Homeಮುಖಪುಟಮಣಿಪುರ: 13 ದಿನಗಳ ನಂತರ ಇಂಫಾಲ್ ಕಣಿವೆಯಲ್ಲಿ ಶಾಲಾ-ಕಾಲೇಜುಗಳು ಆರಂಭ

ಮಣಿಪುರ: 13 ದಿನಗಳ ನಂತರ ಇಂಫಾಲ್ ಕಣಿವೆಯಲ್ಲಿ ಶಾಲಾ-ಕಾಲೇಜುಗಳು ಆರಂಭ

- Advertisement -
- Advertisement -

ಮಣಿಪುರದ ಇಂಫಾಲ್ ಕಣಿವೆ, ಜಿರಿಬಾಮ್ ಜಿಲ್ಲೆಯ ಶಾಲೆಗಳು ಮತ್ತು ಕಾಲೇಜುಗಳು 13 ದಿನಗಳ ವಿರಾಮದ ನಂತರ ಶುಕ್ರವಾರ ತರಗತಿಗಳನ್ನು ಪುನರಾರಂಭಿಸಿದವು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಣಿವೆ ಜಿಲ್ಲೆಗಳಲ್ಲಿ ಕಾನೂನು ಸುವ್ಯವಸ್ಥೆ ಸುಧಾರಿಸುವುದರೊಂದಿಗೆ ರಾಜ್ಯದ ರಾಜಧಾನಿ ಇಂಫಾಲ್‌ನಲ್ಲಿ ವಿದ್ಯಾರ್ಥಿಗಳು ತಮ್ಮ ಶಾಲಾ ಸಮವಸ್ತ್ರದಲ್ಲಿ ಬಸ್‌ಗಳಿಗಾಗಿ ಕಾಯುತ್ತಿರುವುದು ಕಂಡುಬಂದಿದೆ.

ಶಾಲಾ ಶಿಕ್ಷಣ ನಿರ್ದೇಶನಾಲಯ, ಉನ್ನತ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಗುರುವಾರ ಇಂಫಾಲ್ ಪೂರ್ವ, ಇಂಫಾಲ್ ಪಶ್ಚಿಮ, ಬಿಷ್ಣುಪುರ್, ಕಕ್ಚಿಂಗ್, ತೌಬಲ್ ಮತ್ತು ಜಿರಿಬಾಮ್ ಜಿಲ್ಲೆಗಳಲ್ಲಿ ತರಗತಿಗಳನ್ನು ಪುನರಾರಂಭಿಸಲು ಆದೇಶಿಸಿದೆ.

ಸರ್ಕಾರಿ ಅಧಿಕಾರಿ ಕೆ ಬಿಕೆನ್ ಸಿಂಗ್, “ಶಾಲೆಗಳು ಪುನರಾರಂಭವಾಗಿರುವುದು ದೊಡ್ಡ ಸಮಾಧಾನವಾಗಿದೆ ಎಂದು ಹೇಳಿದ್ದಾರೆ. ಇಂಫಾಲ್‌ನ ಖಾಸಗಿ ಶಾಲೆಯಲ್ಲಿ 6 ಮತ್ತು 7 ನೇ ತರಗತಿಯಲ್ಲಿರುವ ಓದುತ್ತಿರುವ ನನ್ನ ಮಕ್ಕಳ ಅಂತಿಮ ಪರೀಕ್ಷೆಗಳನ್ನು ನಿಗದಿಪಡಿಸಲಾಗಿದೆ. ಡಿಸೆಂಬರ್ ಎರಡನೇ ವಾರದಿಂದ ಪರೀಕ್ಷೆ ಪ್ರಾರಂಭವಾಗಲಿದೆ. ಆದರೆ ಪಠ್ಯಕ್ರಮದ ಭಾಗಗಳು ಇನ್ನೂ ಪೂರ್ಣಗೊಂಡಿಲ್ಲ, ಶಾಲೆಗಳ ಪುನರಾರಂಭವು ಶಿಕ್ಷಕರಿಗೆ ತಮ್ಮ ವಿದ್ಯಾರ್ಥಿಗಳೊಂದಿಗೆ ಸಂವಹನ ನಡೆಸಲು ಅನುವು ಮಾಡಿಕೊಡುತ್ತದೆ ಎಂದು ಹೇಳಿದ್ದಾರೆ.

ಮಣಿಪುರ-ಅಸ್ಸಾಂನ ಜಿರಿ ಮತ್ತು ಬರಾಕ್ ನದಿಯಲ್ಲಿ ಜಿರಿಬಾಮ್‌ನಲ್ಲಿ ಮೂವರು ಮಹಿಳೆಯರು ಹಾಗೂ ಮೂವರು ಮಕ್ಕಳ ಮೃತದೇಹಗಳನ್ನು ವಶಪಡಿಸಿಕೊಂಡ ನಂತರ ಕಣಿವೆ ಜಿಲ್ಲೆಗಳು ಮತ್ತು ಜಿರಿಬಾಮ್‌ನಲ್ಲಿ ನವೆಂಬರ್ 16 ರಿಂದ ಶಿಕ್ಷಣ ಸಂಸ್ಥೆಗಳನ್ನು ಮುಚ್ಚಲಾಗಿದೆ.

