Homeಮುಖಪುಟಮಣಿಪುರ ಬೆತ್ತಲೆ ಮೆರವಣಿಗೆ: ಗಲಭೆಕೋರರ ಗುಂಪಿಗೆ ಮಹಿಳೆಯರನ್ನು ಒಪ್ಪಿಸಿದ್ದ ಪೊಲೀಸರು, ಚಾರ್ಜ್‌ಶೀಟ್‌ನಲ್ಲಿ ಮಹತ್ವದ ಅಂಶಗಳು ಉಲ್ಲೇಖ

ಮಣಿಪುರ ಬೆತ್ತಲೆ ಮೆರವಣಿಗೆ: ಗಲಭೆಕೋರರ ಗುಂಪಿಗೆ ಮಹಿಳೆಯರನ್ನು ಒಪ್ಪಿಸಿದ್ದ ಪೊಲೀಸರು, ಚಾರ್ಜ್‌ಶೀಟ್‌ನಲ್ಲಿ ಮಹತ್ವದ ಅಂಶಗಳು ಉಲ್ಲೇಖ

- Advertisement -
- Advertisement -

ಮಣಿಪುರ ಹಿಂಸಾಚಾರದ ಸಮಯದಲ್ಲಿ ನಡೆದಿದ್ದ ಇಬ್ಬರು ಮಹಿಳೆಯರ ಬೆತ್ತಲೆ ಮೆರವಣಿಗೆ, ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ಚಾರ್ಜ್‌ಶೀಟ್‌ನಲ್ಲಿ ಮಹತ್ವದ ಅಂಶಗಳ ಉಲ್ಲೇಖವಾಗಿದ್ದು, ಮಹಿಳೆಯರನ್ನು ಗಲಭೆಕೋರರ ಗುಂಪಿಗೆ ಪೊಲೀಸರೇ ಒಪ್ಪಿಸಿದ್ದಾರೆ ಎಂದು ತಿಳಿಸಿದೆ.

ಪೊಲೀಸರ ಜಿಪ್ಸಿಯಲ್ಲಿ ಆಶ್ರಯ ಪಡೆದಿದ್ದ ಕುಕಿ-ಜೋ ಸಮುದಾಯದ ಇಬ್ಬರು ಮಹಿಳೆಯರನ್ನು ಮಣಿಪುರ ಪೊಲೀಸ್ ಸಿಬ್ಬಂದಿ ಕಾಂಗ್‌ಪೋಪಿ ಜಿಲ್ಲೆಯಲ್ಲಿ ಸುಮಾರು 1,000 ಮೈತೈ ಗಲಭೆಕೋರರಿದ್ದ ಗುಂಪಿಗೆ ತಲುಪಿಸಿದ್ದಾರೆ ಎಂಬ ಅಚ್ಚರಿಯ ಅಂಶ ಸಿಬಿಐ ಚಾರ್ಜ್ ಶೀಟ್‌ನಲ್ಲಿ ಉಲ್ಲೇಖಿಸಲಾಗಿದೆ.

ಮಣಿಪುರದಲ್ಲಿ ನಡೆದ ಜನಾಂಗೀಯ ಹಿಂಸಾಚಾರದ ಇಬ್ಬರು ಮಹಿಳೆಯರನ್ನು ವಿವಸ್ತ್ರಗೊಳಿಸಿ ಮೆರವಣಿಗೆ ಮಾಡಿ ಬಳಿಕ ಸಾಮೂಹಿಕ ಅತ್ಯಾಚಾರ ನಡೆಸಲಾಗಿದೆ ಎಂದು ಚಾರ್ಜ್ ಶೀಟ್‌ನಲ್ಲಿ ಉಲ್ಲೇಖಿಸಲಾಗಿದೆ. ಅದೇ ಕುಟುಂಬಕ್ಕೆ ಸೇರಿದ ಮೂರನೇ ಮಹಿಳೆಯ ಮೇಲೂ ಜನಸಮೂಹವು ಹಲ್ಲೆ ನಡೆಸಿದೆ ಮತ್ತು ಆಕೆಯನ್ನು  ವಿವಸ್ತ್ರಗೊಳಿಸಲು ಪ್ರಯತ್ನಿಸಿದೆ ಆದರೆ ಮಹಿಳೆ ಮೊಮ್ಮಗಳನ್ನು ಬಿಗಿಯಾಗಿ ಹಿಡಿದಿದ್ದರಿಂದ ಪ್ರಯತ್ನದಲ್ಲಿ ವಿಫಲರಾದರು ಎಂದು ಚಾರ್ಜ್ ಶೀಟ್‌ನಲ್ಲಿ ಉಲ್ಲೇಖಿಸಲಾಗಿದೆ. ಆಕೆಯ ಮೇಲೆ ದಾಳಿ ಮಾಡಿದ ಗುಂಪು ಭತ್ತದ ಗದ್ದೆಗಳಲ್ಲಿ ಪೀಡನೆಗೊಳಪಡುತ್ತಿದ್ದ ಇತರ ಇಬ್ಬರು ಸಂತ್ರಸ್ತರ ಕಡೆಗೆ ಓಡಿ ಹೋದ ನಂತರ ಆಕೆ ತಪ್ಪಿಸಿಕೊಂಡಿದ್ದಾರೆ ಎಂದು ಚಾರ್ಜ್ ಶೀಟ್‌ನಲ್ಲಿ ಉಲ್ಲೇಖಿಸಲಾಗಿದೆ. ಮೂವರೂ ಸಂತ್ರಸ್ತರು ಕೂಡ ಸ್ಥಳದಲ್ಲಿದ್ದ ಪೊಲೀಸ್ ಸಿಬ್ಬಂದಿಯ ಸಹಾಯವನ್ನು ಕೋರಿದ್ದಾರೆ. ಆದರೆ ಅವರಿಗೆ ಯಾವುದೇ ಸಹಾಯವನ್ನು ನೀಡಲಾಗಿಲ್ಲ ಎಂದು ಆರೋಪಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ.

