Homeಮುಖಪುಟಮಣಿಪುರ: 13 ದಿನಗಳ ನಂತರ ಇಂಫಾಲ್ ಕಣಿವೆಯಲ್ಲಿ ಶಾಲಾ-ಕಾಲೇಜುಗಳು ಆರಂಭ

ಮಣಿಪುರ: 13 ದಿನಗಳ ನಂತರ ಇಂಫಾಲ್ ಕಣಿವೆಯಲ್ಲಿ ಶಾಲಾ-ಕಾಲೇಜುಗಳು ಆರಂಭ

- Advertisement -
- Advertisement -

ಮಣಿಪುರದ ಇಂಫಾಲ್ ಕಣಿವೆ, ಜಿರಿಬಾಮ್ ಜಿಲ್ಲೆಯ ಶಾಲೆಗಳು ಮತ್ತು ಕಾಲೇಜುಗಳು 13 ದಿನಗಳ ವಿರಾಮದ ನಂತರ ಶುಕ್ರವಾರ ತರಗತಿಗಳನ್ನು ಪುನರಾರಂಭಿಸಿದವು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಣಿವೆ ಜಿಲ್ಲೆಗಳಲ್ಲಿ ಕಾನೂನು ಸುವ್ಯವಸ್ಥೆ ಸುಧಾರಿಸುವುದರೊಂದಿಗೆ ರಾಜ್ಯದ ರಾಜಧಾನಿ ಇಂಫಾಲ್‌ನಲ್ಲಿ ವಿದ್ಯಾರ್ಥಿಗಳು ತಮ್ಮ ಶಾಲಾ ಸಮವಸ್ತ್ರದಲ್ಲಿ ಬಸ್‌ಗಳಿಗಾಗಿ ಕಾಯುತ್ತಿರುವುದು ಕಂಡುಬಂದಿದೆ.

ಶಾಲಾ ಶಿಕ್ಷಣ ನಿರ್ದೇಶನಾಲಯ, ಉನ್ನತ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಗುರುವಾರ ಇಂಫಾಲ್ ಪೂರ್ವ, ಇಂಫಾಲ್ ಪಶ್ಚಿಮ, ಬಿಷ್ಣುಪುರ್, ಕಕ್ಚಿಂಗ್, ತೌಬಲ್ ಮತ್ತು ಜಿರಿಬಾಮ್ ಜಿಲ್ಲೆಗಳಲ್ಲಿ ತರಗತಿಗಳನ್ನು ಪುನರಾರಂಭಿಸಲು ಆದೇಶಿಸಿದೆ.

ಸರ್ಕಾರಿ ಅಧಿಕಾರಿ ಕೆ ಬಿಕೆನ್ ಸಿಂಗ್, “ಶಾಲೆಗಳು ಪುನರಾರಂಭವಾಗಿರುವುದು ದೊಡ್ಡ ಸಮಾಧಾನವಾಗಿದೆ ಎಂದು ಹೇಳಿದ್ದಾರೆ. ಇಂಫಾಲ್‌ನ ಖಾಸಗಿ ಶಾಲೆಯಲ್ಲಿ 6 ಮತ್ತು 7 ನೇ ತರಗತಿಯಲ್ಲಿರುವ ಓದುತ್ತಿರುವ ನನ್ನ ಮಕ್ಕಳ ಅಂತಿಮ ಪರೀಕ್ಷೆಗಳನ್ನು ನಿಗದಿಪಡಿಸಲಾಗಿದೆ. ಡಿಸೆಂಬರ್ ಎರಡನೇ ವಾರದಿಂದ ಪರೀಕ್ಷೆ ಪ್ರಾರಂಭವಾಗಲಿದೆ. ಆದರೆ ಪಠ್ಯಕ್ರಮದ ಭಾಗಗಳು ಇನ್ನೂ ಪೂರ್ಣಗೊಂಡಿಲ್ಲ, ಶಾಲೆಗಳ ಪುನರಾರಂಭವು ಶಿಕ್ಷಕರಿಗೆ ತಮ್ಮ ವಿದ್ಯಾರ್ಥಿಗಳೊಂದಿಗೆ ಸಂವಹನ ನಡೆಸಲು ಅನುವು ಮಾಡಿಕೊಡುತ್ತದೆ ಎಂದು ಹೇಳಿದ್ದಾರೆ.

ಮಣಿಪುರ-ಅಸ್ಸಾಂನ ಜಿರಿ ಮತ್ತು ಬರಾಕ್ ನದಿಯಲ್ಲಿ ಜಿರಿಬಾಮ್‌ನಲ್ಲಿ ಮೂವರು ಮಹಿಳೆಯರು ಹಾಗೂ ಮೂವರು ಮಕ್ಕಳ ಮೃತದೇಹಗಳನ್ನು ವಶಪಡಿಸಿಕೊಂಡ ನಂತರ ಕಣಿವೆ ಜಿಲ್ಲೆಗಳು ಮತ್ತು ಜಿರಿಬಾಮ್‌ನಲ್ಲಿ ನವೆಂಬರ್ 16 ರಿಂದ ಶಿಕ್ಷಣ ಸಂಸ್ಥೆಗಳನ್ನು ಮುಚ್ಚಲಾಗಿದೆ.

