Homeಮುಖಪುಟಮಣಿಪುರ | ಮತ್ತೆ 20 ಭದ್ರತಾ ಪಡೆಗಳ ತಂಡಗಳನ್ನು ನಿಯೋಜಿಸಿದ ಕೇಂದ್ರ ಸರ್ಕಾರ

ಮಣಿಪುರ | ಮತ್ತೆ 20 ಭದ್ರತಾ ಪಡೆಗಳ ತಂಡಗಳನ್ನು ನಿಯೋಜಿಸಿದ ಕೇಂದ್ರ ಸರ್ಕಾರ

- Advertisement -
- Advertisement -

ಸೋಮವಾರ ನಡೆದ ಗುಂಡಿನ ಚಕಮಕಿಯಲ್ಲಿ 10 ಜನರು ಸಾವಿಗೀಡಾದ ಹಿನ್ನಲೆ ಕುಕಿ ಜೊ ಸಂಘಟನೆಗಳು ಆಕ್ರೋಶಗೊಂಡಿದ್ದರೂ, ಕೇಂದ್ರ ಸರ್ಕಾರವು ಸುಮಾರು 2000 ಸಿಬ್ಬಂದಿ ಇರುವ 20 ಹೆಚ್ಚುವರಿ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ(ಸಿಎಪಿಎಫ್) ಕಂಪೆನಿಗಳನ್ನು ಮಣಿಪುರಕ್ಕೆ ರವಾನಿಸಿದೆ ಎಂದು ಸರ್ಕಾರಿ ಮೂಲಗಳನ್ನು ಉಲ್ಲೇಖಿಸಿ TNIE ಬುಧವಾರ ವರದಿ ಮಾಡಿದೆ. ಮಣಿಪುರ

ಈ ಘಟಕಗಳ ಏರ್‌ಲಿಫ್ಟಿಂಗ್ ಮೂಲಕ ತಕ್ಷಣವೆ ನಿಯೋಜನೆ ಮಾಡಬೇಕು ಎಂದು ಗೃಹ ಸಚಿವಾಲಯ (ಎಂಎಚ್‌ಎ) ಮಂಗಳವಾರ ರಾತ್ರಿ ಆದೇಶ ಹೊರಡಿಸಿದೆ ಎಂದು ಮೂಲಗಳು ತಿಳಿಸಿವೆ ಎಂದು ಪಿಟಿಐ ವರದಿ ಮಾಡಿದೆ. ಮಣಿಪುರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಜೊತೆಗೆ ಸೋಮವಾರ ನಡೆದ ಭೀಕರ ಗುಂಡಿನ ಚಕಮಕಿಯಲ್ಲಿ ಕನಿಷ್ಠ 10 ಶಂಕಿತ ಉಗ್ರಗಾಮಿಗಳು ಹತರಾಗಿದ್ದಾರೆ ಎಂದು ಮಣಿಪುರ ಪೊಲೀಸರು ಹೇಳಿದ್ದಾರೆ. ಆದರೆ, ಇದನ್ನು ಕುಕಿ-ಜೊ ಸಂಘಟನೆಗಳು ನಿರಾಕರಿಸಿದ್ದು, ಮೃತರು ಗ್ರಾಮ ‘ಸ್ವಯಂಸೇವಕರು’ ಆಗಿದ್ದು, ಸೇನೆಯು ಅವರನ್ನು ಹೊಂಚುಹಾಕಿ ಕೊಂದಿದೆ ಎಂದು ಹೇಳಿದೆ.

