Homeಕರ್ನಾಟಕಮಣಿಪುರ: ಸುಪ್ರೀಂ ಚಾಟಿ ಏಟು ಡಬಲ್ ಇಂಜೀನ್ ಸರ್ಕಾರಕ್ಕೆ ತಾಗುತ್ತಿಲ್ಲ; ಮೋದಿ ವಿರುದ್ಧ ಗುಡುಗಿದ ಗುಂಡೂರಾವ್‌

ಮಣಿಪುರ: ಸುಪ್ರೀಂ ಚಾಟಿ ಏಟು ಡಬಲ್ ಇಂಜೀನ್ ಸರ್ಕಾರಕ್ಕೆ ತಾಗುತ್ತಿಲ್ಲ; ಮೋದಿ ವಿರುದ್ಧ ಗುಡುಗಿದ ಗುಂಡೂರಾವ್‌

- Advertisement -
- Advertisement -

ಮಣಿಪುರದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯು ಸಂಪೂರ್ಣ ಹಳಿ ತಪ್ಪಿದೆ. ಆಡಳಿತ ಯಂತ್ರ ತುಕ್ಕು ಹಿಡಿದಿದೆ ಎಂದು ಮುಖ್ಯಮಂತ್ರಿ ಬಿರೇನ್ ಸಿಂಗ್ ನೇತೃತ್ವದ ಬಿಜೆಪಿ ಸರ್ಕಾರವನ್ನು ಸುಪ್ರೀಂ ಕೋರ್ಟ್‌ ತರಾಟೆ ತೆಗೆದುಕೊಂಡಿದೆ.

ಈ ವಿಚಾರವಾಗಿ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಸರಣಿ ಟ್ವೀಟ್ ಮೂಲಕ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ”ಮಣಿಪುರ ಗಲಭೆ ಸಂಬಂಧ ಸುಪ್ರೀಂ ಕೋರ್ಟ್, ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಪದೇ ಪದೇ ಚಾಟಿ ಬೀಸುತ್ತಲೇ ಇದೆ. ಇಷ್ಟಾದರೂ ಡಬಲ್ ಇಂಜೀನ್ ಸರ್ಕಾರದ ದಪ್ಪ ಚರ್ಮಕ್ಕೆ ಯಾವುದೇ ಚಾಟಿ ಏಟು ತಾಗುತ್ತಿಲ್ಲ. ಮಣಿಪುರ ವಿಚಾರದಲ್ಲಿ ದಿವ್ಯ ನಿರ್ಲಕ್ಷ್ಯ ತಾಳಿರುವ ಕೇಂದ್ರ ಭಾರತದ ನೆಲದಲ್ಲಿ ಸುದೀರ್ಘ ರಕ್ತಸಿಕ್ತ ಅಧ್ಯಾಯ ಬರೆಯಲು ಮುಂದಾಗಿದೆ” ಎಂದು ಹೇಳಿದ್ದಾರೆ.

”ಮಣಿಪುರ ವಿಚಾರದಲ್ಲಿ ಪ್ರಧಾನಿಯವರು ಯಾಕೆ ಮೌನ ಮುರಿಯುತ್ತಿಲ್ಲ? ಅವರ ಮೌನದ ಹಿಂದಿರುವುದು ಅಸಹಾಯಕತೆಯೋ ಅಥವಾ ರಾಜಕೀಯ ಲಾಭ ಗಳಿಸುವ ಕುಯುಕ್ತಿಯೋ ತಿಳಿಯುತ್ತಿಲ್ಲ. ಗುಜರಾತ್ ಗಲಭೆ ಸಂದರ್ಭದಲ್ಲೂ ಮೋದಿ ಇದೇ ಮೌನ ವಹಿಸಿದ್ದರು. ಈಗ ಪ್ರಧಾನಿಯಾದಾಗಲೂ ಮಣಿಪುರ ವಿಚಾರದಲ್ಲಿ ಮೌನವಹಿಸಿದ್ದಾರೆ. ಮೋದಿಯವರ ಮೌನದ ಹಿಂದಿನ ಮರ್ಮವೇನು?” ಎಂದು ಪ್ರಶ್ನಿಸಿದ್ದಾರೆ.

”ಗುಜರಾತ್ ಗಲಭೆ ನಡೆಯುವಾಗ ಕೇಂದ್ರದಲ್ಲಿ BJP ಸರ್ಕಾರವಿತ್ತು. ಈಗ ಮಣಿಪುರದಲ್ಲಿ ಗಲಭೆ ನಡೆಯುತ್ತಿರುವಾಗಲೂ ಕೇಂದ್ರದಲ್ಲಿ BJPಸರ್ಕಾರವೇ ಇದೆ. ಕನಿಷ್ಠ ಪಕ್ಷ ಅಂದು ಪ್ರಧಾನಿಯಾಗಿದ್ದ ವಾಜಪೇಯಿ ಮೋದಿಯವರಿಗೆ ‘ರಾಜಧರ್ಮ’ ಪಾಲಿಸುವಂತೆ ಹೇಳಿದ್ದರು. ಈಗ ಮತ್ತೊಮ್ಮೆ ಮೋದಿಯವರಿಗೆ ರಾಜಧರ್ಮ ಪಾಲಿಸುವಂತೆ ಹೇಳಲು BJPಯಲ್ಲಿ ಯಾರಿಗೆ ತಾಕತ್ತಿದೆ?” ಎಂದು ಕೇಳಿದ್ದಾರೆ.

