Homeಮುಖಪುಟಮಣಿಪುರದಲ್ಲಿ ಪತ್ರಕರ್ತರ ಬಂಧನ: ಹಿಂಸಾಚಾರ ಪೀಡಿತ ರಾಜ್ಯದಲ್ಲಿ ಮಾದ್ಯಮಗಳನ್ನು ಕಟ್ಟಿಹಾಕಲು ಯತ್ನ?

ಮಣಿಪುರದಲ್ಲಿ ಪತ್ರಕರ್ತರ ಬಂಧನ: ಹಿಂಸಾಚಾರ ಪೀಡಿತ ರಾಜ್ಯದಲ್ಲಿ ಮಾದ್ಯಮಗಳನ್ನು ಕಟ್ಟಿಹಾಕಲು ಯತ್ನ?

- Advertisement -
- Advertisement -

ಮಣಿಪುರದಲ್ಲಿ ಒಂದೇ ವಾರದಲ್ಲಿ ಇಬ್ಬರು ಪತ್ರಕರ್ತರ ಬಂಧನವಾಗಿದ್ದು, ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಮಾದ್ಯಮಗಳು ಮತ್ತು ಪತ್ರಿಕಾ ಸ್ವಾತಂತ್ರ್ಯದ ಮೇಲೆ ಬಲಪ್ರಯೋಗ ನಡೆಯುತ್ತಿದೆ. ಮಣಿಪುರ ಹಿಂಸಾಚಾರಕ್ಕೆ ಸಂಬಂಧಿಸಿದ ವರದಿಗೆ ಸಂಬಂಧಿಸಿ ಸ್ಥಳೀಯ ಮಣಿಪುರ ಭಾಷಾ ಪತ್ರಿಕೆಯ ಸಂಪಾದಕನನ್ನು ಧರ್ಮ ಮತ್ತು ಜನಾಂಗದ ಆಧಾರದ ಮೇಲೆ ದ್ವೇಷವನ್ನು ಉತ್ತೇಜಿಸಿದ ಆರೋಪ ಹೊರಿಸಿ ಬಂಧಿಸಲಾಗಿದ್ದು, ಪತ್ರಕರ್ತರ ಪ್ರತಿಭಟನೆಗೆ ಕಾರಣವಾಗಿದೆ.

ಸಶಸ್ತ್ರ ದಾಳಿ ನಡೆದಿದ್ದ ಮೋರೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದೆ ಎಂದು ವರದಿ ಮಾಡಿದ ಕಾರಣಕ್ಕೆ ಇಂಫಾಲ್‌ನ ಹುಯೆಯೆನ್ ಲ್ಯಾನ್‌ಪಾವೊ ಸಂಪಾದಕರಾದ ಧನಬೀರ್ ಮೈಬಮ್ ವಿರುದ್ಧ ಕ್ರಿಮಿನಲ್ ಪಿತೂರಿ ಮತ್ತು 1923ರ ರಹಸ್ಯ ಕಾಯಿದೆಯ ವಿವಿಧ ಷರತ್ತುಗಳನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ಬಂಧಿಸಲಾಗಿದೆ.

ಅಕ್ಟೋಬರ್ 31 ರಿಂದ ಮ್ಯಾನ್ಮಾರ್ ಗಡಿಯಲ್ಲಿರುವ ಮೋರೆ ಪಟ್ಟಣದಲ್ಲಿ ನಡೆದ ದಾಳಿಗಳಲ್ಲಿ SDPO ಮೃತಪಟ್ಟು, ಒಂಬತ್ತು ಕಮಾಂಡೋಗಳಿಗೆ ಗಾಯಗಳಾಗಿತ್ತು. ಈ ಬಗ್ಗೆ ‘ಹುಯೆಯೆನ್ ಲ್ಯಾನ್‌ಪಾವೊ’ ಪತ್ರಿಕೆಯಲ್ಲಿ ಲೇಖನವನ್ನು ಬರೆಯಲಾಗಿದೆ. ಮೈಬಮ್ ಅವರನ್ನು ಮೂರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ. ಅವರ ಬಂಧನವನ್ನು ಪತ್ರಕರ್ತರು ಮತ್ತು ವಿವಿಧ ಸಂಘಟನೆಗಳ ಸದಸ್ಯರು ಖಂಡಿಸಿ ಪ್ರತಿಭಟನೆಯನ್ನು ನಡೆಸಿದ್ದಾರೆ.

