Homeಮುಖಪುಟಮಣಿಪುರ | ಮತ್ತೆ 20 ಭದ್ರತಾ ಪಡೆಗಳ ತಂಡಗಳನ್ನು ನಿಯೋಜಿಸಿದ ಕೇಂದ್ರ ಸರ್ಕಾರ

ಮಣಿಪುರ | ಮತ್ತೆ 20 ಭದ್ರತಾ ಪಡೆಗಳ ತಂಡಗಳನ್ನು ನಿಯೋಜಿಸಿದ ಕೇಂದ್ರ ಸರ್ಕಾರ

- Advertisement -
- Advertisement -

ಸೋಮವಾರ ನಡೆದ ಗುಂಡಿನ ಚಕಮಕಿಯಲ್ಲಿ 10 ಜನರು ಸಾವಿಗೀಡಾದ ಹಿನ್ನಲೆ ಕುಕಿ ಜೊ ಸಂಘಟನೆಗಳು ಆಕ್ರೋಶಗೊಂಡಿದ್ದರೂ, ಕೇಂದ್ರ ಸರ್ಕಾರವು ಸುಮಾರು 2000 ಸಿಬ್ಬಂದಿ ಇರುವ 20 ಹೆಚ್ಚುವರಿ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ(ಸಿಎಪಿಎಫ್) ಕಂಪೆನಿಗಳನ್ನು ಮಣಿಪುರಕ್ಕೆ ರವಾನಿಸಿದೆ ಎಂದು ಸರ್ಕಾರಿ ಮೂಲಗಳನ್ನು ಉಲ್ಲೇಖಿಸಿ TNIE ಬುಧವಾರ ವರದಿ ಮಾಡಿದೆ. ಮಣಿಪುರ

ಈ ಘಟಕಗಳ ಏರ್‌ಲಿಫ್ಟಿಂಗ್ ಮೂಲಕ ತಕ್ಷಣವೆ ನಿಯೋಜನೆ ಮಾಡಬೇಕು ಎಂದು ಗೃಹ ಸಚಿವಾಲಯ (ಎಂಎಚ್‌ಎ) ಮಂಗಳವಾರ ರಾತ್ರಿ ಆದೇಶ ಹೊರಡಿಸಿದೆ ಎಂದು ಮೂಲಗಳು ತಿಳಿಸಿವೆ ಎಂದು ಪಿಟಿಐ ವರದಿ ಮಾಡಿದೆ. ಮಣಿಪುರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಜೊತೆಗೆ ಸೋಮವಾರ ನಡೆದ ಭೀಕರ ಗುಂಡಿನ ಚಕಮಕಿಯಲ್ಲಿ ಕನಿಷ್ಠ 10 ಶಂಕಿತ ಉಗ್ರಗಾಮಿಗಳು ಹತರಾಗಿದ್ದಾರೆ ಎಂದು ಮಣಿಪುರ ಪೊಲೀಸರು ಹೇಳಿದ್ದಾರೆ. ಆದರೆ, ಇದನ್ನು ಕುಕಿ-ಜೊ ಸಂಘಟನೆಗಳು ನಿರಾಕರಿಸಿದ್ದು, ಮೃತರು ಗ್ರಾಮ ‘ಸ್ವಯಂಸೇವಕರು’ ಆಗಿದ್ದು, ಸೇನೆಯು ಅವರನ್ನು ಹೊಂಚುಹಾಕಿ ಕೊಂದಿದೆ ಎಂದು ಹೇಳಿದೆ.

