Homeಮುಖಪುಟಫತೇಪುರದಲ್ಲಿ ಮುಸ್ಲಿಂ ವಿದ್ಯಾರ್ಥಿ ಮೇಲೆ ಹಲ್ಲೆ, ಸಾವು: ಆರೋಪಿಗಳ ಬೆಂಬಲಿಗರಿಂದ ಆನ್‌ಲೈನ್‌ನಲ್ಲಿ ಹತ್ಯೆ ಸಂಭ್ರಮಾಚರಣೆ

ಫತೇಪುರದಲ್ಲಿ ಮುಸ್ಲಿಂ ವಿದ್ಯಾರ್ಥಿ ಮೇಲೆ ಹಲ್ಲೆ, ಸಾವು: ಆರೋಪಿಗಳ ಬೆಂಬಲಿಗರಿಂದ ಆನ್‌ಲೈನ್‌ನಲ್ಲಿ ಹತ್ಯೆ ಸಂಭ್ರಮಾಚರಣೆ

- Advertisement -
- Advertisement -

ಫತೇಪುರ: ಉತ್ತರಪ್ರದೇಶದ ಫತೇಪುರದಲ್ಲಿ 17 ವರ್ಷದ ಮುಸ್ಲಿಂ ವಿದ್ಯಾರ್ಥಿ ಆರಿಶ್ ಖಾನ್ ಅವರನ್ನು ಬರ್ಬರವಾಗಿ ಥಳಿಸಿ ಹತ್ಯೆ ಮಾಡಿರುವ ಘಟನೆ ವ್ಯಾಪಕ ಆಕ್ರೋಶ ಮತ್ತು ಭೀತಿಯನ್ನು ಹುಟ್ಟುಹಾಕಿದೆ. ಈ ದಾಳಿಯ ಭಯಾನಕ ದೃಶ್ಯಗಳು ಮತ್ತು ನಂತರ ಆರೋಪಿಗಳ ಬೆಂಬಲಿಗರಿಂದ ನಡೆದ ಸಾರ್ವಜನಿಕ ಸಂಭ್ರಮಾಚರಣೆಯು ಇದು ದ್ವೇಷದ ಅಪರಾಧವಾಗಿರಬಹುದೆಂಬ ಸಂಶಯಕ್ಕೆ ಕಾರಣವಾಗಿದೆ. ಜುಲೈ 23 ರಂದು ನಡೆದ ಈ ಘಟನೆ, ಸಂತ್ರಸ್ತ ಕುಟುಂಬವನ್ನು ತೀವ್ರ ದುಃಖದಲ್ಲಿ ಮುಳುಗಿಸಿದ್ದು ಮಾತ್ರವಲ್ಲದೆ, ಹೆಚ್ಚುತ್ತಿರುವ ಕೋಮು ವೈರತ್ವ ಮತ್ತು ಶಿಕ್ಷೆಯಿಲ್ಲದೆ ನಡೆಯುತ್ತಿರುವ ಅಪರಾಧಗಳ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಯೋಜಿತ ಹತ್ಯೆಯ ಸಂಶಯ

