Homeಮುಖಪುಟಮಣಿಪುರ: 102 ಖಾಲಿ ಎಕೆ ಕಾಟ್ರಿಡ್ಜ್‌ಗಳು, ಮದ್ದುಗುಂಡುಗಳನ್ನು ವಶಪಡಿಸಿಕೊಂಡ ಭದ್ರತಾ ಪಡೆಗಳು

ಮಣಿಪುರ: 102 ಖಾಲಿ ಎಕೆ ಕಾಟ್ರಿಡ್ಜ್‌ಗಳು, ಮದ್ದುಗುಂಡುಗಳನ್ನು ವಶಪಡಿಸಿಕೊಂಡ ಭದ್ರತಾ ಪಡೆಗಳು

- Advertisement -
- Advertisement -

ಭದ್ರತಾ ಪಡೆಗಳು ಮಣಿಪುರದ ದುರ್ಗಮ ಬೆಟ್ಟ ಮತ್ತು ಕಣಿವೆ ಜಿಲ್ಲೆಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿ, ಗಲಭೆ ಪೀಡಿತ ಪ್ರದೇಶದ ಪ್ರಾಬಲ್ಯ ಸಾಧಿಸಿವೆ. ದೊಡ್ಡಮಟ್ಟದ ಶಸ್ತ್ರಾಸ್ತ್ರ ಸಂಗ್ರಹವನ್ನು ವಶಪಡಿಸಿಕೊಂಡಿದ್ದಾರೆ.

ಕಾನೂನು ಸುವ್ಯವಸ್ಥೆ ಕಾಪಾಡಲು, ಗಲಭೆ ಪೀಡಿತ ಪ್ರದೇಶದಲ್ಲಿ ಯಾವುದೇ ಗಲಾಟೆ ಉಲ್ಬಣಗೊಳ್ಳುವುದನ್ನು ತಡೆಯಲು ಈ ಕಾರ್ಯಾಚರಣೆಗಳನ್ನು ಕೈಗೊಳ್ಳಲಾಗಿದೆ ಎಂದು ಮಣಿಪುರ ಪೊಲೀಸರು ಭಾನುವಾರ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಮಣಿಪುರ ಪೊಲೀಸರ ಪ್ರಕಾರ, ಇಂಫಾಲ್ ವೆಸ್ಟ್ ಮತ್ತು ಕಾಂಗ್‌ಪೊಕ್ಪಿ ಜಿಲ್ಲೆಗಳ ಅಡಿಯಲ್ಲಿ ಫಯೆಂಗ್ ಪೊರೊಮ್ ಹಿಲ್, ಕೆ ಸಾಂಗ್‌ಲುಂಗ್ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆಯ ಸಮಯದಲ್ಲಿ ಭದ್ರತಾ ಪಡೆಗಳು ಹಲವಾರು ವಸ್ತುಗಳನ್ನು ವಶಪಡಿಸಿಕೊಂಡಿವೆ. ಇವುಗಳಲ್ಲಿ 11 ಲೈವ್ ರೌಂಡ್‌ಗಳ ಎಸ್‌ಎಲ್‌ಆರ್ ಮದ್ದುಗುಂಡುಗಳು, ಎಸ್‌ಎಲ್‌ಆರ್‌ನ ಒಂದು ಮ್ಯಾಗಜೀನ್, ಎಸ್‌ಎಲ್‌ಆರ್‌ನ 66 ಖಾಲಿ ಕಾರ್ಟ್ರಿಡ್ಜ್‌ಗಳು, ರೇಡಿಯೋ ಸೆಟ್ ಬ್ಯಾಟರಿ ಮತ್ತು ಆಂಟೆನಾ, ಒಂದು ಮಿಸ್‌ಫೈರ್ಡ್ ಎಕೆ ರೌಂಡ್, 102 ಖಾಲಿ ಎಕೆ ಕಾರ್ಟ್ರಿಡ್ಜ್‌ಗಳು, ಎರಡು ಖಾಲಿ ಎಸ್‌ಎಲ್‌ಆರ್ ಕಾರ್ಟ್ರಿಡ್ಜ್‌ಗಳು, ಒಂದು 12-ಬೋರ್ ಕಾರ್ಟ್ರಿಡ್ಜ್ ಮತ್ತು ಒಂದು ಸ್ಥಳೀಯವಾಗಿ ತಯಾರಿಸಿದ ಬಾಂಬ್ ಅನ್ನು ವಶಕ್ಕೆ ಪಡೆಯಲಾಗಿದೆ. ಈ ಪ್ರದೇಶದಲ್ಲಿ ಶಾಂತಿ ಕಾಪಾಡಲು ನಡೆಯುತ್ತಿರುವ ಕಾರ್ಯಾಚರಣೆಗಳ ಭಾಗವಾಗಿ ಈ ವಸ್ತುಗಳು ಪತ್ತೆಯಾಗಿವೆ.

