Homeಮುಖಪುಟಮಣಿಪುರ | ರಾಜ್ಯ ಸರ್ಕಾರದ ವಿರುದ್ಧ ತಿರುಗಿ ಬಿದ್ದ 7 ಬಿಜೆಪಿ ಶಾಸಕರು!

ಮಣಿಪುರ | ರಾಜ್ಯ ಸರ್ಕಾರದ ವಿರುದ್ಧ ತಿರುಗಿ ಬಿದ್ದ 7 ಬಿಜೆಪಿ ಶಾಸಕರು!

- Advertisement -
- Advertisement -

ಶಂಕಿತ ಕುಕಿ ಉಗ್ರಗಾಮಿಗಳ ವಿರುದ್ಧ ಕೇಂದ್ರ ಸರ್ಕಾರವು “ಸಾಮೂಹಿಕ ಕಾರ್ಯಾಚರಣೆ” ಪ್ರಾರಂಭಿಸಬೇಕೆಂದು ಒತ್ತಾಯಿಸಿ ಮಣಿಪುರದ ಆಡಳಿತಾರೂಢ ಎನ್‌ಡಿಎ ಶಾಸಕರು ಅಂಗೀಕರಿಸಿದ ನಿರ್ಣಯವು “ವಿಭಜಕ, ಏಕಪಕ್ಷೀಯ ಮತ್ತು ಕೋಮುವಾದ” ಆಗಿದೆ ಎಂದು ಕುಕಿ-ಹ್ಮಾರ್-ಜೋಮಿ ಬುಡಕಟ್ಟು ಸಮುದಾಯಗಳ ಹತ್ತು ಶಾಸಕರು ಹೇಳಿದ್ದಾರೆ. ಈ ಹತ್ತು ಶಾಸಕರಲ್ಲಿ 7 ಮಂದಿ ಬಿಜೆಪಿ ಪಕ್ಷದವರಾಗಿದ್ದು, ಒಬ್ಬರು ಪಕ್ಷೇತರ ಶಾಸಕ ಮತ್ತು ಇಬ್ಬರು ಕುಕಿ ಪೀಪಲ್ಸ್ ಅಲೈಯನ್ಸ್‌ ಶಾಸಕರಾಗಿದ್ದಾರೆ. ಮಣಿಪುರ

ಕೇವಲ ಒಂದು ಸಮುದಾಯದ ವಿರುದ್ಧ ಸಾಮೂಹಿಕ ಕಾರ್ಯಾಚರಣೆಯನ್ನು ಪ್ರಾರಂಭಿಸುವುದು ಪಕ್ಷಪಾತವಾಗಿದೆ ಎಂದು ಈ ಶಾಸಕರು ಹೇಳಿದ್ದಾರೆ. “ಎಲ್ಲಾ ಬಂಡುಕೋರ ಗುಂಪುಗಳಿಂದ ಎಲ್ಲಾ ಅಕ್ರಮ ಶಸ್ತ್ರಾಸ್ತ್ರಗಳನ್ನು ಮರುಪಡೆಯಲು ರಾಜ್ಯದಾದ್ಯಂತ ಸಾಮೂಹಿಕ ಕಾರ್ಯಾಚರಣೆಗಳನ್ನು ನಡೆಸಬೇಕು” ಎಂದು ಶಾಸಕರು ಹೇಳಿದ್ದಾರೆ. ಮಣಿಪುರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