ಕಾರ್ಗಿಲ್ ಯುದ್ಧದ ಯೋಧನ ಪತ್ನಿಯಾಗಿದ್ದ ಸಂತ್ರಸ್ತ ಮಹಿಳೆಯೊಬ್ಬರು ತಮ್ಮನ್ನು ಸುರಕ್ಷಿತ ಸ್ಥಳಕ್ಕೆ ತಲುಪಿಸಲು ಪೊಲೀಸ್ ಸಿಬ್ಬಂದಿ ಬಳಿ ಬೇಡಿಕೊಂಡಿದ್ದಾರೆ, ಈ ವೇಳೆ ವಾಹನದ ಕೀ ಇಲ್ಲ ಎಂದ ಪೊಲೀಸರು ಯಾವುದೇ ಸಹಾಯ ಮಾಡಲು ಮುಂದಾಗಿಲ್ಲ ಎನ್ನುವ ಅಚ್ಚರಿ ಅಂಶ ತನಿಖೆಯ ವೇಳೆ ಬಯಲಾಗಿದೆ.

2023ರ ಮೇ 4ರಂದು ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ ಭುಗಿಲೆದ್ದಿತ್ತು. ಇದಾದ ಸುಮಾರು ಎರಡು ತಿಂಗಳ ನಂತರ ಜುಲೈನಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡುವ ವಿಡಿಯೋ ವೈರಲ್‌ ಆಗಿತ್ತು. ಕಳೆದ ವರ್ಷ ಅಕ್ಟೋಬರ್ 16ರಂದು ಗುವಾಹಟಿಯ ಸಿಬಿಐ ನ್ಯಾಯಾಲಯದ ವಿಶೇಷ ನ್ಯಾಯಾಧೀಶರ ಮುಂದೆ ಸಿಬಿಐ ಆರು ಆರೋಪಿಗಳ ವಿರುದ್ಧ ಮತ್ತು ಓರ್ವ ಅಪ್ರಾಪ್ತನ ವಿರುದ್ಧ (CCL) ವರದಿಯನ್ನು ಸಲ್ಲಿಸಿತು.

ಎಕೆ ರೈಫಲ್‌ಗಳು, ಎಸ್‌ಎಲ್‌ಆರ್, ಐಎನ್‌ಎಸ್‌ಎಎಸ್ ಮತ್ತು 303 ರೈಫಲ್‌ಗಳಂತಹ ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ಹೊಂದಿದ್ದ ಸುಮಾರು 900-1,000 ಜನರ ಗುಂಪಿನಿಂದ ಇಬ್ಬರು ಮಹಿಳೆಯರು ತಪ್ಪಿಸಿಕೊಂಡು ಪೊಲೀಸರ ಬಳಿ ಹೋಗಿದ್ದರು. ಕಾಂಗ್‌ಪೋಕ್ಪಿ ಜಿಲ್ಲೆಯ ಬಿ ಫೈನೋಮ್ ಗ್ರಾಮದ ಎಲ್ಲಾ ಮನೆಗಳನ್ನು ಉದ್ರಿಕ್ತರು ಧ್ವಂಸ ಮಾಡಿದ್ದಾರೆ. ಈ ವೇಳೆ ಜನಸಮೂಹದಿಂದ ತಪ್ಪಿಸಿಕೊಳ್ಳಲು 10ಜನರು ಅರಣ್ಯಕ್ಕೆ ಓಡಿ ಹೋಗಿದ್ದರು. ಅವರನ್ನು ಉದ್ರಿಕ್ತರ ಬೇರೆ ಬೇರೆ ಗುಂಪು ವಶಕ್ಕೆ ತೆಗೆದುಕೊಂಡಿತ್ತು.