ಅಕ್ಟೋಬರ್ 1 ರಂದು ಶಸ್ತ್ರಸಜ್ಜಿತ ದುಷ್ಕರ್ಮಿಗಳು ಇಂಫಾಲ್ ವೆಸ್ಟ್‌ನಲ್ಲಿ ನಾಗರಿಕರಿಂದ ಎಸ್‌ಯುವಿ (ಫಾರ್ಚುನರ್) ಅನ್ನು ಬಲವಂತವಾಗಿ ಕಸಿದುಕೊಳ್ಳಲಾಗಿತ್ತು. ಬಳಿಕ, ಕದ್ದ ವಾಹನವನ್ನು ಎಟಿ ಸದಸ್ಯ ಅಸೆಮ್ ಕಾನನ್ ಬಳಸಿರುವುದು ಪತ್ತೆಯಾಗಿದೆ. ಇಂಫಾಲ್ ವೆಸ್ಟ್‌ನ ಉರಿಪೋಕ್ ಸೊರ್ಬನ್ ಥಿಂಗೆಲ್‌ನ ಸಿಂಗ್ (50) ಮತ್ತು ಅವನ ಸಹಚರರು ಎಂದು ಪೊಲೀಸ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಈ ಮಧ್ಯೆ, ಭಾನುವಾರ ಭದ್ರತಾ ಪಡೆಗಳ ಸಂಯೋಜಿತ ತಂಡವು ಅಸೆಮ್ ಕಾನನ್ ಸಿಂಗ್ ಅವರ ನಿವಾಸದ ಮೇಲೆ ದಾಳಿ ನಡೆಸಿತು. ಆದರೆ, ಆರೋಪಿ ಅಥವಾ ಅವನ ಸಹಚರರನ್ನು ಪತ್ತೆಹಚ್ಚಲು ಸಾಧ್ಯವಾಗಲಿಲ್ಲ ಎಂದು ಮಣಿಪುರ ಪೊಲೀಸರು ತಿಳಿಸಿದ್ದಾರೆ. ದಾಳಿಯ ಸಮಯದಲ್ಲಿ, ಸಿಸಿಟಿವಿ ಕ್ಯಾಮೆರಾದ ಡಿವಿಡಿ ಯಂತ್ರ, ಐ -20 ಕಾರ್, ಮೂರು ಆಲಿವ್-ಗ್ರೀನ್ ಬ್ಯಾಗ್‌ಗಳು, ಎಸ್‌ಡಿಆರ್‌ಎಫ್ ಎಂದು ಗುರುತಿಸಲಾದ ಹಳದಿ ಲೈಫ್ ಜಾಕೆಟ್, ಏರ್ ಗನ್ (ಹರಿಕೇನ್ ಎಂಒಡಿ -18) ಸೇರಿದಂತೆ ಹಲವು ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಲೋಹದ ಫಲಕಗಳ ಎರಡು ಗುಂಡು ನಿರೋಧಕ ಜಾಕೆಟ್‌ಗಳು ಪತ್ತೆಯಾಗಿವೆ.

ನಿನ್ನೆ ನಡೆದ ಮತ್ತೊಂದು ಬೆಳವಣಿಗೆಯಲ್ಲಿ, ಮಣಿಪುರ ಪೊಲೀಸರು ಕಾಕ್ಚಿಂಗ್ ಜಿಲ್ಲೆಯ ಕಕ್ಚಿಂಗ್ ಚುಮ್ನಾಂಗ್ ಪ್ರದೇಶದಿಂದ ಪ್ರೀಪ್ಯಾಕ್ (PREPAK) ನ ಸಕ್ರಿಯ ಕಾರ್ಯಕರ್ತರಾದ ಖುಂಬೋಂಗ್ಮಯುಮ್ ಅಭಿಜಿತ್ ಸಿಂಗ್ (26) ನನ್ನು ಬಂಧಿಸಿದ್ದಾರೆ.

