Homeಮುಖಪುಟಮಣಿಪುರ | ರಾಜ್ಯ ಸರ್ಕಾರದ ವಿರುದ್ಧ ತಿರುಗಿ ಬಿದ್ದ 7 ಬಿಜೆಪಿ ಶಾಸಕರು!

ಮಣಿಪುರ | ರಾಜ್ಯ ಸರ್ಕಾರದ ವಿರುದ್ಧ ತಿರುಗಿ ಬಿದ್ದ 7 ಬಿಜೆಪಿ ಶಾಸಕರು!

- Advertisement -
- Advertisement -

ಶಂಕಿತ ಕುಕಿ ಉಗ್ರಗಾಮಿಗಳ ವಿರುದ್ಧ ಕೇಂದ್ರ ಸರ್ಕಾರವು “ಸಾಮೂಹಿಕ ಕಾರ್ಯಾಚರಣೆ” ಪ್ರಾರಂಭಿಸಬೇಕೆಂದು ಒತ್ತಾಯಿಸಿ ಮಣಿಪುರದ ಆಡಳಿತಾರೂಢ ಎನ್‌ಡಿಎ ಶಾಸಕರು ಅಂಗೀಕರಿಸಿದ ನಿರ್ಣಯವು “ವಿಭಜಕ, ಏಕಪಕ್ಷೀಯ ಮತ್ತು ಕೋಮುವಾದ” ಆಗಿದೆ ಎಂದು ಕುಕಿ-ಹ್ಮಾರ್-ಜೋಮಿ ಬುಡಕಟ್ಟು ಸಮುದಾಯಗಳ ಹತ್ತು ಶಾಸಕರು ಹೇಳಿದ್ದಾರೆ. ಈ ಹತ್ತು ಶಾಸಕರಲ್ಲಿ 7 ಮಂದಿ ಬಿಜೆಪಿ ಪಕ್ಷದವರಾಗಿದ್ದು, ಒಬ್ಬರು ಪಕ್ಷೇತರ ಶಾಸಕ ಮತ್ತು ಇಬ್ಬರು ಕುಕಿ ಪೀಪಲ್ಸ್ ಅಲೈಯನ್ಸ್‌ ಶಾಸಕರಾಗಿದ್ದಾರೆ. ಮಣಿಪುರ

ಕೇವಲ ಒಂದು ಸಮುದಾಯದ ವಿರುದ್ಧ ಸಾಮೂಹಿಕ ಕಾರ್ಯಾಚರಣೆಯನ್ನು ಪ್ರಾರಂಭಿಸುವುದು ಪಕ್ಷಪಾತವಾಗಿದೆ ಎಂದು ಈ ಶಾಸಕರು ಹೇಳಿದ್ದಾರೆ. “ಎಲ್ಲಾ ಬಂಡುಕೋರ ಗುಂಪುಗಳಿಂದ ಎಲ್ಲಾ ಅಕ್ರಮ ಶಸ್ತ್ರಾಸ್ತ್ರಗಳನ್ನು ಮರುಪಡೆಯಲು ರಾಜ್ಯದಾದ್ಯಂತ ಸಾಮೂಹಿಕ ಕಾರ್ಯಾಚರಣೆಗಳನ್ನು ನಡೆಸಬೇಕು” ಎಂದು ಶಾಸಕರು ಹೇಳಿದ್ದಾರೆ. ಮಣಿಪುರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

