Homeಮುಖಪುಟಮಣಿಪುರ ಬೆತ್ತಲೆ ಮೆರವಣಿಗೆ: ಗಲಭೆಕೋರರ ಗುಂಪಿಗೆ ಮಹಿಳೆಯರನ್ನು ಒಪ್ಪಿಸಿದ್ದ ಪೊಲೀಸರು, ಚಾರ್ಜ್‌ಶೀಟ್‌ನಲ್ಲಿ ಮಹತ್ವದ ಅಂಶಗಳು ಉಲ್ಲೇಖ

ಮಣಿಪುರ ಬೆತ್ತಲೆ ಮೆರವಣಿಗೆ: ಗಲಭೆಕೋರರ ಗುಂಪಿಗೆ ಮಹಿಳೆಯರನ್ನು ಒಪ್ಪಿಸಿದ್ದ ಪೊಲೀಸರು, ಚಾರ್ಜ್‌ಶೀಟ್‌ನಲ್ಲಿ ಮಹತ್ವದ ಅಂಶಗಳು ಉಲ್ಲೇಖ

- Advertisement -
- Advertisement -

ಮಣಿಪುರ ಹಿಂಸಾಚಾರದ ಸಮಯದಲ್ಲಿ ನಡೆದಿದ್ದ ಇಬ್ಬರು ಮಹಿಳೆಯರ ಬೆತ್ತಲೆ ಮೆರವಣಿಗೆ, ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ಚಾರ್ಜ್‌ಶೀಟ್‌ನಲ್ಲಿ ಮಹತ್ವದ ಅಂಶಗಳ ಉಲ್ಲೇಖವಾಗಿದ್ದು, ಮಹಿಳೆಯರನ್ನು ಗಲಭೆಕೋರರ ಗುಂಪಿಗೆ ಪೊಲೀಸರೇ ಒಪ್ಪಿಸಿದ್ದಾರೆ ಎಂದು ತಿಳಿಸಿದೆ.

ಪೊಲೀಸರ ಜಿಪ್ಸಿಯಲ್ಲಿ ಆಶ್ರಯ ಪಡೆದಿದ್ದ ಕುಕಿ-ಜೋ ಸಮುದಾಯದ ಇಬ್ಬರು ಮಹಿಳೆಯರನ್ನು ಮಣಿಪುರ ಪೊಲೀಸ್ ಸಿಬ್ಬಂದಿ ಕಾಂಗ್‌ಪೋಪಿ ಜಿಲ್ಲೆಯಲ್ಲಿ ಸುಮಾರು 1,000 ಮೈತೈ ಗಲಭೆಕೋರರಿದ್ದ ಗುಂಪಿಗೆ ತಲುಪಿಸಿದ್ದಾರೆ ಎಂಬ ಅಚ್ಚರಿಯ ಅಂಶ ಸಿಬಿಐ ಚಾರ್ಜ್ ಶೀಟ್‌ನಲ್ಲಿ ಉಲ್ಲೇಖಿಸಲಾಗಿದೆ.

ಮಣಿಪುರದಲ್ಲಿ ನಡೆದ ಜನಾಂಗೀಯ ಹಿಂಸಾಚಾರದ ಇಬ್ಬರು ಮಹಿಳೆಯರನ್ನು ವಿವಸ್ತ್ರಗೊಳಿಸಿ ಮೆರವಣಿಗೆ ಮಾಡಿ ಬಳಿಕ ಸಾಮೂಹಿಕ ಅತ್ಯಾಚಾರ ನಡೆಸಲಾಗಿದೆ ಎಂದು ಚಾರ್ಜ್ ಶೀಟ್‌ನಲ್ಲಿ ಉಲ್ಲೇಖಿಸಲಾಗಿದೆ. ಅದೇ ಕುಟುಂಬಕ್ಕೆ ಸೇರಿದ ಮೂರನೇ ಮಹಿಳೆಯ ಮೇಲೂ ಜನಸಮೂಹವು ಹಲ್ಲೆ ನಡೆಸಿದೆ ಮತ್ತು ಆಕೆಯನ್ನು  ವಿವಸ್ತ್ರಗೊಳಿಸಲು ಪ್ರಯತ್ನಿಸಿದೆ ಆದರೆ ಮಹಿಳೆ ಮೊಮ್ಮಗಳನ್ನು ಬಿಗಿಯಾಗಿ ಹಿಡಿದಿದ್ದರಿಂದ ಪ್ರಯತ್ನದಲ್ಲಿ ವಿಫಲರಾದರು ಎಂದು ಚಾರ್ಜ್ ಶೀಟ್‌ನಲ್ಲಿ ಉಲ್ಲೇಖಿಸಲಾಗಿದೆ. ಆಕೆಯ ಮೇಲೆ ದಾಳಿ ಮಾಡಿದ ಗುಂಪು ಭತ್ತದ ಗದ್ದೆಗಳಲ್ಲಿ ಪೀಡನೆಗೊಳಪಡುತ್ತಿದ್ದ ಇತರ ಇಬ್ಬರು ಸಂತ್ರಸ್ತರ ಕಡೆಗೆ ಓಡಿ ಹೋದ ನಂತರ ಆಕೆ ತಪ್ಪಿಸಿಕೊಂಡಿದ್ದಾರೆ ಎಂದು ಚಾರ್ಜ್ ಶೀಟ್‌ನಲ್ಲಿ ಉಲ್ಲೇಖಿಸಲಾಗಿದೆ. ಮೂವರೂ ಸಂತ್ರಸ್ತರು ಕೂಡ ಸ್ಥಳದಲ್ಲಿದ್ದ ಪೊಲೀಸ್ ಸಿಬ್ಬಂದಿಯ ಸಹಾಯವನ್ನು ಕೋರಿದ್ದಾರೆ. ಆದರೆ ಅವರಿಗೆ ಯಾವುದೇ ಸಹಾಯವನ್ನು ನೀಡಲಾಗಿಲ್ಲ ಎಂದು ಆರೋಪಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ.

