Homeಮುಖಪುಟಹಿಂಸಾಚಾರದಿಂದ ನಲುಗಿದ ಮಣಿಪುರ; ಅಸಡ್ಡೆಯ ಮೌನ ತಾಳಿರುವ ಪ್ರಧಾನಿ ಮೋದಿ: ವಿಪಕ್ಷಗಳ ಆರೋಪ

ಹಿಂಸಾಚಾರದಿಂದ ನಲುಗಿದ ಮಣಿಪುರ; ಅಸಡ್ಡೆಯ ಮೌನ ತಾಳಿರುವ ಪ್ರಧಾನಿ ಮೋದಿ: ವಿಪಕ್ಷಗಳ ಆರೋಪ

- Advertisement -
- Advertisement -

ಮಣಿಪುರದಲ್ಲಿ ಕಳೆದ ಹಲವು ದಿನಗಳಿಂದ ಹಿಂಸಾಚಾರ, ಜನರ ಸಾವು-ನೋವಿನಿಂದ ನಲುಗಿಹೋಗಿದೆ. ನೂರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ, ಸಾವಿರಾರು ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಆದರೆ ಈವರೆಗೂ ಈ ಬಗ್ಗೆ ಪ್ರಧಾನಿ ಮೋದಿ ಮಾತ್ರ ಒಂದೇ ಒಂದು ಮಾತು ಆಡಿಲ್ಲ, ಅಸಡ್ಡೆಯಿಂದ ಕೂಡಿದ ಮೌನ ತಾಳಿದ್ದಾರೆ. ಇದು ಮಣಿಪುರದ ಜನರ ಬಗ್ಗೆ ಮೋದಿ ಅವರಲ್ಲಿರುವ ಉದಾಸೀನತೆಯನ್ನು ಸ್ಪಷ್ಟವಾಗಿ ಹೇಳುತ್ತದೆ.. ಎಂದು 10 ವಿರೋಧ ಪಕ್ಷಗಳ ನಾಯಕರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆರೋಪ ಮಾಡಿದ್ದಾರೆ.

ಈ ಬಗ್ಗೆ ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಮಣಿಪುರ ಮಾಜಿ ಮುಖ್ಯಮಂತ್ರಿ ಇಬೋಬಿ ಸಿಂಗ್ ನವದೆಹಲಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿ ನಡೆಸಿ ಈ ಹಿಂಸಾಚಾರ ಕುರಿತ ಮನವಿ ಪತ್ರವನ್ನು ವಿರೋಧ ಪಕ್ಷಗಳ ನಾಯಕರು ಮಂಗಳವಾರ ಬಿಡುಗಡೆ ಮಾಡಿದರು. ಕಾಂಗ್ರೆಸ್, ಎಎಪಿ, ಟಿಎಂಸಿ, ಜೆಡಿಯು, ಸಿಪಿಎಂ, ಸಿಪಿಐ, ಶಿವಸೇನಾ (ಯುಬಿಟಿ), ಎನ್‌ಸಿಪಿ, ಆರ್‌ಎಸ್‌ಪಿ ಹಾಗೂ ಫಾರ್ವಡ್್ರ ಬ್ಲಾಕ್ ನಾಯಕರು ಈ ಮನವಿಪತ್ರಕ್ಕೆ ಸಹಿ ಹಾಕಿದ್ದಾರೆ.

ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ”ಮಣಿಪುರದಲ್ಲಿನ ಹಿಂಸಾಚಾರ ಕುರಿತ ಈ ಮನವಿಪತ್ರವನ್ನು ಅಮೆರಿಕ ಮತ್ತು ಈಜಿಪ್ಟ್ ಪ್ರವಾಸಕ್ಕೆ ತೆರಳುವ ಮುನ್ನವೇ, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಲ್ಲಿಸಲು ಮುಂದಾಗಿದ್ದೆವು. ಆದರೆ, ಪ್ರಧಾನಿಯ ಭೇಟಿಗೆ ಅವಕಾಶ ನೀಡದ ಕಾರಣ ಈ ಮನವಿಪತ್ರವನ್ನು ಬಿಡುಗಡೆ ಮಾಡಿದ್ದೇವೆ” ಎಂದು ಹೇಳಿದರು.