ಮಹರ್ಷಿ ವಿದ್ಯಾ ಮಂದಿರ ಹಿರಿಯ ಮಾಧ್ಯಮಿಕ ಶಾಲೆಯ 12ನೇ ತರಗತಿ ವಿದ್ಯಾರ್ಥಿಯಾಗಿದ್ದ ಆರಿಶ್ ಖಾನ್, ಶಾಲೆಯಿಂದ ಹೊರಬಂದ ಕೂಡಲೇ ಮೂವರು ಯುವಕರು ಆತನ ಮೇಲೆ ದಾಳಿ ನಡೆಸಿದರು. ಹರ್ಷವರ್ಧನ್ ಪಾಂಡೆ, ದೀಪಕ್ ಸವಿತಾ ಮತ್ತು ಭರತ್ ಸರ್ಕಾರ್ ಎಂದು ಗುರುತಿಸಲಾದ ಈ ಮೂವರು, ಸ್ಕೂಟರ್‌ನಲ್ಲಿ ಬಂದು ರಾಡ್ ಮತ್ತು ದೊಣ್ಣೆಗಳಿಂದ ಆರಿಶ್ ಮೇಲೆ ಹಲ್ಲೆ ನಡೆಸಿದರು. ಸಿಸಿಟಿವಿ ದೃಶ್ಯಗಳಲ್ಲಿ ಈ ಸಂಪೂರ್ಣ ಘಟನೆ ದಾಖಲಾಗಿದೆ. ಥಳಿತದಿಂದ ಅಪ್ರಜ್ಞಾವಸ್ಥೆಗೆ ಜಾರಿದ ಆರಿಶ್, ತೀವ್ರ ಗಾಯಗಳೊಂದಿಗೆ ಸ್ಥಳೀಯ ಆಸ್ಪತ್ರೆಗೆ ದಾಖಲಾದರು. ಆದರೆ 36 ಗಂಟೆಗಳ ನಂತರ, ಜುಲೈ 26ರಂದು ಅವರು ಸಾವನ್ನಪ್ಪಿದರು. ಪೊಲೀಸರು ತನಿಖೆ ಆರಂಭಿಸಿದ್ದರೂ, ಅನೇಕರು ಈ ದಾಳಿಯನ್ನು ಮುಸ್ಲಿಂ ಗುರುತಿನ ಕಾರಣಕ್ಕಾಗಿ ನಡೆದ ಜನಸಮೂಹ ಹತ್ಯೆ (lynching) ಎಂದು ಆರೋಪಿಸುತ್ತಿದ್ದಾರೆ.

ನ್ಯಾಯಕ್ಕಾಗಿ ಕುಟುಂಬದ ಬೇಡಿಕೆ

ವಿದ್ಯುತ್ ತಂತ್ರಜ್ಞನ ಮಗನಾದ ಆರಿಶ್, ತನ್ನ ತಂದೆ-ತಾಯಿ ಮತ್ತು ಇಬ್ಬರು ತಂಗಿಯರನ್ನು ಅಗಲಿದ್ದಾನೆ. ಮಾಧ್ಯಮದೊಂದಿಗೆ ಮಾತನಾಡಿದ ಆತನ ತಂದೆ, “ಯಾವ ಕಾರಣಕ್ಕೆ ನಮ್ಮ ಮಗನನ್ನು ಆ ಹುಡುಗರು ಕೊಂದರು ಎಂದು ನಮಗೆ ಗೊತ್ತಿಲ್ಲ. ನಮಗೆ ನ್ಯಾಯ ಬೇಕು. ನಮ್ಮ ಮಗನನ್ನು ಹಗಲು ಹೊತ್ತಿನಲ್ಲಿ ಕೊಲೆ ಮಾಡಲಾಗಿದೆ” ಎಂದು ದುಃಖ ತೋಡಿಕೊಂಡರು.

ಜುಲೈ 24ರಂದು ಕುಟುಂಬದ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದ್ದು, ಮೂವರು ಆರೋಪಿಗಳ ವಿರುದ್ಧ ಪ್ರಚೋದನೆ, ಹಲ್ಲೆ, ಮತ್ತು ಉದ್ದೇಶಪೂರ್ವಕ ಗಾಯಗೊಳಿಸಿದ ಆರೋಪಗಳನ್ನು ದಾಖಲಿಸಲಾಗಿದೆ. ಜುಲೈ 26ರಂದು, ಆರಿಶ್ ಸಾವನ್ನಪ್ಪಿದ ದಿನವೇ ಮೂವರನ್ನೂ ಬಂಧಿಸಲಾಯಿತು. ನಂತರ, ಆರೋಪಿಗಳ ಬೆಂಬಲಿಗರು ಹತ್ಯೆಯನ್ನು ವೈಭವೀಕರಿಸಿ ಆನ್‌ಲೈನ್‌ನಲ್ಲಿ ಮತ್ತು ಬೀದಿಗಳಲ್ಲಿ ಕೋಮು ಉದ್ವಿಗ್ನತೆಯನ್ನು ಹೆಚ್ಚಿಸುತ್ತಿದ್ದಾರೆ ಎಂದು ಆರೋಪಿಸಿ ಆರಿಶ್‌ನ ತಾತ ಮತ್ತೊಂದು ದೂರು ದಾಖಲಿಸಿದ್ದಾರೆ.