ಕಾರ್ಗಿಲ್ ಯುದ್ಧದ ಯೋಧನ ಪತ್ನಿಯಾಗಿದ್ದ ಸಂತ್ರಸ್ತ ಮಹಿಳೆಯೊಬ್ಬರು ತಮ್ಮನ್ನು ಸುರಕ್ಷಿತ ಸ್ಥಳಕ್ಕೆ ತಲುಪಿಸಲು ಪೊಲೀಸ್ ಸಿಬ್ಬಂದಿ ಬಳಿ ಬೇಡಿಕೊಂಡಿದ್ದಾರೆ, ಈ ವೇಳೆ ವಾಹನದ ಕೀ ಇಲ್ಲ ಎಂದ ಪೊಲೀಸರು ಯಾವುದೇ ಸಹಾಯ ಮಾಡಲು ಮುಂದಾಗಿಲ್ಲ ಎನ್ನುವ ಅಚ್ಚರಿ ಅಂಶ ತನಿಖೆಯ ವೇಳೆ ಬಯಲಾಗಿದೆ.

2023ರ ಮೇ 4ರಂದು ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ ಭುಗಿಲೆದ್ದಿತ್ತು. ಇದಾದ ಸುಮಾರು ಎರಡು ತಿಂಗಳ ನಂತರ ಜುಲೈನಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡುವ ವಿಡಿಯೋ ವೈರಲ್‌ ಆಗಿತ್ತು. ಕಳೆದ ವರ್ಷ ಅಕ್ಟೋಬರ್ 16ರಂದು ಗುವಾಹಟಿಯ ಸಿಬಿಐ ನ್ಯಾಯಾಲಯದ ವಿಶೇಷ ನ್ಯಾಯಾಧೀಶರ ಮುಂದೆ ಸಿಬಿಐ ಆರು ಆರೋಪಿಗಳ ವಿರುದ್ಧ ಮತ್ತು ಓರ್ವ ಅಪ್ರಾಪ್ತನ ವಿರುದ್ಧ (CCL) ವರದಿಯನ್ನು ಸಲ್ಲಿಸಿತು.

ಎಕೆ ರೈಫಲ್‌ಗಳು, ಎಸ್‌ಎಲ್‌ಆರ್, ಐಎನ್‌ಎಸ್‌ಎಎಸ್ ಮತ್ತು 303 ರೈಫಲ್‌ಗಳಂತಹ ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ಹೊಂದಿದ್ದ ಸುಮಾರು 900-1,000 ಜನರ ಗುಂಪಿನಿಂದ ಇಬ್ಬರು ಮಹಿಳೆಯರು ತಪ್ಪಿಸಿಕೊಂಡು ಪೊಲೀಸರ ಬಳಿ ಹೋಗಿದ್ದರು. ಕಾಂಗ್‌ಪೋಕ್ಪಿ ಜಿಲ್ಲೆಯ ಬಿ ಫೈನೋಮ್ ಗ್ರಾಮದ ಎಲ್ಲಾ ಮನೆಗಳನ್ನು ಉದ್ರಿಕ್ತರು ಧ್ವಂಸ ಮಾಡಿದ್ದಾರೆ. ಈ ವೇಳೆ ಜನಸಮೂಹದಿಂದ ತಪ್ಪಿಸಿಕೊಳ್ಳಲು 10ಜನರು ಅರಣ್ಯಕ್ಕೆ ಓಡಿ ಹೋಗಿದ್ದರು. ಅವರನ್ನು ಉದ್ರಿಕ್ತರ ಬೇರೆ ಬೇರೆ ಗುಂಪು ವಶಕ್ಕೆ ತೆಗೆದುಕೊಂಡಿತ್ತು.