”ಅತ್ಯಾಧುನಿಕ ಶಸ್ತ್ರಾಸ್ತ್ರಗಳೊಂದಿಗೆ ಶಸ್ತ್ರಸಜ್ಜಿತವಾದ ಬಂಡುಕೋರರು ಬೊರೊಬೆಕ್ರಾ ಪೊಲೀಸ್ ಠಾಣೆ ಮತ್ತು ಪಕ್ಕದ ಸಿಆರ್‌ಪಿಎಫ್ ಶಿಬಿರದ ಮೇಲೆ ಮನಬಂದಂತೆ ಗುಂಡು ಹಾರಿಸಿದ್ದಾರೆ” ಎಂದು ಪೊಲೀಸರು ಹೇಳಿದ್ದು, ಭೀಕರ ಗುಂಡಿನ ಚಕಮಕಿಯ ನಂತರ ಅತ್ಯಾಧುನಿಕ ಶಸ್ತ್ರಾಸ್ತ್ರಗಳ ಬೃಹತ್ ಸಂಗ್ರಹವನ್ನು ಪಡೆ ವಶಪಡಿಸಿಕೊಂಡಿದೆ ಎಂದು ತಿಳಿಸಿದೆ.

ಮಣಿಪುರಕ್ಕೆ ನಿಯೋಜಿಸಲು ಆದೇಶಿಸಿದ 20 ಹೊಸ ಸಿಎಪಿಎಫ್ ಕಂಪನಿಗಳಲ್ಲಿ 15 ಸಿಆರ್‌ಪಿಎಫ್ ಮತ್ತು ಐದು ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಸೇರಿವೆ ಎಂದು ಮೂಲಗಳು ತಿಳಿಸಿವೆ. ಜಿರಿಬಾಮ್‌ನಲ್ಲಿ ಹೊಸದಾಗಿ ನಡೆದ ಹಿಂಸಾಚಾರದಿಂದಾಗಿ ಕಳೆದ ವಾರದಿಂದ ಮಣಿಪುರದಲ್ಲಿ ಉದ್ವಿಗ್ನತೆ ಹೆಚ್ಚಾಗಿದೆ.

ಕಳೆದ ವರ್ಷ ಮೇ ತಿಂಗಳಲ್ಲಿ ರಾಜ್ಯದಲ್ಲಿ ಪ್ರಾರಂಭವಾದ ಜನಾಂಗೀಯ ಹಿಂಸಾಚಾರದ ನಂತರ ಸುಮಾರು 200 ಜನರ ಹತ್ಯೆಗೀಡಾಗಿದ್ದಾರೆ. ಇದರ ನಂತರ ರಾಜ್ಯದಲ್ಲಿ ಈಗಾಗಲೇ ನೆಲೆಗೊಂಡಿರುವ ಸಿಎಪಿಎಫ್‌ನ 198 ಕಂಪನಿಗಳ ಜೊತೆಗೆ ಈ ಘಟಕಗಳನ್ನು ಸೇರಿಸಲಾಗುತ್ತವೆ ಎಂದು ವರದಿ ಹೇಳಿವೆ.

ಗೃಹ ಸಚಿವಾಲಯದ ಆದೇಶದಂತೆ ಈ ಎಲ್ಲಾ CAPF ಘಟಕಗಳು ನವೆಂಬರ್ 30 ರವರೆಗೆ ಮಣಿಪುರ ಸರ್ಕಾರದ ವಿಲೇವಾರಿಯಲ್ಲಿದ್ದು, ಈ ನಿಯೋಜನೆಯನ್ನು ವಿಸ್ತರಿಸುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ. ಸೋಮವಾರದ ಘಟನೆಯ ನಂತರ, ಇಂಫಾಲ್ ಕಣಿವೆಯ ಅನೇಕ ಸ್ಥಳಗಳಲ್ಲಿ ಹೊಸದಾಗಿ ಹಿಂಸಾಚಾರ ನಡೆದಿರುವುದು ವರದಿಯಾಗಿದೆ.

ಇದನ್ನೂ ಓದಿ: BIG BREAKING | ಮರಕುಂಬಿ ದಲಿತ ದೌರ್ಜನ್ಯ ಪ್ರಕರಣ; ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ  97 ಮಂದಿಗೆ ಜಾಮೀನು

BIG BREAKING | ಮರಕುಂಬಿ ದಲಿತ ದೌರ್ಜನ್ಯ ಪ್ರಕರಣ; ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ  97 ಮಂದಿಗೆ ಜಾಮೀನು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...