Homeಮುಖಪುಟಹಿಂಸಾಚಾರದಿಂದ ನಲುಗಿದ ಮಣಿಪುರ; ಅಸಡ್ಡೆಯ ಮೌನ ತಾಳಿರುವ ಪ್ರಧಾನಿ ಮೋದಿ: ವಿಪಕ್ಷಗಳ ಆರೋಪ

ಹಿಂಸಾಚಾರದಿಂದ ನಲುಗಿದ ಮಣಿಪುರ; ಅಸಡ್ಡೆಯ ಮೌನ ತಾಳಿರುವ ಪ್ರಧಾನಿ ಮೋದಿ: ವಿಪಕ್ಷಗಳ ಆರೋಪ

- Advertisement -
- Advertisement -

ಮಣಿಪುರದಲ್ಲಿ ಕಳೆದ ಹಲವು ದಿನಗಳಿಂದ ಹಿಂಸಾಚಾರ, ಜನರ ಸಾವು-ನೋವಿನಿಂದ ನಲುಗಿಹೋಗಿದೆ. ನೂರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ, ಸಾವಿರಾರು ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಆದರೆ ಈವರೆಗೂ ಈ ಬಗ್ಗೆ ಪ್ರಧಾನಿ ಮೋದಿ ಮಾತ್ರ ಒಂದೇ ಒಂದು ಮಾತು ಆಡಿಲ್ಲ, ಅಸಡ್ಡೆಯಿಂದ ಕೂಡಿದ ಮೌನ ತಾಳಿದ್ದಾರೆ. ಇದು ಮಣಿಪುರದ ಜನರ ಬಗ್ಗೆ ಮೋದಿ ಅವರಲ್ಲಿರುವ ಉದಾಸೀನತೆಯನ್ನು ಸ್ಪಷ್ಟವಾಗಿ ಹೇಳುತ್ತದೆ.. ಎಂದು 10 ವಿರೋಧ ಪಕ್ಷಗಳ ನಾಯಕರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆರೋಪ ಮಾಡಿದ್ದಾರೆ.

ಈ ಬಗ್ಗೆ ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಮಣಿಪುರ ಮಾಜಿ ಮುಖ್ಯಮಂತ್ರಿ ಇಬೋಬಿ ಸಿಂಗ್ ನವದೆಹಲಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿ ನಡೆಸಿ ಈ ಹಿಂಸಾಚಾರ ಕುರಿತ ಮನವಿ ಪತ್ರವನ್ನು ವಿರೋಧ ಪಕ್ಷಗಳ ನಾಯಕರು ಮಂಗಳವಾರ ಬಿಡುಗಡೆ ಮಾಡಿದರು. ಕಾಂಗ್ರೆಸ್, ಎಎಪಿ, ಟಿಎಂಸಿ, ಜೆಡಿಯು, ಸಿಪಿಎಂ, ಸಿಪಿಐ, ಶಿವಸೇನಾ (ಯುಬಿಟಿ), ಎನ್‌ಸಿಪಿ, ಆರ್‌ಎಸ್‌ಪಿ ಹಾಗೂ ಫಾರ್ವಡ್್ರ ಬ್ಲಾಕ್ ನಾಯಕರು ಈ ಮನವಿಪತ್ರಕ್ಕೆ ಸಹಿ ಹಾಕಿದ್ದಾರೆ.

ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ”ಮಣಿಪುರದಲ್ಲಿನ ಹಿಂಸಾಚಾರ ಕುರಿತ ಈ ಮನವಿಪತ್ರವನ್ನು ಅಮೆರಿಕ ಮತ್ತು ಈಜಿಪ್ಟ್ ಪ್ರವಾಸಕ್ಕೆ ತೆರಳುವ ಮುನ್ನವೇ, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಲ್ಲಿಸಲು ಮುಂದಾಗಿದ್ದೆವು. ಆದರೆ, ಪ್ರಧಾನಿಯ ಭೇಟಿಗೆ ಅವಕಾಶ ನೀಡದ ಕಾರಣ ಈ ಮನವಿಪತ್ರವನ್ನು ಬಿಡುಗಡೆ ಮಾಡಿದ್ದೇವೆ” ಎಂದು ಹೇಳಿದರು.

”ಪ್ರಧಾನಿ ಅವರನ್ನು ಭೇಟಿ ಮಾಡುವುದಕ್ಕಾಗಿ ನಾವು ಜೂನ್ 10ರಿಂದ ಕಾಯುತ್ತಿದ್ದೆವು. ತಮ್ಮನ್ನು ಭೇಟಿ ಮಾಡಲು ಅವರು 10 ನಿಮಿಷ ಸಮಯ ಕೊಡಬಹುದು ಎಂಬ ನಿರೀಕ್ಷೆ ಹೊಂದಿದ್ದೆವು. ಆದರೆ ಅವರು ನಮಗೆ ಅವಕಾಶ ನೀಡಲಿಲ್ಲ. ನಾವು ಸಣ್ಣ ರಾಜ್ಯಕ್ಕೆ ಸೇರಿದವರಾಗಿದ್ದು, ಏನೋ ಬೇಡಲು ಬಂದಿದ್ದಾರೆ ಎಂದು ಅವರು ಭಾವಿಸಿದ್ದಿರಬಹುದು. ಆದರೆ, ನಾವು ಭಿಕ್ಷುಕರಲ್ಲ. ಏನನ್ನೋ ಬೇಡುವುದಕ್ಕಾಗಿ ನಾವು ಇಲ್ಲಿಗೆ ಬಂದಿಲ್ಲ” ಎಂದು ಸಿಂಗ್ ಹೇಳಿದರು.