”ಪ್ರಧಾನಿ ಅವರನ್ನು ಭೇಟಿ ಮಾಡುವುದಕ್ಕಾಗಿ ನಾವು ಜೂನ್ 10ರಿಂದ ಕಾಯುತ್ತಿದ್ದೆವು. ತಮ್ಮನ್ನು ಭೇಟಿ ಮಾಡಲು ಅವರು 10 ನಿಮಿಷ ಸಮಯ ಕೊಡಬಹುದು ಎಂಬ ನಿರೀಕ್ಷೆ ಹೊಂದಿದ್ದೆವು. ಆದರೆ ಅವರು ನಮಗೆ ಅವಕಾಶ ನೀಡಲಿಲ್ಲ. ನಾವು ಸಣ್ಣ ರಾಜ್ಯಕ್ಕೆ ಸೇರಿದವರಾಗಿದ್ದು, ಏನೋ ಬೇಡಲು ಬಂದಿದ್ದಾರೆ ಎಂದು ಅವರು ಭಾವಿಸಿದ್ದಿರಬಹುದು. ಆದರೆ, ನಾವು ಭಿಕ್ಷುಕರಲ್ಲ. ಏನನ್ನೋ ಬೇಡುವುದಕ್ಕಾಗಿ ನಾವು ಇಲ್ಲಿಗೆ ಬಂದಿಲ್ಲ” ಎಂದು ಸಿಂಗ್ ಹೇಳಿದರು.

”ಮಣಿಪುರವನ್ನು ಭಾರತದ ಒಂದು ಭಾಗ ಎಂಬುದಾಗಿ ಅವರು ತಿಳಿದುಕೊಂಡಿದ್ದರೆ, ಆ ರಾಜ್ಯದಲ್ಲಿನ ಹಿಂಸಾಚಾರವನ್ನು ರಾಷ್ಟ್ರೀಯ ಸಮಸ್ಯೆ ಎಂಬುದಾಗಿ ಪರಿಗಣಿಸಬೇಕು” ಎಂದು ಆಗ್ರಹಿಸಿದರು.

‘ಮೇ 3ರಿಂದ ಮಣಿಪುರ ಹೊತ್ತಿ ಉರಿಯುತ್ತಿದೆ. ಹಿಂಸಾಚಾರ ತಡೆಗಟ್ಟುವಲ್ಲಿ ಡಬಲ್ ಎಂಜಿನ್ ಸರ್ಕಾರ ಅಸಮರ್ಥ ಎಂಬುದನ್ನು ಇದು ತೋರಿಸುತ್ತದೆ. ಮಾಹಿತಿ ಕೊರತೆಯೇ ಹಿಂಸಾಚಾರಕ್ಕೆ ಕಾರಣ ಎಂಬುದನ್ನು ಮುಖ್ಯಮಂತ್ರಿ ಎನ್.ಬಿರೇನ್‌ ಸಿಂಗ್‌ ಬಹಿರಂಗವಾಗಿಯೇ ಒಪ್ಪಿಕೊಂಡಿದ್ದಾರೆ. ಹೀಗಾಗಿ ಈ ವಿಷಯವಾಗಿ ಮೋದಿ ನೇತೃತ್ವದ ಸರ್ಕಾರ ಸೂಕ್ತ ಕ್ರಮ ತೆಗೆದುಕೊಳ್ಳಬೇಕು” ಎಂದು ಒತ್ತಾಯಿಸಿದರು.

ಮಣಿಪುರದಲ್ಲಿನ ಈ ಹಿಂಸಾಚಾರಕ್ಕೆ ಮುಖ್ಯಮಂತ್ರಿ ಬಿರೇನ್ ಸಿಂಗ್ ಅವರೇ ಕಾರಣರಾಗಿದ್ದಾರೆ. ಅವರು ಮನಬಂದಂತೆ ತೆಗೆದುಕೊಂಡ ಕ್ರಮಗಳಿಂದಾಗಿ ರಾಜ್ಯವೇ ಹೊತ್ತಿ ಉರಿಯುತ್ತಿದೆ ಎಂದು ಇಬೋಬಿ ಸಿಂಗ್ ಆರೋಪಿಸಿದರು.

