Homeಮುಖಪುಟಮಣಿಪುರ | ಅಂತಿಮ ದಿನದಂದು 196 ಶಸ್ತ್ರಾಸ್ತ್ರಗಳ ಒಪ್ಪಿಸಿದ ಜನರು

ಮಣಿಪುರ | ಅಂತಿಮ ದಿನದಂದು 196 ಶಸ್ತ್ರಾಸ್ತ್ರಗಳ ಒಪ್ಪಿಸಿದ ಜನರು

- Advertisement -
- Advertisement -

ಲೂಟಿ ಮಾಡಿದ ಮತ್ತು ಅಕ್ರಮವಾಗಿ ಹೊಂದಿದ್ದ ಶಸ್ತ್ರಾಸ್ತ್ರಗಳನ್ನು ಸ್ವಯಂಪ್ರೇರಣೆಯಿಂದ ವಾಪಾಸು ಮಾಡುವ ಕೊನೆಯ ದಿನವಾದ ಗುರುವಾರದಂದು, ಮಣಿಪುರದಲ್ಲಿ ಜನರು ಒಟ್ಟು 196 ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳು ಮತ್ತು ಇತರ ವಿವಿಧ ವಸ್ತುಗಳನ್ನು ಭದ್ರತಾ ಪಡೆಗಳಿಗೆ ಹಸ್ತಾಂತರಿಸಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಮಣಿಪುರ

ಈ ನಡುವೆ ಕಾಂಗ್ಪೋಕ್ಪಿ ಜಿಲ್ಲೆಯಲ್ಲಿ ಭದ್ರತಾ ಪಡೆಗಳು 15 ಬಂಕರ್‌ಗಳನ್ನು ಸಹ ನಾಶಪಡಿಸಿವೆ. ಗುರುವಾರ ಸಂಜೆ 4 ಗಂಟೆಯವರೆಗೆ ಎಂಟು ಜಿಲ್ಲೆಗಳಲ್ಲಿ ಶಸ್ತ್ರಾಸ್ತ್ರಗಳನ್ನು ವಾಪಾಸಾತಿ ಮಾಡಲಾಗಿದೆ. ರಾಷ್ಟ್ರಪತಿ ಆಳ್ವಿಕೆಯಲ್ಲಿರುವ ರಾಜ್ಯದ ರಾಜ್ಯಪಾಲ ಅಜಯ್ ಕುಮಾರ್ ಭಲ್ಲಾ ಅವರು ಇದರ ಗಡುವನ್ನು ಇತ್ತಿಚೆಗೆ ವಿಸ್ತರಿಸಿದ್ದರು. ಮಣಿಪುರ

ಸ್ವಯಂಪ್ರೇರಣೆಯಿಂದ ಶಸ್ತಾಸ್ತ್ರಗಳ ಶರಣಾಗತಿ ಮಾಡಲಾದ ಗಡುವು ಮುಗಿದ ನಂತರ, ಜಂಟಿ ಭದ್ರತಾ ಪಡೆಗಳು ರಾಜ್ಯದ ವಿವಿಧ ಭಾಗಗಳಲ್ಲಿ ಕೂಂಬಿಂಗ್ ಮತ್ತು ಶೋಧ ಕಾರ್ಯಾಚರಣೆಗಳನ್ನು ನಡೆಸಿ 36 ಶಸ್ತ್ರಾಸ್ತ್ರಗಳು, 129 ಮದ್ದುಗುಂಡುಗಳು, ಏಳು ಸ್ಫೋಟಕಗಳು, 21 ವಿವಿಧ ವಸ್ತುಗಳನ್ನು ವಶಪಡಿಸಿಕೊಂಡವು ಮತ್ತು 15 ಅಕ್ರಮ ಬಂಕರ್‌ಗಳನ್ನು ನಾಶಪಡಿಸಿದವು ಎಂದು ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಕೆ ಲ್ಯಾಂಗ್ನೋಮ್ ಮತ್ತು ಖೆಂಗ್‌ಜಾಂಗ್ ಪ್ರದೇಶಗಳಲ್ಲಿ ಹನ್ನೆರಡು ಬಂಕರ್‌ಗಳು ನಾಶವಾದರೆ, ಕಾಂಗ್‌ಪೋಕ್ಪಿ ಜಿಲ್ಲೆಯ ಹರೋಥೆಲ್‌ನಲ್ಲಿ ಇನ್ನೂ ಮೂರು ಬಂಕರ್‌ಗಳನ್ನು ಕೆಡವಲಾಯಿತು.

ಬೆಟ್ಟ ಮತ್ತು ಕಣಿವೆ ಪ್ರದೇಶಗಳ ಜನರು ಹೆಚ್ಚುವರಿ ಸಮಯಕ್ಕಾಗಿ ಒತ್ತಾಯಿಸಿದ ಹಿನ್ನೆಲೆಯಲ್ಲಿ, ಮಣಿಪುರ ರಾಜ್ಯಪಾಲ ಅಜಯ್ ಕುಮಾರ್ ಭಲ್ಲಾ ಅವರು ಮಾರ್ಚ್ 6 ರಂದು ಸಂಜೆ 4 ಗಂಟೆಯವರೆಗೆ ಲೂಟಿ ಮಾಡಿದ ಮತ್ತು ಅಕ್ರಮ ಶಸ್ತ್ರಾಸ್ತ್ರಗಳನ್ನು ಶರಣಾಗಿಸುವ ಗಡುವನ್ನು ವಿಸ್ತರಿಸಿದ್ದರು.

