Homeಮುಖಪುಟಫತೇಪುರದಲ್ಲಿ ಮುಸ್ಲಿಂ ವಿದ್ಯಾರ್ಥಿ ಮೇಲೆ ಹಲ್ಲೆ, ಸಾವು: ಆರೋಪಿಗಳ ಬೆಂಬಲಿಗರಿಂದ ಆನ್‌ಲೈನ್‌ನಲ್ಲಿ ಹತ್ಯೆ ಸಂಭ್ರಮಾಚರಣೆ

ಫತೇಪುರದಲ್ಲಿ ಮುಸ್ಲಿಂ ವಿದ್ಯಾರ್ಥಿ ಮೇಲೆ ಹಲ್ಲೆ, ಸಾವು: ಆರೋಪಿಗಳ ಬೆಂಬಲಿಗರಿಂದ ಆನ್‌ಲೈನ್‌ನಲ್ಲಿ ಹತ್ಯೆ ಸಂಭ್ರಮಾಚರಣೆ

- Advertisement -
- Advertisement -

ಫತೇಪುರ: ಉತ್ತರಪ್ರದೇಶದ ಫತೇಪುರದಲ್ಲಿ 17 ವರ್ಷದ ಮುಸ್ಲಿಂ ವಿದ್ಯಾರ್ಥಿ ಆರಿಶ್ ಖಾನ್ ಅವರನ್ನು ಬರ್ಬರವಾಗಿ ಥಳಿಸಿ ಹತ್ಯೆ ಮಾಡಿರುವ ಘಟನೆ ವ್ಯಾಪಕ ಆಕ್ರೋಶ ಮತ್ತು ಭೀತಿಯನ್ನು ಹುಟ್ಟುಹಾಕಿದೆ. ಈ ದಾಳಿಯ ಭಯಾನಕ ದೃಶ್ಯಗಳು ಮತ್ತು ನಂತರ ಆರೋಪಿಗಳ ಬೆಂಬಲಿಗರಿಂದ ನಡೆದ ಸಾರ್ವಜನಿಕ ಸಂಭ್ರಮಾಚರಣೆಯು ಇದು ದ್ವೇಷದ ಅಪರಾಧವಾಗಿರಬಹುದೆಂಬ ಸಂಶಯಕ್ಕೆ ಕಾರಣವಾಗಿದೆ. ಜುಲೈ 23 ರಂದು ನಡೆದ ಈ ಘಟನೆ, ಸಂತ್ರಸ್ತ ಕುಟುಂಬವನ್ನು ತೀವ್ರ ದುಃಖದಲ್ಲಿ ಮುಳುಗಿಸಿದ್ದು ಮಾತ್ರವಲ್ಲದೆ, ಹೆಚ್ಚುತ್ತಿರುವ ಕೋಮು ವೈರತ್ವ ಮತ್ತು ಶಿಕ್ಷೆಯಿಲ್ಲದೆ ನಡೆಯುತ್ತಿರುವ ಅಪರಾಧಗಳ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಯೋಜಿತ ಹತ್ಯೆಯ ಸಂಶಯ

