Homeಮುಖಪುಟಫತೇಪುರದಲ್ಲಿ ಮುಸ್ಲಿಂ ವಿದ್ಯಾರ್ಥಿ ಮೇಲೆ ಹಲ್ಲೆ, ಸಾವು: ಆರೋಪಿಗಳ ಬೆಂಬಲಿಗರಿಂದ ಆನ್‌ಲೈನ್‌ನಲ್ಲಿ ಹತ್ಯೆ ಸಂಭ್ರಮಾಚರಣೆ

ಫತೇಪುರದಲ್ಲಿ ಮುಸ್ಲಿಂ ವಿದ್ಯಾರ್ಥಿ ಮೇಲೆ ಹಲ್ಲೆ, ಸಾವು: ಆರೋಪಿಗಳ ಬೆಂಬಲಿಗರಿಂದ ಆನ್‌ಲೈನ್‌ನಲ್ಲಿ ಹತ್ಯೆ ಸಂಭ್ರಮಾಚರಣೆ

- Advertisement -
- Advertisement -

ಫತೇಪುರ: ಉತ್ತರಪ್ರದೇಶದ ಫತೇಪುರದಲ್ಲಿ 17 ವರ್ಷದ ಮುಸ್ಲಿಂ ವಿದ್ಯಾರ್ಥಿ ಆರಿಶ್ ಖಾನ್ ಅವರನ್ನು ಬರ್ಬರವಾಗಿ ಥಳಿಸಿ ಹತ್ಯೆ ಮಾಡಿರುವ ಘಟನೆ ವ್ಯಾಪಕ ಆಕ್ರೋಶ ಮತ್ತು ಭೀತಿಯನ್ನು ಹುಟ್ಟುಹಾಕಿದೆ. ಈ ದಾಳಿಯ ಭಯಾನಕ ದೃಶ್ಯಗಳು ಮತ್ತು ನಂತರ ಆರೋಪಿಗಳ ಬೆಂಬಲಿಗರಿಂದ ನಡೆದ ಸಾರ್ವಜನಿಕ ಸಂಭ್ರಮಾಚರಣೆಯು ಇದು ದ್ವೇಷದ ಅಪರಾಧವಾಗಿರಬಹುದೆಂಬ ಸಂಶಯಕ್ಕೆ ಕಾರಣವಾಗಿದೆ. ಜುಲೈ 23 ರಂದು ನಡೆದ ಈ ಘಟನೆ, ಸಂತ್ರಸ್ತ ಕುಟುಂಬವನ್ನು ತೀವ್ರ ದುಃಖದಲ್ಲಿ ಮುಳುಗಿಸಿದ್ದು ಮಾತ್ರವಲ್ಲದೆ, ಹೆಚ್ಚುತ್ತಿರುವ ಕೋಮು ವೈರತ್ವ ಮತ್ತು ಶಿಕ್ಷೆಯಿಲ್ಲದೆ ನಡೆಯುತ್ತಿರುವ ಅಪರಾಧಗಳ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಯೋಜಿತ ಹತ್ಯೆಯ ಸಂಶಯ

