Homeಮುಖಪುಟಮಣಿಪುರ ಗಲಭೆ: ಎರಡು ದಿನಗಳ ರಾಜ್ಯ ಬಂದ್‌ಗೆ ಕರೆಕೊಟ್ಟ ಮೈತೇಯಿ ಗುಂಪು

ಮಣಿಪುರ ಗಲಭೆ: ಎರಡು ದಿನಗಳ ರಾಜ್ಯ ಬಂದ್‌ಗೆ ಕರೆಕೊಟ್ಟ ಮೈತೇಯಿ ಗುಂಪು

- Advertisement -
- Advertisement -

ಗಲಭೆ ಪೀಡಿತ ಮಣಿಪುರ ರಾಜ್ಯದಲ್ಲಿ 23 ವರ್ಷದ ತಖೆಲ್ಲಂಬಮ್ ಮನೋರಂಜನ್ ಸಿಂಗ್ ಹತ್ಯೆಯ ವಿರುದ್ಧ ರಚಿಸಲಾದ ಜಂಟಿ ಕ್ರಿಯಾ ಸಮಿತಿ (ಜೆಎಸಿ) ರಾಜ್ಯಾದ್ಯಂತ 48 ಗಂಟೆಗಳ ಬಂದ್‌ಗೆ ಕರೆ ನೀಡಿದ್ದು, ಜ.20ರಿಂದ ಬಂದ್ ಜಾರಿಗೆ ಬಂದಿದ್ದು, ಜ.22 ರವರೆಗೆ ಜಾರಿಯಲ್ಲಿರುತ್ತದೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ಗುರುವಾರ (ಜನವರಿ 17) ಇಂಫಾಲ್ ಪೂರ್ವದಲ್ಲಿ ಶಸ್ತ್ರಸಜ್ಜಿತ ಉಗ್ರಗಾಮಿಗಳಿಂದ ತಖೆಲ್ಲಂಬಮ್ ಮನೋರಂಜನ್ ಸಿಂಗ್ ಸಾವಿಗೆ ರಾಜ್ಯವು ಶೋಕ ವ್ಯಕ್ತಪಡಿಸುತ್ತಿದ್ದಂತೆ, ಜನವರಿ 21ರಂದು ತನ್ನ ರಾಜ್ಯತ್ವ ದಿನವನ್ನು ಆಚರಿಸುವ ಮಣಿಪುರವು ಭೀಕರ ಪರಿಸ್ಥಿತಿಗೆ ಸಾಕ್ಷಿಯಾಗಿದೆ.

‘ತಖೆಲ್ಲಂಬಮ್ ಮನೋರಂಜನ್ ಸಿಂಗ್ ಗ್ರಾಮ ಕಾವಲುಗಾರರಾಗಿದ್ದರು. ಕುಕಿ ಉಗ್ರರು ನಡೆಸಿದ ದಾಳಿಯಲ್ಲಿ ಸಿಂಗ್ ಸಾವನ್ನಪ್ಪಿದ್ದಾರೆ’ ಎಂದು ಜೆಎಸಿ ಆರೋಪಿಸಿದೆ.

ಜೆಎಸಿ ಸಂಚಾಲಕರು ಮುಖ್ಯಮಂತ್ರಿ ಮತ್ತು ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕ ಎನ್ ಬಿರೇನ್ ಸಿಂಗ್ ಅವರಿಗೆ ಮನವಿ ಸಲ್ಲಿಸಿದ್ದು, ತಮ್ಮ ಬೇಡಿಕೆಗಳನ್ನು ಈಡೇರಿಸಲು 24 ಗಂಟೆಗಳ ಗಡುವು ನೀಡಲಾಗಿದೆ ಎಂದು ತಿಳಿಸಿದ್ದಾರೆ.

‘ಕಾಂಗ್ಚುಪ್ ಹಿಲ್ ರೇಂಜ್‌ನಲ್ಲಿ ಒಬ್ಬ ಮಹಿಳೆ ಸೇರಿದಂತೆ ಏಳಕ್ಕೂ ಹೆಚ್ಚು ಜನರು ಬಂದೂಕುಧಾರಿಗಳಿಂದ ಸಿಂಗ್ ಕೊಲ್ಲಲ್ಪಟ್ಟರು’ ಎಂದು ಸ್ಥಳೀಯ ನಿವಾಸಿಗಳು ಶನಿವಾರ ಮಾಹಿತಿ ನೀಡಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯ ವರದಿ ಮಾಡಿದೆ.

