Homeಮುಖಪುಟಮಣಿಪುರ ಗಲಭೆ: ಕರ್ಫ್ಯೂ ನಡುವೆಯೆ ಮೊರೆಹ್‌ನಲ್ಲಿ ಐಆರ್‌ಬಿ ಯೋಧನ ಹತ್ಯೆ

ಮಣಿಪುರ ಗಲಭೆ: ಕರ್ಫ್ಯೂ ನಡುವೆಯೆ ಮೊರೆಹ್‌ನಲ್ಲಿ ಐಆರ್‌ಬಿ ಯೋಧನ ಹತ್ಯೆ

- Advertisement -
- Advertisement -

ಮಣಿಪುರದಲ್ಲಿ ಭುಗಿಲೆದ್ದಿರುವ ಹಿಂಸಾಚಾರಕ್ಕೆ ಭಾರತೀಯ ರಿಸರ್ವ್ ಬೆಟಾಲಿಯನ್ (ಐಆರ್‌ಬಿ) ಯೋಧನೊಬ್ಬ ಬುಧವಾರ ಮುಂಜಾನೆ ಗಲಭೆ ಪೀಡಿತ ಗಡಿ ಪಟ್ಟಣವಾದ ಮೊರೆಹ್‌ನಲ್ಲಿ ಹುತಾತ್ಮರಾಗಿದ್ದಾರೆ. ಈ ಬೆಳವಣಿಗೆಯ ಬೆನ್ನಲ್ಲೇ ಹೆಚ್ಚಿನ ವೈದ್ಯಕೀಯ ನೆರವು, ತುರ್ತು ಪರಿಸ್ಥಿತಿಗಳಿಗಾಗಿ ಹೆಲಿಕಾಪ್ಟರ್, ಹೆಚ್ಚಿನ ಸೇನಾ ಪಡೆಗಳು ಮತ್ತು ಶಸ್ತ್ರಾಸ್ತ್ರಗಳನ್ನು ಏರ್‌ಲಿಫ್ಟ್‌ ಮಾಡುವಂತೆ ರಾಜ್ಯ ಗೃಹ ಇಲಾಖೆ ಆಯುಕ್ತರು ಕೇಂದ್ರ ಗೃಹ ಸಚಿವಾಲಯಕ್ಕೆ ವಿನಂತಿ ಮಾಡಿದ್ದಾರೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ಕಳೆದ ಎರಡೂವರೆ ತಿಂಗಳಲ್ಲಿ ಮೊರೆಹ್‌ನಲ್ಲಿ ನಡೆದ ಎರಡನೇ ಹತ್ಯೆ ಇದಾಗಿದ್ದು, ಮಣಿಪುರ ಪೊಲೀಸ್ ಪಡೆಯೊಂದಿಗೆ ಭದ್ರತೆಗೆ ನಿಯೋಜಿಸಲಾಗಿದ್ದ ಐಆರ್‌ಬಿ ಯೋಧ ಡಬ್ಲ್ಯೂ ಸೊಮೊರ್ಜಿತ್ ಅವರು ಬೆಳಿಗ್ಗೆ 3.25 ರ ಸುಮಾರಿಗೆ ಕೊಲೆಗೀಡಾಗಿದ್ದಾರೆ. ‘ಆ ಸಮಯದಲ್ಲಿ ಸೋಮೊರ್ಜಿತ್‌ನನ್ನು ಕೊಂಡೊಂಗ್ ಲೈರೆಂಬಿ ದೇವಿ ಮಂದಿರದ ಬಳಿಯ ಐಆರ್‌ಬಿ ಪೋಸ್ಟ್‌ನಲ್ಲಿ ನಿಯೋಜಿಸಲಾಗಿತ್ತು. ದಾಳಿಕೋರರು ಗ್ರೆನೇಡ್‌ಗಳನ್ನು ಸ್ಪೋಟಿಸಿದ ನಂತರ ಗುಂಡಿನ ದಾಳಿ ನಡೆಸಿದರು’ ಎಂದು ಪೊಲೀಸರು ತಿಳಿಸಿದ್ದಾರೆ.