10 ಮಂದಿ ಶಾಸಕರ ಹೇಳಿಕೆಗೂ ಒಂದು ದಿನ ಮುಂಚಿತವಾಗಿ, ನವೆಂಬರ್ 18 ರಂದು, ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ನೇತೃತ್ವದ 28 ಎನ್‌ಡಿಎ ಶಾಸಕರು ನವೆಂಬರ್ 11 ರಂದು ಜಿರಿಬಾಮ್‌ನಲ್ಲಿ ಆರು ಮೈತೇಯಿ ಮಹಿಳೆಯರು ಮತ್ತು ಮಕ್ಕಳನ್ನು ಅಪಹರಿಸಿ ಹತ್ಯೆಗೈದ ಶಂಕಿತ ಕುಕಿ ಉಗ್ರಗಾಮಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ನಿರ್ಣಯವನ್ನು ಅಂಗೀಕರಿಸಿದ್ದರು. ಈ ನಿರ್ಣಯದಲ್ಲಿ, ಏಳು ದಿನಗಳೊಳಗೆ ಶಂಕಿತ ಉಗ್ರರನ್ನು “ಕಾನೂನುಬಾಹಿರ ಸಂಘಟನೆ” ಎಂದು ಘೋಷಿಸುವಂತೆ ಕೇಂದ್ರವನ್ನು ಒತ್ತಾಯಿಸಲಾಗಿದೆ.

ರಾಜ್ಯದಲ್ಲಿ ಹಿಂಸಾಚಾರ ಹೆಚ್ಚುತ್ತಿರುವ ಕಾರಣ ರಾಜ್ಯದ ಐದು ಕಣಿವೆ ಜಿಲ್ಲೆಗಳಲ್ಲಿ ಸಶಸ್ತ್ರ ಪಡೆಗಳ ವಿಶೇಷ ಅಧಿಕಾರಗಳ ಕಾಯಿದೆ (AFSPA)ಯನ್ನು ಜಾರಿಗೊಳಿಸಿರುವುದನ್ನು ಪರಿಶೀಲಿಸುವಂತೆ ಎನ್‌ಡಿಎ ಶಾಸಕರು ಒತ್ತಾಯಿಸಿದ್ದರು. “ಸಾರ್ವಜನಿಕ ಸುವ್ಯವಸ್ಥೆಯ ನಿರ್ವಹಣೆ” ಗಾಗಿ ಶೋಧನೆ ನಡೆಸಲು, ಜನರನ್ನು ಬಂಧಿಸಲು ಮತ್ತು ಗುಂಡಿನ ದಾಳಿ ನಡೆಸಲು ಸೇನಾ ಸಿಬ್ಬಂದಿಗೆ AFSPA ಕಾಯಿದೆಯು ಅಧಿಕಾರವನ್ನು ನೀಡುತ್ತದೆ. ಒಂದು ವೇಳೆ ಈ ದಾಳಿಯಲ್ಲಿ ವ್ಯಕ್ತಿಯು ಮೃತಪಟ್ಟರೆ ಕಾಯಿದೆ ಸೇನಾ ಸಿಬ್ಬಂದಿಗೆ ರಕ್ಷಣೆ ನೀಡುತ್ತದೆ.

ಮುಖ್ಯಮಂತ್ರಿ ಬಿರೇನ್ ನೇತೃತ್ವದ ಎನ್‌ಡಿಎ ಶಾಸಕರ ಈ ನಿರ್ಣಯವನ್ನು ಕುಕಿ-ಹ್ಮಾರ್-ಝೋಮಿ ಸಮುದಾಯದ 10 ಶಾಸಕರು ವಿರೋಧಿಸಿದ್ದು, “ಏಕಪಕ್ಷೀಯವಾಗಿ ರಾಜ್ಯ ಸರ್ಕಾರವು ತಮಗೆ ಅನುಕೂಲಕರವಾಗಿ ಒಂದು ಬುಡಕಟ್ಟು ಸಮುದಾಯದ ಹಕ್ಕುಗಳನ್ನು ನಿಗ್ರಹಿಸುವ ಮತ್ತು ಮೊಟಕುಗೊಳಿಸುವಲ್ಲಿ ಜಿರಿಬಾಮ್ ಘಟನೆಯ ಅನಗತ್ಯ ಲಾಭವನ್ನು ಪಡೆಯುತ್ತಿದೆ. ರಾಜ್ಯ ಸರ್ಕಾರವು ಕೇಂದ್ರ ಸರ್ಕಾರವನ್ನು ಬೆದರಿಸುವ ಮಟ್ಟಕ್ಕೂ ಧೈರ್ಯಶಾಲಿಯಾಗಿ ವರ್ತಿಸಿದೆ” ಎಂದು ಅವರು ಆರೋಪಿಸಿದ್ದಾರೆ.