ಎಲೈಟ್ ಟಿವಿಯ ಸಂಪಾದಕ ಜೀತ್ ನಿಂಗೋಂಬಮ್ ಈ ಕುರಿತು ಪ್ರತಿಕ್ರಿಯಿಸಿದ್ದು ಪತ್ರಕರ್ತರ ಬಂಧನವನ್ನು ನಾವು ಖಂಡಿಸುತ್ತೇವೆ. ಅವರು ತಮ್ಮ ವರದಿಗಳಲ್ಲಿ ತಪ್ಪು ಮಾಡಿದ್ದರೆ ಸ್ಪಷ್ಟೀಕರಣವನ್ನು ನೀಡುವಂತೆ ಕೇಳಬಹುದಿತ್ತು ಎಂದು ಹೇಳಿದ್ದಾರೆ.

ಡಿ.2ರಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಲೈಶ್ರಾಮ್ ಮೀನಬಂಟ ಸಿಂಗ್ ಅವರ ದೂರಿನ ಮೇರೆಗೆ ಮಣಿಪುರ ಪೊಲೀಸರು  ‘ಕಂಗ್ಲೇಪಕ್ಕಿ ಮೀರಾ’ ಪತ್ರಿಕೆಯ ಸಂಪಾದಕ ವಾಂಗ್ಖೆಮ್ಚಾ ಶ್ಯಾಮ್‌ಜೈ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಿದ್ದರು. ಮಣಿಪುರ ಕಾರ್ಯನಿರತ ಪತ್ರಕರ್ತರ ಒಕ್ಕೂಟದ ಮಾಜಿ ಅಧ್ಯಕ್ಷರಾಗಿದ್ದ ವಾಂಗ್ಖೆಮ್ಚಾ ಶ್ಯಾಮ್‌ಜೈ ಬಂಧನ ಟೀಕೆಗೆ ಕಾರಣವಾಗಿತ್ತು. ಮೊರೆಯಲ್ಲಿನ ಪರಿಸ್ಥಿತಿ ಬಗ್ಗೆ ವರದಿಗೆ ಬಂಧನವು ನಡೆದಿತ್ತು ಎಂದು ಪೊಲೀಸ್ ಮೂಲಗಳು ಹೇಳಿದ್ದವು.

ಮಣಿಪುರ ಹಿಂಸಾಚಾರಕ್ಕೆ ಸಂಬಂಧಿಸಿ ಕುಕಿ ಸಮುದಾಯಕ್ಕೆ ಬಿಜೆಪಿಯ ಬೆಂಬಲವಿದೆಯೇ ಎಂದು ಪ್ರಶ್ನಿಸಿ ಪತ್ರಕರ್ತ ವಾಂಗ್‌ಖೇಮ್‌ಚಾ ಶ್ಯಾಮ್‌ಜೈ ಲೇಖನವನ್ನು ಬರೆದಿದ್ದರು.  ಶ್ಯಾಮ್‌ಜೈ ಅವರ ಲೇಖನವು ಮಣಿಪುರದಲ್ಲಿ ಸಮುದಾಯಗಳ ನಡುವೆ ಉದ್ವಿಗ್ನತೆಗೆ ಕಾರಣವಾಗಿದೆ ಎಂದು ಲೈಶ್ರಾಮ್ ಮೀನಾಬಂಟ ಸಿಂಗ್ ತಮ್ಮ ದೂರಿನಲ್ಲಿ ಆರೋಪಿಸಿದ್ದರು. ಗಲಭೆಗೆ ಪ್ರಚೋದನೆ ನೀಡುವುದು, ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು, ಕ್ರಿಮಿನಲ್ ಬೆದರಿಕೆ ಸೇರಿದಂತೆ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪೊಲೀಸರು ಶ್ಯಾಮ್‌ಜೈ ವಿರುದ್ಧ ಪ್ರಕರಣ ದಾಖಲಿಸಿದ್ದರು. ಶ್ಯಾಮ್‌ಜೈ ಅವರ ಬಂಧನವನ್ನು ಮಣಿಪುರ ಕಾಂಗ್ರೆಸ್‌ ಮುಖ್ಯಸ್ಥ ಕೇಶಾಮ್ ಮೇಘಚಂದ್ರ ಅವರು ಖಂಡಿಸಿ ಇದು ಮಾದ್ಯಮ ಮತ್ತು ವಾಕ್ ಸ್ವಾತಂತ್ರ್ಯದ ಮೇಲಿನ ಅನ್ಯಾಯದ ಜೀವಂತ ಉದಾಹರಣೆಯಾಗಿದೆ ಎಂದು ಹೇಳಿದ್ದರು.