ರಾಜ್ಯ ಗೃಹ ಇಲಾಖೆ ಆಯುಕ್ತ ಟಿ.ರಂಜಿತ್ ಸಿಂಗ್ ಅವರು ಕೇಂದ್ರ ಗೃಹ ಸಚಿವಾಲಯಕ್ಕೆ ಪತ್ರ ಬರೆದು, ತುರ್ತು ಅಗತ್ಯತೆಗಳನ್ನು ಉಲ್ಲೇಖಿಸಿದ್ದಾರೆ. ಕನಿಷ್ಠ ಏಳು ದಿನಗಳ ಕಾಲ ಇಂಫಾಲ್‌ನಲ್ಲಿ ವಾಯು ಪಡೆಗಳು ಅಥವಾ ಹೆಲಿಕಾಪ್ಟರ್‌ಗಳನ್ನು ನಿಯೋಜಿಸುವಂತೆ ವಿನಂತಿಸಿದ್ದಾರೆ.

‘ಗಡಿ ಪಟ್ಟಣವಾದ ಮೊರೆಹ್‌ನಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕುಸಿತವು ಗಂಭೀರವಾದ ಕಳವಳಕಾರಿ ವಿಷಯವಾಗಿದೆ. ಏಕೆಂದರೆ, ನಿರಂತರವಾಗಿ ಗುಂಡಿನ ವಿನಿಮಯ ನಡೆಯುತ್ತಿದ್ದು, ಇಂದು ಮುಂಜಾನೆ ಒಬ್ಬ ಐಆರ್‌ಬಿ ಸಿಬ್ಬಂದಿಯ ಸಾವಿಗೆ ಕಾರಣವಾಗಿದೆ. ಪ್ರಚಲಿತ ಪರಿಸ್ಥಿತಿಯ ದೃಷ್ಟಿಯಿಂದ, ಮೊರೆಯಲ್ಲಿ ಪರಿಸ್ಥಿತಿ ಇನ್ನಷ್ಟು ಹದಗೆಡಬಹುದು, ಯಾವುದೇ ಸಮಯದಲ್ಲಿ ವೈದ್ಯಕೀಯ ತುರ್ತುಸ್ಥಿತಿ ಉಂಟಾಗಬಹುದು. ಮೋರೆಗೆ ಭದ್ರತಾ ಸಿಬ್ಬಂದಿ, ಮದ್ದುಗುಂಡುಗಳು ಇತ್ಯಾದಿಗಳನ್ನು ಏರ್‌ಲಿಫ್ಟ್‌ ಮಾಡುವ ಅವಶ್ಯಕತೆಯಿದೆ ಎಂದು ಪೊಲೀಸ್ ಇಲಾಖೆಯು ಮಾಹಿತಿ ನೀಡಿದೆ’ ಎಂದು ಸಿಂಗ್ ತಮ್ಮ ಪತ್ರದಲ್ಲಿ ವಿವರಿಸಿದ್ದಾರೆ ಎನ್ನಲಾಗಿದೆ.

2023ರ ಅಕ್ಟೋಬರ್ 31 ರಂದು, ಮಣಿಪುರ ಪೊಲೀಸರ ಎಸ್‌ಡಿಪಿಒ ಚಿಂಗ್ತಮ್ ಆನಂದ್ ಕುಮಾರ್ ಅವರನ್ನು ಮೋರೆಯಲ್ಲಿ ಗುಂಡಿಕ್ಕಿ ಕೊಲ್ಲಲಾಯಿತು. ನಂತರ, ಆನಂದ್ ಹತ್ಯೆ ಮಾಡಿದ್ದಾರೆ ಎಂಬ ಅನುಮಾನದ ಮೇಲೆ ಫಿಲಿಪ್ ಖೈಖೋಲಾಲ್ ಖೋಂಗ್ಸಾಯ್ ಮತ್ತು ಹೆಮ್ಖೋಲಾಲ್ ಮೇಟ್ ಎಂಬ ಇಬ್ಬರು ವ್ಯಕ್ತಿಗಳನ್ನು ಪೊಲೀಸರು ಬಂಧಿಸಿದ್ದರು.