ಮಹರ್ಷಿ ವಿದ್ಯಾ ಮಂದಿರ ಹಿರಿಯ ಮಾಧ್ಯಮಿಕ ಶಾಲೆಯ 12ನೇ ತರಗತಿ ವಿದ್ಯಾರ್ಥಿಯಾಗಿದ್ದ ಆರಿಶ್ ಖಾನ್, ಶಾಲೆಯಿಂದ ಹೊರಬಂದ ಕೂಡಲೇ ಮೂವರು ಯುವಕರು ಆತನ ಮೇಲೆ ದಾಳಿ ನಡೆಸಿದರು. ಹರ್ಷವರ್ಧನ್ ಪಾಂಡೆ, ದೀಪಕ್ ಸವಿತಾ ಮತ್ತು ಭರತ್ ಸರ್ಕಾರ್ ಎಂದು ಗುರುತಿಸಲಾದ ಈ ಮೂವರು, ಸ್ಕೂಟರ್‌ನಲ್ಲಿ ಬಂದು ರಾಡ್ ಮತ್ತು ದೊಣ್ಣೆಗಳಿಂದ ಆರಿಶ್ ಮೇಲೆ ಹಲ್ಲೆ ನಡೆಸಿದರು. ಸಿಸಿಟಿವಿ ದೃಶ್ಯಗಳಲ್ಲಿ ಈ ಸಂಪೂರ್ಣ ಘಟನೆ ದಾಖಲಾಗಿದೆ. ಥಳಿತದಿಂದ ಅಪ್ರಜ್ಞಾವಸ್ಥೆಗೆ ಜಾರಿದ ಆರಿಶ್, ತೀವ್ರ ಗಾಯಗಳೊಂದಿಗೆ ಸ್ಥಳೀಯ ಆಸ್ಪತ್ರೆಗೆ ದಾಖಲಾದರು. ಆದರೆ 36 ಗಂಟೆಗಳ ನಂತರ, ಜುಲೈ 26ರಂದು ಅವರು ಸಾವನ್ನಪ್ಪಿದರು. ಪೊಲೀಸರು ತನಿಖೆ ಆರಂಭಿಸಿದ್ದರೂ, ಅನೇಕರು ಈ ದಾಳಿಯನ್ನು ಮುಸ್ಲಿಂ ಗುರುತಿನ ಕಾರಣಕ್ಕಾಗಿ ನಡೆದ ಜನಸಮೂಹ ಹತ್ಯೆ (lynching) ಎಂದು ಆರೋಪಿಸುತ್ತಿದ್ದಾರೆ.

ನ್ಯಾಯಕ್ಕಾಗಿ ಕುಟುಂಬದ ಬೇಡಿಕೆ

ವಿದ್ಯುತ್ ತಂತ್ರಜ್ಞನ ಮಗನಾದ ಆರಿಶ್, ತನ್ನ ತಂದೆ-ತಾಯಿ ಮತ್ತು ಇಬ್ಬರು ತಂಗಿಯರನ್ನು ಅಗಲಿದ್ದಾನೆ. ಮಾಧ್ಯಮದೊಂದಿಗೆ ಮಾತನಾಡಿದ ಆತನ ತಂದೆ, “ಯಾವ ಕಾರಣಕ್ಕೆ ನಮ್ಮ ಮಗನನ್ನು ಆ ಹುಡುಗರು ಕೊಂದರು ಎಂದು ನಮಗೆ ಗೊತ್ತಿಲ್ಲ. ನಮಗೆ ನ್ಯಾಯ ಬೇಕು. ನಮ್ಮ ಮಗನನ್ನು ಹಗಲು ಹೊತ್ತಿನಲ್ಲಿ ಕೊಲೆ ಮಾಡಲಾಗಿದೆ” ಎಂದು ದುಃಖ ತೋಡಿಕೊಂಡರು.

ಜುಲೈ 24ರಂದು ಕುಟುಂಬದ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದ್ದು, ಮೂವರು ಆರೋಪಿಗಳ ವಿರುದ್ಧ ಪ್ರಚೋದನೆ, ಹಲ್ಲೆ, ಮತ್ತು ಉದ್ದೇಶಪೂರ್ವಕ ಗಾಯಗೊಳಿಸಿದ ಆರೋಪಗಳನ್ನು ದಾಖಲಿಸಲಾಗಿದೆ. ಜುಲೈ 26ರಂದು, ಆರಿಶ್ ಸಾವನ್ನಪ್ಪಿದ ದಿನವೇ ಮೂವರನ್ನೂ ಬಂಧಿಸಲಾಯಿತು. ನಂತರ, ಆರೋಪಿಗಳ ಬೆಂಬಲಿಗರು ಹತ್ಯೆಯನ್ನು ವೈಭವೀಕರಿಸಿ ಆನ್‌ಲೈನ್‌ನಲ್ಲಿ ಮತ್ತು ಬೀದಿಗಳಲ್ಲಿ ಕೋಮು ಉದ್ವಿಗ್ನತೆಯನ್ನು ಹೆಚ್ಚಿಸುತ್ತಿದ್ದಾರೆ ಎಂದು ಆರೋಪಿಸಿ ಆರಿಶ್‌ನ ತಾತ ಮತ್ತೊಂದು ದೂರು ದಾಖಲಿಸಿದ್ದಾರೆ.

