Homeಮುಖಪುಟಮಣಿಪುರ ಗಲಭೆ: ಕರ್ಫ್ಯೂ ನಡುವೆಯೆ ಮೊರೆಹ್‌ನಲ್ಲಿ ಐಆರ್‌ಬಿ ಯೋಧನ ಹತ್ಯೆ

ಮಣಿಪುರ ಗಲಭೆ: ಕರ್ಫ್ಯೂ ನಡುವೆಯೆ ಮೊರೆಹ್‌ನಲ್ಲಿ ಐಆರ್‌ಬಿ ಯೋಧನ ಹತ್ಯೆ

- Advertisement -
- Advertisement -

ಮಣಿಪುರದಲ್ಲಿ ಭುಗಿಲೆದ್ದಿರುವ ಹಿಂಸಾಚಾರಕ್ಕೆ ಭಾರತೀಯ ರಿಸರ್ವ್ ಬೆಟಾಲಿಯನ್ (ಐಆರ್‌ಬಿ) ಯೋಧನೊಬ್ಬ ಬುಧವಾರ ಮುಂಜಾನೆ ಗಲಭೆ ಪೀಡಿತ ಗಡಿ ಪಟ್ಟಣವಾದ ಮೊರೆಹ್‌ನಲ್ಲಿ ಹುತಾತ್ಮರಾಗಿದ್ದಾರೆ. ಈ ಬೆಳವಣಿಗೆಯ ಬೆನ್ನಲ್ಲೇ ಹೆಚ್ಚಿನ ವೈದ್ಯಕೀಯ ನೆರವು, ತುರ್ತು ಪರಿಸ್ಥಿತಿಗಳಿಗಾಗಿ ಹೆಲಿಕಾಪ್ಟರ್, ಹೆಚ್ಚಿನ ಸೇನಾ ಪಡೆಗಳು ಮತ್ತು ಶಸ್ತ್ರಾಸ್ತ್ರಗಳನ್ನು ಏರ್‌ಲಿಫ್ಟ್‌ ಮಾಡುವಂತೆ ರಾಜ್ಯ ಗೃಹ ಇಲಾಖೆ ಆಯುಕ್ತರು ಕೇಂದ್ರ ಗೃಹ ಸಚಿವಾಲಯಕ್ಕೆ ವಿನಂತಿ ಮಾಡಿದ್ದಾರೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ಕಳೆದ ಎರಡೂವರೆ ತಿಂಗಳಲ್ಲಿ ಮೊರೆಹ್‌ನಲ್ಲಿ ನಡೆದ ಎರಡನೇ ಹತ್ಯೆ ಇದಾಗಿದ್ದು, ಮಣಿಪುರ ಪೊಲೀಸ್ ಪಡೆಯೊಂದಿಗೆ ಭದ್ರತೆಗೆ ನಿಯೋಜಿಸಲಾಗಿದ್ದ ಐಆರ್‌ಬಿ ಯೋಧ ಡಬ್ಲ್ಯೂ ಸೊಮೊರ್ಜಿತ್ ಅವರು ಬೆಳಿಗ್ಗೆ 3.25 ರ ಸುಮಾರಿಗೆ ಕೊಲೆಗೀಡಾಗಿದ್ದಾರೆ. ‘ಆ ಸಮಯದಲ್ಲಿ ಸೋಮೊರ್ಜಿತ್‌ನನ್ನು ಕೊಂಡೊಂಗ್ ಲೈರೆಂಬಿ ದೇವಿ ಮಂದಿರದ ಬಳಿಯ ಐಆರ್‌ಬಿ ಪೋಸ್ಟ್‌ನಲ್ಲಿ ನಿಯೋಜಿಸಲಾಗಿತ್ತು. ದಾಳಿಕೋರರು ಗ್ರೆನೇಡ್‌ಗಳನ್ನು ಸ್ಪೋಟಿಸಿದ ನಂತರ ಗುಂಡಿನ ದಾಳಿ ನಡೆಸಿದರು’ ಎಂದು ಪೊಲೀಸರು ತಿಳಿಸಿದ್ದಾರೆ.

ರಾಜ್ಯ ಗೃಹ ಇಲಾಖೆ ಆಯುಕ್ತ ಟಿ.ರಂಜಿತ್ ಸಿಂಗ್ ಅವರು ಕೇಂದ್ರ ಗೃಹ ಸಚಿವಾಲಯಕ್ಕೆ ಪತ್ರ ಬರೆದು, ತುರ್ತು ಅಗತ್ಯತೆಗಳನ್ನು ಉಲ್ಲೇಖಿಸಿದ್ದಾರೆ. ಕನಿಷ್ಠ ಏಳು ದಿನಗಳ ಕಾಲ ಇಂಫಾಲ್‌ನಲ್ಲಿ ವಾಯು ಪಡೆಗಳು ಅಥವಾ ಹೆಲಿಕಾಪ್ಟರ್‌ಗಳನ್ನು ನಿಯೋಜಿಸುವಂತೆ ವಿನಂತಿಸಿದ್ದಾರೆ.