ಇಬ್ಬರ ಬಂಧನವು ಮಿಶ್ರ ಸಮುದಾಯಗಳ ಜನಸಂಖ್ಯೆಯ ಪಟ್ಟಣದಲ್ಲಿ ಬಹುಸಂಖ್ಯಾತರಾದ ಕುಕಿ ಸಮುದಾಯದಲ್ಲಿ ಅಶಾಂತಿಯನ್ನು ಉಂಟುಮಾಡಿತು. ಅದರ ನಂತರ ಮೊರೆಹ್ ತೆಂಗ್ನೌಪಾಲ್ ಜಿಲ್ಲೆಯಾದ್ಯಂತ ಕರ್ಫ್ಯೂ ವಿಧಿಸಲಾಯಿತು.

ಇದನ್ನೂ ಓದಿ; ಮಂದಿರ ಉದ್ಘಾಟನೆ ನಂತರ ರಾಮನ ದರ್ಶನ ಪಡೆಯುವುದು ಸುಲಭ: ಶರದ್ ಪವಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಾರಣಾಸಿಯಲ್ಲಿ ಆಚರಿಸುವ ಪ್ರಸಿದ್ಧ ‘ಭಸ್ಮ ಹೋಳಿ’ಗೆ ಸಂಸ್ಕೃತ ವಿದ್ವಾಂಸರು ಮತ್ತು ಕಾಶಿ ವಿದ್ವತ್ ಪರಿಷತ್ ವಿರೋಧ 

ವಾರಣಾಸಿ (ಉತ್ತರ ಪ್ರದೇಶ): ನಗರದ ಸ್ಮಶಾನ ಭೂಮಿಗಳಾದ ಮಣಿಕರ್ಣಿಕಾ ಮತ್ತು ಹರಿಶ್ಚಂದ್ರ ಘಾಟ್‌ಗಳಲ್ಲಿ 'ಮಸಾನೆ ಕಿ ಹೋ ಲಿ ' ನುಡಿಸುವ ಸಂಪ್ರದಾಯವನ್ನು ಸಂಸ್ಕೃತ ವಿದ್ವಾಂಸರು ಮತ್ತು ಹಿಂದೂ ಧರ್ಮಗ್ರಂಥಗಳ ತಜ್ಞರ ಪರಿಷತ್ತು...

ಮುಸ್ಲಿಮರೆಂದು ತಿಳಿದು ಮಹಿಳೆಯರಿಗೆ ವಿತರಿಸಿದ್ದ ಕಂಬಳಿ ವಾಪಸ್ ಪಡೆದ ಬಿಜೆಪಿ ಮಾಜಿ ಸಂಸದ

ಬಿಜೆಪಿಯ ಮಾಜಿ ಸಂಸದ ಸುಖ್‌ವೀರ್ ಸಿಂಗ್ ಜೌನ್‌ಪುರಿಯಾ ಅವರು, ಮುಸ್ಲಿಮರೆಂದು ಗೊತ್ತಾದ ಬಳಿಕ ಮಹಿಳೆಯರಿಗೆ ವಿತರಿಸಿದ್ದ ಕಂಬಳಿಯನ್ನು ವಾಪಸ್ ಪಡೆದಿದ್ದಾರೆ ಎಂದು ರಾಜಸ್ಥಾನ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಟಿಕರಾಮ್ ಜುಲ್ಲಿ ಭಾನುವಾರ...