ಮಹರ್ಷಿ ವಿದ್ಯಾ ಮಂದಿರ ಹಿರಿಯ ಮಾಧ್ಯಮಿಕ ಶಾಲೆಯ 12ನೇ ತರಗತಿ ವಿದ್ಯಾರ್ಥಿಯಾಗಿದ್ದ ಆರಿಶ್ ಖಾನ್, ಶಾಲೆಯಿಂದ ಹೊರಬಂದ ಕೂಡಲೇ ಮೂವರು ಯುವಕರು ಆತನ ಮೇಲೆ ದಾಳಿ ನಡೆಸಿದರು. ಹರ್ಷವರ್ಧನ್ ಪಾಂಡೆ, ದೀಪಕ್ ಸವಿತಾ ಮತ್ತು ಭರತ್ ಸರ್ಕಾರ್ ಎಂದು ಗುರುತಿಸಲಾದ ಈ ಮೂವರು, ಸ್ಕೂಟರ್‌ನಲ್ಲಿ ಬಂದು ರಾಡ್ ಮತ್ತು ದೊಣ್ಣೆಗಳಿಂದ ಆರಿಶ್ ಮೇಲೆ ಹಲ್ಲೆ ನಡೆಸಿದರು. ಸಿಸಿಟಿವಿ ದೃಶ್ಯಗಳಲ್ಲಿ ಈ ಸಂಪೂರ್ಣ ಘಟನೆ ದಾಖಲಾಗಿದೆ. ಥಳಿತದಿಂದ ಅಪ್ರಜ್ಞಾವಸ್ಥೆಗೆ ಜಾರಿದ ಆರಿಶ್, ತೀವ್ರ ಗಾಯಗಳೊಂದಿಗೆ ಸ್ಥಳೀಯ ಆಸ್ಪತ್ರೆಗೆ ದಾಖಲಾದರು. ಆದರೆ 36 ಗಂಟೆಗಳ ನಂತರ, ಜುಲೈ 26ರಂದು ಅವರು ಸಾವನ್ನಪ್ಪಿದರು. ಪೊಲೀಸರು ತನಿಖೆ ಆರಂಭಿಸಿದ್ದರೂ, ಅನೇಕರು ಈ ದಾಳಿಯನ್ನು ಮುಸ್ಲಿಂ ಗುರುತಿನ ಕಾರಣಕ್ಕಾಗಿ ನಡೆದ ಜನಸಮೂಹ ಹತ್ಯೆ (lynching) ಎಂದು ಆರೋಪಿಸುತ್ತಿದ್ದಾರೆ.

ನ್ಯಾಯಕ್ಕಾಗಿ ಕುಟುಂಬದ ಬೇಡಿಕೆ

ವಿದ್ಯುತ್ ತಂತ್ರಜ್ಞನ ಮಗನಾದ ಆರಿಶ್, ತನ್ನ ತಂದೆ-ತಾಯಿ ಮತ್ತು ಇಬ್ಬರು ತಂಗಿಯರನ್ನು ಅಗಲಿದ್ದಾನೆ. ಮಾಧ್ಯಮದೊಂದಿಗೆ ಮಾತನಾಡಿದ ಆತನ ತಂದೆ, “ಯಾವ ಕಾರಣಕ್ಕೆ ನಮ್ಮ ಮಗನನ್ನು ಆ ಹುಡುಗರು ಕೊಂದರು ಎಂದು ನಮಗೆ ಗೊತ್ತಿಲ್ಲ. ನಮಗೆ ನ್ಯಾಯ ಬೇಕು. ನಮ್ಮ ಮಗನನ್ನು ಹಗಲು ಹೊತ್ತಿನಲ್ಲಿ ಕೊಲೆ ಮಾಡಲಾಗಿದೆ” ಎಂದು ದುಃಖ ತೋಡಿಕೊಂಡರು.

ಜುಲೈ 24ರಂದು ಕುಟುಂಬದ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದ್ದು, ಮೂವರು ಆರೋಪಿಗಳ ವಿರುದ್ಧ ಪ್ರಚೋದನೆ, ಹಲ್ಲೆ, ಮತ್ತು ಉದ್ದೇಶಪೂರ್ವಕ ಗಾಯಗೊಳಿಸಿದ ಆರೋಪಗಳನ್ನು ದಾಖಲಿಸಲಾಗಿದೆ. ಜುಲೈ 26ರಂದು, ಆರಿಶ್ ಸಾವನ್ನಪ್ಪಿದ ದಿನವೇ ಮೂವರನ್ನೂ ಬಂಧಿಸಲಾಯಿತು. ನಂತರ, ಆರೋಪಿಗಳ ಬೆಂಬಲಿಗರು ಹತ್ಯೆಯನ್ನು ವೈಭವೀಕರಿಸಿ ಆನ್‌ಲೈನ್‌ನಲ್ಲಿ ಮತ್ತು ಬೀದಿಗಳಲ್ಲಿ ಕೋಮು ಉದ್ವಿಗ್ನತೆಯನ್ನು ಹೆಚ್ಚಿಸುತ್ತಿದ್ದಾರೆ ಎಂದು ಆರೋಪಿಸಿ ಆರಿಶ್‌ನ ತಾತ ಮತ್ತೊಂದು ದೂರು ದಾಖಲಿಸಿದ್ದಾರೆ.

