Homeಮುಖಪುಟಫತೇಪುರದಲ್ಲಿ ಮುಸ್ಲಿಂ ವಿದ್ಯಾರ್ಥಿ ಮೇಲೆ ಹಲ್ಲೆ, ಸಾವು: ಆರೋಪಿಗಳ ಬೆಂಬಲಿಗರಿಂದ ಆನ್‌ಲೈನ್‌ನಲ್ಲಿ ಹತ್ಯೆ ಸಂಭ್ರಮಾಚರಣೆ

ಫತೇಪುರದಲ್ಲಿ ಮುಸ್ಲಿಂ ವಿದ್ಯಾರ್ಥಿ ಮೇಲೆ ಹಲ್ಲೆ, ಸಾವು: ಆರೋಪಿಗಳ ಬೆಂಬಲಿಗರಿಂದ ಆನ್‌ಲೈನ್‌ನಲ್ಲಿ ಹತ್ಯೆ ಸಂಭ್ರಮಾಚರಣೆ

- Advertisement -
- Advertisement -

ಫತೇಪುರ: ಉತ್ತರಪ್ರದೇಶದ ಫತೇಪುರದಲ್ಲಿ 17 ವರ್ಷದ ಮುಸ್ಲಿಂ ವಿದ್ಯಾರ್ಥಿ ಆರಿಶ್ ಖಾನ್ ಅವರನ್ನು ಬರ್ಬರವಾಗಿ ಥಳಿಸಿ ಹತ್ಯೆ ಮಾಡಿರುವ ಘಟನೆ ವ್ಯಾಪಕ ಆಕ್ರೋಶ ಮತ್ತು ಭೀತಿಯನ್ನು ಹುಟ್ಟುಹಾಕಿದೆ. ಈ ದಾಳಿಯ ಭಯಾನಕ ದೃಶ್ಯಗಳು ಮತ್ತು ನಂತರ ಆರೋಪಿಗಳ ಬೆಂಬಲಿಗರಿಂದ ನಡೆದ ಸಾರ್ವಜನಿಕ ಸಂಭ್ರಮಾಚರಣೆಯು ಇದು ದ್ವೇಷದ ಅಪರಾಧವಾಗಿರಬಹುದೆಂಬ ಸಂಶಯಕ್ಕೆ ಕಾರಣವಾಗಿದೆ. ಜುಲೈ 23 ರಂದು ನಡೆದ ಈ ಘಟನೆ, ಸಂತ್ರಸ್ತ ಕುಟುಂಬವನ್ನು ತೀವ್ರ ದುಃಖದಲ್ಲಿ ಮುಳುಗಿಸಿದ್ದು ಮಾತ್ರವಲ್ಲದೆ, ಹೆಚ್ಚುತ್ತಿರುವ ಕೋಮು ವೈರತ್ವ ಮತ್ತು ಶಿಕ್ಷೆಯಿಲ್ಲದೆ ನಡೆಯುತ್ತಿರುವ ಅಪರಾಧಗಳ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಯೋಜಿತ ಹತ್ಯೆಯ ಸಂಶಯ

