Homeಮುಖಪುಟಮಣಿಪುರ ಗಲಭೆ: ಕರ್ಫ್ಯೂ ನಡುವೆಯೆ ಮೊರೆಹ್‌ನಲ್ಲಿ ಐಆರ್‌ಬಿ ಯೋಧನ ಹತ್ಯೆ

ಮಣಿಪುರ ಗಲಭೆ: ಕರ್ಫ್ಯೂ ನಡುವೆಯೆ ಮೊರೆಹ್‌ನಲ್ಲಿ ಐಆರ್‌ಬಿ ಯೋಧನ ಹತ್ಯೆ

- Advertisement -
- Advertisement -

ಮಣಿಪುರದಲ್ಲಿ ಭುಗಿಲೆದ್ದಿರುವ ಹಿಂಸಾಚಾರಕ್ಕೆ ಭಾರತೀಯ ರಿಸರ್ವ್ ಬೆಟಾಲಿಯನ್ (ಐಆರ್‌ಬಿ) ಯೋಧನೊಬ್ಬ ಬುಧವಾರ ಮುಂಜಾನೆ ಗಲಭೆ ಪೀಡಿತ ಗಡಿ ಪಟ್ಟಣವಾದ ಮೊರೆಹ್‌ನಲ್ಲಿ ಹುತಾತ್ಮರಾಗಿದ್ದಾರೆ. ಈ ಬೆಳವಣಿಗೆಯ ಬೆನ್ನಲ್ಲೇ ಹೆಚ್ಚಿನ ವೈದ್ಯಕೀಯ ನೆರವು, ತುರ್ತು ಪರಿಸ್ಥಿತಿಗಳಿಗಾಗಿ ಹೆಲಿಕಾಪ್ಟರ್, ಹೆಚ್ಚಿನ ಸೇನಾ ಪಡೆಗಳು ಮತ್ತು ಶಸ್ತ್ರಾಸ್ತ್ರಗಳನ್ನು ಏರ್‌ಲಿಫ್ಟ್‌ ಮಾಡುವಂತೆ ರಾಜ್ಯ ಗೃಹ ಇಲಾಖೆ ಆಯುಕ್ತರು ಕೇಂದ್ರ ಗೃಹ ಸಚಿವಾಲಯಕ್ಕೆ ವಿನಂತಿ ಮಾಡಿದ್ದಾರೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ಕಳೆದ ಎರಡೂವರೆ ತಿಂಗಳಲ್ಲಿ ಮೊರೆಹ್‌ನಲ್ಲಿ ನಡೆದ ಎರಡನೇ ಹತ್ಯೆ ಇದಾಗಿದ್ದು, ಮಣಿಪುರ ಪೊಲೀಸ್ ಪಡೆಯೊಂದಿಗೆ ಭದ್ರತೆಗೆ ನಿಯೋಜಿಸಲಾಗಿದ್ದ ಐಆರ್‌ಬಿ ಯೋಧ ಡಬ್ಲ್ಯೂ ಸೊಮೊರ್ಜಿತ್ ಅವರು ಬೆಳಿಗ್ಗೆ 3.25 ರ ಸುಮಾರಿಗೆ ಕೊಲೆಗೀಡಾಗಿದ್ದಾರೆ. ‘ಆ ಸಮಯದಲ್ಲಿ ಸೋಮೊರ್ಜಿತ್‌ನನ್ನು ಕೊಂಡೊಂಗ್ ಲೈರೆಂಬಿ ದೇವಿ ಮಂದಿರದ ಬಳಿಯ ಐಆರ್‌ಬಿ ಪೋಸ್ಟ್‌ನಲ್ಲಿ ನಿಯೋಜಿಸಲಾಗಿತ್ತು. ದಾಳಿಕೋರರು ಗ್ರೆನೇಡ್‌ಗಳನ್ನು ಸ್ಪೋಟಿಸಿದ ನಂತರ ಗುಂಡಿನ ದಾಳಿ ನಡೆಸಿದರು’ ಎಂದು ಪೊಲೀಸರು ತಿಳಿಸಿದ್ದಾರೆ.

ರಾಜ್ಯ ಗೃಹ ಇಲಾಖೆ ಆಯುಕ್ತ ಟಿ.ರಂಜಿತ್ ಸಿಂಗ್ ಅವರು ಕೇಂದ್ರ ಗೃಹ ಸಚಿವಾಲಯಕ್ಕೆ ಪತ್ರ ಬರೆದು, ತುರ್ತು ಅಗತ್ಯತೆಗಳನ್ನು ಉಲ್ಲೇಖಿಸಿದ್ದಾರೆ. ಕನಿಷ್ಠ ಏಳು ದಿನಗಳ ಕಾಲ ಇಂಫಾಲ್‌ನಲ್ಲಿ ವಾಯು ಪಡೆಗಳು ಅಥವಾ ಹೆಲಿಕಾಪ್ಟರ್‌ಗಳನ್ನು ನಿಯೋಜಿಸುವಂತೆ ವಿನಂತಿಸಿದ್ದಾರೆ.