ಇದನ್ನೂ ಓದಿ: ಪ್ರಧಾನಿಯ ‘ಮನ್ ಕಿ ಬಾತ್‌’ನಲ್ಲಿ ಮಣಿಪುರ ಹಿಂಸಾಚಾರದ ಮಾತೇ ಇರಲಿಲ್ಲ: ಕಾಂಗ್ರೆಸ್ ಖಂಡನೆ

ಮನವಿ ಪತ್ರದಲ್ಲಿ ಏನಿದೆ?

* ಕುಕಿ ಬುಡಕಟ್ಟು ಸಮುದಾಯಕ್ಕೆ ಪ್ರತ್ಯೇಕ ಆಡಳಿತ ವ್ಯವಸ್ಥೆ ಕಲ್ಪಿಸಬೇಕು ಎಂಬ 10 ಮಂದಿ ಕುಕಿ ಶಾಸಕರ ಬೇಡಿಕೆಗೆ ವಿರೋಧ.

* ಮಣಿಪುರದ ಪ್ರತಿಯೊಂದು ಸಮುದಾಯದ ಅಹವಾಲು ಆಲಿಸಿ, ಪರಿಹಾರ ನೀಡಬೇಕು.

* ತಕ್ಷಣವೇ ಎಲ್ಲ ಸಶಸ್ತ್ರ ಗುಂಪುಗಳು ಆಯುಧಗಳನ್ನು ತೊರೆಯುವಂತೆ ಕ್ರಮ ತೆಗೆದುಕೊಳ್ಳಬೇಕು.

* ಈಗ ಘೋಷಿಸಿರುವ 101.75 ಕೋಟಿ ರೂ. ಮೊತ್ತದ ಪ್ಯಾಕೇಜ್ ಸಾಕಾಗುವುದಿಲ್ಲ. ಸಂತ್ರಸ್ತರ ಪುನರ್ವಸತಿ ಮತ್ತು ಜೀವನೋಪಾಯಕ್ಕಾಗಿ ಸೂಕ್ತ ಪ್ಯಾಕೇಜ್‌ ಘೋಷಿಸಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎನ್‌ಡಿಎ ಸೇರಿದರೆ ಪ್ರಧಾನಿ ಮೋದಿಯಿಂದ ಕೇರಳಕ್ಕೆ ದೊಡ್ಡ ಪ್ಯಾಕೇಜ್: ಪಿಣರಾಯಿ ವಿಜಯನ್‌ಗೆ ಆಫರ್ ಕೊಟ್ಟ ಅಠಾವಳೆ

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಬಿಜೆಪಿ ನೇತೃತ್ವದ ಎನ್‌ಡಿಎ ಸೇರಬೇಕೆಂದು ಕೇಂದ್ರ ರಾಜ್ಯ ಸಚಿವ ರಾಮದಾಸ್ ಬಂಡು ಅಠಾವಳೆ ಬುಧವಾರ ಸಲಹೆ ನೀಡಿದ್ದಾರೆ. ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವ...

ಸದನದಲ್ಲೇ ನೀಲಿ ಚಿತ್ರ ನೋಡಿ ರಾಜ್ಯದ ಮಾನ ಕಳೆದವರು ಯಾವ ಪಕ್ಷದವರು? ಬಿಜೆಪಿಗೆ ಹರಿಪ್ರಸಾದ್ ತಿರುಗೇಟು

ಸದನದ ಶಿಸ್ತು, ಘನತೆ, ಗೌರವದ ಬಗ್ಗೆ ಮಾತನಾಡಲು ಬಿಜೆಪಿಯವರಿಗೆ ಕಿಂಚಿತ್ತಾದರೂ ನೈತಿಕತೆ ಇದೆಯೇ? ಎಂದು ವಿಧಾನಪರಿಷತ್ ಸದಸ್ಯ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ ಹರಿಪ್ರಸಾದ್ ಪ್ರಶ್ನಿಸಿದ್ದಾರೆ. ಗುರುವಾರ (ಜ.22) ವಿಶೇಷ ಅಧಿವೇಶನದ ವೇಳೆ...

ಆಂಧ್ರದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆ ನಿಷೇಧ?