10 ಮಂದಿ ಶಾಸಕರ ಹೇಳಿಕೆಗೂ ಒಂದು ದಿನ ಮುಂಚಿತವಾಗಿ, ನವೆಂಬರ್ 18 ರಂದು, ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ನೇತೃತ್ವದ 28 ಎನ್‌ಡಿಎ ಶಾಸಕರು ನವೆಂಬರ್ 11 ರಂದು ಜಿರಿಬಾಮ್‌ನಲ್ಲಿ ಆರು ಮೈತೇಯಿ ಮಹಿಳೆಯರು ಮತ್ತು ಮಕ್ಕಳನ್ನು ಅಪಹರಿಸಿ ಹತ್ಯೆಗೈದ ಶಂಕಿತ ಕುಕಿ ಉಗ್ರಗಾಮಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ನಿರ್ಣಯವನ್ನು ಅಂಗೀಕರಿಸಿದ್ದರು. ಈ ನಿರ್ಣಯದಲ್ಲಿ, ಏಳು ದಿನಗಳೊಳಗೆ ಶಂಕಿತ ಉಗ್ರರನ್ನು “ಕಾನೂನುಬಾಹಿರ ಸಂಘಟನೆ” ಎಂದು ಘೋಷಿಸುವಂತೆ ಕೇಂದ್ರವನ್ನು ಒತ್ತಾಯಿಸಲಾಗಿದೆ.

ರಾಜ್ಯದಲ್ಲಿ ಹಿಂಸಾಚಾರ ಹೆಚ್ಚುತ್ತಿರುವ ಕಾರಣ ರಾಜ್ಯದ ಐದು ಕಣಿವೆ ಜಿಲ್ಲೆಗಳಲ್ಲಿ ಸಶಸ್ತ್ರ ಪಡೆಗಳ ವಿಶೇಷ ಅಧಿಕಾರಗಳ ಕಾಯಿದೆ (AFSPA)ಯನ್ನು ಜಾರಿಗೊಳಿಸಿರುವುದನ್ನು ಪರಿಶೀಲಿಸುವಂತೆ ಎನ್‌ಡಿಎ ಶಾಸಕರು ಒತ್ತಾಯಿಸಿದ್ದರು. “ಸಾರ್ವಜನಿಕ ಸುವ್ಯವಸ್ಥೆಯ ನಿರ್ವಹಣೆ” ಗಾಗಿ ಶೋಧನೆ ನಡೆಸಲು, ಜನರನ್ನು ಬಂಧಿಸಲು ಮತ್ತು ಗುಂಡಿನ ದಾಳಿ ನಡೆಸಲು ಸೇನಾ ಸಿಬ್ಬಂದಿಗೆ AFSPA ಕಾಯಿದೆಯು ಅಧಿಕಾರವನ್ನು ನೀಡುತ್ತದೆ. ಒಂದು ವೇಳೆ ಈ ದಾಳಿಯಲ್ಲಿ ವ್ಯಕ್ತಿಯು ಮೃತಪಟ್ಟರೆ ಕಾಯಿದೆ ಸೇನಾ ಸಿಬ್ಬಂದಿಗೆ ರಕ್ಷಣೆ ನೀಡುತ್ತದೆ.

ಮುಖ್ಯಮಂತ್ರಿ ಬಿರೇನ್ ನೇತೃತ್ವದ ಎನ್‌ಡಿಎ ಶಾಸಕರ ಈ ನಿರ್ಣಯವನ್ನು ಕುಕಿ-ಹ್ಮಾರ್-ಝೋಮಿ ಸಮುದಾಯದ 10 ಶಾಸಕರು ವಿರೋಧಿಸಿದ್ದು, “ಏಕಪಕ್ಷೀಯವಾಗಿ ರಾಜ್ಯ ಸರ್ಕಾರವು ತಮಗೆ ಅನುಕೂಲಕರವಾಗಿ ಒಂದು ಬುಡಕಟ್ಟು ಸಮುದಾಯದ ಹಕ್ಕುಗಳನ್ನು ನಿಗ್ರಹಿಸುವ ಮತ್ತು ಮೊಟಕುಗೊಳಿಸುವಲ್ಲಿ ಜಿರಿಬಾಮ್ ಘಟನೆಯ ಅನಗತ್ಯ ಲಾಭವನ್ನು ಪಡೆಯುತ್ತಿದೆ. ರಾಜ್ಯ ಸರ್ಕಾರವು ಕೇಂದ್ರ ಸರ್ಕಾರವನ್ನು ಬೆದರಿಸುವ ಮಟ್ಟಕ್ಕೂ ಧೈರ್ಯಶಾಲಿಯಾಗಿ ವರ್ತಿಸಿದೆ” ಎಂದು ಅವರು ಆರೋಪಿಸಿದ್ದಾರೆ.

