Homeಮುಖಪುಟಹಿಂಸಾಚಾರದಿಂದ ನಲುಗಿದ ಮಣಿಪುರ; ಅಸಡ್ಡೆಯ ಮೌನ ತಾಳಿರುವ ಪ್ರಧಾನಿ ಮೋದಿ: ವಿಪಕ್ಷಗಳ ಆರೋಪ

ಹಿಂಸಾಚಾರದಿಂದ ನಲುಗಿದ ಮಣಿಪುರ; ಅಸಡ್ಡೆಯ ಮೌನ ತಾಳಿರುವ ಪ್ರಧಾನಿ ಮೋದಿ: ವಿಪಕ್ಷಗಳ ಆರೋಪ

- Advertisement -
- Advertisement -

ಮಣಿಪುರದಲ್ಲಿ ಕಳೆದ ಹಲವು ದಿನಗಳಿಂದ ಹಿಂಸಾಚಾರ, ಜನರ ಸಾವು-ನೋವಿನಿಂದ ನಲುಗಿಹೋಗಿದೆ. ನೂರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ, ಸಾವಿರಾರು ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಆದರೆ ಈವರೆಗೂ ಈ ಬಗ್ಗೆ ಪ್ರಧಾನಿ ಮೋದಿ ಮಾತ್ರ ಒಂದೇ ಒಂದು ಮಾತು ಆಡಿಲ್ಲ, ಅಸಡ್ಡೆಯಿಂದ ಕೂಡಿದ ಮೌನ ತಾಳಿದ್ದಾರೆ. ಇದು ಮಣಿಪುರದ ಜನರ ಬಗ್ಗೆ ಮೋದಿ ಅವರಲ್ಲಿರುವ ಉದಾಸೀನತೆಯನ್ನು ಸ್ಪಷ್ಟವಾಗಿ ಹೇಳುತ್ತದೆ.. ಎಂದು 10 ವಿರೋಧ ಪಕ್ಷಗಳ ನಾಯಕರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆರೋಪ ಮಾಡಿದ್ದಾರೆ.

ಈ ಬಗ್ಗೆ ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಮಣಿಪುರ ಮಾಜಿ ಮುಖ್ಯಮಂತ್ರಿ ಇಬೋಬಿ ಸಿಂಗ್ ನವದೆಹಲಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿ ನಡೆಸಿ ಈ ಹಿಂಸಾಚಾರ ಕುರಿತ ಮನವಿ ಪತ್ರವನ್ನು ವಿರೋಧ ಪಕ್ಷಗಳ ನಾಯಕರು ಮಂಗಳವಾರ ಬಿಡುಗಡೆ ಮಾಡಿದರು. ಕಾಂಗ್ರೆಸ್, ಎಎಪಿ, ಟಿಎಂಸಿ, ಜೆಡಿಯು, ಸಿಪಿಎಂ, ಸಿಪಿಐ, ಶಿವಸೇನಾ (ಯುಬಿಟಿ), ಎನ್‌ಸಿಪಿ, ಆರ್‌ಎಸ್‌ಪಿ ಹಾಗೂ ಫಾರ್ವಡ್್ರ ಬ್ಲಾಕ್ ನಾಯಕರು ಈ ಮನವಿಪತ್ರಕ್ಕೆ ಸಹಿ ಹಾಕಿದ್ದಾರೆ.

ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ”ಮಣಿಪುರದಲ್ಲಿನ ಹಿಂಸಾಚಾರ ಕುರಿತ ಈ ಮನವಿಪತ್ರವನ್ನು ಅಮೆರಿಕ ಮತ್ತು ಈಜಿಪ್ಟ್ ಪ್ರವಾಸಕ್ಕೆ ತೆರಳುವ ಮುನ್ನವೇ, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಲ್ಲಿಸಲು ಮುಂದಾಗಿದ್ದೆವು. ಆದರೆ, ಪ್ರಧಾನಿಯ ಭೇಟಿಗೆ ಅವಕಾಶ ನೀಡದ ಕಾರಣ ಈ ಮನವಿಪತ್ರವನ್ನು ಬಿಡುಗಡೆ ಮಾಡಿದ್ದೇವೆ” ಎಂದು ಹೇಳಿದರು.

”ಪ್ರಧಾನಿ ಅವರನ್ನು ಭೇಟಿ ಮಾಡುವುದಕ್ಕಾಗಿ ನಾವು ಜೂನ್ 10ರಿಂದ ಕಾಯುತ್ತಿದ್ದೆವು. ತಮ್ಮನ್ನು ಭೇಟಿ ಮಾಡಲು ಅವರು 10 ನಿಮಿಷ ಸಮಯ ಕೊಡಬಹುದು ಎಂಬ ನಿರೀಕ್ಷೆ ಹೊಂದಿದ್ದೆವು. ಆದರೆ ಅವರು ನಮಗೆ ಅವಕಾಶ ನೀಡಲಿಲ್ಲ. ನಾವು ಸಣ್ಣ ರಾಜ್ಯಕ್ಕೆ ಸೇರಿದವರಾಗಿದ್ದು, ಏನೋ ಬೇಡಲು ಬಂದಿದ್ದಾರೆ ಎಂದು ಅವರು ಭಾವಿಸಿದ್ದಿರಬಹುದು. ಆದರೆ, ನಾವು ಭಿಕ್ಷುಕರಲ್ಲ. ಏನನ್ನೋ ಬೇಡುವುದಕ್ಕಾಗಿ ನಾವು ಇಲ್ಲಿಗೆ ಬಂದಿಲ್ಲ” ಎಂದು ಸಿಂಗ್ ಹೇಳಿದರು.