ಕಳೆದ ತಿಂಗಳು ಆಸ್ಟ್ರೇಲಿಯಾ ಜಾರಿಗೆ ತಂದಂತೆಯೇ, 16 ವರ್ಷದೊಳಗಿನ ಮಕ್ಕಳಿಗಾಗಿ ಸರ್ಕಾರವು ಸಾಮಾಜಿಕ ಮಾಧ್ಯಮವನ್ನು ನಿಷೇಧಿಸಲು ಯೋಜಿಸುತ್ತಿದೆ ಎಂದು ಆಂಧ್ರಪ್ರದೇಶ ಸಚಿವ ನಾರಾ ಲೋಕೇಶ್ ಬಹಿರಂಗಪಡಿಸಿದ್ದಾರೆ. ದಾವೋಸ್‌ನಲ್ಲಿ ನಡೆದ ವಿಶ್ವ ಆರ್ಥಿಕ ವೇದಿಕೆ...

ಜಾರ್ಖಂಡ್| ಚೈಬಾಸಾ ಎನ್‌ಕೌಂಟರ್‌; ಕುಖ್ಯಾತ ಮಾವೋವಾದಿ ನಾಯಕ ‘ಅನಲ್ ದಾ’ ಸೇರಿ 8 ನಕ್ಸಲರ ಹತ್ಯೆ

ಜಾರ್ಖಂಡ್ ಪೊಲೀಸರು ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್‌) ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ಪ್ರಮುಖ ಯಶಸ್ಸನ್ನು ಸಾಧಿಸಿದೆ. ಚೈಬಾಸಾ ಜಿಲ್ಲೆಯಲ್ಲಿ ನಡೆದ ಭೀಕರ ಎನ್‌ಕೌಂಟರ್‌ನಲ್ಲಿ, ಭದ್ರತಾ ಪಡೆಗಳು 8 ನಕ್ಸಲರನ್ನು ಕೊಂದಿವೆ....

‘ಕರ್ನಾಟಕವನ್ನು ಎಲ್ಲಾ ರೀತಿಯಲ್ಲಿ ಕಡೆಗಣಿಸುತ್ತಿದ್ದ ಬಿಜೆಪಿ ಈಗ ರಾಜ್ಯಪಾಲರ ಮೂಲಕವೇ ಕನ್ನಡಿಗರನ್ನು ಅವಮಾನಿಸಿದೆ: ಪ್ರಿಯಾಂಕ್ ಖರ್ಗೆ

ಬೆಂಗಳೂರು: ಬಿಜೆಪಿ ಕನ್ನಡಿಗರನ್ನು ಅವಮಾನಿಸುವ ಪ್ರಕ್ರಿಯೆ ಮುಂದುವರೆದಿದೆ ಎಂದು ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ.  2026 ಜನವರಿ 22ರ, ಗುರುವಾರ ಸದನದಲ್ಲಿ ನಡೆದ ಬೆಳವಣಿಗೆಗಳ ಕುರಿತು ತಮ್ಮ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಖರ್ಗೆ, ‘ಸರ್ಕಾರದ ಭಾಷಣವನ್ನು...

ಭೋಜಶಾಲಾ-ಕಮಾಲ್ ಮೌಲಾ ಮಸೀದಿ ವಿವಾದ : ವಸಂತ ಪಂಚಮಿ ಪೂಜೆ, ಜುಮಾ ನಮಾಜ್ ಶಾಂತಿಯುತವಾಗಿ ನಡೆಸಲು ಸುಪ್ರೀಂ ಆದೇಶ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಭೋಜ ಶಾಲಾ-ಕಮಾಲ್ ಮೌಲಾ ಸಂಕೀರ್ಣದಲ್ಲಿ ವಸಂತ ಪಂಚಮಿ ಪೂಜೆ ಮತ್ತು ಶುಕ್ರವಾರದ ಜುಮಾ ನಮಾಝ್ ಎರಡನ್ನೂ ಶಾಂತಿಯುತವಾಗಿ ನಡೆಸುವಂತೆ ನೋಡಿಕೊಳ್ಳಲು ಸುಪ್ರೀಂ ಕೋರ್ಟ್ ಗುರುವಾರ (ಜ.22) ನಿರ್ದೇಶನಗಳನ್ನು ನೀಡಿದೆ. ಭೋಜ...

