Homeಕರ್ನಾಟಕಮಣಿಪುರ: ಸುಪ್ರೀಂ ಚಾಟಿ ಏಟು ಡಬಲ್ ಇಂಜೀನ್ ಸರ್ಕಾರಕ್ಕೆ ತಾಗುತ್ತಿಲ್ಲ; ಮೋದಿ ವಿರುದ್ಧ ಗುಡುಗಿದ ಗುಂಡೂರಾವ್‌

ಮಣಿಪುರ: ಸುಪ್ರೀಂ ಚಾಟಿ ಏಟು ಡಬಲ್ ಇಂಜೀನ್ ಸರ್ಕಾರಕ್ಕೆ ತಾಗುತ್ತಿಲ್ಲ; ಮೋದಿ ವಿರುದ್ಧ ಗುಡುಗಿದ ಗುಂಡೂರಾವ್‌

- Advertisement -
- Advertisement -

ಮಣಿಪುರದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯು ಸಂಪೂರ್ಣ ಹಳಿ ತಪ್ಪಿದೆ. ಆಡಳಿತ ಯಂತ್ರ ತುಕ್ಕು ಹಿಡಿದಿದೆ ಎಂದು ಮುಖ್ಯಮಂತ್ರಿ ಬಿರೇನ್ ಸಿಂಗ್ ನೇತೃತ್ವದ ಬಿಜೆಪಿ ಸರ್ಕಾರವನ್ನು ಸುಪ್ರೀಂ ಕೋರ್ಟ್‌ ತರಾಟೆ ತೆಗೆದುಕೊಂಡಿದೆ.

ಈ ವಿಚಾರವಾಗಿ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಸರಣಿ ಟ್ವೀಟ್ ಮೂಲಕ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ”ಮಣಿಪುರ ಗಲಭೆ ಸಂಬಂಧ ಸುಪ್ರೀಂ ಕೋರ್ಟ್, ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಪದೇ ಪದೇ ಚಾಟಿ ಬೀಸುತ್ತಲೇ ಇದೆ. ಇಷ್ಟಾದರೂ ಡಬಲ್ ಇಂಜೀನ್ ಸರ್ಕಾರದ ದಪ್ಪ ಚರ್ಮಕ್ಕೆ ಯಾವುದೇ ಚಾಟಿ ಏಟು ತಾಗುತ್ತಿಲ್ಲ. ಮಣಿಪುರ ವಿಚಾರದಲ್ಲಿ ದಿವ್ಯ ನಿರ್ಲಕ್ಷ್ಯ ತಾಳಿರುವ ಕೇಂದ್ರ ಭಾರತದ ನೆಲದಲ್ಲಿ ಸುದೀರ್ಘ ರಕ್ತಸಿಕ್ತ ಅಧ್ಯಾಯ ಬರೆಯಲು ಮುಂದಾಗಿದೆ” ಎಂದು ಹೇಳಿದ್ದಾರೆ.

”ಮಣಿಪುರ ವಿಚಾರದಲ್ಲಿ ಪ್ರಧಾನಿಯವರು ಯಾಕೆ ಮೌನ ಮುರಿಯುತ್ತಿಲ್ಲ? ಅವರ ಮೌನದ ಹಿಂದಿರುವುದು ಅಸಹಾಯಕತೆಯೋ ಅಥವಾ ರಾಜಕೀಯ ಲಾಭ ಗಳಿಸುವ ಕುಯುಕ್ತಿಯೋ ತಿಳಿಯುತ್ತಿಲ್ಲ. ಗುಜರಾತ್ ಗಲಭೆ ಸಂದರ್ಭದಲ್ಲೂ ಮೋದಿ ಇದೇ ಮೌನ ವಹಿಸಿದ್ದರು. ಈಗ ಪ್ರಧಾನಿಯಾದಾಗಲೂ ಮಣಿಪುರ ವಿಚಾರದಲ್ಲಿ ಮೌನವಹಿಸಿದ್ದಾರೆ. ಮೋದಿಯವರ ಮೌನದ ಹಿಂದಿನ ಮರ್ಮವೇನು?” ಎಂದು ಪ್ರಶ್ನಿಸಿದ್ದಾರೆ.

”ಗುಜರಾತ್ ಗಲಭೆ ನಡೆಯುವಾಗ ಕೇಂದ್ರದಲ್ಲಿ BJP ಸರ್ಕಾರವಿತ್ತು. ಈಗ ಮಣಿಪುರದಲ್ಲಿ ಗಲಭೆ ನಡೆಯುತ್ತಿರುವಾಗಲೂ ಕೇಂದ್ರದಲ್ಲಿ BJPಸರ್ಕಾರವೇ ಇದೆ. ಕನಿಷ್ಠ ಪಕ್ಷ ಅಂದು ಪ್ರಧಾನಿಯಾಗಿದ್ದ ವಾಜಪೇಯಿ ಮೋದಿಯವರಿಗೆ ‘ರಾಜಧರ್ಮ’ ಪಾಲಿಸುವಂತೆ ಹೇಳಿದ್ದರು. ಈಗ ಮತ್ತೊಮ್ಮೆ ಮೋದಿಯವರಿಗೆ ರಾಜಧರ್ಮ ಪಾಲಿಸುವಂತೆ ಹೇಳಲು BJPಯಲ್ಲಿ ಯಾರಿಗೆ ತಾಕತ್ತಿದೆ?” ಎಂದು ಕೇಳಿದ್ದಾರೆ.