”ಮಣಿಪುರವನ್ನು ಭಾರತದ ಒಂದು ಭಾಗ ಎಂಬುದಾಗಿ ಅವರು ತಿಳಿದುಕೊಂಡಿದ್ದರೆ, ಆ ರಾಜ್ಯದಲ್ಲಿನ ಹಿಂಸಾಚಾರವನ್ನು ರಾಷ್ಟ್ರೀಯ ಸಮಸ್ಯೆ ಎಂಬುದಾಗಿ ಪರಿಗಣಿಸಬೇಕು” ಎಂದು ಆಗ್ರಹಿಸಿದರು.

‘ಮೇ 3ರಿಂದ ಮಣಿಪುರ ಹೊತ್ತಿ ಉರಿಯುತ್ತಿದೆ. ಹಿಂಸಾಚಾರ ತಡೆಗಟ್ಟುವಲ್ಲಿ ಡಬಲ್ ಎಂಜಿನ್ ಸರ್ಕಾರ ಅಸಮರ್ಥ ಎಂಬುದನ್ನು ಇದು ತೋರಿಸುತ್ತದೆ. ಮಾಹಿತಿ ಕೊರತೆಯೇ ಹಿಂಸಾಚಾರಕ್ಕೆ ಕಾರಣ ಎಂಬುದನ್ನು ಮುಖ್ಯಮಂತ್ರಿ ಎನ್.ಬಿರೇನ್‌ ಸಿಂಗ್‌ ಬಹಿರಂಗವಾಗಿಯೇ ಒಪ್ಪಿಕೊಂಡಿದ್ದಾರೆ. ಹೀಗಾಗಿ ಈ ವಿಷಯವಾಗಿ ಮೋದಿ ನೇತೃತ್ವದ ಸರ್ಕಾರ ಸೂಕ್ತ ಕ್ರಮ ತೆಗೆದುಕೊಳ್ಳಬೇಕು” ಎಂದು ಒತ್ತಾಯಿಸಿದರು.

ಮಣಿಪುರದಲ್ಲಿನ ಈ ಹಿಂಸಾಚಾರಕ್ಕೆ ಮುಖ್ಯಮಂತ್ರಿ ಬಿರೇನ್ ಸಿಂಗ್ ಅವರೇ ಕಾರಣರಾಗಿದ್ದಾರೆ. ಅವರು ಮನಬಂದಂತೆ ತೆಗೆದುಕೊಂಡ ಕ್ರಮಗಳಿಂದಾಗಿ ರಾಜ್ಯವೇ ಹೊತ್ತಿ ಉರಿಯುತ್ತಿದೆ ಎಂದು ಇಬೋಬಿ ಸಿಂಗ್ ಆರೋಪಿಸಿದರು.

ಇದನ್ನೂ ಓದಿ: ಪ್ರಧಾನಿಯ ‘ಮನ್ ಕಿ ಬಾತ್‌’ನಲ್ಲಿ ಮಣಿಪುರ ಹಿಂಸಾಚಾರದ ಮಾತೇ ಇರಲಿಲ್ಲ: ಕಾಂಗ್ರೆಸ್ ಖಂಡನೆ

ಮನವಿ ಪತ್ರದಲ್ಲಿ ಏನಿದೆ?

* ಕುಕಿ ಬುಡಕಟ್ಟು ಸಮುದಾಯಕ್ಕೆ ಪ್ರತ್ಯೇಕ ಆಡಳಿತ ವ್ಯವಸ್ಥೆ ಕಲ್ಪಿಸಬೇಕು ಎಂಬ 10 ಮಂದಿ ಕುಕಿ ಶಾಸಕರ ಬೇಡಿಕೆಗೆ ವಿರೋಧ.

* ಮಣಿಪುರದ ಪ್ರತಿಯೊಂದು ಸಮುದಾಯದ ಅಹವಾಲು ಆಲಿಸಿ, ಪರಿಹಾರ ನೀಡಬೇಕು.

* ತಕ್ಷಣವೇ ಎಲ್ಲ ಸಶಸ್ತ್ರ ಗುಂಪುಗಳು ಆಯುಧಗಳನ್ನು ತೊರೆಯುವಂತೆ ಕ್ರಮ ತೆಗೆದುಕೊಳ್ಳಬೇಕು.

* ಈಗ ಘೋಷಿಸಿರುವ 101.75 ಕೋಟಿ ರೂ. ಮೊತ್ತದ ಪ್ಯಾಕೇಜ್ ಸಾಕಾಗುವುದಿಲ್ಲ. ಸಂತ್ರಸ್ತರ ಪುನರ್ವಸತಿ ಮತ್ತು ಜೀವನೋಪಾಯಕ್ಕಾಗಿ ಸೂಕ್ತ ಪ್ಯಾಕೇಜ್‌ ಘೋಷಿಸಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...