ಹಿಂಸೆಯ ಸಂಭ್ರಮಾಚರಣೆ

ಆರೋಪಿಗಳ ಬೆಂಬಲಿಗರು ಬೈಕ್ ರ್ಯಾಲಿ ನಡೆಸಿ, ಮುಸ್ಲಿಮರನ್ನು ಗುರಿಯಾಗಿಸಿ ಪ್ರಚೋದನಕಾರಿ ಘೋಷಣೆಗಳನ್ನು ಕೂಗಿ, ಮತ್ತು ಸಾಮಾಜಿಕ ಮಾಧ್ಯಮದಲ್ಲಿ ಆರಿಶ್ ಹತ್ಯೆಯನ್ನು ವೈಭವೀಕರಿಸಿ ಅವಹೇಳನಕಾರಿ ಪೋಸ್ಟ್‌ಗಳನ್ನು ಹಂಚಿಕೊಂಡಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ.

ಆರೋಪಿಗಳ ಸಹಾನುಭೂತಿ ಉಳ್ಳವರಲ್ಲಿ ಒಬ್ಬನಾದ ಅಭಯ್ ದ್ವಿವೇದಿ, Instagram ನಲ್ಲಿ ಸಂಭ್ರಮಾಚರಣೆಯ ವೀಡಿಯೊವನ್ನು ಪೋಸ್ಟ್ ಮಾಡಿ, “ಜಲ್ದಿ ವಾಪ್ಸಿ ಹೋಗಿ ಮೇರೆ ಶೇರ್ ಕಿ” (ನನ್ನ ಸಿಂಹ ಶೀಘ್ರದಲ್ಲೇ ಹಿಂದಿರುಗುತ್ತಾನೆ) ಎಂದು ಬರೆದುಕೊಂಡಿದ್ದನು. ಈ ಪೋಸ್ಟ್‌ನಲ್ಲಿ ಆತ ಆರೋಪಿಗಳೊಂದಿಗಿನ ಚಿತ್ರಗಳನ್ನೂ ಹಂಚಿಕೊಂಡಿದ್ದನು. ಮತ್ತೊಂದು ಪೋಸ್ಟ್‌ನಲ್ಲಿ, “ಫುಲ್ ಸಪೋರ್ಟ್, ಮೇರಿ ಜಾನ್,” ಎಂದು ಬರೆದಿದ್ದನು.

justthhemaa_ ಎಂಬ ಹ್ಯಾಂಡಲ್‌ನ ಮತ್ತೊಬ್ಬ ಬಳಕೆದಾರ ಆರಿಶ್ ಮತ್ತು ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿ ಅಶ್ಲೀಲ ಮತ್ತು ದ್ವೇಷಪೂರಿತ ನಿಂದನೆಗಳನ್ನು ಪೋಸ್ಟ್ ಮಾಡಿದ್ದನು. ಆ ಪೋಸ್ಟ್ ಹೀಗಿದೆ: “Ariss madarchodd sala mr gyaa bhn ka lavdaa! phle glti krenge fhir justice mangenge bhn ke lavde, Lavda milega tmhe justice Nhii bsdkk. Mulle madarchodd.” (“ಆರಿಶ್, ನೀನು ಸತ್ತೇ ಹೋದೆ! ಮೊದಲು ತಪ್ಪು ಮಾಡಿ ಆಮೇಲೆ ನ್ಯಾಯ ಕೇಳುತ್ತೀರಾ? ನಿಮಗೆ ಯಾವ ನ್ಯಾಯವೂ ಸಿಗುವುದಿಲ್ಲ. ಮುಸ್ಲಿಂ …”.)

ಈ ಎರಡೂ ಖಾತೆಗಳನ್ನು ನಂತರ ನಿಷ್ಕ್ರಿಯಗೊಳಿಸಲಾಯಿತು. ಈ ಪೋಸ್ಟ್‌ಗಳ ಸ್ಕ್ರೀನ್‌ಶಾಟ್‌ಗಳನ್ನು ಆರಿಶ್‌ನ ತಾತ ಸಾಕ್ಷ್ಯವಾಗಿ ಪೊಲೀಸರಿಗೆ ಸಲ್ಲಿಸಿದ್ದಾರೆ.

ಅಸ್ಸಾಂನಲ್ಲಿ ಸಾವಿರಾರು ಮುಸ್ಲಿಂ ಕುಟುಂಬಗಳ ತೆರವು: ಚುನಾವಣಾ ಪೂರ್ವ ರಾಜಕೀಯಕ್ಕೆ ಹೊಸ ಅಸ್ತ್ರ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...