Homeಕರ್ನಾಟಕಮಣಿಪುರ: ಸುಪ್ರೀಂ ಚಾಟಿ ಏಟು ಡಬಲ್ ಇಂಜೀನ್ ಸರ್ಕಾರಕ್ಕೆ ತಾಗುತ್ತಿಲ್ಲ; ಮೋದಿ ವಿರುದ್ಧ ಗುಡುಗಿದ ಗುಂಡೂರಾವ್‌

ಮಣಿಪುರ: ಸುಪ್ರೀಂ ಚಾಟಿ ಏಟು ಡಬಲ್ ಇಂಜೀನ್ ಸರ್ಕಾರಕ್ಕೆ ತಾಗುತ್ತಿಲ್ಲ; ಮೋದಿ ವಿರುದ್ಧ ಗುಡುಗಿದ ಗುಂಡೂರಾವ್‌

- Advertisement -
- Advertisement -

ಮಣಿಪುರದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯು ಸಂಪೂರ್ಣ ಹಳಿ ತಪ್ಪಿದೆ. ಆಡಳಿತ ಯಂತ್ರ ತುಕ್ಕು ಹಿಡಿದಿದೆ ಎಂದು ಮುಖ್ಯಮಂತ್ರಿ ಬಿರೇನ್ ಸಿಂಗ್ ನೇತೃತ್ವದ ಬಿಜೆಪಿ ಸರ್ಕಾರವನ್ನು ಸುಪ್ರೀಂ ಕೋರ್ಟ್‌ ತರಾಟೆ ತೆಗೆದುಕೊಂಡಿದೆ.

ಈ ವಿಚಾರವಾಗಿ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಸರಣಿ ಟ್ವೀಟ್ ಮೂಲಕ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ”ಮಣಿಪುರ ಗಲಭೆ ಸಂಬಂಧ ಸುಪ್ರೀಂ ಕೋರ್ಟ್, ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಪದೇ ಪದೇ ಚಾಟಿ ಬೀಸುತ್ತಲೇ ಇದೆ. ಇಷ್ಟಾದರೂ ಡಬಲ್ ಇಂಜೀನ್ ಸರ್ಕಾರದ ದಪ್ಪ ಚರ್ಮಕ್ಕೆ ಯಾವುದೇ ಚಾಟಿ ಏಟು ತಾಗುತ್ತಿಲ್ಲ. ಮಣಿಪುರ ವಿಚಾರದಲ್ಲಿ ದಿವ್ಯ ನಿರ್ಲಕ್ಷ್ಯ ತಾಳಿರುವ ಕೇಂದ್ರ ಭಾರತದ ನೆಲದಲ್ಲಿ ಸುದೀರ್ಘ ರಕ್ತಸಿಕ್ತ ಅಧ್ಯಾಯ ಬರೆಯಲು ಮುಂದಾಗಿದೆ” ಎಂದು ಹೇಳಿದ್ದಾರೆ.

”ಮಣಿಪುರ ವಿಚಾರದಲ್ಲಿ ಪ್ರಧಾನಿಯವರು ಯಾಕೆ ಮೌನ ಮುರಿಯುತ್ತಿಲ್ಲ? ಅವರ ಮೌನದ ಹಿಂದಿರುವುದು ಅಸಹಾಯಕತೆಯೋ ಅಥವಾ ರಾಜಕೀಯ ಲಾಭ ಗಳಿಸುವ ಕುಯುಕ್ತಿಯೋ ತಿಳಿಯುತ್ತಿಲ್ಲ. ಗುಜರಾತ್ ಗಲಭೆ ಸಂದರ್ಭದಲ್ಲೂ ಮೋದಿ ಇದೇ ಮೌನ ವಹಿಸಿದ್ದರು. ಈಗ ಪ್ರಧಾನಿಯಾದಾಗಲೂ ಮಣಿಪುರ ವಿಚಾರದಲ್ಲಿ ಮೌನವಹಿಸಿದ್ದಾರೆ. ಮೋದಿಯವರ ಮೌನದ ಹಿಂದಿನ ಮರ್ಮವೇನು?” ಎಂದು ಪ್ರಶ್ನಿಸಿದ್ದಾರೆ.

”ಗುಜರಾತ್ ಗಲಭೆ ನಡೆಯುವಾಗ ಕೇಂದ್ರದಲ್ಲಿ BJP ಸರ್ಕಾರವಿತ್ತು. ಈಗ ಮಣಿಪುರದಲ್ಲಿ ಗಲಭೆ ನಡೆಯುತ್ತಿರುವಾಗಲೂ ಕೇಂದ್ರದಲ್ಲಿ BJPಸರ್ಕಾರವೇ ಇದೆ. ಕನಿಷ್ಠ ಪಕ್ಷ ಅಂದು ಪ್ರಧಾನಿಯಾಗಿದ್ದ ವಾಜಪೇಯಿ ಮೋದಿಯವರಿಗೆ ‘ರಾಜಧರ್ಮ’ ಪಾಲಿಸುವಂತೆ ಹೇಳಿದ್ದರು. ಈಗ ಮತ್ತೊಮ್ಮೆ ಮೋದಿಯವರಿಗೆ ರಾಜಧರ್ಮ ಪಾಲಿಸುವಂತೆ ಹೇಳಲು BJPಯಲ್ಲಿ ಯಾರಿಗೆ ತಾಕತ್ತಿದೆ?” ಎಂದು ಕೇಳಿದ್ದಾರೆ.

