Homeಮುಖಪುಟಹಿಂಸಾಚಾರದಿಂದ ನಲುಗಿದ ಮಣಿಪುರ; ಅಸಡ್ಡೆಯ ಮೌನ ತಾಳಿರುವ ಪ್ರಧಾನಿ ಮೋದಿ: ವಿಪಕ್ಷಗಳ ಆರೋಪ

ಹಿಂಸಾಚಾರದಿಂದ ನಲುಗಿದ ಮಣಿಪುರ; ಅಸಡ್ಡೆಯ ಮೌನ ತಾಳಿರುವ ಪ್ರಧಾನಿ ಮೋದಿ: ವಿಪಕ್ಷಗಳ ಆರೋಪ

- Advertisement -
- Advertisement -

ಮಣಿಪುರದಲ್ಲಿ ಕಳೆದ ಹಲವು ದಿನಗಳಿಂದ ಹಿಂಸಾಚಾರ, ಜನರ ಸಾವು-ನೋವಿನಿಂದ ನಲುಗಿಹೋಗಿದೆ. ನೂರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ, ಸಾವಿರಾರು ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಆದರೆ ಈವರೆಗೂ ಈ ಬಗ್ಗೆ ಪ್ರಧಾನಿ ಮೋದಿ ಮಾತ್ರ ಒಂದೇ ಒಂದು ಮಾತು ಆಡಿಲ್ಲ, ಅಸಡ್ಡೆಯಿಂದ ಕೂಡಿದ ಮೌನ ತಾಳಿದ್ದಾರೆ. ಇದು ಮಣಿಪುರದ ಜನರ ಬಗ್ಗೆ ಮೋದಿ ಅವರಲ್ಲಿರುವ ಉದಾಸೀನತೆಯನ್ನು ಸ್ಪಷ್ಟವಾಗಿ ಹೇಳುತ್ತದೆ.. ಎಂದು 10 ವಿರೋಧ ಪಕ್ಷಗಳ ನಾಯಕರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆರೋಪ ಮಾಡಿದ್ದಾರೆ.

ಈ ಬಗ್ಗೆ ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಮಣಿಪುರ ಮಾಜಿ ಮುಖ್ಯಮಂತ್ರಿ ಇಬೋಬಿ ಸಿಂಗ್ ನವದೆಹಲಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿ ನಡೆಸಿ ಈ ಹಿಂಸಾಚಾರ ಕುರಿತ ಮನವಿ ಪತ್ರವನ್ನು ವಿರೋಧ ಪಕ್ಷಗಳ ನಾಯಕರು ಮಂಗಳವಾರ ಬಿಡುಗಡೆ ಮಾಡಿದರು. ಕಾಂಗ್ರೆಸ್, ಎಎಪಿ, ಟಿಎಂಸಿ, ಜೆಡಿಯು, ಸಿಪಿಎಂ, ಸಿಪಿಐ, ಶಿವಸೇನಾ (ಯುಬಿಟಿ), ಎನ್‌ಸಿಪಿ, ಆರ್‌ಎಸ್‌ಪಿ ಹಾಗೂ ಫಾರ್ವಡ್್ರ ಬ್ಲಾಕ್ ನಾಯಕರು ಈ ಮನವಿಪತ್ರಕ್ಕೆ ಸಹಿ ಹಾಕಿದ್ದಾರೆ.

ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ”ಮಣಿಪುರದಲ್ಲಿನ ಹಿಂಸಾಚಾರ ಕುರಿತ ಈ ಮನವಿಪತ್ರವನ್ನು ಅಮೆರಿಕ ಮತ್ತು ಈಜಿಪ್ಟ್ ಪ್ರವಾಸಕ್ಕೆ ತೆರಳುವ ಮುನ್ನವೇ, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಲ್ಲಿಸಲು ಮುಂದಾಗಿದ್ದೆವು. ಆದರೆ, ಪ್ರಧಾನಿಯ ಭೇಟಿಗೆ ಅವಕಾಶ ನೀಡದ ಕಾರಣ ಈ ಮನವಿಪತ್ರವನ್ನು ಬಿಡುಗಡೆ ಮಾಡಿದ್ದೇವೆ” ಎಂದು ಹೇಳಿದರು.

”ಪ್ರಧಾನಿ ಅವರನ್ನು ಭೇಟಿ ಮಾಡುವುದಕ್ಕಾಗಿ ನಾವು ಜೂನ್ 10ರಿಂದ ಕಾಯುತ್ತಿದ್ದೆವು. ತಮ್ಮನ್ನು ಭೇಟಿ ಮಾಡಲು ಅವರು 10 ನಿಮಿಷ ಸಮಯ ಕೊಡಬಹುದು ಎಂಬ ನಿರೀಕ್ಷೆ ಹೊಂದಿದ್ದೆವು. ಆದರೆ ಅವರು ನಮಗೆ ಅವಕಾಶ ನೀಡಲಿಲ್ಲ. ನಾವು ಸಣ್ಣ ರಾಜ್ಯಕ್ಕೆ ಸೇರಿದವರಾಗಿದ್ದು, ಏನೋ ಬೇಡಲು ಬಂದಿದ್ದಾರೆ ಎಂದು ಅವರು ಭಾವಿಸಿದ್ದಿರಬಹುದು. ಆದರೆ, ನಾವು ಭಿಕ್ಷುಕರಲ್ಲ. ಏನನ್ನೋ ಬೇಡುವುದಕ್ಕಾಗಿ ನಾವು ಇಲ್ಲಿಗೆ ಬಂದಿಲ್ಲ” ಎಂದು ಸಿಂಗ್ ಹೇಳಿದರು.