ಇನ್ನೊಂದು ಹಳ್ಳಿಯ ಗಲಭೆಕೋರರು ಗುಂಪಿನೊಂದಿಗೆ ಸೇರಿಕೊಂಡರು ಮತ್ತು ಎಲ್ಲರೂ ಬಲಿಪಶುಗಳನ್ನು ಹೊಡೆಯಲು ಪ್ರಾರಂಭಿಸಿದ್ದಾರೆ. ಅವರಿಂದ ತಪ್ಪಿಸಿಕೊಂಡು ಬಂದು ಪೊಲೀಸ್‌ ವಾಹನದಲ್ಲಿ ಬಂದು ಕುಳಿತಾಗ ಅಲ್ಲೂ ಗುಂಪು ಹಲ್ಲೆ ನಡೆಸಿದೆ ಆದರೆ ಪೊಲೀಸರು ಸಂತ್ರಸ್ತರಿಗೆ ಸಹಾಯ ಮಾಡಲಿಲ್ಲ ಎಂದು ಸಿಬಿಐ ಆರೋಪಿಸಿದೆ.

ಪೊಲೀಸ್ ಜಿಪ್ಸಿಯ ಚಾಲಕ ವಾಹನವನ್ನು ಚಲಾಯಿಸಿ ಸುಮಾರು 1,000 ಜನರಿರುವ ಗುಂಪಿನ ಕಡೆ ವಾಹನವನ್ನು ತಂದು ನಿಲ್ಲಿಸಿದ್ದಾನೆ. ಸಂತ್ರಸ್ತರು ತಮ್ಮನ್ನು ಸುರಕ್ಷಿತ ಸ್ಥಳಕ್ಕೆ ತಲುಪಿಸಲು ಪೊಲೀಸ್ ಸಿಬ್ಬಂದಿಯನ್ನು ಹಲವು ಬಾರಿ ಬೇಡಿಕೊಂಡಿದ್ದಾರೆ, ಆದರೆ ಅವರಿಗೆ ಯಾವುದೇ ಸಹಾಯವನ್ನು ಒದಗಿಸಲಿಲ್ಲ. ಇದರಿಂದ ಪೊಲೀಸರೇ ಮಹಿಳೆಯರನ್ನು ಗುಂಪಿಗೆ ಹಸ್ತಾಂತರಿಸಿದ್ದಾರೆ ಎನ್ನುವುದು ಸ್ಪಷ್ಟವಾಗುತ್ತದೆ.

ಇಬ್ಬರು ಮಹಿಳೆಯರೊಂದಿಗೆ ಪೊಲೀಸ್‌ ಜಿಪ್ಸಿಯಲ್ಲಿ ಕುಳಿತಿದ್ದ ಓರ್ವನಿಗೆ ಜನಸಮೂಹವು  ಹತ್ಯೆ ಮಾಡಿದೆ. ಆತನ ತಂದೆಯನ್ನು ಗುಂಪು ಮೊದಲೇ ಹತ್ಯೆ ಮಾಡಿತ್ತು. ಅವರ ಶವಗಳನ್ನು ಗ್ರಾಮದ ಬಳಿಯ ಒಣ ನದಿ ತಟದಲ್ಲಿ ಎಸೆಯಲಾಯಿತು. ಗಲಭೆಕೋರರ ಗುಂಪು ಪೊಲೀಸ್‌ ವಾಹನದ ಕಡೆಗೆ ಬಂದಾಗ ಸಂತ್ರಸ್ತರನ್ನು ಬಿಟ್ಟು ಘಟನಾ ಸ್ಥಳದಿಂದ ಪೊಲೀಸ್ ಸಿಬ್ಬಂದಿ ಓಡಿ ಹೋಗಿದ್ದಾರೆ. ಗಲಭೆಕೋರರು ಮಹಿಳೆಯರನ್ನು ಹೊರಗೆ ಎಳೆದೊಯ್ದು, ಅವರ ಮೇಲೆ ಲೈಂಗಿಕ ದೌರ್ಜನ್ಯವೆಸಗುವ ಮೊದಲು ಬೆತ್ತಲೆ ಮೆರವಣಿಗೆ ಮಾಡಿದರು ಎಂದು ಚಾರ್ಜ್ ಶೀಟ್ ಹೇಳಿದೆ.

ಇದನ್ನು ಓದಿ: ಕೋವಿಶೀಲ್ಡ್‌ ಲಸಿಕೆ ಅಡ್ಡ ಪರಿಣಾಮ: ನೀವು ಭಯಪಡಬೇಕೆ? ವೈದ್ಯರು ಹೇಳುವುದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...