ಫೆಬ್ರವರಿ 20 ರಂದು ಭಲ್ಲಾ ಅವರು ಭದ್ರತಾ ಪಡೆಗಳಿಂದ ದೋಚಲಾದ ಶಸ್ತ್ರಾಸ್ತ್ರಗಳು ಮತ್ತು ಇತರ ಅಕ್ರಮವಾಗಿ ಹೊಂದಿರುವ ಶಸ್ತ್ರಾಸ್ತ್ರಗಳನ್ನು ಏಳು ದಿನಗಳಲ್ಲಿ ಸ್ವಯಂಪ್ರೇರಣೆಯಿಂದ ಶರಣಾಗತಿ ಮಾಡುವಮತೆ ಬಂಡುಕೋರ ಗುಂಪುಗಳನ್ನು ಒತ್ತಾಯಿಸಿದ್ದರು.

ಬೆಟ್ಟ ಮತ್ತು ಕಣಿವೆ ಪ್ರದೇಶಗಳ ಜನರು ಹೆಚ್ಚುವರಿ ಸಮಯಕ್ಕಾಗಿ ಒತ್ತಾಯಿಸಿದ ನಂತರ, ಲೂಟಿ ಮಾಡಿದ ಮತ್ತು ಅಕ್ರಮ ಶಸ್ತ್ರಾಸ್ತ್ರಗಳನ್ನು ಶರಣಾಗಿಸುವ ಗಡುವನ್ನು ಮಾರ್ಚ್ 6 ರಂದು ಸಂಜೆ 4 ಗಂಟೆಯವರೆಗೆ ಅವರು ವಿಸ್ತರಿಸಿದ್ದರು. ಮೊದಲ ಏಳು ದಿನಗಳ ಅವಧಿಯಲ್ಲಿ, ಪ್ರಾಥಮಿಕವಾಗಿ ಕಣಿವೆ ಜಿಲ್ಲೆಗಳಲ್ಲಿ 300 ಕ್ಕೂ ಹೆಚ್ಚು ಶಸ್ತ್ರಾಸ್ತ್ರಗಳನ್ನು ಸಾರ್ವಜನಿಕರು ಶರಣಾಗಿಸಿದ್ದರು.

ಈ ಅವಧಿಯೊಳಗೆ ಶಸ್ತ್ರಾಸ್ತ್ರಗಳನ್ನು ಹಿಂತಿರುಗಿಸುವವರ ವಿರುದ್ಧ ಯಾವುದೇ ದಂಡನಾತ್ಮಕ ಕ್ರಮ ಕೈಗೊಳ್ಳಲಾಗುವುದಿಲ್ಲ ಎಂದು ಸರ್ಕಾರವು ಜನರಿಗೆ ಭರವಸೆ ನೀಡಿತ್ತು. “ಶಾಂತಿ, ಕೋಮು ಸಾಮರಸ್ಯ, ನಮ್ಮ ಯುವಕರ ಭವಿಷ್ಯ ಮತ್ತು ನಮ್ಮ ಸಮಾಜದ ಭದ್ರತೆಗೆ ಕೊಡುಗೆ ನೀಡಲು ಸಂಬಂಧಪಟ್ಟ ಎಲ್ಲರಿಗೂ ಇದು ಕೊನೆಯ ಅವಕಾಶ” ಎಂದು ಅದು ಒತ್ತಿ ಹೇಳಿತ್ತು.

ಮೇ 2023 ರಿಂದ ಮೈತೇಯಿ ಮತ್ತು ಕುಕಿ-ಝೋ ಗುಂಪುಗಳ ನಡುವಿನ ಜನಾಂಗೀಯ ಹಿಂಸಾಚಾರದಲ್ಲಿ 250 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು ಸಾವಿರಾರು ಜನರು ನಿರಾಶ್ರಿತರಾಗಿದ್ದಾರೆ. ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ರಾಜೀನಾಮೆ ನೀಡಿದ ನಂತರ ಕೇಂದ್ರ ಸರ್ಕಾರವು ಫೆಬ್ರವರಿ 13 ರಂದು ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ಹೇರಿತ್ತು. 2027 ರವರೆಗೆ ಅಧಿಕಾರಾವಧಿಯನ್ನು ಹೊಂದಿರುವ ರಾಜ್ಯ ವಿಧಾನಸಭೆಯನ್ನು ಅಮಾನತಿನಲ್ಲಿ ಇರಿಸಲಾಗಿದೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಕ್ಷೇತ್ರ ಪುನರ್ವಿಂಗಡಣೆಯಿಂದ ಪಂಜಾಬ್ ಮತ್ತು ಹರಿಯಾಣ ಕೂಡಾ ಸೀಟುಗಳನ್ನು ಕಳೆದುಕೊಳ್ಳುತ್ತವೆ – ಕಾಂಗ್ರೆಸ್

ಕ್ಷೇತ್ರ ಪುನರ್ವಿಂಗಡಣೆಯಿಂದ ಪಂಜಾಬ್ ಮತ್ತು ಹರಿಯಾಣ ಕೂಡಾ ಸೀಟುಗಳನ್ನು ಕಳೆದುಕೊಳ್ಳುತ್ತವೆ – ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...