ಮಹರ್ಷಿ ವಿದ್ಯಾ ಮಂದಿರ ಹಿರಿಯ ಮಾಧ್ಯಮಿಕ ಶಾಲೆಯ 12ನೇ ತರಗತಿ ವಿದ್ಯಾರ್ಥಿಯಾಗಿದ್ದ ಆರಿಶ್ ಖಾನ್, ಶಾಲೆಯಿಂದ ಹೊರಬಂದ ಕೂಡಲೇ ಮೂವರು ಯುವಕರು ಆತನ ಮೇಲೆ ದಾಳಿ ನಡೆಸಿದರು. ಹರ್ಷವರ್ಧನ್ ಪಾಂಡೆ, ದೀಪಕ್ ಸವಿತಾ ಮತ್ತು ಭರತ್ ಸರ್ಕಾರ್ ಎಂದು ಗುರುತಿಸಲಾದ ಈ ಮೂವರು, ಸ್ಕೂಟರ್‌ನಲ್ಲಿ ಬಂದು ರಾಡ್ ಮತ್ತು ದೊಣ್ಣೆಗಳಿಂದ ಆರಿಶ್ ಮೇಲೆ ಹಲ್ಲೆ ನಡೆಸಿದರು. ಸಿಸಿಟಿವಿ ದೃಶ್ಯಗಳಲ್ಲಿ ಈ ಸಂಪೂರ್ಣ ಘಟನೆ ದಾಖಲಾಗಿದೆ. ಥಳಿತದಿಂದ ಅಪ್ರಜ್ಞಾವಸ್ಥೆಗೆ ಜಾರಿದ ಆರಿಶ್, ತೀವ್ರ ಗಾಯಗಳೊಂದಿಗೆ ಸ್ಥಳೀಯ ಆಸ್ಪತ್ರೆಗೆ ದಾಖಲಾದರು. ಆದರೆ 36 ಗಂಟೆಗಳ ನಂತರ, ಜುಲೈ 26ರಂದು ಅವರು ಸಾವನ್ನಪ್ಪಿದರು. ಪೊಲೀಸರು ತನಿಖೆ ಆರಂಭಿಸಿದ್ದರೂ, ಅನೇಕರು ಈ ದಾಳಿಯನ್ನು ಮುಸ್ಲಿಂ ಗುರುತಿನ ಕಾರಣಕ್ಕಾಗಿ ನಡೆದ ಜನಸಮೂಹ ಹತ್ಯೆ (lynching) ಎಂದು ಆರೋಪಿಸುತ್ತಿದ್ದಾರೆ.

ನ್ಯಾಯಕ್ಕಾಗಿ ಕುಟುಂಬದ ಬೇಡಿಕೆ

ವಿದ್ಯುತ್ ತಂತ್ರಜ್ಞನ ಮಗನಾದ ಆರಿಶ್, ತನ್ನ ತಂದೆ-ತಾಯಿ ಮತ್ತು ಇಬ್ಬರು ತಂಗಿಯರನ್ನು ಅಗಲಿದ್ದಾನೆ. ಮಾಧ್ಯಮದೊಂದಿಗೆ ಮಾತನಾಡಿದ ಆತನ ತಂದೆ, “ಯಾವ ಕಾರಣಕ್ಕೆ ನಮ್ಮ ಮಗನನ್ನು ಆ ಹುಡುಗರು ಕೊಂದರು ಎಂದು ನಮಗೆ ಗೊತ್ತಿಲ್ಲ. ನಮಗೆ ನ್ಯಾಯ ಬೇಕು. ನಮ್ಮ ಮಗನನ್ನು ಹಗಲು ಹೊತ್ತಿನಲ್ಲಿ ಕೊಲೆ ಮಾಡಲಾಗಿದೆ” ಎಂದು ದುಃಖ ತೋಡಿಕೊಂಡರು.

ಜುಲೈ 24ರಂದು ಕುಟುಂಬದ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದ್ದು, ಮೂವರು ಆರೋಪಿಗಳ ವಿರುದ್ಧ ಪ್ರಚೋದನೆ, ಹಲ್ಲೆ, ಮತ್ತು ಉದ್ದೇಶಪೂರ್ವಕ ಗಾಯಗೊಳಿಸಿದ ಆರೋಪಗಳನ್ನು ದಾಖಲಿಸಲಾಗಿದೆ. ಜುಲೈ 26ರಂದು, ಆರಿಶ್ ಸಾವನ್ನಪ್ಪಿದ ದಿನವೇ ಮೂವರನ್ನೂ ಬಂಧಿಸಲಾಯಿತು. ನಂತರ, ಆರೋಪಿಗಳ ಬೆಂಬಲಿಗರು ಹತ್ಯೆಯನ್ನು ವೈಭವೀಕರಿಸಿ ಆನ್‌ಲೈನ್‌ನಲ್ಲಿ ಮತ್ತು ಬೀದಿಗಳಲ್ಲಿ ಕೋಮು ಉದ್ವಿಗ್ನತೆಯನ್ನು ಹೆಚ್ಚಿಸುತ್ತಿದ್ದಾರೆ ಎಂದು ಆರೋಪಿಸಿ ಆರಿಶ್‌ನ ತಾತ ಮತ್ತೊಂದು ದೂರು ದಾಖಲಿಸಿದ್ದಾರೆ.