ಹಿಂಸೆಯ ಸಂಭ್ರಮಾಚರಣೆ

ಆರೋಪಿಗಳ ಬೆಂಬಲಿಗರು ಬೈಕ್ ರ್ಯಾಲಿ ನಡೆಸಿ, ಮುಸ್ಲಿಮರನ್ನು ಗುರಿಯಾಗಿಸಿ ಪ್ರಚೋದನಕಾರಿ ಘೋಷಣೆಗಳನ್ನು ಕೂಗಿ, ಮತ್ತು ಸಾಮಾಜಿಕ ಮಾಧ್ಯಮದಲ್ಲಿ ಆರಿಶ್ ಹತ್ಯೆಯನ್ನು ವೈಭವೀಕರಿಸಿ ಅವಹೇಳನಕಾರಿ ಪೋಸ್ಟ್‌ಗಳನ್ನು ಹಂಚಿಕೊಂಡಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ.

ಆರೋಪಿಗಳ ಸಹಾನುಭೂತಿ ಉಳ್ಳವರಲ್ಲಿ ಒಬ್ಬನಾದ ಅಭಯ್ ದ್ವಿವೇದಿ, Instagram ನಲ್ಲಿ ಸಂಭ್ರಮಾಚರಣೆಯ ವೀಡಿಯೊವನ್ನು ಪೋಸ್ಟ್ ಮಾಡಿ, “ಜಲ್ದಿ ವಾಪ್ಸಿ ಹೋಗಿ ಮೇರೆ ಶೇರ್ ಕಿ” (ನನ್ನ ಸಿಂಹ ಶೀಘ್ರದಲ್ಲೇ ಹಿಂದಿರುಗುತ್ತಾನೆ) ಎಂದು ಬರೆದುಕೊಂಡಿದ್ದನು. ಈ ಪೋಸ್ಟ್‌ನಲ್ಲಿ ಆತ ಆರೋಪಿಗಳೊಂದಿಗಿನ ಚಿತ್ರಗಳನ್ನೂ ಹಂಚಿಕೊಂಡಿದ್ದನು. ಮತ್ತೊಂದು ಪೋಸ್ಟ್‌ನಲ್ಲಿ, “ಫುಲ್ ಸಪೋರ್ಟ್, ಮೇರಿ ಜಾನ್,” ಎಂದು ಬರೆದಿದ್ದನು.

justthhemaa_ ಎಂಬ ಹ್ಯಾಂಡಲ್‌ನ ಮತ್ತೊಬ್ಬ ಬಳಕೆದಾರ ಆರಿಶ್ ಮತ್ತು ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿ ಅಶ್ಲೀಲ ಮತ್ತು ದ್ವೇಷಪೂರಿತ ನಿಂದನೆಗಳನ್ನು ಪೋಸ್ಟ್ ಮಾಡಿದ್ದನು. ಆ ಪೋಸ್ಟ್ ಹೀಗಿದೆ: “Ariss madarchodd sala mr gyaa bhn ka lavdaa! phle glti krenge fhir justice mangenge bhn ke lavde, Lavda milega tmhe justice Nhii bsdkk. Mulle madarchodd.” (“ಆರಿಶ್, ನೀನು ಸತ್ತೇ ಹೋದೆ! ಮೊದಲು ತಪ್ಪು ಮಾಡಿ ಆಮೇಲೆ ನ್ಯಾಯ ಕೇಳುತ್ತೀರಾ? ನಿಮಗೆ ಯಾವ ನ್ಯಾಯವೂ ಸಿಗುವುದಿಲ್ಲ. ಮುಸ್ಲಿಂ …”.)

ಈ ಎರಡೂ ಖಾತೆಗಳನ್ನು ನಂತರ ನಿಷ್ಕ್ರಿಯಗೊಳಿಸಲಾಯಿತು. ಈ ಪೋಸ್ಟ್‌ಗಳ ಸ್ಕ್ರೀನ್‌ಶಾಟ್‌ಗಳನ್ನು ಆರಿಶ್‌ನ ತಾತ ಸಾಕ್ಷ್ಯವಾಗಿ ಪೊಲೀಸರಿಗೆ ಸಲ್ಲಿಸಿದ್ದಾರೆ.

ಅಸ್ಸಾಂನಲ್ಲಿ ಸಾವಿರಾರು ಮುಸ್ಲಿಂ ಕುಟುಂಬಗಳ ತೆರವು: ಚುನಾವಣಾ ಪೂರ್ವ ರಾಜಕೀಯಕ್ಕೆ ಹೊಸ ಅಸ್ತ್ರ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...