Homeಮುಖಪುಟಹಿಂಸಾಚಾರದಿಂದ ನಲುಗಿದ ಮಣಿಪುರ; ಅಸಡ್ಡೆಯ ಮೌನ ತಾಳಿರುವ ಪ್ರಧಾನಿ ಮೋದಿ: ವಿಪಕ್ಷಗಳ ಆರೋಪ

ಹಿಂಸಾಚಾರದಿಂದ ನಲುಗಿದ ಮಣಿಪುರ; ಅಸಡ್ಡೆಯ ಮೌನ ತಾಳಿರುವ ಪ್ರಧಾನಿ ಮೋದಿ: ವಿಪಕ್ಷಗಳ ಆರೋಪ

- Advertisement -
- Advertisement -

ಮಣಿಪುರದಲ್ಲಿ ಕಳೆದ ಹಲವು ದಿನಗಳಿಂದ ಹಿಂಸಾಚಾರ, ಜನರ ಸಾವು-ನೋವಿನಿಂದ ನಲುಗಿಹೋಗಿದೆ. ನೂರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ, ಸಾವಿರಾರು ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಆದರೆ ಈವರೆಗೂ ಈ ಬಗ್ಗೆ ಪ್ರಧಾನಿ ಮೋದಿ ಮಾತ್ರ ಒಂದೇ ಒಂದು ಮಾತು ಆಡಿಲ್ಲ, ಅಸಡ್ಡೆಯಿಂದ ಕೂಡಿದ ಮೌನ ತಾಳಿದ್ದಾರೆ. ಇದು ಮಣಿಪುರದ ಜನರ ಬಗ್ಗೆ ಮೋದಿ ಅವರಲ್ಲಿರುವ ಉದಾಸೀನತೆಯನ್ನು ಸ್ಪಷ್ಟವಾಗಿ ಹೇಳುತ್ತದೆ.. ಎಂದು 10 ವಿರೋಧ ಪಕ್ಷಗಳ ನಾಯಕರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆರೋಪ ಮಾಡಿದ್ದಾರೆ.

ಈ ಬಗ್ಗೆ ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಮಣಿಪುರ ಮಾಜಿ ಮುಖ್ಯಮಂತ್ರಿ ಇಬೋಬಿ ಸಿಂಗ್ ನವದೆಹಲಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿ ನಡೆಸಿ ಈ ಹಿಂಸಾಚಾರ ಕುರಿತ ಮನವಿ ಪತ್ರವನ್ನು ವಿರೋಧ ಪಕ್ಷಗಳ ನಾಯಕರು ಮಂಗಳವಾರ ಬಿಡುಗಡೆ ಮಾಡಿದರು. ಕಾಂಗ್ರೆಸ್, ಎಎಪಿ, ಟಿಎಂಸಿ, ಜೆಡಿಯು, ಸಿಪಿಎಂ, ಸಿಪಿಐ, ಶಿವಸೇನಾ (ಯುಬಿಟಿ), ಎನ್‌ಸಿಪಿ, ಆರ್‌ಎಸ್‌ಪಿ ಹಾಗೂ ಫಾರ್ವಡ್್ರ ಬ್ಲಾಕ್ ನಾಯಕರು ಈ ಮನವಿಪತ್ರಕ್ಕೆ ಸಹಿ ಹಾಕಿದ್ದಾರೆ.

ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ”ಮಣಿಪುರದಲ್ಲಿನ ಹಿಂಸಾಚಾರ ಕುರಿತ ಈ ಮನವಿಪತ್ರವನ್ನು ಅಮೆರಿಕ ಮತ್ತು ಈಜಿಪ್ಟ್ ಪ್ರವಾಸಕ್ಕೆ ತೆರಳುವ ಮುನ್ನವೇ, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಲ್ಲಿಸಲು ಮುಂದಾಗಿದ್ದೆವು. ಆದರೆ, ಪ್ರಧಾನಿಯ ಭೇಟಿಗೆ ಅವಕಾಶ ನೀಡದ ಕಾರಣ ಈ ಮನವಿಪತ್ರವನ್ನು ಬಿಡುಗಡೆ ಮಾಡಿದ್ದೇವೆ” ಎಂದು ಹೇಳಿದರು.

”ಪ್ರಧಾನಿ ಅವರನ್ನು ಭೇಟಿ ಮಾಡುವುದಕ್ಕಾಗಿ ನಾವು ಜೂನ್ 10ರಿಂದ ಕಾಯುತ್ತಿದ್ದೆವು. ತಮ್ಮನ್ನು ಭೇಟಿ ಮಾಡಲು ಅವರು 10 ನಿಮಿಷ ಸಮಯ ಕೊಡಬಹುದು ಎಂಬ ನಿರೀಕ್ಷೆ ಹೊಂದಿದ್ದೆವು. ಆದರೆ ಅವರು ನಮಗೆ ಅವಕಾಶ ನೀಡಲಿಲ್ಲ. ನಾವು ಸಣ್ಣ ರಾಜ್ಯಕ್ಕೆ ಸೇರಿದವರಾಗಿದ್ದು, ಏನೋ ಬೇಡಲು ಬಂದಿದ್ದಾರೆ ಎಂದು ಅವರು ಭಾವಿಸಿದ್ದಿರಬಹುದು. ಆದರೆ, ನಾವು ಭಿಕ್ಷುಕರಲ್ಲ. ಏನನ್ನೋ ಬೇಡುವುದಕ್ಕಾಗಿ ನಾವು ಇಲ್ಲಿಗೆ ಬಂದಿಲ್ಲ” ಎಂದು ಸಿಂಗ್ ಹೇಳಿದರು.