ಮೋದಿಯವರು ನಿರಂತರವಾಗಿ, ನಿರರ್ಗಳವಾಗಿ, ಮಾತಾಡುತ್ತಲೇ ಇರುತ್ತಾರೆ. ಮೋದಿಯವರು ಮೌನವಾಗಿರುವುದು ಬುದ್ಧಿವಂತರ ಲಕ್ಷಣ ಎಂಬುದನ್ನು ಬಲವಾಗಿ ನಂಬಿದ್ದಾರೆ. ಆದರೆ ಕೆಲವೊಮ್ಮೆ ಕೆಲವು ವಿಚಾರಗಳ ಸಮರ್ಥನೆಗೆ ಪದಗಳು ಸಿಗದಿರುವ ಅಜ್ಞಾನವೂ ಮೌನಕ್ಕೆ ಕಾರಣವಾಗುತ್ತದೆ ಎಂದು ಪ್ರಧಾನಿ ಮೋದಿ ವಿರುದ್ದ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಕಿಡಿಕಾರಿದ್ದಾರೆ.

ಮೋದಿಯವರು ಮೌನವಾಗುವ ಸಂದರ್ಭಗಳು.

* ಗಲಭೆಗಳಾದಾಗ

* ಸಾಮೂಹಿಕ ನರಮೇಧಗಳಾಗುವಾಗ

* ಮಹಿಳೆಯರ ನಗ್ನ ಮೆರೆವಣಿಗೆಯಾಗುವಾಗ

* ಬೆಲೆಯೇರಿಕೆಯಾದಾಗ

* PMCares ಫಂಡ್ ಬಗ್ಗೆ ಕೇಳಿದಾಗ

* 2 ಕೋಟಿ ಉದ್ಯೋಗದ ಬಗ್ಗೆ ಕೇಳಿದಾಗ

* ಕಪ್ಪುಹಣದ ಬಗ್ಗೆ ಕೇಳಿದಾಗ

* ಟೆಲಿಪ್ರಾಂಪ್ಟರ್ ಕೈ ಕೊಟ್ಟಾಗ ಈ ಸಂದರ್ಭಗಳಲ್ಲಿ ಮೋದಿ ಕಠೋರ ಮೌನ ತಪಸ್ವಿಗಳಾಗುತ್ತಾರೆ.

 

ಮೋದಿಯವರು ಮಾತನಾಡುವ ಸಂದರ್ಭಗಳು.

* ಚುನಾವಣೆ ಬಂದಾಗ

* ಪ್ರಚಾರಕ್ಕೆ ಕರೆದಾಗ

* ಮನ್ ಕಿ ಬಾತ್ ಕಾರ್ಯಕ್ರಮವಿದ್ದಾಗ

* ಎದುರಿಗೆ ಪ್ರಶ್ನೆ ಮಾಡದ ಪತ್ರಕರ್ತರಿಲ್ಲದಿದ್ದಾಗ

* ಜೀ ಹುಜೂರ್ ಎಂದು ಅಡ್ಡಡ್ಡ ಬೀಳುವ ತಮ್ಮ‌ ಪಕ್ಷದ ನಾಯಕರು ಎದುರಿರುವಾಗ ಈ ಸಂದರ್ಭಗಳಲ್ಲಿ ‌ಮೋದಿಯವರು ನಿರಂತರವಾಗಿ, ನಿರರ್ಗಳವಾಗಿ, ಮಾತಾಡುತ್ತಲೇ ಇರುತ್ತಾರೆ.

”ಮೋದಿಯವರು ಮೌನವಾಗಿರುವುದು ಬುದ್ಧಿವಂತರ ಲಕ್ಷಣ ಎಂಬುದನ್ನು ಬಲವಾಗಿ ನಂಬಿದ್ದಾರೆ. ಆದರೆ ಕೆಲವೊಮ್ಮೆ ಕೆಲವು ವಿಚಾರಗಳ ಸಮರ್ಥನೆಗೆ ಪದಗಳು ಸಿಗದಿರುವ ಅಜ್ಞಾನವೂ ಮೌನಕ್ಕೆ ಕಾರಣವಾಗುತ್ತದೆ. ಮಣಿಪುರ ಗಲಭೆಗೆ ಸಂಬಂಧಪಟ್ಟಂತೆ ಮೋದಿಯವರ ಮೌನವನ್ನು ಬುದ್ಧಿವಂತರ ಲಕ್ಷಣವೆನ್ನಬೇಕೋ ಅಥವಾ ಸಮರ್ಥಿಸಿಕೊಳ್ಳಲು ಆಗದ ಅಜ್ಞಾನವೆನ್ನಬೇಕೋ?” ಎಂದು ದಿನೇಶ್‌ ಗುಂಡೂರಾವ್‌ ಟೀಕಿಸಿದ್ದಾರೆ.

ಇದನ್ನೂ ಓದಿ: ಮಣಿಪುರ ಬೆತ್ತಲೆ ಪ್ರಕರಣದಲ್ಲಿ FIR ವಿಳಂಬ: ‘14 ದಿನಗಳಿಂದ ಪೊಲೀಸರು ಏನು ಮಾಡುತ್ತಿದ್ದರು?’- ಸುಪ್ರೀಂ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...