”ಮಣಿಪುರವನ್ನು ಭಾರತದ ಒಂದು ಭಾಗ ಎಂಬುದಾಗಿ ಅವರು ತಿಳಿದುಕೊಂಡಿದ್ದರೆ, ಆ ರಾಜ್ಯದಲ್ಲಿನ ಹಿಂಸಾಚಾರವನ್ನು ರಾಷ್ಟ್ರೀಯ ಸಮಸ್ಯೆ ಎಂಬುದಾಗಿ ಪರಿಗಣಿಸಬೇಕು” ಎಂದು ಆಗ್ರಹಿಸಿದರು.

‘ಮೇ 3ರಿಂದ ಮಣಿಪುರ ಹೊತ್ತಿ ಉರಿಯುತ್ತಿದೆ. ಹಿಂಸಾಚಾರ ತಡೆಗಟ್ಟುವಲ್ಲಿ ಡಬಲ್ ಎಂಜಿನ್ ಸರ್ಕಾರ ಅಸಮರ್ಥ ಎಂಬುದನ್ನು ಇದು ತೋರಿಸುತ್ತದೆ. ಮಾಹಿತಿ ಕೊರತೆಯೇ ಹಿಂಸಾಚಾರಕ್ಕೆ ಕಾರಣ ಎಂಬುದನ್ನು ಮುಖ್ಯಮಂತ್ರಿ ಎನ್.ಬಿರೇನ್‌ ಸಿಂಗ್‌ ಬಹಿರಂಗವಾಗಿಯೇ ಒಪ್ಪಿಕೊಂಡಿದ್ದಾರೆ. ಹೀಗಾಗಿ ಈ ವಿಷಯವಾಗಿ ಮೋದಿ ನೇತೃತ್ವದ ಸರ್ಕಾರ ಸೂಕ್ತ ಕ್ರಮ ತೆಗೆದುಕೊಳ್ಳಬೇಕು” ಎಂದು ಒತ್ತಾಯಿಸಿದರು.

ಮಣಿಪುರದಲ್ಲಿನ ಈ ಹಿಂಸಾಚಾರಕ್ಕೆ ಮುಖ್ಯಮಂತ್ರಿ ಬಿರೇನ್ ಸಿಂಗ್ ಅವರೇ ಕಾರಣರಾಗಿದ್ದಾರೆ. ಅವರು ಮನಬಂದಂತೆ ತೆಗೆದುಕೊಂಡ ಕ್ರಮಗಳಿಂದಾಗಿ ರಾಜ್ಯವೇ ಹೊತ್ತಿ ಉರಿಯುತ್ತಿದೆ ಎಂದು ಇಬೋಬಿ ಸಿಂಗ್ ಆರೋಪಿಸಿದರು.

ಇದನ್ನೂ ಓದಿ: ಪ್ರಧಾನಿಯ ‘ಮನ್ ಕಿ ಬಾತ್‌’ನಲ್ಲಿ ಮಣಿಪುರ ಹಿಂಸಾಚಾರದ ಮಾತೇ ಇರಲಿಲ್ಲ: ಕಾಂಗ್ರೆಸ್ ಖಂಡನೆ

ಮನವಿ ಪತ್ರದಲ್ಲಿ ಏನಿದೆ?

* ಕುಕಿ ಬುಡಕಟ್ಟು ಸಮುದಾಯಕ್ಕೆ ಪ್ರತ್ಯೇಕ ಆಡಳಿತ ವ್ಯವಸ್ಥೆ ಕಲ್ಪಿಸಬೇಕು ಎಂಬ 10 ಮಂದಿ ಕುಕಿ ಶಾಸಕರ ಬೇಡಿಕೆಗೆ ವಿರೋಧ.

* ಮಣಿಪುರದ ಪ್ರತಿಯೊಂದು ಸಮುದಾಯದ ಅಹವಾಲು ಆಲಿಸಿ, ಪರಿಹಾರ ನೀಡಬೇಕು.

* ತಕ್ಷಣವೇ ಎಲ್ಲ ಸಶಸ್ತ್ರ ಗುಂಪುಗಳು ಆಯುಧಗಳನ್ನು ತೊರೆಯುವಂತೆ ಕ್ರಮ ತೆಗೆದುಕೊಳ್ಳಬೇಕು.

* ಈಗ ಘೋಷಿಸಿರುವ 101.75 ಕೋಟಿ ರೂ. ಮೊತ್ತದ ಪ್ಯಾಕೇಜ್ ಸಾಕಾಗುವುದಿಲ್ಲ. ಸಂತ್ರಸ್ತರ ಪುನರ್ವಸತಿ ಮತ್ತು ಜೀವನೋಪಾಯಕ್ಕಾಗಿ ಸೂಕ್ತ ಪ್ಯಾಕೇಜ್‌ ಘೋಷಿಸಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...