Homeಮುಖಪುಟಮಣಿಪುರ | ರಾಜ್ಯ ಸರ್ಕಾರದ ವಿರುದ್ಧ ತಿರುಗಿ ಬಿದ್ದ 7 ಬಿಜೆಪಿ ಶಾಸಕರು!

ಮಣಿಪುರ | ರಾಜ್ಯ ಸರ್ಕಾರದ ವಿರುದ್ಧ ತಿರುಗಿ ಬಿದ್ದ 7 ಬಿಜೆಪಿ ಶಾಸಕರು!

- Advertisement -
- Advertisement -

ಶಂಕಿತ ಕುಕಿ ಉಗ್ರಗಾಮಿಗಳ ವಿರುದ್ಧ ಕೇಂದ್ರ ಸರ್ಕಾರವು “ಸಾಮೂಹಿಕ ಕಾರ್ಯಾಚರಣೆ” ಪ್ರಾರಂಭಿಸಬೇಕೆಂದು ಒತ್ತಾಯಿಸಿ ಮಣಿಪುರದ ಆಡಳಿತಾರೂಢ ಎನ್‌ಡಿಎ ಶಾಸಕರು ಅಂಗೀಕರಿಸಿದ ನಿರ್ಣಯವು “ವಿಭಜಕ, ಏಕಪಕ್ಷೀಯ ಮತ್ತು ಕೋಮುವಾದ” ಆಗಿದೆ ಎಂದು ಕುಕಿ-ಹ್ಮಾರ್-ಜೋಮಿ ಬುಡಕಟ್ಟು ಸಮುದಾಯಗಳ ಹತ್ತು ಶಾಸಕರು ಹೇಳಿದ್ದಾರೆ. ಈ ಹತ್ತು ಶಾಸಕರಲ್ಲಿ 7 ಮಂದಿ ಬಿಜೆಪಿ ಪಕ್ಷದವರಾಗಿದ್ದು, ಒಬ್ಬರು ಪಕ್ಷೇತರ ಶಾಸಕ ಮತ್ತು ಇಬ್ಬರು ಕುಕಿ ಪೀಪಲ್ಸ್ ಅಲೈಯನ್ಸ್‌ ಶಾಸಕರಾಗಿದ್ದಾರೆ. ಮಣಿಪುರ

ಕೇವಲ ಒಂದು ಸಮುದಾಯದ ವಿರುದ್ಧ ಸಾಮೂಹಿಕ ಕಾರ್ಯಾಚರಣೆಯನ್ನು ಪ್ರಾರಂಭಿಸುವುದು ಪಕ್ಷಪಾತವಾಗಿದೆ ಎಂದು ಈ ಶಾಸಕರು ಹೇಳಿದ್ದಾರೆ. “ಎಲ್ಲಾ ಬಂಡುಕೋರ ಗುಂಪುಗಳಿಂದ ಎಲ್ಲಾ ಅಕ್ರಮ ಶಸ್ತ್ರಾಸ್ತ್ರಗಳನ್ನು ಮರುಪಡೆಯಲು ರಾಜ್ಯದಾದ್ಯಂತ ಸಾಮೂಹಿಕ ಕಾರ್ಯಾಚರಣೆಗಳನ್ನು ನಡೆಸಬೇಕು” ಎಂದು ಶಾಸಕರು ಹೇಳಿದ್ದಾರೆ. ಮಣಿಪುರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