ಮೋದಿಯವರು ನಿರಂತರವಾಗಿ, ನಿರರ್ಗಳವಾಗಿ, ಮಾತಾಡುತ್ತಲೇ ಇರುತ್ತಾರೆ. ಮೋದಿಯವರು ಮೌನವಾಗಿರುವುದು ಬುದ್ಧಿವಂತರ ಲಕ್ಷಣ ಎಂಬುದನ್ನು ಬಲವಾಗಿ ನಂಬಿದ್ದಾರೆ. ಆದರೆ ಕೆಲವೊಮ್ಮೆ ಕೆಲವು ವಿಚಾರಗಳ ಸಮರ್ಥನೆಗೆ ಪದಗಳು ಸಿಗದಿರುವ ಅಜ್ಞಾನವೂ ಮೌನಕ್ಕೆ ಕಾರಣವಾಗುತ್ತದೆ ಎಂದು ಪ್ರಧಾನಿ ಮೋದಿ ವಿರುದ್ದ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಕಿಡಿಕಾರಿದ್ದಾರೆ.

ಮೋದಿಯವರು ಮೌನವಾಗುವ ಸಂದರ್ಭಗಳು.

* ಗಲಭೆಗಳಾದಾಗ

* ಸಾಮೂಹಿಕ ನರಮೇಧಗಳಾಗುವಾಗ

* ಮಹಿಳೆಯರ ನಗ್ನ ಮೆರೆವಣಿಗೆಯಾಗುವಾಗ

* ಬೆಲೆಯೇರಿಕೆಯಾದಾಗ

* PMCares ಫಂಡ್ ಬಗ್ಗೆ ಕೇಳಿದಾಗ

* 2 ಕೋಟಿ ಉದ್ಯೋಗದ ಬಗ್ಗೆ ಕೇಳಿದಾಗ

* ಕಪ್ಪುಹಣದ ಬಗ್ಗೆ ಕೇಳಿದಾಗ

* ಟೆಲಿಪ್ರಾಂಪ್ಟರ್ ಕೈ ಕೊಟ್ಟಾಗ ಈ ಸಂದರ್ಭಗಳಲ್ಲಿ ಮೋದಿ ಕಠೋರ ಮೌನ ತಪಸ್ವಿಗಳಾಗುತ್ತಾರೆ.

 

ಮೋದಿಯವರು ಮಾತನಾಡುವ ಸಂದರ್ಭಗಳು.

* ಚುನಾವಣೆ ಬಂದಾಗ

* ಪ್ರಚಾರಕ್ಕೆ ಕರೆದಾಗ

* ಮನ್ ಕಿ ಬಾತ್ ಕಾರ್ಯಕ್ರಮವಿದ್ದಾಗ

* ಎದುರಿಗೆ ಪ್ರಶ್ನೆ ಮಾಡದ ಪತ್ರಕರ್ತರಿಲ್ಲದಿದ್ದಾಗ

* ಜೀ ಹುಜೂರ್ ಎಂದು ಅಡ್ಡಡ್ಡ ಬೀಳುವ ತಮ್ಮ‌ ಪಕ್ಷದ ನಾಯಕರು ಎದುರಿರುವಾಗ ಈ ಸಂದರ್ಭಗಳಲ್ಲಿ ‌ಮೋದಿಯವರು ನಿರಂತರವಾಗಿ, ನಿರರ್ಗಳವಾಗಿ, ಮಾತಾಡುತ್ತಲೇ ಇರುತ್ತಾರೆ.

”ಮೋದಿಯವರು ಮೌನವಾಗಿರುವುದು ಬುದ್ಧಿವಂತರ ಲಕ್ಷಣ ಎಂಬುದನ್ನು ಬಲವಾಗಿ ನಂಬಿದ್ದಾರೆ. ಆದರೆ ಕೆಲವೊಮ್ಮೆ ಕೆಲವು ವಿಚಾರಗಳ ಸಮರ್ಥನೆಗೆ ಪದಗಳು ಸಿಗದಿರುವ ಅಜ್ಞಾನವೂ ಮೌನಕ್ಕೆ ಕಾರಣವಾಗುತ್ತದೆ. ಮಣಿಪುರ ಗಲಭೆಗೆ ಸಂಬಂಧಪಟ್ಟಂತೆ ಮೋದಿಯವರ ಮೌನವನ್ನು ಬುದ್ಧಿವಂತರ ಲಕ್ಷಣವೆನ್ನಬೇಕೋ ಅಥವಾ ಸಮರ್ಥಿಸಿಕೊಳ್ಳಲು ಆಗದ ಅಜ್ಞಾನವೆನ್ನಬೇಕೋ?” ಎಂದು ದಿನೇಶ್‌ ಗುಂಡೂರಾವ್‌ ಟೀಕಿಸಿದ್ದಾರೆ.

ಇದನ್ನೂ ಓದಿ: ಮಣಿಪುರ ಬೆತ್ತಲೆ ಪ್ರಕರಣದಲ್ಲಿ FIR ವಿಳಂಬ: ‘14 ದಿನಗಳಿಂದ ಪೊಲೀಸರು ಏನು ಮಾಡುತ್ತಿದ್ದರು?’- ಸುಪ್ರೀಂ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...