Homeಮುಖಪುಟಮಣಿಪುರ | ಬಂಡುಕೋರ ಗುಂಪಿನಿಂದ ಸೇನೆಯ ಶಸ್ತ್ರಾಸ್ತ್ರ ಲೂಟಿ

ಮಣಿಪುರ | ಬಂಡುಕೋರ ಗುಂಪಿನಿಂದ ಸೇನೆಯ ಶಸ್ತ್ರಾಸ್ತ್ರ ಲೂಟಿ

- Advertisement -
- Advertisement -

ಮಣಿಪುರದ ತೌಬಲ್ ಜಿಲ್ಲೆಯ ಭಾರತ ಮೀಸಲು ಬೆಟಾಲಿಯನ್‌ಗೆ ಸೇರಿದ ಹೊರಠಾಣೆಯಿಂದ ಶನಿವಾರ ರಾತ್ರಿ ಅಪರಿಚಿತ ಬಂದೂಕುಧಾರಿಗಳ ಗುಂಪೊಂದು ಶಸ್ತ್ರಾಸ್ತ್ರಗಳನ್ನು ದೋಚಿದೆ ಎಂದು ಪಿಟಿಐ ವರದಿ ಮಾಡಿದೆ. ಈ ಹೊರಠಾಣೆ ತೌಬಲ್‌ ಜಿಲ್ಲೆ ಕಾಕ್ಮಯೈ ಪ್ರದೇಶದಲ್ಲಿದೆ. ಮಣಿಪುರ

“08/02/2025 ರ ರಾತ್ರಿ, ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ಹೊಂದಿದ್ದ ಸುಮಾರು 30 ಶಸ್ತ್ರಸಜ್ಜಿತ ದುಷ್ಕರ್ಮಿಗಳು, ತೌಬಲ್ ಜಿಲ್ಲೆಯ ಕಾಕ್ಮಯೈನಲ್ಲಿರುವ ಒಂದು ಪೊಲೀಸ್ ಹೊರಠಾಣೆ ಮೇಲೆ ನುಗ್ಗಿ, ಆ ಠಾಣೆಯಲ್ಲಿ ನಿಯೋಜಿಸಲಾದ ಪೊಲೀಸ್ ಸಿಬ್ಬಂದಿಯನ್ನು ಬೆದರಿಸಿದ್ದಾರೆ” ಎಂದು ಮಣಿಪುರ ಪೊಲೀಸರು ತಿಳಿಸಿದ್ದಾರೆ. ಮಣಿಪುರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಆದಾಗ್ಯೂ, ಭದ್ರತಾ ಸಿಬ್ಬಂದಿ ಆರೋಪಿಗಳಲ್ಲಿ ಒಬ್ಬನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಹಿಜಮ್ ನಿಂಗ್ಥೆಮ್ ಸಿಂಗ್ ಎಂದು ಗುರುತಿಸಲಾಗಿದ್ದು, ಆತ ನಿಷೇಧಿತ ಪ್ರತ್ಯೇಕತಾವಾದಿ ಉಗ್ರಗಾಮಿ ಗುಂಪು ಕಾಂಗ್ಲೈಪಾಕ್ ಕಮ್ಯುನಿಸ್ಟ್ ಪಕ್ಷದ ಸದಸ್ಯ ಎನ್ನಲಾಗಿದೆ.

ಕದ್ದ ಒಂಬತ್ತು ಶಸ್ತ್ರಾಸ್ತ್ರಗಳಲ್ಲಿ ಎಂಟನ್ನು ವಶಪಡಿಸಿಕೊಂಡಿದ್ದೇವೆ ಎಂದು ಮಣಿಪುರ ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಮೇ 2023 ರಿಂದ ಮಣಿಪುರದಲ್ಲಿ ನಡೆಯುತ್ತಿರುವ ಜನಾಂಗೀಯ ಹಿಂಸಾಚಾರದಿಂದ ಕನಿಷ್ಠ 258 ಜನರು ಸಾವನ್ನಪ್ಪಿದ್ದು, 60 ಸಾವಿರಕ್ಕೂ ಹೆಚ್ಚು ಜನರು ನಿರಾಶ್ರಿತರಾಗಿದ್ದಾರೆ. ಮೈತೇಯಿ ಮತ್ತು ಕುಕಿ-ಜೋಮಿ-ಹ್ಮಾರ್ ಸಮುದಾಯಗಳ ನಡುವಿನ ಜನಾಂಗೀಯ ಹಿಂಸಾಚಾರದ ಮಧ್ಯೆ ಈ ಘಟನೆ ನಡೆದಿದೆ.

ಭಾನುವಾರ ಸಂಜೆ ಮಣಿಪುರದ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ರಾಜ್ಯದಲ್ಲಿ ಭುಗಿಲೆದ್ದ ಹಿಂಸಾಚಾರದ ವಿಚಾರದಲ್ಲಿ ಮುಖ್ಯಮಂತ್ರಿಯ ಪ್ರತಿಕ್ರಿಯೆ ಪಕ್ಷಪಾತದಿಂದ ಕೂಡಿದೆ ಮತ್ತು ಅವರು ಬಹುಸಂಖ್ಯಾತತೆಯನ್ನು ಪ್ರಚೋದಿಸಿದ್ದಾರೆ ಎಂದು ಕುಕಿ-ಜೋಮಿ-ಹ್ಮಾರ್ ಗುಂಪುಗಳು ನಿರಂತರ ಆರೋಪಗಳನ್ನು ಮಾಡಲುತ್ತಲೆ ಇವೆ. ಈ ನಡುವೆ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಇದನ್ನೂಓದಿ:  ಗಲಭೆ ಪೀಡಿತ ಮಣಿಪುರದ ನೂತನ ರಾಜ್ಯಪಾಲರಾಗಿ ಅಜಯ್ ಕುಮಾರ್ ಭಲ್ಲಾ ಅಧಿಕಾರ ಸ್ವೀಕಾರ

ಗಲಭೆ ಪೀಡಿತ ಮಣಿಪುರದ ನೂತನ ರಾಜ್ಯಪಾಲರಾಗಿ ಅಜಯ್ ಕುಮಾರ್ ಭಲ್ಲಾ ಅಧಿಕಾರ ಸ್ವೀಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...