10 ಮಂದಿ ಶಾಸಕರ ಹೇಳಿಕೆಗೂ ಒಂದು ದಿನ ಮುಂಚಿತವಾಗಿ, ನವೆಂಬರ್ 18 ರಂದು, ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ನೇತೃತ್ವದ 28 ಎನ್‌ಡಿಎ ಶಾಸಕರು ನವೆಂಬರ್ 11 ರಂದು ಜಿರಿಬಾಮ್‌ನಲ್ಲಿ ಆರು ಮೈತೇಯಿ ಮಹಿಳೆಯರು ಮತ್ತು ಮಕ್ಕಳನ್ನು ಅಪಹರಿಸಿ ಹತ್ಯೆಗೈದ ಶಂಕಿತ ಕುಕಿ ಉಗ್ರಗಾಮಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ನಿರ್ಣಯವನ್ನು ಅಂಗೀಕರಿಸಿದ್ದರು. ಈ ನಿರ್ಣಯದಲ್ಲಿ, ಏಳು ದಿನಗಳೊಳಗೆ ಶಂಕಿತ ಉಗ್ರರನ್ನು “ಕಾನೂನುಬಾಹಿರ ಸಂಘಟನೆ” ಎಂದು ಘೋಷಿಸುವಂತೆ ಕೇಂದ್ರವನ್ನು ಒತ್ತಾಯಿಸಲಾಗಿದೆ.

ರಾಜ್ಯದಲ್ಲಿ ಹಿಂಸಾಚಾರ ಹೆಚ್ಚುತ್ತಿರುವ ಕಾರಣ ರಾಜ್ಯದ ಐದು ಕಣಿವೆ ಜಿಲ್ಲೆಗಳಲ್ಲಿ ಸಶಸ್ತ್ರ ಪಡೆಗಳ ವಿಶೇಷ ಅಧಿಕಾರಗಳ ಕಾಯಿದೆ (AFSPA)ಯನ್ನು ಜಾರಿಗೊಳಿಸಿರುವುದನ್ನು ಪರಿಶೀಲಿಸುವಂತೆ ಎನ್‌ಡಿಎ ಶಾಸಕರು ಒತ್ತಾಯಿಸಿದ್ದರು. “ಸಾರ್ವಜನಿಕ ಸುವ್ಯವಸ್ಥೆಯ ನಿರ್ವಹಣೆ” ಗಾಗಿ ಶೋಧನೆ ನಡೆಸಲು, ಜನರನ್ನು ಬಂಧಿಸಲು ಮತ್ತು ಗುಂಡಿನ ದಾಳಿ ನಡೆಸಲು ಸೇನಾ ಸಿಬ್ಬಂದಿಗೆ AFSPA ಕಾಯಿದೆಯು ಅಧಿಕಾರವನ್ನು ನೀಡುತ್ತದೆ. ಒಂದು ವೇಳೆ ಈ ದಾಳಿಯಲ್ಲಿ ವ್ಯಕ್ತಿಯು ಮೃತಪಟ್ಟರೆ ಕಾಯಿದೆ ಸೇನಾ ಸಿಬ್ಬಂದಿಗೆ ರಕ್ಷಣೆ ನೀಡುತ್ತದೆ.

ಮುಖ್ಯಮಂತ್ರಿ ಬಿರೇನ್ ನೇತೃತ್ವದ ಎನ್‌ಡಿಎ ಶಾಸಕರ ಈ ನಿರ್ಣಯವನ್ನು ಕುಕಿ-ಹ್ಮಾರ್-ಝೋಮಿ ಸಮುದಾಯದ 10 ಶಾಸಕರು ವಿರೋಧಿಸಿದ್ದು, “ಏಕಪಕ್ಷೀಯವಾಗಿ ರಾಜ್ಯ ಸರ್ಕಾರವು ತಮಗೆ ಅನುಕೂಲಕರವಾಗಿ ಒಂದು ಬುಡಕಟ್ಟು ಸಮುದಾಯದ ಹಕ್ಕುಗಳನ್ನು ನಿಗ್ರಹಿಸುವ ಮತ್ತು ಮೊಟಕುಗೊಳಿಸುವಲ್ಲಿ ಜಿರಿಬಾಮ್ ಘಟನೆಯ ಅನಗತ್ಯ ಲಾಭವನ್ನು ಪಡೆಯುತ್ತಿದೆ. ರಾಜ್ಯ ಸರ್ಕಾರವು ಕೇಂದ್ರ ಸರ್ಕಾರವನ್ನು ಬೆದರಿಸುವ ಮಟ್ಟಕ್ಕೂ ಧೈರ್ಯಶಾಲಿಯಾಗಿ ವರ್ತಿಸಿದೆ” ಎಂದು ಅವರು ಆರೋಪಿಸಿದ್ದಾರೆ.