ಹಿಂಸೆಯ ಸಂಭ್ರಮಾಚರಣೆ

ಆರೋಪಿಗಳ ಬೆಂಬಲಿಗರು ಬೈಕ್ ರ್ಯಾಲಿ ನಡೆಸಿ, ಮುಸ್ಲಿಮರನ್ನು ಗುರಿಯಾಗಿಸಿ ಪ್ರಚೋದನಕಾರಿ ಘೋಷಣೆಗಳನ್ನು ಕೂಗಿ, ಮತ್ತು ಸಾಮಾಜಿಕ ಮಾಧ್ಯಮದಲ್ಲಿ ಆರಿಶ್ ಹತ್ಯೆಯನ್ನು ವೈಭವೀಕರಿಸಿ ಅವಹೇಳನಕಾರಿ ಪೋಸ್ಟ್‌ಗಳನ್ನು ಹಂಚಿಕೊಂಡಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ.

ಆರೋಪಿಗಳ ಸಹಾನುಭೂತಿ ಉಳ್ಳವರಲ್ಲಿ ಒಬ್ಬನಾದ ಅಭಯ್ ದ್ವಿವೇದಿ, Instagram ನಲ್ಲಿ ಸಂಭ್ರಮಾಚರಣೆಯ ವೀಡಿಯೊವನ್ನು ಪೋಸ್ಟ್ ಮಾಡಿ, “ಜಲ್ದಿ ವಾಪ್ಸಿ ಹೋಗಿ ಮೇರೆ ಶೇರ್ ಕಿ” (ನನ್ನ ಸಿಂಹ ಶೀಘ್ರದಲ್ಲೇ ಹಿಂದಿರುಗುತ್ತಾನೆ) ಎಂದು ಬರೆದುಕೊಂಡಿದ್ದನು. ಈ ಪೋಸ್ಟ್‌ನಲ್ಲಿ ಆತ ಆರೋಪಿಗಳೊಂದಿಗಿನ ಚಿತ್ರಗಳನ್ನೂ ಹಂಚಿಕೊಂಡಿದ್ದನು. ಮತ್ತೊಂದು ಪೋಸ್ಟ್‌ನಲ್ಲಿ, “ಫುಲ್ ಸಪೋರ್ಟ್, ಮೇರಿ ಜಾನ್,” ಎಂದು ಬರೆದಿದ್ದನು.

justthhemaa_ ಎಂಬ ಹ್ಯಾಂಡಲ್‌ನ ಮತ್ತೊಬ್ಬ ಬಳಕೆದಾರ ಆರಿಶ್ ಮತ್ತು ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿ ಅಶ್ಲೀಲ ಮತ್ತು ದ್ವೇಷಪೂರಿತ ನಿಂದನೆಗಳನ್ನು ಪೋಸ್ಟ್ ಮಾಡಿದ್ದನು. ಆ ಪೋಸ್ಟ್ ಹೀಗಿದೆ: “Ariss madarchodd sala mr gyaa bhn ka lavdaa! phle glti krenge fhir justice mangenge bhn ke lavde, Lavda milega tmhe justice Nhii bsdkk. Mulle madarchodd.” (“ಆರಿಶ್, ನೀನು ಸತ್ತೇ ಹೋದೆ! ಮೊದಲು ತಪ್ಪು ಮಾಡಿ ಆಮೇಲೆ ನ್ಯಾಯ ಕೇಳುತ್ತೀರಾ? ನಿಮಗೆ ಯಾವ ನ್ಯಾಯವೂ ಸಿಗುವುದಿಲ್ಲ. ಮುಸ್ಲಿಂ …”.)