”ಮಣಿಪುರವನ್ನು ಭಾರತದ ಒಂದು ಭಾಗ ಎಂಬುದಾಗಿ ಅವರು ತಿಳಿದುಕೊಂಡಿದ್ದರೆ, ಆ ರಾಜ್ಯದಲ್ಲಿನ ಹಿಂಸಾಚಾರವನ್ನು ರಾಷ್ಟ್ರೀಯ ಸಮಸ್ಯೆ ಎಂಬುದಾಗಿ ಪರಿಗಣಿಸಬೇಕು” ಎಂದು ಆಗ್ರಹಿಸಿದರು.

‘ಮೇ 3ರಿಂದ ಮಣಿಪುರ ಹೊತ್ತಿ ಉರಿಯುತ್ತಿದೆ. ಹಿಂಸಾಚಾರ ತಡೆಗಟ್ಟುವಲ್ಲಿ ಡಬಲ್ ಎಂಜಿನ್ ಸರ್ಕಾರ ಅಸಮರ್ಥ ಎಂಬುದನ್ನು ಇದು ತೋರಿಸುತ್ತದೆ. ಮಾಹಿತಿ ಕೊರತೆಯೇ ಹಿಂಸಾಚಾರಕ್ಕೆ ಕಾರಣ ಎಂಬುದನ್ನು ಮುಖ್ಯಮಂತ್ರಿ ಎನ್.ಬಿರೇನ್‌ ಸಿಂಗ್‌ ಬಹಿರಂಗವಾಗಿಯೇ ಒಪ್ಪಿಕೊಂಡಿದ್ದಾರೆ. ಹೀಗಾಗಿ ಈ ವಿಷಯವಾಗಿ ಮೋದಿ ನೇತೃತ್ವದ ಸರ್ಕಾರ ಸೂಕ್ತ ಕ್ರಮ ತೆಗೆದುಕೊಳ್ಳಬೇಕು” ಎಂದು ಒತ್ತಾಯಿಸಿದರು.

ಮಣಿಪುರದಲ್ಲಿನ ಈ ಹಿಂಸಾಚಾರಕ್ಕೆ ಮುಖ್ಯಮಂತ್ರಿ ಬಿರೇನ್ ಸಿಂಗ್ ಅವರೇ ಕಾರಣರಾಗಿದ್ದಾರೆ. ಅವರು ಮನಬಂದಂತೆ ತೆಗೆದುಕೊಂಡ ಕ್ರಮಗಳಿಂದಾಗಿ ರಾಜ್ಯವೇ ಹೊತ್ತಿ ಉರಿಯುತ್ತಿದೆ ಎಂದು ಇಬೋಬಿ ಸಿಂಗ್ ಆರೋಪಿಸಿದರು.

ಇದನ್ನೂ ಓದಿ: ಪ್ರಧಾನಿಯ ‘ಮನ್ ಕಿ ಬಾತ್‌’ನಲ್ಲಿ ಮಣಿಪುರ ಹಿಂಸಾಚಾರದ ಮಾತೇ ಇರಲಿಲ್ಲ: ಕಾಂಗ್ರೆಸ್ ಖಂಡನೆ

ಮನವಿ ಪತ್ರದಲ್ಲಿ ಏನಿದೆ?

* ಕುಕಿ ಬುಡಕಟ್ಟು ಸಮುದಾಯಕ್ಕೆ ಪ್ರತ್ಯೇಕ ಆಡಳಿತ ವ್ಯವಸ್ಥೆ ಕಲ್ಪಿಸಬೇಕು ಎಂಬ 10 ಮಂದಿ ಕುಕಿ ಶಾಸಕರ ಬೇಡಿಕೆಗೆ ವಿರೋಧ.

* ಮಣಿಪುರದ ಪ್ರತಿಯೊಂದು ಸಮುದಾಯದ ಅಹವಾಲು ಆಲಿಸಿ, ಪರಿಹಾರ ನೀಡಬೇಕು.

* ತಕ್ಷಣವೇ ಎಲ್ಲ ಸಶಸ್ತ್ರ ಗುಂಪುಗಳು ಆಯುಧಗಳನ್ನು ತೊರೆಯುವಂತೆ ಕ್ರಮ ತೆಗೆದುಕೊಳ್ಳಬೇಕು.

* ಈಗ ಘೋಷಿಸಿರುವ 101.75 ಕೋಟಿ ರೂ. ಮೊತ್ತದ ಪ್ಯಾಕೇಜ್ ಸಾಕಾಗುವುದಿಲ್ಲ. ಸಂತ್ರಸ್ತರ ಪುನರ್ವಸತಿ ಮತ್ತು ಜೀವನೋಪಾಯಕ್ಕಾಗಿ ಸೂಕ್ತ ಪ್ಯಾಕೇಜ್‌ ಘೋಷಿಸಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...