ಇನ್ನೊಂದು ಹಳ್ಳಿಯ ಗಲಭೆಕೋರರು ಗುಂಪಿನೊಂದಿಗೆ ಸೇರಿಕೊಂಡರು ಮತ್ತು ಎಲ್ಲರೂ ಬಲಿಪಶುಗಳನ್ನು ಹೊಡೆಯಲು ಪ್ರಾರಂಭಿಸಿದ್ದಾರೆ. ಅವರಿಂದ ತಪ್ಪಿಸಿಕೊಂಡು ಬಂದು ಪೊಲೀಸ್‌ ವಾಹನದಲ್ಲಿ ಬಂದು ಕುಳಿತಾಗ ಅಲ್ಲೂ ಗುಂಪು ಹಲ್ಲೆ ನಡೆಸಿದೆ ಆದರೆ ಪೊಲೀಸರು ಸಂತ್ರಸ್ತರಿಗೆ ಸಹಾಯ ಮಾಡಲಿಲ್ಲ ಎಂದು ಸಿಬಿಐ ಆರೋಪಿಸಿದೆ.

ಪೊಲೀಸ್ ಜಿಪ್ಸಿಯ ಚಾಲಕ ವಾಹನವನ್ನು ಚಲಾಯಿಸಿ ಸುಮಾರು 1,000 ಜನರಿರುವ ಗುಂಪಿನ ಕಡೆ ವಾಹನವನ್ನು ತಂದು ನಿಲ್ಲಿಸಿದ್ದಾನೆ. ಸಂತ್ರಸ್ತರು ತಮ್ಮನ್ನು ಸುರಕ್ಷಿತ ಸ್ಥಳಕ್ಕೆ ತಲುಪಿಸಲು ಪೊಲೀಸ್ ಸಿಬ್ಬಂದಿಯನ್ನು ಹಲವು ಬಾರಿ ಬೇಡಿಕೊಂಡಿದ್ದಾರೆ, ಆದರೆ ಅವರಿಗೆ ಯಾವುದೇ ಸಹಾಯವನ್ನು ಒದಗಿಸಲಿಲ್ಲ. ಇದರಿಂದ ಪೊಲೀಸರೇ ಮಹಿಳೆಯರನ್ನು ಗುಂಪಿಗೆ ಹಸ್ತಾಂತರಿಸಿದ್ದಾರೆ ಎನ್ನುವುದು ಸ್ಪಷ್ಟವಾಗುತ್ತದೆ.

ಇಬ್ಬರು ಮಹಿಳೆಯರೊಂದಿಗೆ ಪೊಲೀಸ್‌ ಜಿಪ್ಸಿಯಲ್ಲಿ ಕುಳಿತಿದ್ದ ಓರ್ವನಿಗೆ ಜನಸಮೂಹವು  ಹತ್ಯೆ ಮಾಡಿದೆ. ಆತನ ತಂದೆಯನ್ನು ಗುಂಪು ಮೊದಲೇ ಹತ್ಯೆ ಮಾಡಿತ್ತು. ಅವರ ಶವಗಳನ್ನು ಗ್ರಾಮದ ಬಳಿಯ ಒಣ ನದಿ ತಟದಲ್ಲಿ ಎಸೆಯಲಾಯಿತು. ಗಲಭೆಕೋರರ ಗುಂಪು ಪೊಲೀಸ್‌ ವಾಹನದ ಕಡೆಗೆ ಬಂದಾಗ ಸಂತ್ರಸ್ತರನ್ನು ಬಿಟ್ಟು ಘಟನಾ ಸ್ಥಳದಿಂದ ಪೊಲೀಸ್ ಸಿಬ್ಬಂದಿ ಓಡಿ ಹೋಗಿದ್ದಾರೆ. ಗಲಭೆಕೋರರು ಮಹಿಳೆಯರನ್ನು ಹೊರಗೆ ಎಳೆದೊಯ್ದು, ಅವರ ಮೇಲೆ ಲೈಂಗಿಕ ದೌರ್ಜನ್ಯವೆಸಗುವ ಮೊದಲು ಬೆತ್ತಲೆ ಮೆರವಣಿಗೆ ಮಾಡಿದರು ಎಂದು ಚಾರ್ಜ್ ಶೀಟ್ ಹೇಳಿದೆ.

ಇದನ್ನು ಓದಿ: ಕೋವಿಶೀಲ್ಡ್‌ ಲಸಿಕೆ ಅಡ್ಡ ಪರಿಣಾಮ: ನೀವು ಭಯಪಡಬೇಕೆ? ವೈದ್ಯರು ಹೇಳುವುದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...