ಈ ಎರಡೂ ಖಾತೆಗಳನ್ನು ನಂತರ ನಿಷ್ಕ್ರಿಯಗೊಳಿಸಲಾಯಿತು. ಈ ಪೋಸ್ಟ್‌ಗಳ ಸ್ಕ್ರೀನ್‌ಶಾಟ್‌ಗಳನ್ನು ಆರಿಶ್‌ನ ತಾತ ಸಾಕ್ಷ್ಯವಾಗಿ ಪೊಲೀಸರಿಗೆ ಸಲ್ಲಿಸಿದ್ದಾರೆ.

ಅಸ್ಸಾಂನಲ್ಲಿ ಸಾವಿರಾರು ಮುಸ್ಲಿಂ ಕುಟುಂಬಗಳ ತೆರವು: ಚುನಾವಣಾ ಪೂರ್ವ ರಾಜಕೀಯಕ್ಕೆ ಹೊಸ ಅಸ್ತ್ರ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದಲ್ಲಿ ಬಿಜೆಪಿ ಅಭ್ಯರ್ಥಿಯಿಂದ ‘ಲವ್ ಜಿಹಾದ್’ ಹೇಳಿಕೆ; ಜಿಲ್ಲಾಧಿಕಾರಿಯಿಂದ ವರದಿ ಕೇಳಿದ ಚುನಾವಣಾ ಆಯೋಗ

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎಡ ಪ್ರಜಾಸತ್ತಾತ್ಮಕ ರಂಗ ಅಥವಾ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗದ ಗೆಲುವು ರಾಜ್ಯದಲ್ಲಿ "ಲವ್ ಜಿಹಾದ್" ಘಟನೆಗಳಿಗೆ ಕಾರಣವಾಗುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಪಿ ಕೆ ಕೃಷ್ಣದಾಸ್ ನೀಡಿದ ಹೇಳಿಕೆಯ...

ಮಣಿಪುರ: ಇಬ್ಬರು ಮಕ್ಕಳ ಹತ್ಯೆ ಖಂಡಿಸಿ ಇಂಫಾಲ್ ಕಣಿವೆಯಲ್ಲಿ ಪ್ರತಿಭಟನೆ; 5 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ

ಮಣಿಪುರ: ಕಣಿವೆಯ ಐದು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಬ್ರಾಡ್‌ಬ್ಯಾಂಡ್, ವಿಎಸ್‌ಎಟಿಗಳು ಮತ್ತು ವಿಪಿಎನ್ ಸೇರಿದಂತೆ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಲು ಮಣಿಪುರ ಸರ್ಕಾರ ಮಂಗಳವಾರ ಆದೇಶಿಸಿದೆ. ಗೃಹ ಇಲಾಖೆಯ ಅಧಿಕೃತ...

ಶ್ರೀನಗರದಲ್ಲಿ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐವರ ಬಂಧನ; ಅಂತರರಾಜ್ಯ ಎಲ್‌ಇಟಿ ಮಾಡ್ಯೂಲ್ ಪತ್ತೆ 

ಶ್ರೀನಗರ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಶ್ರೀನಗರದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಅಂತರರಾಜ್ಯ ಮಾಡ್ಯೂಲ್ ಅನ್ನು ಭೇದಿಸಿದ್ದು, ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐದು...

ಟರ್ಕಿಯ ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿ ಬಳಿ ಗುಂಡಿನ ದಾಳಿ: ಮೂವರು ಸಾವು

ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ಕಾನ್ಸುಲೇಟ್ ಕಟ್ಟಡದ ಬಳಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ, ಅಧಿಕಾರಿಗಳು ಆ ಪ್ರದೇಶವನ್ನು...