ಇತ್ತೀಚಿನ ಮೂರು ಪ್ರಕರಣಗಳನ್ನು ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ)ಗೆ ಹಸ್ತಾಂತರಿಸುವಂತೆ ಎನ್‌ಡಿಎ ಶಾಸಕರ ನಿರ್ಣಯವನ್ನು ಉಲ್ಲೇಖಿಸಿರುವ ಕುಕಿ-ಹ್ಮಾರ್-ಝೋಮಿ ಶಾಸಕರು, 2023ರ ಮೇ ತಿಂಗಳಲ್ಲಿ ಮೈತೇಯಿ ಮತ್ತು ಕುಕಿ-ಜೋ-ಹ್ಮಾರ್‌ಗಳ ನಡುವೆ ಘರ್ಷಣೆಗಳು ಭುಗಿಲೆದ್ದ ನಂತರ ನಡೆದ ಎಲ್ಲಾ ನಾಗರಿಕ ಹತ್ಯೆಗಳ ಪ್ರಕರಣಗಳನ್ನು ಎನ್‌ಐಎಗೆ ಹಸ್ತಾಂತರಿಸುವಂತೆ ಒತ್ತಾಯಿಸಿದ್ದಾರೆ.

2023ರ ಮೇ ತಿಂಗಳಲ್ಲಿ ಮೈತೇಯಿ ಮತ್ತು ಕುಕಿ-ಜೊ-ಹ್ಮಾರ್‌ ಸಮುದಾಯಗಳ ನಡುವೆ ಘರ್ಷಣೆಗಳು ಪ್ರಾರಂಭವಾದಾಗಿನಿಂದ ಕನಿಷ್ಠ 255 ಜನರು ಸಾವನ್ನಪ್ಪಿದ್ದಾರೆ. ಜೊತೆಗೆ 59,000 ಕ್ಕೂ ಹೆಚ್ಚು ಜನರು ನಿರಾಶ್ರಿತರಾಗಿದ್ದಾರೆ. ನವೆಂಬರ್ 14 ರಂದು, ಜನಾಂಗೀಯ ಹಿಂಸಾಚಾರದ ಉಲ್ಬಣದ ನಂತರ ಆರು ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ AFSPA ಕಾಯಿದೆಯನ್ನು ಜಾರಿ ಮಾಡಲಾಗಿದೆ. ಮಾಡಲಾಗಿದೆ. ಮಾಡಲಾಗಿದೆ.

ಇದನ್ನೂ ಓದಿ: ಮಣಿಪುರ ಹಿಂಸಾಚಾರ: ‘ಜಿರಿಬಾಮ್ ಎನ್‌ಕೌಂಟರ್‌ನಲ್ಲಿ ಹತರಾದವರು ಹುತಾತ್ಮರು’ ಎಂದು ಪ್ರತಿಪಾದಿಸಿದ ಕುಕಿ ಬಿಜೆಪಿ ಶಾಸಕ

ಇದನ್ನೂ ಓದಿ: ಮಣಿಪುರ ಹಿಂಸಾಚಾರ: ‘ಜಿರಿಬಾಮ್ ಎನ್‌ಕೌಂಟರ್‌ನಲ್ಲಿ ಹತರಾದವರು ಹುತಾತ್ಮರು’ ಎಂದು ಪ್ರತಿಪಾದಿಸಿದ ಕುಕಿ ಬಿಜೆಪಿ ಶಾಸಕ

ಮಣಿಪುರ ಹಿಂಸಾಚಾರ: ‘ಜಿರಿಬಾಮ್ ಎನ್‌ಕೌಂಟರ್‌ನಲ್ಲಿ ಹತರಾದವರು ಹುತಾತ್ಮರು’ ಎಂದು ಪ್ರತಿಪಾದಿಸಿದ ಕುಕಿ ಬಿಜೆಪಿ ಶಾಸಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...