Homeಮುಖಪುಟಮಣಿಪುರ ಗಲಭೆ: ಕರ್ಫ್ಯೂ ನಡುವೆಯೆ ಮೊರೆಹ್‌ನಲ್ಲಿ ಐಆರ್‌ಬಿ ಯೋಧನ ಹತ್ಯೆ

ಮಣಿಪುರ ಗಲಭೆ: ಕರ್ಫ್ಯೂ ನಡುವೆಯೆ ಮೊರೆಹ್‌ನಲ್ಲಿ ಐಆರ್‌ಬಿ ಯೋಧನ ಹತ್ಯೆ

- Advertisement -
- Advertisement -

ಮಣಿಪುರದಲ್ಲಿ ಭುಗಿಲೆದ್ದಿರುವ ಹಿಂಸಾಚಾರಕ್ಕೆ ಭಾರತೀಯ ರಿಸರ್ವ್ ಬೆಟಾಲಿಯನ್ (ಐಆರ್‌ಬಿ) ಯೋಧನೊಬ್ಬ ಬುಧವಾರ ಮುಂಜಾನೆ ಗಲಭೆ ಪೀಡಿತ ಗಡಿ ಪಟ್ಟಣವಾದ ಮೊರೆಹ್‌ನಲ್ಲಿ ಹುತಾತ್ಮರಾಗಿದ್ದಾರೆ. ಈ ಬೆಳವಣಿಗೆಯ ಬೆನ್ನಲ್ಲೇ ಹೆಚ್ಚಿನ ವೈದ್ಯಕೀಯ ನೆರವು, ತುರ್ತು ಪರಿಸ್ಥಿತಿಗಳಿಗಾಗಿ ಹೆಲಿಕಾಪ್ಟರ್, ಹೆಚ್ಚಿನ ಸೇನಾ ಪಡೆಗಳು ಮತ್ತು ಶಸ್ತ್ರಾಸ್ತ್ರಗಳನ್ನು ಏರ್‌ಲಿಫ್ಟ್‌ ಮಾಡುವಂತೆ ರಾಜ್ಯ ಗೃಹ ಇಲಾಖೆ ಆಯುಕ್ತರು ಕೇಂದ್ರ ಗೃಹ ಸಚಿವಾಲಯಕ್ಕೆ ವಿನಂತಿ ಮಾಡಿದ್ದಾರೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ಕಳೆದ ಎರಡೂವರೆ ತಿಂಗಳಲ್ಲಿ ಮೊರೆಹ್‌ನಲ್ಲಿ ನಡೆದ ಎರಡನೇ ಹತ್ಯೆ ಇದಾಗಿದ್ದು, ಮಣಿಪುರ ಪೊಲೀಸ್ ಪಡೆಯೊಂದಿಗೆ ಭದ್ರತೆಗೆ ನಿಯೋಜಿಸಲಾಗಿದ್ದ ಐಆರ್‌ಬಿ ಯೋಧ ಡಬ್ಲ್ಯೂ ಸೊಮೊರ್ಜಿತ್ ಅವರು ಬೆಳಿಗ್ಗೆ 3.25 ರ ಸುಮಾರಿಗೆ ಕೊಲೆಗೀಡಾಗಿದ್ದಾರೆ. ‘ಆ ಸಮಯದಲ್ಲಿ ಸೋಮೊರ್ಜಿತ್‌ನನ್ನು ಕೊಂಡೊಂಗ್ ಲೈರೆಂಬಿ ದೇವಿ ಮಂದಿರದ ಬಳಿಯ ಐಆರ್‌ಬಿ ಪೋಸ್ಟ್‌ನಲ್ಲಿ ನಿಯೋಜಿಸಲಾಗಿತ್ತು. ದಾಳಿಕೋರರು ಗ್ರೆನೇಡ್‌ಗಳನ್ನು ಸ್ಪೋಟಿಸಿದ ನಂತರ ಗುಂಡಿನ ದಾಳಿ ನಡೆಸಿದರು’ ಎಂದು ಪೊಲೀಸರು ತಿಳಿಸಿದ್ದಾರೆ.

ರಾಜ್ಯ ಗೃಹ ಇಲಾಖೆ ಆಯುಕ್ತ ಟಿ.ರಂಜಿತ್ ಸಿಂಗ್ ಅವರು ಕೇಂದ್ರ ಗೃಹ ಸಚಿವಾಲಯಕ್ಕೆ ಪತ್ರ ಬರೆದು, ತುರ್ತು ಅಗತ್ಯತೆಗಳನ್ನು ಉಲ್ಲೇಖಿಸಿದ್ದಾರೆ. ಕನಿಷ್ಠ ಏಳು ದಿನಗಳ ಕಾಲ ಇಂಫಾಲ್‌ನಲ್ಲಿ ವಾಯು ಪಡೆಗಳು ಅಥವಾ ಹೆಲಿಕಾಪ್ಟರ್‌ಗಳನ್ನು ನಿಯೋಜಿಸುವಂತೆ ವಿನಂತಿಸಿದ್ದಾರೆ.