ತೆಲಂಗಾಣ ಸಿಎಂ ರೆಡ್ಡಿ ವಿರುದ್ಧ ಪಿಣರಾಯಿ ವಿಜಯನ್ ವಾಗ್ದಾಳಿ; ತೀವ್ರ ಸ್ವರೂಪ ಪಡೆದುಕೊಂಡ ವಾಕ್ಸಮರ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಏ.7) ವಾಗ್ದಾಳಿ ನಡೆಸಿದ್ದಾರೆ. ಇಬ್ಬರು ನಾಯಕರ ನಡುವಿನ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಣ್ಣೂರಿನಲ್ಲಿ ನಡೆದ ಪತ್ರಿಕಾ ಸಂವಾದ...

ಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ ‘ಹಲವು ಪಾಸ್‌ಪೋರ್ಟ್‌’ ಹೊಂದಿರುವ ಆರೋಪ : ಪವನ್ ಖೇರಾ ಮನೆಯಲ್ಲಿ ಶೋಧ ನಡೆಸಿದ ಅಸ್ಸಾಂ ಪೊಲೀಸರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಮನೆಯಲ್ಲಿ ಶೋಧ...

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೇಂದ್ರದ ಹಣವನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಂಡಿದೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ನಿಧಿಯ ದುರುಪಯೋಗ ಮತ್ತು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ಕುಸಿತವಾಗಿದೆ ಎಂದು...

ವಿದ್ಯುತ್ ಸ್ಥಾವರಗಳ ಸುತ್ತ ಮಾನವ ಸರಪಳಿ ರಚಿಸುವಂತೆ ಇರಾನಿನ ಯುವಕರಿಗೆ ಮನವಿ

ಯುನೈಟೆಡ್ ಸ್ಟೇಟ್ಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಬೆದರಿಕೆ ದಾಳಿಗಳಿಗೆ ಮುಂಚಿತವಾಗಿ ವಿದ್ಯುತ್ ಸ್ಥಾವರಗಳ ಸುತ್ತ ಮಾನವ ಸರಪಳಿಗಳನ್ನು ರಚಿಸುವಂತೆ ಇರಾನ್ ಸರ್ಕಾರ 'ಕ್ರೀಡಾಪಟುಗಳು, ಕಲಾವಿದರು, ವಿದ್ಯಾರ್ಥಿಗಳು, ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಮತ್ತು ಅವರ...

ಪಶ್ಚಿಮ ಬಂಗಾಳ| ಎಸ್‌ಐಆರ್ ಬಳಿಕ ಮತದಾರರ ಪಟ್ಟಿಯಿಂದ ಸುಮಾರು 91 ಲಕ್ಷ ಹೆಸರುಗಳು ಡಿಲೀಟ್

ಚುನಾವಣಾ ಆಯೋಗ ಬಿಡುಗಡೆ ಮಾಡಿದ ಮಾಹಿತಿಯ ಪ್ರಕಾರ, ರಾಜ್ಯದಲ್ಲಿ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಸುಮಾರು 91 ಲಕ್ಷ ಮತದಾರರನ್ನು ಮತದಾರರ ಪಟ್ಟಿಯಿಂದ ಅಳಿಸಲಾಗಿದೆ. ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯ ನಂತರ...

ಇರಾನ್ ನೂತನ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ‘ಪ್ರಜ್ಞಾಹೀನ’, ಕೋಮ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ: ವರದಿ

ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ಅವರು ಕೋಮ್‌ನಲ್ಲಿ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದಾರೆ ಮತ್ತು ಪ್ರಜ್ಞಾಹೀನರಾಗಿದ್ದಾರೆ ಎಂದು ನಂಬಲಾಗಿದೆ ಎಂದು ಗುಪ್ತಚರ ಆಧಾರಿತ ರಾಜತಾಂತ್ರಿಕ ಜ್ಞಾಪಕ ಪತ್ರವನ್ನು ಉಲ್ಲೇಖಿಸಿ ದಿ ಟೈಮ್ಸ್ ವರದಿ...