‘ಶನಿವಾರ ಬಂದ್‌ಗೆ ಕರೆ ನೀಡಿದ್ದ ಜೆಎಸಿ, ನಿಗದಿತ ಗಡುವಿನೊಳಗೆ ಬೇಡಿಕೆಗೆ ಸಕಾರಾತ್ಮಕ ಪ್ರತಿಕ್ರಿಯೆ ನೀಡಲು ಸರ್ಕಾರ ವಿಫಲವಾಗಿದೆ’ ಎಂದು ಆರೋಪಿಸಿದೆ.

‘ಪರಿಣಾಮಕಾರಿಯಲ್ಲದ ಕೇಂದ್ರ ಪಡೆಗಳನ್ನು ರಾಜ್ಯದಿಂದ ತೆಗೆದುಹಾಕುವುದು ಮತ್ತು ರಾಜ್ಯ ಪಡೆಗಳನ್ನು ನಿಯೋಜಿಸುವಂತೆ’ ಎನ್ ಬಿರೇನ್ ಸಿಂಗ್ ಅವರು ಸರ್ಕಾರದ ಮುಂದೆ ಬೇಡಿಕೆ ಇಟ್ಟಿದ್ದಾರೆ.

ಜೊತೆಗೆ, ಕುಕಿ ಉಗ್ರಗಾಮಿ ಗುಂಪುಗಳು ಮತ್ತು ಸರ್ಕಾರದ ನಡುವೆ ಸಹಿ ಹಾಕಲಾದ ಕಾರ್ಯಾಚರಣೆಯ ಅಮಾನತು ಒಪ್ಪಂದದ ಹಿಂಪಡೆಯಬೇಕು. ಮಣಿಪುರದಲ್ಲಿ ರಾಷ್ಟ್ರೀಯ ನಾಗರಿಕರ ನೋಂದಣಿ ಅನುಷ್ಠಾನ ಮಾಡಬೇಕು ಎಂಬ ಬೇಡಿಕೆಗಳನ್ನೂ ಸೇರಿಸಿದ್ದಾರೆ.

ರಾಜ್ಯದ ಎಲ್ಲ ಪ್ರದೇಶಗಳಲ್ಲಿ ಗ್ರಾಮ ಸಂರಕ್ಷಣಾ ಪಡೆಗಳ ರಚನೆಗೆ ಅವಕಾಶ ನೀಡುವಂತೆ ಜೆಎಸಿ ಸರ್ಕಾರವನ್ನು ಒತ್ತಾಯಿಸಿದೆ. ಕಾಂಗ್ಚುಪ್ ಹಿಲ್ ರೇಂಜ್, ಮೇಟಿ ಪ್ರಾಬಲ್ಯವಿರುವ ಪ್ರದೇಶದಲ್ಲಿ ಹೆಚ್ಚುವರಿ ಭದ್ರತಾ ಪಡೆಗಳ ನಿಯೋಜನೆಗೆ ಒತ್ತಾಯಿಸಿದೆ.

ಇಮಾ ಕೈಥೆಲ್ ಸೇರಿದಂತೆ ಮಾರುಕಟ್ಟೆಗಳು, ಇತರ ವ್ಯಾಪಾರ ಉದ್ಯಮಗಳು ಇಂಫಾಲ್ ಮತ್ತು ಇತರ ಕಣಿವೆ ಜಿಲ್ಲೆಗಳಲ್ಲಿ ಮುಚ್ಚಲ್ಪಟ್ಟಿವೆ. ಇಂಫಾಲ್ ಕಣಿವೆಯಲ್ಲಿ ಸಾರ್ವಜನಿಕ ಸಾರಿಗೆಯು ಜೆಎಸಿ ಕರೆ ನೀಡಿರುವ ಮುಷ್ಕರಕ್ಕೆ ಬೆಂಬಲವಾಗಿ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಿತು.