ಜೆಎನ್‌ಯು: ಎಡಪಂಥೀಯ ವಿದ್ಯಾರ್ಥಿ ಸಂಘಟನೆ ಮತ್ತು ಎಬಿವಿಪಿ ನಡುವೆ ಘರ್ಷಣೆ: ಉದ್ವಿಗ್ನತೆ  

ಸೋಮವಾರ ಮುಂಜಾನೆ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಎಡಪಂಥೀಯ ಮತ್ತು ಬಲಪಂಥೀಯ ವಿದ್ಯಾರ್ಥಿ ಗುಂಪುಗಳು ಪರಸ್ಪರ ಹಿಂಸಾಚಾರವನ್ನು ಬಿಚ್ಚಿಟ್ಟಿದ್ದಾರೆ ಎಂದು ಆರೋಪಿಸಿದ ನಂತರ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ (ಜೆಎನ್‌ಯು) ಆವರಣದಲ್ಲಿ ಉದ್ವಿಗ್ನತೆ ಉಂಟಾಗಿದೆ.  ಸೋಮವಾರ ಬೆಳಗಿನ...

ಡ್ರಗ್ ದೊರೆ ‘ಎಲ್ ಮೆಂಚೊ’ ಹತ್ಯೆ : ಮೆಕ್ಸಿಕೋದಲ್ಲಿ ಭುಗಿಲೆದ್ದ ಹಿಂಸಾಚಾರ

'ಎಲ್ ಮೆಂಚೊ' ಎಂದೇ ಪರಿಚಿತನಾಗಿದ್ದ ಡ್ರಗ್ ದೊರೆ ನೆಮೆಸಿಯೊ ಒಸೆಗುಯೆರಾನನ್ನು ಕಾರ್ಯಾಚರಣೆಯೊಂದರಲ್ಲಿ ಕೊಂದಿರುವುದಾಗಿ ಮೆಕ್ಸಿಕನ್ ಸೇನೆ ಭಾನುವಾರ (ಫೆ.22) ಘೋಷಿಸಿದೆ. ಆ ಬಳಿಕ ದೇಶದ ವಿವಿಧ ಭಾಗಗಳಲ್ಲಿ ಭಾರೀ ಹಿಂಸಾಚಾರ ಭುಗಿಲೆದ್ದಿದೆ ಎಂದು...

ನೇಪಾಳ ಬಸ್ ಅಪಘಾತ: ಧಾಡಿಂಗ್‌ನಲ್ಲಿ ತ್ರಿಶೂಲಿ ನದಿಗೆ ಬಸ್ ಬಿದ್ದು 18 ಮಂದಿ ಸಾವು; ಮುಂದುವರಿದ ರಕ್ಷಣಾ ಕಾರ್ಯಾಚರಣೆ

ಧಾಡಿಂಗ್ (ನೇಪಾಳ): ಸೋಮವಾರ ಮುಂಜಾನೆ ನೇಪಾಳದ ಧಾಡಿಂಗ್‌ನಲ್ಲಿ ಪ್ರಯಾಣಿಕರ ಬಸ್ ತ್ರಿಶೂಲಿ ನದಿಗೆ ಉರುಳಿಬಿದ್ದ ಪರಿಣಾಮ ಕನಿಷ್ಠ 18 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ 24 ಕ್ಕೂ ಹೆಚ್ಚು ಪ್ರಯಾಣಿಕರು...

ಅಜಿತ್ ಪವಾರ್ ಸಾವು | ಪತನಗೊಂಡ ವಿಮಾನದ ನಿರ್ವಹಣಾ ಸಂಸ್ಥೆಗೂ ಟಿಡಿಪಿಗೂ ನಂಟು : ರೋಹಿತ್ ಪವಾರ್

ಅಜಿತ್ ಪವಾರ್ ಸಾವಿಗೆ ಕಾರಣವಾದ ಪತನಗೊಂಡ ವಿಮಾನದ ನಿರ್ವಾಹಕ ಸಂಸ್ಥೆ ವಿಎಸ್ಆರ್ ವೆಂಚರ್ಸ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಡುವೆ ಸಂಬಂಧವಿದೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಶರದ್ ಪವಾರ್ ಬಣದ)...

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....