ಈ ಮಧ್ಯೆ, ಅಧಿಕೃತ ಆದೇಶದ ಪ್ರಕಾರ ಜನರು ಅಗತ್ಯ ವಸ್ತುಗಳು ಮತ್ತು ಔಷಧಿಗಳನ್ನು ಖರೀದಿಸಲು ಅನುವು ಮಾಡಿಕೊಡಲು ಎಲ್ಲಾ ಐದು ಕಣಿವೆ ಜಿಲ್ಲೆಗಳಲ್ಲಿ ಶುಕ್ರವಾರ ಬೆಳಿಗ್ಗೆ 5 ರಿಂದ ಸಂಜೆ 4 ರವರೆಗೆ ಕರ್ಫ್ಯೂ ಸಡಿಲಿಸಲು ರಾಜ್ಯ ಸರ್ಕಾರ ಆದೇಶಿಸಿದೆ.

“ಜಿಲ್ಲೆಗಳಲ್ಲಿ ಸುಧಾರಿಸುತ್ತಿರುವ ಕಾನೂನು ಮತ್ತು ಸುವ್ಯವಸ್ಥೆಯ ಪರಿಸ್ಥಿತಿಯಿಂದಾಗಿ, ಸಾರ್ವಜನಿಕರಿಗೆ ಔಷಧಿಗಳು ಮತ್ತು ಆಹಾರ ಪದಾರ್ಥಗಳು ಸೇರಿದಂತೆ ಅಗತ್ಯ ವಸ್ತುಗಳನ್ನು ಖರೀದಿಸಲು ಅನುಕೂಲವಾಗುವಂತೆ ಜನರ ಸಂಚಾರದ ಮೇಲಿನ ನಿರ್ಬಂಧಗಳನ್ನು ಸಡಿಲಿಸುವ ಅವಶ್ಯಕತೆಯಿದೆ. ಜನರು ತಮ್ಮ ನಿವಾಸಗಳ ಹೊರಗೆ ಸಂಚಾರ ನಿರ್ಬಂಧವನ್ನು ಈ ಮೂಲಕ ತೆಗೆದುಹಾಕಲಾಗಿದೆ” ಎಂದು ಸರ್ಕಾರದ ಆದೇಶ ತಿಳಿಸಿದೆ.

ಇಂಫಾಲ್ ಪೂರ್ವ, ಇಂಫಾಲ್ ಪಶ್ಚಿಮ, ಬಿಷ್ಣುಪುರ್, ಕಕ್ಚಿಂಗ್ ಮತ್ತು ತೌಬಲ್ ಜಿಲ್ಲಾ ಮ್ಯಾಜಿಸ್ಟ್ರೇಟ್‌ಗಳು ಪ್ರತ್ಯೇಕವಾಗಿ ಆದೇಶ ಹೊರಡಿಸಿದ್ದಾರೆ.

“ಆದರೂ, ಸಡಿಲಿಕೆಯು ಸಕ್ಷಮ ಪ್ರಾಧಿಕಾರದ ಮೂಲಕ ಅನುಮೋದನೆಯನ್ನು ಪಡೆಯದೆ ಯಾವುದೇ ಸಭೆ, ಧರಣಿ, ರ್ಯಾಲಿಯನ್ನು ಒಳಗೊಂಡಿರುವುದಿಲ್ಲ” ಎಂದು ಆದೇಶದಲ್ಲಿ ತಿಳಿಸಲಾಗಿದೆ.

ನವೆಂಬರ್ 11 ರಂದು ಭದ್ರತಾ ಪಡೆಗಳು ಮತ್ತು ಶಂಕಿತ ಕುಕಿ-ಜೋ ಉಗ್ರಗಾಮಿಗಳ ನಡುವಿನ ಗುಂಡಿನ ಚಕಮಕಿಯಲ್ಲಿ 10 ಬಂಡುಕೋರರ ಸಾವಿಗೆ ಕಾರಣವಾದ ನಂತರ, ಜಿರಿಬಾಮ್‌ನ ಪರಿಹಾರ ಶಿಬಿರದಿಂದ ಮೈತೇಯಿ ಸಮುದಾಯಕ್ಕೆ ಸೇರಿದ ಮೂವರು ಮಹಿಳೆಯರು ಮತ್ತು ಮೂವರು ಮಕ್ಕಳು ನಾಪತ್ತೆಯಾದ ಬಳಿಕ ಮಣಿಪುರದಲ್ಲಿ ಹಿಂಸಾಚಾರ ಉಲ್ಬಣಗೊಂಡಿತು. ಆ ಆರು ಮಂದಿಯ ಶವಗಳು ನಂತರ ಪತ್ತೆಯಾಗಿವೆ.

ಕಳೆದ ವರ್ಷ ಮೇ ತಿಂಗಳಿನಿಂದ ಇಂಫಾಲ್ ಕಣಿವೆ ಮೂಲದ ಮೈತೇಯಿ ಮತ್ತು ಪಕ್ಕದ ಬೆಟ್ಟಗಳ ಮೂಲದ ಕುಕಿ-ಜೋ ಗುಂಪುಗಳ ನಡುವಿನ ಜನಾಂಗೀಯ ಹಿಂಸಾಚಾರದಲ್ಲಿ 250 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಸಾವಿರಾರು ಜನರು ನಿರಾಶ್ರಿತರಾಗಿದ್ದಾರೆ.

ಇದನ್ನೂ ಓದಿ; ಫೆಂಗಲ್ ಚಂಡಮಾರುತ ಪರಿಣಾಮ; ತಮಿಳುನಾಡು, ಪುದುಚೇರಿಯಲ್ಲಿ ಭಾರೀ ಮಳೆ, ಶಾಲಾ-ಕಾಲೇಜುಗಳು ಬಂದ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...