ಅಗತ್ಯ ಸೇವೆಗಳು ಮತ್ತು ಧಾರ್ಮಿಕ ಕಾರ್ಯಕ್ರಮಗಳಿಗೆ ಮಾತ್ರ ಬಂದ್‌ನ ವ್ಯಾಪ್ತಿಯಿಂದ ವಿನಾಯಿತಿ ನೀಡಲಾಗಿದೆ ಎಂದು ಜೆಎಸಿಯ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಕಳೆದ ವರ್ಷದ ಮೇ ತಿಂಗಳಿನಿಂದ, ಮಣಿಪುರವು ಜನಾಂಗೀಯ ಉದ್ವಿಗ್ನತೆಯನ್ನು ಎದುರಿಸುತ್ತಿದೆ. ಇದರ ಪರಿಣಾಮವಾಗಿ 180 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಮೇ 3 ರಂದು ಪರಿಶಿಷ್ಟ ಪಂಗಡದ (ಎಸ್‌ಟಿ) ಸ್ಥಾನಮಾನಕ್ಕಾಗಿ ಮೈತೇಯಿ ಸಮುದಾಯದ ಕರೆಯನ್ನು ವಿರೋಧಿಸಲು ಬೆಟ್ಟದ ಜಿಲ್ಲೆಗಳಲ್ಲಿ ಆಯೋಜಿಸಲಾದ ‘ಬುಡಕಟ್ಟು ಒಗ್ಗಟ್ಟಿನ ಮೆರವಣಿಗೆ’ ನಂತರ ಹಿಂಸಾಚಾರ ಭುಗಿಲೆದ್ದಿತು.

ಮಣಿಪುರದ ಜನಸಂಖ್ಯೆಯ ಸರಿಸುಮಾರು 53 ಪ್ರತಿಶತವನ್ನು ಒಳಗೊಂಡಿರುವ, ಮೈತೇಯಿಗಳು ಪ್ರಾಥಮಿಕವಾಗಿ ಇಂಫಾಲ್ ಕಣಿವೆಯಲ್ಲಿ ವಾಸಿಸುತ್ತಾರೆ. ಜೊತೆಗೆ ಬುಡಕಟ್ಟು ಜನಾಂಗದವರು, ನಾಗಾಗಳು ಮತ್ತು ಕುಕಿ ಸಮುದಾಗಳು ರಾಜ್ಯದ ಜನಸಂಖ್ಯೆಯ ಶೇ.40ರಷ್ಟಿದ್ದಾರೆ. ಇವರು ಪ್ರಧಾನವಾಗಿ ಗುಡ್ಡಗಾಡು ಜಿಲ್ಲೆಗಳಲ್ಲಿ ವಾಸಿಸುತ್ತಾರೆ.

ಇದನ್ನೂ ಓದಿ; ಹೆದ್ದಾರಿಯಲ್ಲಿ ಹಸುಗಳ ಹಿಂಡು: ‘ಎಕ್ಸ್‌ಪ್ರೆಸ್‌ ವೇ’ ಅಲ್ಲ ‘ಆಕ್ಸ್‌ಪ್ರೆಸ್ ವೇ’ ಎಂದು ಅಖಿಲೇಶ್ ಲೇವಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...

‘ನಿಮ್ಮ ಮೌನ ಸ್ವೀಕಾರಾರ್ಹವಲ್ಲ’: ರಾಮ ಮಂದಿರ ದೇಣಿಗೆ ‘ಕಳ್ಳತನ’ದ ತನಿಖೆಗೆ ಮೋದಿಗೆ ಖರ್ಗೆ-ರಾಹುಲ್ ಗಾಂಧಿ ಪತ್ರ

ನವದೆಹಲಿ: ಸಂಸತ್ತಿನ ಮಳೆಗಾಲದ ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಅಯೋಧ್ಯೆ ರಾಮ ಮಂದಿರ ನಿರ್ಮಾಣದ ದೇಣಿಗೆಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಆರ್ಥಿಕ ಅಕ್ರಮ ಹಾಗೂ ‘ಕಳ್ಳತನ’ದ ವಿಷಯ ರಾಷ್ಟ್ರ ರಾಜಕಾರಣದಲ್ಲಿ...

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...