‘ಗಡಿ ಪಟ್ಟಣವಾದ ಮೊರೆಹ್‌ನಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕುಸಿತವು ಗಂಭೀರವಾದ ಕಳವಳಕಾರಿ ವಿಷಯವಾಗಿದೆ. ಏಕೆಂದರೆ, ನಿರಂತರವಾಗಿ ಗುಂಡಿನ ವಿನಿಮಯ ನಡೆಯುತ್ತಿದ್ದು, ಇಂದು ಮುಂಜಾನೆ ಒಬ್ಬ ಐಆರ್‌ಬಿ ಸಿಬ್ಬಂದಿಯ ಸಾವಿಗೆ ಕಾರಣವಾಗಿದೆ. ಪ್ರಚಲಿತ ಪರಿಸ್ಥಿತಿಯ ದೃಷ್ಟಿಯಿಂದ, ಮೊರೆಯಲ್ಲಿ ಪರಿಸ್ಥಿತಿ ಇನ್ನಷ್ಟು ಹದಗೆಡಬಹುದು, ಯಾವುದೇ ಸಮಯದಲ್ಲಿ ವೈದ್ಯಕೀಯ ತುರ್ತುಸ್ಥಿತಿ ಉಂಟಾಗಬಹುದು. ಮೋರೆಗೆ ಭದ್ರತಾ ಸಿಬ್ಬಂದಿ, ಮದ್ದುಗುಂಡುಗಳು ಇತ್ಯಾದಿಗಳನ್ನು ಏರ್‌ಲಿಫ್ಟ್‌ ಮಾಡುವ ಅವಶ್ಯಕತೆಯಿದೆ ಎಂದು ಪೊಲೀಸ್ ಇಲಾಖೆಯು ಮಾಹಿತಿ ನೀಡಿದೆ’ ಎಂದು ಸಿಂಗ್ ತಮ್ಮ ಪತ್ರದಲ್ಲಿ ವಿವರಿಸಿದ್ದಾರೆ ಎನ್ನಲಾಗಿದೆ.

2023ರ ಅಕ್ಟೋಬರ್ 31 ರಂದು, ಮಣಿಪುರ ಪೊಲೀಸರ ಎಸ್‌ಡಿಪಿಒ ಚಿಂಗ್ತಮ್ ಆನಂದ್ ಕುಮಾರ್ ಅವರನ್ನು ಮೋರೆಯಲ್ಲಿ ಗುಂಡಿಕ್ಕಿ ಕೊಲ್ಲಲಾಯಿತು. ನಂತರ, ಆನಂದ್ ಹತ್ಯೆ ಮಾಡಿದ್ದಾರೆ ಎಂಬ ಅನುಮಾನದ ಮೇಲೆ ಫಿಲಿಪ್ ಖೈಖೋಲಾಲ್ ಖೋಂಗ್ಸಾಯ್ ಮತ್ತು ಹೆಮ್ಖೋಲಾಲ್ ಮೇಟ್ ಎಂಬ ಇಬ್ಬರು ವ್ಯಕ್ತಿಗಳನ್ನು ಪೊಲೀಸರು ಬಂಧಿಸಿದ್ದರು.

ಇಬ್ಬರ ಬಂಧನವು ಮಿಶ್ರ ಸಮುದಾಯಗಳ ಜನಸಂಖ್ಯೆಯ ಪಟ್ಟಣದಲ್ಲಿ ಬಹುಸಂಖ್ಯಾತರಾದ ಕುಕಿ ಸಮುದಾಯದಲ್ಲಿ ಅಶಾಂತಿಯನ್ನು ಉಂಟುಮಾಡಿತು. ಅದರ ನಂತರ ಮೊರೆಹ್ ತೆಂಗ್ನೌಪಾಲ್ ಜಿಲ್ಲೆಯಾದ್ಯಂತ ಕರ್ಫ್ಯೂ ವಿಧಿಸಲಾಯಿತು.

ಇದನ್ನೂ ಓದಿ; ಮಂದಿರ ಉದ್ಘಾಟನೆ ನಂತರ ರಾಮನ ದರ್ಶನ ಪಡೆಯುವುದು ಸುಲಭ: ಶರದ್ ಪವಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು.ಅವರಿಗೆ 69 ವರ್ಷಸ್ಸಾಗಿತ್ತು. ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ದೀರ್ಘ ಸಮಯದಿಂದ ಚಿಕಿತ್ಸೆ ಪಡೆಯುತ್ತಿದ್ದರು ಎಂದು ವರದಿಗಳು ಹೇಳಿವೆ. ಆರೋಗ್ಯದಲ್ಲಿ ಹಠಾತ್...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...