ಇದಲ್ಲದೆ, ರಾಷ್ಟ್ರೀಯ ಹೆದ್ದಾರಿಯ ಉದ್ದಕ್ಕೂ ಅಗತ್ಯ ವಸ್ತುಗಳನ್ನು ಸಾಗಿಸುವ 371 ವಾಹನಗಳ ಚಲನೆಯನ್ನು ಕಟ್ಟುನಿಟ್ಟಾದ ಭದ್ರತಾ ಕ್ರಮಗಳ ಅಡಿಯಲ್ಲಿ ಖಾತ್ರಿಪಡಿಸಲಾಗಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ಸೇರಿಸಲಾಗಿದೆ. ಈ ವಾಹನಗಳ ಸುರಕ್ಷಿತ ಮಾರ್ಗವನ್ನು ಖಚಿತಪಡಿಸಿಕೊಳ್ಳಲು ಭದ್ರತಾ ಪಡೆಗಳು ಸೂಕ್ಷ್ಮ ಪ್ರದೇಶಗಳಲ್ಲಿ ಬೆಂಗಾವಲು ರಕ್ಷಣೆಯನ್ನು ಒದಗಿಸುತ್ತಿವೆ ಎಂದು ಹೇಳಿದ್ದಾರೆ.

ಅಧಿಕೃತ ಹೇಳಿಕೆಯ ಪ್ರಕಾರ, “ಮಣಿಪುರದ ವಿವಿಧ ಜಿಲ್ಲೆಗಳಲ್ಲಿ ಬೆಟ್ಟ ಮತ್ತು ಕಣಿವೆಯಲ್ಲಿ ಒಟ್ಟು 106 ನಕಾಸ್ / ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸಲಾಗಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಉಲ್ಲಂಘನೆಗಳಿಗೆ ಸಂಬಂಧಿಸಿದಂತೆ ಯಾರನ್ನೂ ಪೊಲೀಸರು ಬಂಧಿಸಿಲ್ಲ”

ವದಂತಿಗಳನ್ನು ನಂಬದಂತೆ ಮತ್ತು ಯಾವುದೇ ಸುಳ್ಳು ವೀಡಿಯೊಗಳನ್ನು ಪರಿಶೀಲಿಸುವಂತೆ ಮಣಿಪುರ ಪೊಲೀಸರು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ. ವದಂತಿ-ಮುಕ್ತ ಸಂಖ್ಯೆ 9233522822 ಕ್ಕೆ ಕೇಂದ್ರ ನಿಯಂತ್ರಣ ಕೊಠಡಿಯೊಂದಿಗೆ ಯಾವುದೇ ಪ್ರಸಾರವಾದ ವೀಡಿಯೊಗಳ ಸತ್ಯಾಸತ್ಯತೆಯನ್ನು ಖಚಿತಪಡಿಸಲು ಸಾರ್ವಜನಿಕರನ್ನು ಒತ್ತಾಯಿಸಲಾಗಿದೆ.

“ಲೂಟಿ ಮಾಡಿದ ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು ಮತ್ತು ಸ್ಫೋಟಕಗಳನ್ನು ತಕ್ಷಣವೇ ಪೊಲೀಸರಿಗೆ ಅಥವಾ ಹತ್ತಿರದ ಭದ್ರತಾ ಪಡೆಗಳಿಗೆ ಹಿಂದಿರುಗಿಸುವಂತೆ ಸಾರ್ವಜನಿಕರಿಗೆ ಮನವಿ ಮಾಡಲಾಗಿದೆ” ಎಂದು ಮಣಿಪುರ ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ; ಅಂಬೇಡ್ಕರ್ ಕುರಿತ ಅಮಿತ್ ಶಾ ಹೇಳಿಕೆ ಖಂಡಿಸಿ ನಿರ್ಣಯ ಅಂಗೀಕರಿಸಿದ ಡಿಎಂಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...