Homeಮುಖಪುಟಫತೇಪುರದಲ್ಲಿ ಮುಸ್ಲಿಂ ವಿದ್ಯಾರ್ಥಿ ಮೇಲೆ ಹಲ್ಲೆ, ಸಾವು: ಆರೋಪಿಗಳ ಬೆಂಬಲಿಗರಿಂದ ಆನ್‌ಲೈನ್‌ನಲ್ಲಿ ಹತ್ಯೆ ಸಂಭ್ರಮಾಚರಣೆ

ಫತೇಪುರದಲ್ಲಿ ಮುಸ್ಲಿಂ ವಿದ್ಯಾರ್ಥಿ ಮೇಲೆ ಹಲ್ಲೆ, ಸಾವು: ಆರೋಪಿಗಳ ಬೆಂಬಲಿಗರಿಂದ ಆನ್‌ಲೈನ್‌ನಲ್ಲಿ ಹತ್ಯೆ ಸಂಭ್ರಮಾಚರಣೆ

- Advertisement -
- Advertisement -

ಫತೇಪುರ: ಉತ್ತರಪ್ರದೇಶದ ಫತೇಪುರದಲ್ಲಿ 17 ವರ್ಷದ ಮುಸ್ಲಿಂ ವಿದ್ಯಾರ್ಥಿ ಆರಿಶ್ ಖಾನ್ ಅವರನ್ನು ಬರ್ಬರವಾಗಿ ಥಳಿಸಿ ಹತ್ಯೆ ಮಾಡಿರುವ ಘಟನೆ ವ್ಯಾಪಕ ಆಕ್ರೋಶ ಮತ್ತು ಭೀತಿಯನ್ನು ಹುಟ್ಟುಹಾಕಿದೆ. ಈ ದಾಳಿಯ ಭಯಾನಕ ದೃಶ್ಯಗಳು ಮತ್ತು ನಂತರ ಆರೋಪಿಗಳ ಬೆಂಬಲಿಗರಿಂದ ನಡೆದ ಸಾರ್ವಜನಿಕ ಸಂಭ್ರಮಾಚರಣೆಯು ಇದು ದ್ವೇಷದ ಅಪರಾಧವಾಗಿರಬಹುದೆಂಬ ಸಂಶಯಕ್ಕೆ ಕಾರಣವಾಗಿದೆ. ಜುಲೈ 23 ರಂದು ನಡೆದ ಈ ಘಟನೆ, ಸಂತ್ರಸ್ತ ಕುಟುಂಬವನ್ನು ತೀವ್ರ ದುಃಖದಲ್ಲಿ ಮುಳುಗಿಸಿದ್ದು ಮಾತ್ರವಲ್ಲದೆ, ಹೆಚ್ಚುತ್ತಿರುವ ಕೋಮು ವೈರತ್ವ ಮತ್ತು ಶಿಕ್ಷೆಯಿಲ್ಲದೆ ನಡೆಯುತ್ತಿರುವ ಅಪರಾಧಗಳ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಯೋಜಿತ ಹತ್ಯೆಯ ಸಂಶಯ