”ಅತ್ಯಾಧುನಿಕ ಶಸ್ತ್ರಾಸ್ತ್ರಗಳೊಂದಿಗೆ ಶಸ್ತ್ರಸಜ್ಜಿತವಾದ ಬಂಡುಕೋರರು ಬೊರೊಬೆಕ್ರಾ ಪೊಲೀಸ್ ಠಾಣೆ ಮತ್ತು ಪಕ್ಕದ ಸಿಆರ್‌ಪಿಎಫ್ ಶಿಬಿರದ ಮೇಲೆ ಮನಬಂದಂತೆ ಗುಂಡು ಹಾರಿಸಿದ್ದಾರೆ” ಎಂದು ಪೊಲೀಸರು ಹೇಳಿದ್ದು, ಭೀಕರ ಗುಂಡಿನ ಚಕಮಕಿಯ ನಂತರ ಅತ್ಯಾಧುನಿಕ ಶಸ್ತ್ರಾಸ್ತ್ರಗಳ ಬೃಹತ್ ಸಂಗ್ರಹವನ್ನು ಪಡೆ ವಶಪಡಿಸಿಕೊಂಡಿದೆ ಎಂದು ತಿಳಿಸಿದೆ.

ಮಣಿಪುರಕ್ಕೆ ನಿಯೋಜಿಸಲು ಆದೇಶಿಸಿದ 20 ಹೊಸ ಸಿಎಪಿಎಫ್ ಕಂಪನಿಗಳಲ್ಲಿ 15 ಸಿಆರ್‌ಪಿಎಫ್ ಮತ್ತು ಐದು ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಸೇರಿವೆ ಎಂದು ಮೂಲಗಳು ತಿಳಿಸಿವೆ. ಜಿರಿಬಾಮ್‌ನಲ್ಲಿ ಹೊಸದಾಗಿ ನಡೆದ ಹಿಂಸಾಚಾರದಿಂದಾಗಿ ಕಳೆದ ವಾರದಿಂದ ಮಣಿಪುರದಲ್ಲಿ ಉದ್ವಿಗ್ನತೆ ಹೆಚ್ಚಾಗಿದೆ.

ಕಳೆದ ವರ್ಷ ಮೇ ತಿಂಗಳಲ್ಲಿ ರಾಜ್ಯದಲ್ಲಿ ಪ್ರಾರಂಭವಾದ ಜನಾಂಗೀಯ ಹಿಂಸಾಚಾರದ ನಂತರ ಸುಮಾರು 200 ಜನರ ಹತ್ಯೆಗೀಡಾಗಿದ್ದಾರೆ. ಇದರ ನಂತರ ರಾಜ್ಯದಲ್ಲಿ ಈಗಾಗಲೇ ನೆಲೆಗೊಂಡಿರುವ ಸಿಎಪಿಎಫ್‌ನ 198 ಕಂಪನಿಗಳ ಜೊತೆಗೆ ಈ ಘಟಕಗಳನ್ನು ಸೇರಿಸಲಾಗುತ್ತವೆ ಎಂದು ವರದಿ ಹೇಳಿವೆ.

ಗೃಹ ಸಚಿವಾಲಯದ ಆದೇಶದಂತೆ ಈ ಎಲ್ಲಾ CAPF ಘಟಕಗಳು ನವೆಂಬರ್ 30 ರವರೆಗೆ ಮಣಿಪುರ ಸರ್ಕಾರದ ವಿಲೇವಾರಿಯಲ್ಲಿದ್ದು, ಈ ನಿಯೋಜನೆಯನ್ನು ವಿಸ್ತರಿಸುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ. ಸೋಮವಾರದ ಘಟನೆಯ ನಂತರ, ಇಂಫಾಲ್ ಕಣಿವೆಯ ಅನೇಕ ಸ್ಥಳಗಳಲ್ಲಿ ಹೊಸದಾಗಿ ಹಿಂಸಾಚಾರ ನಡೆದಿರುವುದು ವರದಿಯಾಗಿದೆ.

ಇದನ್ನೂ ಓದಿ: BIG BREAKING | ಮರಕುಂಬಿ ದಲಿತ ದೌರ್ಜನ್ಯ ಪ್ರಕರಣ; ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ  97 ಮಂದಿಗೆ ಜಾಮೀನು

BIG BREAKING | ಮರಕುಂಬಿ ದಲಿತ ದೌರ್ಜನ್ಯ ಪ್ರಕರಣ; ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ  97 ಮಂದಿಗೆ ಜಾಮೀನು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...