ಜಮ್ಮು-ಕಾಶ್ಮೀರ| 200 ಅಡಿ ಆಳದ ಕಂದಕಕ್ಕೆ ಉರುಳಿದ ವಾಹನ; 10 ಜನ ಸೇನಾ ಸಿಬ್ಬಂದಿ ಸಾವು

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾ ಪ್ರದೇಶದಲ್ಲಿ 200 ಅಡಿ ಆಳದ ಕಂದಕಕ್ಕೆ ವಾಹನ ಉರುಳಿ 10 ಸೇನಾ ಸಿಬ್ಬಂದಿ ಸಾವನ್ನಪ್ಪಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ. ಒಟ್ಟು 17 ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಸೇನಾ...

ಉತ್ತರ ಪ್ರದೇಶ ಮರ್ಯಾದೆಗೇಡು ಹತ್ಯೆ; ಅಂತರ್ಧರ್ಮೀಯ ಜೋಡಿಯನ್ನು ಕೊಂದ ಯುವತಿ ಸಹೋದರರು

ಉತ್ತರ ಪ್ರದೇಶದ ಮೊರಾದಾಬಾದ್‌ನ ಕಾಡಿನಲ್ಲಿ ಅಂತರ್ಧರ್ಮೀಯ ಜೋಡಿಯ ಶವ ಪತ್ತೆಯಾಗಿದ್ದು, ಪ್ರಾಥಮಿಕ ತನಿಖೆಯಲ್ಲಿ ಆಕೆಯ ಸಹೋದರರು ಮರ್ಯಾದೆಗೇಡು ಹತ್ಯೆ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಯುವತಿಯನ್ನು 19 ವರ್ಷದ ಕಾಜಲ್ ಎಂದು ಗುರುತಿಸಲಾಗಿದ್ದು, ಮೃತ...

ತೀವ್ರ ವಿರೋಧದ ನಂತರ ಇಸ್ಲಾಮೋಫೋಬಿಕ್ ಹೇಳಿಕೆ ಹಿಂಪಡೆದು, ಕ್ಷಮೆಯಾಚಿಸಿದ ಕೇರಳದ ಸಿಪಿಐ(ಎಂ) ಸಚಿವ ಸಾಜಿ ಚೆರಿಯನ್

ಇತ್ತೀಚಿನ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಮುಸ್ಲಿಂ ವಿಜೇತರ ಬಗ್ಗೆ ತಮ್ಮ ಇಸ್ಲಾಮೋಫೋಬಿಕ್ ಹೇಳಿಕೆಗಳನ್ನು ನೀಡಿದ್ದ ಸಿಪಿಐ(ಎಂ) ಹಿರಿಯ ನಾಯಕ ಮತ್ತು ಕೇರಳ ಸಚಿವ ಸಾಜಿ ಚೆರಿಯನ್ ಬುಧವಾರ ತಮ್ಮ ಹೇಳಿಕೆಯನ್ನು  ಹಿಂತೆಗೆದುಕೊಂಡಿದ್ದಾರೆ. ಪಕ್ಷ,...

ರಾಜ್ಯಪಾಲರಿಂದ ಸಂವಿಧಾನದ ವಿಧಿಗಳ ಉಲ್ಲಂಘನೆ; ಜನಪ್ರತಿನಿಧಿಗಳ ಸಭೆಯನ್ನು ಅವಮಾನಿಸಿದ್ದಾರೆ: ಸಿಎಂ ಸಿದ್ದರಾಮಯ್ಯ

"ವರ್ಷದ ಮೊದಲ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರು ಸಚಿವ ಸಂಪುಟ ಸಿದ್ಧಪಡಿಸಿದ ಭಾಷಣವನ್ನು ಓದದೇ, ಸಂವಿಧಾನದ ವಿಧಿಗಳನ್ನು ಉಲ್ಲಂಘಿಸಿದ್ದಾರೆ. ಅವರ ಈ ನಡೆ ಜನಪ್ರತಿನಿಧಿಗಳ ಸಭೆಗೆ ಮಾಡಿದ ಅವಮಾನ. ಇದನ್ನು ನಾವು ಖಂಡಿಸುತ್ತೇವೆ. ಈ...