ಇತ್ತೀಚಿನ ಮೂರು ಪ್ರಕರಣಗಳನ್ನು ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ)ಗೆ ಹಸ್ತಾಂತರಿಸುವಂತೆ ಎನ್‌ಡಿಎ ಶಾಸಕರ ನಿರ್ಣಯವನ್ನು ಉಲ್ಲೇಖಿಸಿರುವ ಕುಕಿ-ಹ್ಮಾರ್-ಝೋಮಿ ಶಾಸಕರು, 2023ರ ಮೇ ತಿಂಗಳಲ್ಲಿ ಮೈತೇಯಿ ಮತ್ತು ಕುಕಿ-ಜೋ-ಹ್ಮಾರ್‌ಗಳ ನಡುವೆ ಘರ್ಷಣೆಗಳು ಭುಗಿಲೆದ್ದ ನಂತರ ನಡೆದ ಎಲ್ಲಾ ನಾಗರಿಕ ಹತ್ಯೆಗಳ ಪ್ರಕರಣಗಳನ್ನು ಎನ್‌ಐಎಗೆ ಹಸ್ತಾಂತರಿಸುವಂತೆ ಒತ್ತಾಯಿಸಿದ್ದಾರೆ.

2023ರ ಮೇ ತಿಂಗಳಲ್ಲಿ ಮೈತೇಯಿ ಮತ್ತು ಕುಕಿ-ಜೊ-ಹ್ಮಾರ್‌ ಸಮುದಾಯಗಳ ನಡುವೆ ಘರ್ಷಣೆಗಳು ಪ್ರಾರಂಭವಾದಾಗಿನಿಂದ ಕನಿಷ್ಠ 255 ಜನರು ಸಾವನ್ನಪ್ಪಿದ್ದಾರೆ. ಜೊತೆಗೆ 59,000 ಕ್ಕೂ ಹೆಚ್ಚು ಜನರು ನಿರಾಶ್ರಿತರಾಗಿದ್ದಾರೆ. ನವೆಂಬರ್ 14 ರಂದು, ಜನಾಂಗೀಯ ಹಿಂಸಾಚಾರದ ಉಲ್ಬಣದ ನಂತರ ಆರು ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ AFSPA ಕಾಯಿದೆಯನ್ನು ಜಾರಿ ಮಾಡಲಾಗಿದೆ. ಮಾಡಲಾಗಿದೆ. ಮಾಡಲಾಗಿದೆ.

ಇದನ್ನೂ ಓದಿ: ಮಣಿಪುರ ಹಿಂಸಾಚಾರ: ‘ಜಿರಿಬಾಮ್ ಎನ್‌ಕೌಂಟರ್‌ನಲ್ಲಿ ಹತರಾದವರು ಹುತಾತ್ಮರು’ ಎಂದು ಪ್ರತಿಪಾದಿಸಿದ ಕುಕಿ ಬಿಜೆಪಿ ಶಾಸಕ

ಇದನ್ನೂ ಓದಿ: ಮಣಿಪುರ ಹಿಂಸಾಚಾರ: ‘ಜಿರಿಬಾಮ್ ಎನ್‌ಕೌಂಟರ್‌ನಲ್ಲಿ ಹತರಾದವರು ಹುತಾತ್ಮರು’ ಎಂದು ಪ್ರತಿಪಾದಿಸಿದ ಕುಕಿ ಬಿಜೆಪಿ ಶಾಸಕ

ಮಣಿಪುರ ಹಿಂಸಾಚಾರ: ‘ಜಿರಿಬಾಮ್ ಎನ್‌ಕೌಂಟರ್‌ನಲ್ಲಿ ಹತರಾದವರು ಹುತಾತ್ಮರು’ ಎಂದು ಪ್ರತಿಪಾದಿಸಿದ ಕುಕಿ ಬಿಜೆಪಿ ಶಾಸಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...