ಮೈತೈ ಸಮುದಾಯಕ್ಕೆ ಪರಿಶಿಷ್ಟ ಪಂಗಡ (ಎಸ್‌ಟಿ) ಸ್ಥಾನಮಾನ ನೀಡುವುದನ್ನು ವಿರೋಧಿಸಿ ಮಣಿಪುರದ ಗುಡ್ಡಗಾಡು ಜಿಲ್ಲೆಗಳಲ್ಲಿ ಮೇ 3, 2023ರಂದು ‘ಬುಡಕಟ್ಟು ಐಕಮತ್ಯ ಮೆರವಣಿಗೆ’ ಆಯೋಜಿಸಲಾಗಿತ್ತು. ಇದು ಬಳಿಕ ಜನಾಂಗೀಯ ಹಿಂಸಾಚಾರಕ್ಕೆ ತಿರುಗಿತ್ತು. ಮೇ.3ರಿಂದ ಮಣಿಪುರದಲ್ಲಿ ಕುಕಿಗಳು ಮತ್ತು ಮೈತೈ ಸಮುದಾಯಗಳ ನಡುವಿನ ಜನಾಂಗೀಯ ಹಿಂಸಾಚಾರದಿಂದ 200ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು ರಾಜ್ಯದಲ್ಲಿ ಕನಿಷ್ಠ 60,000 ಜನರು ನಿರಾಶ್ರಿತರಾಗಿದ್ದಾರೆ. ಡಿ.4ರಂದು ತೆಂಗೊಪಾಲ್ ಜಿಲ್ಲೆಯ ಲೀತು ಗ್ರಾಮದಲ್ಲಿ ನಡೆದ ಗುಂಡಿನ ಕಾಳಗದಲ್ಲಿ 13 ಮಂದಿ ಮೃತಪಟ್ಟಿದ್ದರು. ಕೆಲ ದಿನಗಳ ಕಾಲ ಶಾಂತವಾಗಿದ್ದ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಪ್ರತ್ಯೇಕವಾದ ಘಟನೆಯಲ್ಲಿ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೈತೈ ಮತ್ತು ಕುಕಿ ಗುಂಪುಗಳ ನಡುವೆ ನಡೆದ ಹಿಂಸಾಚಾರದಲ್ಲಿ ಮೈತೈ ಸಮುದಾಯದ ಓರ್ವ ವ್ಯಕ್ತಿ ಮೃತಪಟ್ಟಿದ್ದಾನೆ. ಇದಲ್ಲದೆ ಮಣಿಪುರ ಗಡಿಭಾಗದ ಮೊರೆಹ್ ಪಟ್ಟಣದಲ್ಲಿ ಪೊಲೀಸ್ ಕಮಾಂಡೋಗಳು ಮತ್ತು ಸಶಸ್ತ್ರದಾರಿ ಗುಂಪಿನ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಪೊಲೀಸ್‌ ಪೇದೆ ಗಾಯಗೊಂಡಿದ್ದರು.

ಇದನ್ನು ಓದಿ: ವೈಎಸ್‌ ಆರ್‌ ಕಾಂಗ್ರೆಸ್‌ಗೆ ಸೇರಿದ ಒಂದೇ ವಾರದಲ್ಲಿ ಪಕ್ಷ ತೊರೆದ ಮಾಜಿ ಕ್ರಿಕೆಟಿಗ ಅಂಬಟಿ ರಾಯುಡು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಅಮಿತ್‌ ಶಾ ಸ್ಪರ್ಧಿಸುವ ಗಾಂಧಿನಗರದಲ್ಲಿ ಸ್ಪರ್ಧಿಸದಂತೆ ಅಭ್ಯರ್ಥಿಗಳಿಗೆ ಬಿಜೆಪಿ ನಾಯಕರು ಮತ್ತು ಪೊಲೀಸರಿಂದ ಬೆದರಿಕೆ?

0
ಗುಜರಾತ್‌ನ ಸೂರತ್ ಲೋಕಸಭಾ ಕ್ಷೇತ್ರವನ್ನು ಬಿಜೆಪಿ ಈಗಾಗಲೇ ಅವಿರೋಧವಾಗಿ ಗೆದ್ದುಕೊಂಡಿದೆ. ಇದರ ಬೆನ್ನಲ್ಲಿ ಅಮಿತ್ ಶಾ ಪ್ರತಿನಿಧಿಸುವ ಗಾಂಧಿನಗರ ಕ್ಷೇತ್ರದಲ್ಲಿ ಅಭ್ಯರ್ಥಿಗಳಿಗೆ ತಮ್ಮ ನಾಮಪತ್ರವನ್ನು ಹಿಂತೆಗೆದುಕೊಳ್ಳುವಂತೆ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಗುಜರಾತ್‌ನ...