ಈ ಮಧ್ಯೆ, ಅಧಿಕೃತ ಆದೇಶದ ಪ್ರಕಾರ ಜನರು ಅಗತ್ಯ ವಸ್ತುಗಳು ಮತ್ತು ಔಷಧಿಗಳನ್ನು ಖರೀದಿಸಲು ಅನುವು ಮಾಡಿಕೊಡಲು ಎಲ್ಲಾ ಐದು ಕಣಿವೆ ಜಿಲ್ಲೆಗಳಲ್ಲಿ ಶುಕ್ರವಾರ ಬೆಳಿಗ್ಗೆ 5 ರಿಂದ ಸಂಜೆ 4 ರವರೆಗೆ ಕರ್ಫ್ಯೂ ಸಡಿಲಿಸಲು ರಾಜ್ಯ ಸರ್ಕಾರ ಆದೇಶಿಸಿದೆ.

“ಜಿಲ್ಲೆಗಳಲ್ಲಿ ಸುಧಾರಿಸುತ್ತಿರುವ ಕಾನೂನು ಮತ್ತು ಸುವ್ಯವಸ್ಥೆಯ ಪರಿಸ್ಥಿತಿಯಿಂದಾಗಿ, ಸಾರ್ವಜನಿಕರಿಗೆ ಔಷಧಿಗಳು ಮತ್ತು ಆಹಾರ ಪದಾರ್ಥಗಳು ಸೇರಿದಂತೆ ಅಗತ್ಯ ವಸ್ತುಗಳನ್ನು ಖರೀದಿಸಲು ಅನುಕೂಲವಾಗುವಂತೆ ಜನರ ಸಂಚಾರದ ಮೇಲಿನ ನಿರ್ಬಂಧಗಳನ್ನು ಸಡಿಲಿಸುವ ಅವಶ್ಯಕತೆಯಿದೆ. ಜನರು ತಮ್ಮ ನಿವಾಸಗಳ ಹೊರಗೆ ಸಂಚಾರ ನಿರ್ಬಂಧವನ್ನು ಈ ಮೂಲಕ ತೆಗೆದುಹಾಕಲಾಗಿದೆ” ಎಂದು ಸರ್ಕಾರದ ಆದೇಶ ತಿಳಿಸಿದೆ.

ಇಂಫಾಲ್ ಪೂರ್ವ, ಇಂಫಾಲ್ ಪಶ್ಚಿಮ, ಬಿಷ್ಣುಪುರ್, ಕಕ್ಚಿಂಗ್ ಮತ್ತು ತೌಬಲ್ ಜಿಲ್ಲಾ ಮ್ಯಾಜಿಸ್ಟ್ರೇಟ್‌ಗಳು ಪ್ರತ್ಯೇಕವಾಗಿ ಆದೇಶ ಹೊರಡಿಸಿದ್ದಾರೆ.

“ಆದರೂ, ಸಡಿಲಿಕೆಯು ಸಕ್ಷಮ ಪ್ರಾಧಿಕಾರದ ಮೂಲಕ ಅನುಮೋದನೆಯನ್ನು ಪಡೆಯದೆ ಯಾವುದೇ ಸಭೆ, ಧರಣಿ, ರ್ಯಾಲಿಯನ್ನು ಒಳಗೊಂಡಿರುವುದಿಲ್ಲ” ಎಂದು ಆದೇಶದಲ್ಲಿ ತಿಳಿಸಲಾಗಿದೆ.

ನವೆಂಬರ್ 11 ರಂದು ಭದ್ರತಾ ಪಡೆಗಳು ಮತ್ತು ಶಂಕಿತ ಕುಕಿ-ಜೋ ಉಗ್ರಗಾಮಿಗಳ ನಡುವಿನ ಗುಂಡಿನ ಚಕಮಕಿಯಲ್ಲಿ 10 ಬಂಡುಕೋರರ ಸಾವಿಗೆ ಕಾರಣವಾದ ನಂತರ, ಜಿರಿಬಾಮ್‌ನ ಪರಿಹಾರ ಶಿಬಿರದಿಂದ ಮೈತೇಯಿ ಸಮುದಾಯಕ್ಕೆ ಸೇರಿದ ಮೂವರು ಮಹಿಳೆಯರು ಮತ್ತು ಮೂವರು ಮಕ್ಕಳು ನಾಪತ್ತೆಯಾದ ಬಳಿಕ ಮಣಿಪುರದಲ್ಲಿ ಹಿಂಸಾಚಾರ ಉಲ್ಬಣಗೊಂಡಿತು. ಆ ಆರು ಮಂದಿಯ ಶವಗಳು ನಂತರ ಪತ್ತೆಯಾಗಿವೆ.

ಕಳೆದ ವರ್ಷ ಮೇ ತಿಂಗಳಿನಿಂದ ಇಂಫಾಲ್ ಕಣಿವೆ ಮೂಲದ ಮೈತೇಯಿ ಮತ್ತು ಪಕ್ಕದ ಬೆಟ್ಟಗಳ ಮೂಲದ ಕುಕಿ-ಜೋ ಗುಂಪುಗಳ ನಡುವಿನ ಜನಾಂಗೀಯ ಹಿಂಸಾಚಾರದಲ್ಲಿ 250 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಸಾವಿರಾರು ಜನರು ನಿರಾಶ್ರಿತರಾಗಿದ್ದಾರೆ.

ಇದನ್ನೂ ಓದಿ; ಫೆಂಗಲ್ ಚಂಡಮಾರುತ ಪರಿಣಾಮ; ತಮಿಳುನಾಡು, ಪುದುಚೇರಿಯಲ್ಲಿ ಭಾರೀ ಮಳೆ, ಶಾಲಾ-ಕಾಲೇಜುಗಳು ಬಂದ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...