ಹಿಂಸೆಯ ಸಂಭ್ರಮಾಚರಣೆ

ಆರೋಪಿಗಳ ಬೆಂಬಲಿಗರು ಬೈಕ್ ರ್ಯಾಲಿ ನಡೆಸಿ, ಮುಸ್ಲಿಮರನ್ನು ಗುರಿಯಾಗಿಸಿ ಪ್ರಚೋದನಕಾರಿ ಘೋಷಣೆಗಳನ್ನು ಕೂಗಿ, ಮತ್ತು ಸಾಮಾಜಿಕ ಮಾಧ್ಯಮದಲ್ಲಿ ಆರಿಶ್ ಹತ್ಯೆಯನ್ನು ವೈಭವೀಕರಿಸಿ ಅವಹೇಳನಕಾರಿ ಪೋಸ್ಟ್‌ಗಳನ್ನು ಹಂಚಿಕೊಂಡಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ.

ಆರೋಪಿಗಳ ಸಹಾನುಭೂತಿ ಉಳ್ಳವರಲ್ಲಿ ಒಬ್ಬನಾದ ಅಭಯ್ ದ್ವಿವೇದಿ, Instagram ನಲ್ಲಿ ಸಂಭ್ರಮಾಚರಣೆಯ ವೀಡಿಯೊವನ್ನು ಪೋಸ್ಟ್ ಮಾಡಿ, “ಜಲ್ದಿ ವಾಪ್ಸಿ ಹೋಗಿ ಮೇರೆ ಶೇರ್ ಕಿ” (ನನ್ನ ಸಿಂಹ ಶೀಘ್ರದಲ್ಲೇ ಹಿಂದಿರುಗುತ್ತಾನೆ) ಎಂದು ಬರೆದುಕೊಂಡಿದ್ದನು. ಈ ಪೋಸ್ಟ್‌ನಲ್ಲಿ ಆತ ಆರೋಪಿಗಳೊಂದಿಗಿನ ಚಿತ್ರಗಳನ್ನೂ ಹಂಚಿಕೊಂಡಿದ್ದನು. ಮತ್ತೊಂದು ಪೋಸ್ಟ್‌ನಲ್ಲಿ, “ಫುಲ್ ಸಪೋರ್ಟ್, ಮೇರಿ ಜಾನ್,” ಎಂದು ಬರೆದಿದ್ದನು.

justthhemaa_ ಎಂಬ ಹ್ಯಾಂಡಲ್‌ನ ಮತ್ತೊಬ್ಬ ಬಳಕೆದಾರ ಆರಿಶ್ ಮತ್ತು ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿ ಅಶ್ಲೀಲ ಮತ್ತು ದ್ವೇಷಪೂರಿತ ನಿಂದನೆಗಳನ್ನು ಪೋಸ್ಟ್ ಮಾಡಿದ್ದನು. ಆ ಪೋಸ್ಟ್ ಹೀಗಿದೆ: “Ariss madarchodd sala mr gyaa bhn ka lavdaa! phle glti krenge fhir justice mangenge bhn ke lavde, Lavda milega tmhe justice Nhii bsdkk. Mulle madarchodd.” (“ಆರಿಶ್, ನೀನು ಸತ್ತೇ ಹೋದೆ! ಮೊದಲು ತಪ್ಪು ಮಾಡಿ ಆಮೇಲೆ ನ್ಯಾಯ ಕೇಳುತ್ತೀರಾ? ನಿಮಗೆ ಯಾವ ನ್ಯಾಯವೂ ಸಿಗುವುದಿಲ್ಲ. ಮುಸ್ಲಿಂ …”.)

ಈ ಎರಡೂ ಖಾತೆಗಳನ್ನು ನಂತರ ನಿಷ್ಕ್ರಿಯಗೊಳಿಸಲಾಯಿತು. ಈ ಪೋಸ್ಟ್‌ಗಳ ಸ್ಕ್ರೀನ್‌ಶಾಟ್‌ಗಳನ್ನು ಆರಿಶ್‌ನ ತಾತ ಸಾಕ್ಷ್ಯವಾಗಿ ಪೊಲೀಸರಿಗೆ ಸಲ್ಲಿಸಿದ್ದಾರೆ.

ಅಸ್ಸಾಂನಲ್ಲಿ ಸಾವಿರಾರು ಮುಸ್ಲಿಂ ಕುಟುಂಬಗಳ ತೆರವು: ಚುನಾವಣಾ ಪೂರ್ವ ರಾಜಕೀಯಕ್ಕೆ ಹೊಸ ಅಸ್ತ್ರ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...