ಇತ್ತೀಚಿನ ಮೂರು ಪ್ರಕರಣಗಳನ್ನು ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ)ಗೆ ಹಸ್ತಾಂತರಿಸುವಂತೆ ಎನ್‌ಡಿಎ ಶಾಸಕರ ನಿರ್ಣಯವನ್ನು ಉಲ್ಲೇಖಿಸಿರುವ ಕುಕಿ-ಹ್ಮಾರ್-ಝೋಮಿ ಶಾಸಕರು, 2023ರ ಮೇ ತಿಂಗಳಲ್ಲಿ ಮೈತೇಯಿ ಮತ್ತು ಕುಕಿ-ಜೋ-ಹ್ಮಾರ್‌ಗಳ ನಡುವೆ ಘರ್ಷಣೆಗಳು ಭುಗಿಲೆದ್ದ ನಂತರ ನಡೆದ ಎಲ್ಲಾ ನಾಗರಿಕ ಹತ್ಯೆಗಳ ಪ್ರಕರಣಗಳನ್ನು ಎನ್‌ಐಎಗೆ ಹಸ್ತಾಂತರಿಸುವಂತೆ ಒತ್ತಾಯಿಸಿದ್ದಾರೆ.

2023ರ ಮೇ ತಿಂಗಳಲ್ಲಿ ಮೈತೇಯಿ ಮತ್ತು ಕುಕಿ-ಜೊ-ಹ್ಮಾರ್‌ ಸಮುದಾಯಗಳ ನಡುವೆ ಘರ್ಷಣೆಗಳು ಪ್ರಾರಂಭವಾದಾಗಿನಿಂದ ಕನಿಷ್ಠ 255 ಜನರು ಸಾವನ್ನಪ್ಪಿದ್ದಾರೆ. ಜೊತೆಗೆ 59,000 ಕ್ಕೂ ಹೆಚ್ಚು ಜನರು ನಿರಾಶ್ರಿತರಾಗಿದ್ದಾರೆ. ನವೆಂಬರ್ 14 ರಂದು, ಜನಾಂಗೀಯ ಹಿಂಸಾಚಾರದ ಉಲ್ಬಣದ ನಂತರ ಆರು ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ AFSPA ಕಾಯಿದೆಯನ್ನು ಜಾರಿ ಮಾಡಲಾಗಿದೆ. ಮಾಡಲಾಗಿದೆ. ಮಾಡಲಾಗಿದೆ.

ಇದನ್ನೂ ಓದಿ: ಮಣಿಪುರ ಹಿಂಸಾಚಾರ: ‘ಜಿರಿಬಾಮ್ ಎನ್‌ಕೌಂಟರ್‌ನಲ್ಲಿ ಹತರಾದವರು ಹುತಾತ್ಮರು’ ಎಂದು ಪ್ರತಿಪಾದಿಸಿದ ಕುಕಿ ಬಿಜೆಪಿ ಶಾಸಕ

ಇದನ್ನೂ ಓದಿ: ಮಣಿಪುರ ಹಿಂಸಾಚಾರ: ‘ಜಿರಿಬಾಮ್ ಎನ್‌ಕೌಂಟರ್‌ನಲ್ಲಿ ಹತರಾದವರು ಹುತಾತ್ಮರು’ ಎಂದು ಪ್ರತಿಪಾದಿಸಿದ ಕುಕಿ ಬಿಜೆಪಿ ಶಾಸಕ

ಮಣಿಪುರ ಹಿಂಸಾಚಾರ: ‘ಜಿರಿಬಾಮ್ ಎನ್‌ಕೌಂಟರ್‌ನಲ್ಲಿ ಹತರಾದವರು ಹುತಾತ್ಮರು’ ಎಂದು ಪ್ರತಿಪಾದಿಸಿದ ಕುಕಿ ಬಿಜೆಪಿ ಶಾಸಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...