ಮಹರ್ಷಿ ವಿದ್ಯಾ ಮಂದಿರ ಹಿರಿಯ ಮಾಧ್ಯಮಿಕ ಶಾಲೆಯ 12ನೇ ತರಗತಿ ವಿದ್ಯಾರ್ಥಿಯಾಗಿದ್ದ ಆರಿಶ್ ಖಾನ್, ಶಾಲೆಯಿಂದ ಹೊರಬಂದ ಕೂಡಲೇ ಮೂವರು ಯುವಕರು ಆತನ ಮೇಲೆ ದಾಳಿ ನಡೆಸಿದರು. ಹರ್ಷವರ್ಧನ್ ಪಾಂಡೆ, ದೀಪಕ್ ಸವಿತಾ ಮತ್ತು ಭರತ್ ಸರ್ಕಾರ್ ಎಂದು ಗುರುತಿಸಲಾದ ಈ ಮೂವರು, ಸ್ಕೂಟರ್‌ನಲ್ಲಿ ಬಂದು ರಾಡ್ ಮತ್ತು ದೊಣ್ಣೆಗಳಿಂದ ಆರಿಶ್ ಮೇಲೆ ಹಲ್ಲೆ ನಡೆಸಿದರು. ಸಿಸಿಟಿವಿ ದೃಶ್ಯಗಳಲ್ಲಿ ಈ ಸಂಪೂರ್ಣ ಘಟನೆ ದಾಖಲಾಗಿದೆ. ಥಳಿತದಿಂದ ಅಪ್ರಜ್ಞಾವಸ್ಥೆಗೆ ಜಾರಿದ ಆರಿಶ್, ತೀವ್ರ ಗಾಯಗಳೊಂದಿಗೆ ಸ್ಥಳೀಯ ಆಸ್ಪತ್ರೆಗೆ ದಾಖಲಾದರು. ಆದರೆ 36 ಗಂಟೆಗಳ ನಂತರ, ಜುಲೈ 26ರಂದು ಅವರು ಸಾವನ್ನಪ್ಪಿದರು. ಪೊಲೀಸರು ತನಿಖೆ ಆರಂಭಿಸಿದ್ದರೂ, ಅನೇಕರು ಈ ದಾಳಿಯನ್ನು ಮುಸ್ಲಿಂ ಗುರುತಿನ ಕಾರಣಕ್ಕಾಗಿ ನಡೆದ ಜನಸಮೂಹ ಹತ್ಯೆ (lynching) ಎಂದು ಆರೋಪಿಸುತ್ತಿದ್ದಾರೆ.

ನ್ಯಾಯಕ್ಕಾಗಿ ಕುಟುಂಬದ ಬೇಡಿಕೆ

ವಿದ್ಯುತ್ ತಂತ್ರಜ್ಞನ ಮಗನಾದ ಆರಿಶ್, ತನ್ನ ತಂದೆ-ತಾಯಿ ಮತ್ತು ಇಬ್ಬರು ತಂಗಿಯರನ್ನು ಅಗಲಿದ್ದಾನೆ. ಮಾಧ್ಯಮದೊಂದಿಗೆ ಮಾತನಾಡಿದ ಆತನ ತಂದೆ, “ಯಾವ ಕಾರಣಕ್ಕೆ ನಮ್ಮ ಮಗನನ್ನು ಆ ಹುಡುಗರು ಕೊಂದರು ಎಂದು ನಮಗೆ ಗೊತ್ತಿಲ್ಲ. ನಮಗೆ ನ್ಯಾಯ ಬೇಕು. ನಮ್ಮ ಮಗನನ್ನು ಹಗಲು ಹೊತ್ತಿನಲ್ಲಿ ಕೊಲೆ ಮಾಡಲಾಗಿದೆ” ಎಂದು ದುಃಖ ತೋಡಿಕೊಂಡರು.

ಜುಲೈ 24ರಂದು ಕುಟುಂಬದ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದ್ದು, ಮೂವರು ಆರೋಪಿಗಳ ವಿರುದ್ಧ ಪ್ರಚೋದನೆ, ಹಲ್ಲೆ, ಮತ್ತು ಉದ್ದೇಶಪೂರ್ವಕ ಗಾಯಗೊಳಿಸಿದ ಆರೋಪಗಳನ್ನು ದಾಖಲಿಸಲಾಗಿದೆ. ಜುಲೈ 26ರಂದು, ಆರಿಶ್ ಸಾವನ್ನಪ್ಪಿದ ದಿನವೇ ಮೂವರನ್ನೂ ಬಂಧಿಸಲಾಯಿತು. ನಂತರ, ಆರೋಪಿಗಳ ಬೆಂಬಲಿಗರು ಹತ್ಯೆಯನ್ನು ವೈಭವೀಕರಿಸಿ ಆನ್‌ಲೈನ್‌ನಲ್ಲಿ ಮತ್ತು ಬೀದಿಗಳಲ್ಲಿ ಕೋಮು ಉದ್ವಿಗ್ನತೆಯನ್ನು ಹೆಚ್ಚಿಸುತ್ತಿದ್ದಾರೆ ಎಂದು ಆರೋಪಿಸಿ ಆರಿಶ್‌ನ ತಾತ ಮತ್ತೊಂದು ದೂರು ದಾಖಲಿಸಿದ್ದಾರೆ.