”ಮಣಿಪುರವನ್ನು ಭಾರತದ ಒಂದು ಭಾಗ ಎಂಬುದಾಗಿ ಅವರು ತಿಳಿದುಕೊಂಡಿದ್ದರೆ, ಆ ರಾಜ್ಯದಲ್ಲಿನ ಹಿಂಸಾಚಾರವನ್ನು ರಾಷ್ಟ್ರೀಯ ಸಮಸ್ಯೆ ಎಂಬುದಾಗಿ ಪರಿಗಣಿಸಬೇಕು” ಎಂದು ಆಗ್ರಹಿಸಿದರು.

‘ಮೇ 3ರಿಂದ ಮಣಿಪುರ ಹೊತ್ತಿ ಉರಿಯುತ್ತಿದೆ. ಹಿಂಸಾಚಾರ ತಡೆಗಟ್ಟುವಲ್ಲಿ ಡಬಲ್ ಎಂಜಿನ್ ಸರ್ಕಾರ ಅಸಮರ್ಥ ಎಂಬುದನ್ನು ಇದು ತೋರಿಸುತ್ತದೆ. ಮಾಹಿತಿ ಕೊರತೆಯೇ ಹಿಂಸಾಚಾರಕ್ಕೆ ಕಾರಣ ಎಂಬುದನ್ನು ಮುಖ್ಯಮಂತ್ರಿ ಎನ್.ಬಿರೇನ್‌ ಸಿಂಗ್‌ ಬಹಿರಂಗವಾಗಿಯೇ ಒಪ್ಪಿಕೊಂಡಿದ್ದಾರೆ. ಹೀಗಾಗಿ ಈ ವಿಷಯವಾಗಿ ಮೋದಿ ನೇತೃತ್ವದ ಸರ್ಕಾರ ಸೂಕ್ತ ಕ್ರಮ ತೆಗೆದುಕೊಳ್ಳಬೇಕು” ಎಂದು ಒತ್ತಾಯಿಸಿದರು.

ಮಣಿಪುರದಲ್ಲಿನ ಈ ಹಿಂಸಾಚಾರಕ್ಕೆ ಮುಖ್ಯಮಂತ್ರಿ ಬಿರೇನ್ ಸಿಂಗ್ ಅವರೇ ಕಾರಣರಾಗಿದ್ದಾರೆ. ಅವರು ಮನಬಂದಂತೆ ತೆಗೆದುಕೊಂಡ ಕ್ರಮಗಳಿಂದಾಗಿ ರಾಜ್ಯವೇ ಹೊತ್ತಿ ಉರಿಯುತ್ತಿದೆ ಎಂದು ಇಬೋಬಿ ಸಿಂಗ್ ಆರೋಪಿಸಿದರು.

ಇದನ್ನೂ ಓದಿ: ಪ್ರಧಾನಿಯ ‘ಮನ್ ಕಿ ಬಾತ್‌’ನಲ್ಲಿ ಮಣಿಪುರ ಹಿಂಸಾಚಾರದ ಮಾತೇ ಇರಲಿಲ್ಲ: ಕಾಂಗ್ರೆಸ್ ಖಂಡನೆ

ಮನವಿ ಪತ್ರದಲ್ಲಿ ಏನಿದೆ?

* ಕುಕಿ ಬುಡಕಟ್ಟು ಸಮುದಾಯಕ್ಕೆ ಪ್ರತ್ಯೇಕ ಆಡಳಿತ ವ್ಯವಸ್ಥೆ ಕಲ್ಪಿಸಬೇಕು ಎಂಬ 10 ಮಂದಿ ಕುಕಿ ಶಾಸಕರ ಬೇಡಿಕೆಗೆ ವಿರೋಧ.

* ಮಣಿಪುರದ ಪ್ರತಿಯೊಂದು ಸಮುದಾಯದ ಅಹವಾಲು ಆಲಿಸಿ, ಪರಿಹಾರ ನೀಡಬೇಕು.

* ತಕ್ಷಣವೇ ಎಲ್ಲ ಸಶಸ್ತ್ರ ಗುಂಪುಗಳು ಆಯುಧಗಳನ್ನು ತೊರೆಯುವಂತೆ ಕ್ರಮ ತೆಗೆದುಕೊಳ್ಳಬೇಕು.

* ಈಗ ಘೋಷಿಸಿರುವ 101.75 ಕೋಟಿ ರೂ. ಮೊತ್ತದ ಪ್ಯಾಕೇಜ್ ಸಾಕಾಗುವುದಿಲ್ಲ. ಸಂತ್ರಸ್ತರ ಪುನರ್ವಸತಿ ಮತ್ತು ಜೀವನೋಪಾಯಕ್ಕಾಗಿ ಸೂಕ್ತ ಪ್ಯಾಕೇಜ್‌ ಘೋಷಿಸಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...