ಮೋದಿಯವರು ನಿರಂತರವಾಗಿ, ನಿರರ್ಗಳವಾಗಿ, ಮಾತಾಡುತ್ತಲೇ ಇರುತ್ತಾರೆ. ಮೋದಿಯವರು ಮೌನವಾಗಿರುವುದು ಬುದ್ಧಿವಂತರ ಲಕ್ಷಣ ಎಂಬುದನ್ನು ಬಲವಾಗಿ ನಂಬಿದ್ದಾರೆ. ಆದರೆ ಕೆಲವೊಮ್ಮೆ ಕೆಲವು ವಿಚಾರಗಳ ಸಮರ್ಥನೆಗೆ ಪದಗಳು ಸಿಗದಿರುವ ಅಜ್ಞಾನವೂ ಮೌನಕ್ಕೆ ಕಾರಣವಾಗುತ್ತದೆ ಎಂದು ಪ್ರಧಾನಿ ಮೋದಿ ವಿರುದ್ದ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಕಿಡಿಕಾರಿದ್ದಾರೆ.

ಮೋದಿಯವರು ಮೌನವಾಗುವ ಸಂದರ್ಭಗಳು.

* ಗಲಭೆಗಳಾದಾಗ

* ಸಾಮೂಹಿಕ ನರಮೇಧಗಳಾಗುವಾಗ

* ಮಹಿಳೆಯರ ನಗ್ನ ಮೆರೆವಣಿಗೆಯಾಗುವಾಗ

* ಬೆಲೆಯೇರಿಕೆಯಾದಾಗ

* PMCares ಫಂಡ್ ಬಗ್ಗೆ ಕೇಳಿದಾಗ

* 2 ಕೋಟಿ ಉದ್ಯೋಗದ ಬಗ್ಗೆ ಕೇಳಿದಾಗ

* ಕಪ್ಪುಹಣದ ಬಗ್ಗೆ ಕೇಳಿದಾಗ

* ಟೆಲಿಪ್ರಾಂಪ್ಟರ್ ಕೈ ಕೊಟ್ಟಾಗ ಈ ಸಂದರ್ಭಗಳಲ್ಲಿ ಮೋದಿ ಕಠೋರ ಮೌನ ತಪಸ್ವಿಗಳಾಗುತ್ತಾರೆ.

 

ಮೋದಿಯವರು ಮಾತನಾಡುವ ಸಂದರ್ಭಗಳು.

* ಚುನಾವಣೆ ಬಂದಾಗ

* ಪ್ರಚಾರಕ್ಕೆ ಕರೆದಾಗ

* ಮನ್ ಕಿ ಬಾತ್ ಕಾರ್ಯಕ್ರಮವಿದ್ದಾಗ

* ಎದುರಿಗೆ ಪ್ರಶ್ನೆ ಮಾಡದ ಪತ್ರಕರ್ತರಿಲ್ಲದಿದ್ದಾಗ

* ಜೀ ಹುಜೂರ್ ಎಂದು ಅಡ್ಡಡ್ಡ ಬೀಳುವ ತಮ್ಮ‌ ಪಕ್ಷದ ನಾಯಕರು ಎದುರಿರುವಾಗ ಈ ಸಂದರ್ಭಗಳಲ್ಲಿ ‌ಮೋದಿಯವರು ನಿರಂತರವಾಗಿ, ನಿರರ್ಗಳವಾಗಿ, ಮಾತಾಡುತ್ತಲೇ ಇರುತ್ತಾರೆ.

”ಮೋದಿಯವರು ಮೌನವಾಗಿರುವುದು ಬುದ್ಧಿವಂತರ ಲಕ್ಷಣ ಎಂಬುದನ್ನು ಬಲವಾಗಿ ನಂಬಿದ್ದಾರೆ. ಆದರೆ ಕೆಲವೊಮ್ಮೆ ಕೆಲವು ವಿಚಾರಗಳ ಸಮರ್ಥನೆಗೆ ಪದಗಳು ಸಿಗದಿರುವ ಅಜ್ಞಾನವೂ ಮೌನಕ್ಕೆ ಕಾರಣವಾಗುತ್ತದೆ. ಮಣಿಪುರ ಗಲಭೆಗೆ ಸಂಬಂಧಪಟ್ಟಂತೆ ಮೋದಿಯವರ ಮೌನವನ್ನು ಬುದ್ಧಿವಂತರ ಲಕ್ಷಣವೆನ್ನಬೇಕೋ ಅಥವಾ ಸಮರ್ಥಿಸಿಕೊಳ್ಳಲು ಆಗದ ಅಜ್ಞಾನವೆನ್ನಬೇಕೋ?” ಎಂದು ದಿನೇಶ್‌ ಗುಂಡೂರಾವ್‌ ಟೀಕಿಸಿದ್ದಾರೆ.

ಇದನ್ನೂ ಓದಿ: ಮಣಿಪುರ ಬೆತ್ತಲೆ ಪ್ರಕರಣದಲ್ಲಿ FIR ವಿಳಂಬ: ‘14 ದಿನಗಳಿಂದ ಪೊಲೀಸರು ಏನು ಮಾಡುತ್ತಿದ್ದರು?’- ಸುಪ್ರೀಂ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...