ಹಿಂಸೆಯ ಸಂಭ್ರಮಾಚರಣೆ

ಆರೋಪಿಗಳ ಬೆಂಬಲಿಗರು ಬೈಕ್ ರ್ಯಾಲಿ ನಡೆಸಿ, ಮುಸ್ಲಿಮರನ್ನು ಗುರಿಯಾಗಿಸಿ ಪ್ರಚೋದನಕಾರಿ ಘೋಷಣೆಗಳನ್ನು ಕೂಗಿ, ಮತ್ತು ಸಾಮಾಜಿಕ ಮಾಧ್ಯಮದಲ್ಲಿ ಆರಿಶ್ ಹತ್ಯೆಯನ್ನು ವೈಭವೀಕರಿಸಿ ಅವಹೇಳನಕಾರಿ ಪೋಸ್ಟ್‌ಗಳನ್ನು ಹಂಚಿಕೊಂಡಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ.

ಆರೋಪಿಗಳ ಸಹಾನುಭೂತಿ ಉಳ್ಳವರಲ್ಲಿ ಒಬ್ಬನಾದ ಅಭಯ್ ದ್ವಿವೇದಿ, Instagram ನಲ್ಲಿ ಸಂಭ್ರಮಾಚರಣೆಯ ವೀಡಿಯೊವನ್ನು ಪೋಸ್ಟ್ ಮಾಡಿ, “ಜಲ್ದಿ ವಾಪ್ಸಿ ಹೋಗಿ ಮೇರೆ ಶೇರ್ ಕಿ” (ನನ್ನ ಸಿಂಹ ಶೀಘ್ರದಲ್ಲೇ ಹಿಂದಿರುಗುತ್ತಾನೆ) ಎಂದು ಬರೆದುಕೊಂಡಿದ್ದನು. ಈ ಪೋಸ್ಟ್‌ನಲ್ಲಿ ಆತ ಆರೋಪಿಗಳೊಂದಿಗಿನ ಚಿತ್ರಗಳನ್ನೂ ಹಂಚಿಕೊಂಡಿದ್ದನು. ಮತ್ತೊಂದು ಪೋಸ್ಟ್‌ನಲ್ಲಿ, “ಫುಲ್ ಸಪೋರ್ಟ್, ಮೇರಿ ಜಾನ್,” ಎಂದು ಬರೆದಿದ್ದನು.

justthhemaa_ ಎಂಬ ಹ್ಯಾಂಡಲ್‌ನ ಮತ್ತೊಬ್ಬ ಬಳಕೆದಾರ ಆರಿಶ್ ಮತ್ತು ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿ ಅಶ್ಲೀಲ ಮತ್ತು ದ್ವೇಷಪೂರಿತ ನಿಂದನೆಗಳನ್ನು ಪೋಸ್ಟ್ ಮಾಡಿದ್ದನು. ಆ ಪೋಸ್ಟ್ ಹೀಗಿದೆ: “Ariss madarchodd sala mr gyaa bhn ka lavdaa! phle glti krenge fhir justice mangenge bhn ke lavde, Lavda milega tmhe justice Nhii bsdkk. Mulle madarchodd.” (“ಆರಿಶ್, ನೀನು ಸತ್ತೇ ಹೋದೆ! ಮೊದಲು ತಪ್ಪು ಮಾಡಿ ಆಮೇಲೆ ನ್ಯಾಯ ಕೇಳುತ್ತೀರಾ? ನಿಮಗೆ ಯಾವ ನ್ಯಾಯವೂ ಸಿಗುವುದಿಲ್ಲ. ಮುಸ್ಲಿಂ …”.)

ಈ ಎರಡೂ ಖಾತೆಗಳನ್ನು ನಂತರ ನಿಷ್ಕ್ರಿಯಗೊಳಿಸಲಾಯಿತು. ಈ ಪೋಸ್ಟ್‌ಗಳ ಸ್ಕ್ರೀನ್‌ಶಾಟ್‌ಗಳನ್ನು ಆರಿಶ್‌ನ ತಾತ ಸಾಕ್ಷ್ಯವಾಗಿ ಪೊಲೀಸರಿಗೆ ಸಲ್ಲಿಸಿದ್ದಾರೆ.

ಅಸ್ಸಾಂನಲ್ಲಿ ಸಾವಿರಾರು ಮುಸ್ಲಿಂ ಕುಟುಂಬಗಳ ತೆರವು: ಚುನಾವಣಾ ಪೂರ್ವ ರಾಜಕೀಯಕ್ಕೆ ಹೊಸ ಅಸ್ತ್ರ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....