‘ಗಡಿ ಪಟ್ಟಣವಾದ ಮೊರೆಹ್‌ನಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕುಸಿತವು ಗಂಭೀರವಾದ ಕಳವಳಕಾರಿ ವಿಷಯವಾಗಿದೆ. ಏಕೆಂದರೆ, ನಿರಂತರವಾಗಿ ಗುಂಡಿನ ವಿನಿಮಯ ನಡೆಯುತ್ತಿದ್ದು, ಇಂದು ಮುಂಜಾನೆ ಒಬ್ಬ ಐಆರ್‌ಬಿ ಸಿಬ್ಬಂದಿಯ ಸಾವಿಗೆ ಕಾರಣವಾಗಿದೆ. ಪ್ರಚಲಿತ ಪರಿಸ್ಥಿತಿಯ ದೃಷ್ಟಿಯಿಂದ, ಮೊರೆಯಲ್ಲಿ ಪರಿಸ್ಥಿತಿ ಇನ್ನಷ್ಟು ಹದಗೆಡಬಹುದು, ಯಾವುದೇ ಸಮಯದಲ್ಲಿ ವೈದ್ಯಕೀಯ ತುರ್ತುಸ್ಥಿತಿ ಉಂಟಾಗಬಹುದು. ಮೋರೆಗೆ ಭದ್ರತಾ ಸಿಬ್ಬಂದಿ, ಮದ್ದುಗುಂಡುಗಳು ಇತ್ಯಾದಿಗಳನ್ನು ಏರ್‌ಲಿಫ್ಟ್‌ ಮಾಡುವ ಅವಶ್ಯಕತೆಯಿದೆ ಎಂದು ಪೊಲೀಸ್ ಇಲಾಖೆಯು ಮಾಹಿತಿ ನೀಡಿದೆ’ ಎಂದು ಸಿಂಗ್ ತಮ್ಮ ಪತ್ರದಲ್ಲಿ ವಿವರಿಸಿದ್ದಾರೆ ಎನ್ನಲಾಗಿದೆ.

2023ರ ಅಕ್ಟೋಬರ್ 31 ರಂದು, ಮಣಿಪುರ ಪೊಲೀಸರ ಎಸ್‌ಡಿಪಿಒ ಚಿಂಗ್ತಮ್ ಆನಂದ್ ಕುಮಾರ್ ಅವರನ್ನು ಮೋರೆಯಲ್ಲಿ ಗುಂಡಿಕ್ಕಿ ಕೊಲ್ಲಲಾಯಿತು. ನಂತರ, ಆನಂದ್ ಹತ್ಯೆ ಮಾಡಿದ್ದಾರೆ ಎಂಬ ಅನುಮಾನದ ಮೇಲೆ ಫಿಲಿಪ್ ಖೈಖೋಲಾಲ್ ಖೋಂಗ್ಸಾಯ್ ಮತ್ತು ಹೆಮ್ಖೋಲಾಲ್ ಮೇಟ್ ಎಂಬ ಇಬ್ಬರು ವ್ಯಕ್ತಿಗಳನ್ನು ಪೊಲೀಸರು ಬಂಧಿಸಿದ್ದರು.

ಇಬ್ಬರ ಬಂಧನವು ಮಿಶ್ರ ಸಮುದಾಯಗಳ ಜನಸಂಖ್ಯೆಯ ಪಟ್ಟಣದಲ್ಲಿ ಬಹುಸಂಖ್ಯಾತರಾದ ಕುಕಿ ಸಮುದಾಯದಲ್ಲಿ ಅಶಾಂತಿಯನ್ನು ಉಂಟುಮಾಡಿತು. ಅದರ ನಂತರ ಮೊರೆಹ್ ತೆಂಗ್ನೌಪಾಲ್ ಜಿಲ್ಲೆಯಾದ್ಯಂತ ಕರ್ಫ್ಯೂ ವಿಧಿಸಲಾಯಿತು.

ಇದನ್ನೂ ಓದಿ; ಮಂದಿರ ಉದ್ಘಾಟನೆ ನಂತರ ರಾಮನ ದರ್ಶನ ಪಡೆಯುವುದು ಸುಲಭ: ಶರದ್ ಪವಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...