ರಗಳ ಪೈಕಿ ಸುಮಾರು 1,200 ಅನ್ನು ವಶಪಡಿಸಿಕೊಳ್ಳಲಾಗಿದೆ.

ಫೆಬ್ರವರಿ 25ರಂದು, ಆರಂಬೈ ತೆಂಗೋಲ್ ರಾಜ್ಯಪಾಲ ಭಲ್ಲಾ ಅವರನ್ನು ಭೇಟಿಯಾಗಿ ಲೂಟಿ ಮಾಡಿದ ಶಸ್ತ್ರಾಸ್ತ್ರಗಳನ್ನು ಒಪ್ಪಿಸಲು ಷರತ್ತುಗಳನ್ನು ವಿಧಿಸಿತ್ತು.

ಮ್ಯಾನ್ಮಾರ್ -ಭಾರತದ ಗಡಿಯಲ್ಲಿ ಬೇಲಿ ನಿರ್ಮಾಣ, 1951 ಅನ್ನು ಮೂಲ ವರ್ಷವಾಗಿಟ್ಟುಕೊಂಡು ರಾಜ್ಯದಲ್ಲಿ ರಾಷ್ಟ್ರೀಯ ನಾಗರಿಕರ ನೋಂದಣಿಯನ್ನು (ಎನ್‌ಆರ್‌ಸಿ) ಅನುಷ್ಠಾನಗೊಳಿಸುವುದು, ಎಲ್ಲಾ ಅಕ್ರಮ ವಲಸಿಗರನ್ನು ಅವರ ಮೂಲ ಸ್ಥಳಗಳಿಗೆ ಗಡಿಪಾರು ಮಾಡುವುದು ಮತ್ತು ಮೈತೇಯಿ ಸಮುದಾಯಕ್ಕೆ ಪರಿಶಿಷ್ಟ ಪಂಗಡದ ಸ್ಥಾನಮಾನವನ್ನು ‘ಮರುಸ್ಥಾಪಿಸುವುದು’ ಈ ಷರತ್ತುಗಳಲ್ಲಿ ಸೇರಿವೆ.

ಮೈತೇಯಿಯನ್ನು ಪರಿಶಿಷ್ಟ ಪಂಗಡಗಳ ಪಟ್ಟಿಗೆ ಸೇರಿಸುವುದನ್ನು ಪರಿಗಣಿಸುವಂತೆ ರಾಜ್ಯ ಸರ್ಕಾರಕ್ಕೆ ಮಾರ್ಚ್ 2023ರಲ್ಲಿ ಮಣಿಪುರ ಹೈಕೋರ್ಟ್ ನಿರ್ದೇಶನ ನೀಡಿತ್ತು. ಇದಕ್ಕೆ ಕುಕಿ-ಝೋ ಬುಡಕಟ್ಟು ಗುಂಪು ವಿರೋಧ ವ್ಯಕ್ತಪಡಿಸಿ ಪ್ರತಿಭಟನೆ ಪ್ರಾರಂಭಿಸಿದ ಬಳಿಕ ಹಿಂಸಾಚಾರ ಉಂಟಾಗಿತ್ತು.

ಸುಮಾರು ಎರಡು ವರ್ಷಗಳ ಮೈತೇಯಿ ಮತ್ತು ಕುಕಿ-ಝೋ ಸಮುದಾಯಗಳ ನಡುವಿನ ಜನಾಂಗೀಯ ಹಿಂಸಾಚಾರದಲ್ಲಿ ಇದುವರೆಗೆ 258 ಜನರು ಬಲಿಯಾಗಿದ್ದಾರೆ. ಸುಮಾರು 59,000ಕ್ಕೂ ಹೆಚ್ಚು ಜನರು ನಿರಾಶ್ರಿತರಾಗಿದ್ದಾರೆ ಅಥವಾ ತಮ್ಮ ಮನೆಗಳಿಂದ ಸ್ಥಳಾಂತರಗೊಂಡಿದ್ದಾರೆ.

ಹಿಂಸಾಚಾರ ತೀವ್ರಗೊಂಡಾಗ, ಫೆಬ್ರವರಿ 2024ರಲ್ಲಿ ಹೈಕೋರ್ಟ್ ತನ್ನ ನಿರ್ದೇಶನಗಳನ್ನು ಹೊಂದಿರುವ ಪ್ಯಾರಾಗ್ರಾಫ್ ಅನ್ನು ತೆಗೆದುಹಾಕಲು ಆದೇಶಿಸಿದೆ.