‘ಗಡಿ ಪಟ್ಟಣವಾದ ಮೊರೆಹ್‌ನಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕುಸಿತವು ಗಂಭೀರವಾದ ಕಳವಳಕಾರಿ ವಿಷಯವಾಗಿದೆ. ಏಕೆಂದರೆ, ನಿರಂತರವಾಗಿ ಗುಂಡಿನ ವಿನಿಮಯ ನಡೆಯುತ್ತಿದ್ದು, ಇಂದು ಮುಂಜಾನೆ ಒಬ್ಬ ಐಆರ್‌ಬಿ ಸಿಬ್ಬಂದಿಯ ಸಾವಿಗೆ ಕಾರಣವಾಗಿದೆ. ಪ್ರಚಲಿತ ಪರಿಸ್ಥಿತಿಯ ದೃಷ್ಟಿಯಿಂದ, ಮೊರೆಯಲ್ಲಿ ಪರಿಸ್ಥಿತಿ ಇನ್ನಷ್ಟು ಹದಗೆಡಬಹುದು, ಯಾವುದೇ ಸಮಯದಲ್ಲಿ ವೈದ್ಯಕೀಯ ತುರ್ತುಸ್ಥಿತಿ ಉಂಟಾಗಬಹುದು. ಮೋರೆಗೆ ಭದ್ರತಾ ಸಿಬ್ಬಂದಿ, ಮದ್ದುಗುಂಡುಗಳು ಇತ್ಯಾದಿಗಳನ್ನು ಏರ್‌ಲಿಫ್ಟ್‌ ಮಾಡುವ ಅವಶ್ಯಕತೆಯಿದೆ ಎಂದು ಪೊಲೀಸ್ ಇಲಾಖೆಯು ಮಾಹಿತಿ ನೀಡಿದೆ’ ಎಂದು ಸಿಂಗ್ ತಮ್ಮ ಪತ್ರದಲ್ಲಿ ವಿವರಿಸಿದ್ದಾರೆ ಎನ್ನಲಾಗಿದೆ.

2023ರ ಅಕ್ಟೋಬರ್ 31 ರಂದು, ಮಣಿಪುರ ಪೊಲೀಸರ ಎಸ್‌ಡಿಪಿಒ ಚಿಂಗ್ತಮ್ ಆನಂದ್ ಕುಮಾರ್ ಅವರನ್ನು ಮೋರೆಯಲ್ಲಿ ಗುಂಡಿಕ್ಕಿ ಕೊಲ್ಲಲಾಯಿತು. ನಂತರ, ಆನಂದ್ ಹತ್ಯೆ ಮಾಡಿದ್ದಾರೆ ಎಂಬ ಅನುಮಾನದ ಮೇಲೆ ಫಿಲಿಪ್ ಖೈಖೋಲಾಲ್ ಖೋಂಗ್ಸಾಯ್ ಮತ್ತು ಹೆಮ್ಖೋಲಾಲ್ ಮೇಟ್ ಎಂಬ ಇಬ್ಬರು ವ್ಯಕ್ತಿಗಳನ್ನು ಪೊಲೀಸರು ಬಂಧಿಸಿದ್ದರು.

ಇಬ್ಬರ ಬಂಧನವು ಮಿಶ್ರ ಸಮುದಾಯಗಳ ಜನಸಂಖ್ಯೆಯ ಪಟ್ಟಣದಲ್ಲಿ ಬಹುಸಂಖ್ಯಾತರಾದ ಕುಕಿ ಸಮುದಾಯದಲ್ಲಿ ಅಶಾಂತಿಯನ್ನು ಉಂಟುಮಾಡಿತು. ಅದರ ನಂತರ ಮೊರೆಹ್ ತೆಂಗ್ನೌಪಾಲ್ ಜಿಲ್ಲೆಯಾದ್ಯಂತ ಕರ್ಫ್ಯೂ ವಿಧಿಸಲಾಯಿತು.

ಇದನ್ನೂ ಓದಿ; ಮಂದಿರ ಉದ್ಘಾಟನೆ ನಂತರ ರಾಮನ ದರ್ಶನ ಪಡೆಯುವುದು ಸುಲಭ: ಶರದ್ ಪವಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...