ಕುಕಿ-ಝೋ ಗುಂಪಿನ ಜೊತೆ ಮಾಡಿಕೊಂಡಿರುವ ಶಾಂತಿ ಒಪ್ಪಂದವನ್ನು ರದ್ದುಗೊಳಿಸಿ, ಅವರ ವಿರುದ್ದ ನೇರ ಕಾರ್ಯಾಚರಣೆ ನಡೆಸುವಂತೆ ಫೆಬ್ರವರಿ, 25 2025ರಂದು ರಾಜ್ಯಪಾಲರನ್ನು ಭೇಟಿಯಾದ ವೇಳೆ ಮೈತೇಯಿ ಗುಂಪು ಆಗ್ರಹಿಸಿದೆ.

2008ರಲ್ಲಿ ಕೇಂದ್ರ ಸರ್ಕಾರ, ಮಣಿಪುರ ಸರ್ಕಾರ ಮತ್ತು ಕುಕಿ ಗುಂಪಿನ ಎರಡು ಸಂಘಟನೆಗಳಾದ ಕುಕಿ ನ್ಯಾಷನಲ್ ಆರ್ಗನೈಸೇಷನ್ ಮತ್ತು ಯುನೈಟೆಡ್ ಪೀಪಲ್ಸ್ ಫ್ರಂಟ್ ಜೊತೆ ಕಾರ್ಯಾಚರಣೆ ಸ್ಥಗಿತ ಶಾಂತಿ  ಒಪ್ಪಂದಕ್ಕೆ ಸಹಿ ಹಾಕಿದೆ.

ಒಪ್ಪಂದದ ಪ್ರಕಾರ, ಭದ್ರತಾ ಪಡೆಗಳು ಮತ್ತು ಕುಕಿ ಗುಂಪುಗಳು ಪರಸ್ಪರ ಯಾವುದೇ ಕಾರ್ಯಾಚರಣೆಗಳನ್ನು ಪ್ರಾರಂಭಿಸುವುದನ್ನು ನಿಷೇಧಿಸಲಾಗಿದೆ. ಕುಕಿ ಗುಂಪುಗಳು ನೆಲದ ಕಾನೂನುಗಳನ್ನು ಪಾಲಿಸಬೇಕು ಮತ್ತು ಕೇಂದ್ರ ಸರ್ಕಾರ ಗೊತ್ತುಪಡಿಸಿದ ಶಿಬಿರಗಳಿಗೆ ಸೀಮಿತವಾಗಿರಬೇಕು.

ಮಣಿಪುರ ರೈಫಲ್ಸ್ ಕಾಂಪ್ಲೆಕ್ಸ್‌ನಿಂದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ಲೂಟಿ ಮಾಡಿದ ಪ್ರಕರಣ ಸೇರಿದಂತೆ ಹಲವಾರು ಪ್ರಕರಣಗಳಿಗೆ ಸಂಬಂಧಿಸಿದಂತೆ ಆರಂಬೈ ತೆಂಗೋಲ್ ಮತ್ತು ಅದರ ಮುಖ್ಯಸ್ಥ ಕೊರೌಂಗನ್ಬಾ ಖುಮಾನ್ ಅವರ ವಿರುದ್ದ ರಾಷ್ಟ್ರೀಯ ತನಿಖಾ ಸಂಸ್ಥೆ ತನಿಖೆ ನಡೆಸುತ್ತಿದೆ.

ಮೇ 2023ರಲ್ಲಿ ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ ಪ್ರಾರಂಭವಾದಾಗಿನಿಂದ ಮೈತೇಯಿ ಗುಂಪೇ ಕುಕಿ-ಝೋ ಸಮುದಾಯದ ವಿರುದ್ಧ ಹಿಂಸಾಚಾರವನ್ನು ಸಂಘಟಿಸಿದೆ ಎಂದು ಆರೋಪಿಸಲಾಗಿದೆ.

26/11ರ ಮುಂಬೈ ದಾಳಿ ಪ್ರಕರಣ: ಖುಲಾಸೆಗೊಂಡ ವ್ಯಕ್ತಿ ಜೀವನೋಪಾಯಕ್ಕಾಗಿ ಹೈಕೋರ್ಟ್ ಮೊರೆ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...