Homeಮುಖಪುಟಮಣಿಪುರ: ಉಗ್ರರ ದಾಳಿಯಲ್ಲಿ ಸೇನಾ ಕರ್ನಲ್, ಪತ್ನಿ, ಮಗು ಸೇರಿ 7 ಮಂದಿ ಸಾವು

ಮಣಿಪುರ: ಉಗ್ರರ ದಾಳಿಯಲ್ಲಿ ಸೇನಾ ಕರ್ನಲ್, ಪತ್ನಿ, ಮಗು ಸೇರಿ 7 ಮಂದಿ ಸಾವು

- Advertisement -
- Advertisement -

ಮಣಿಪುರದ ಮ್ಯಾನ್ಮಾರ್ ಗಡಿಯಲ್ಲಿ ಉಗ್ರರು ನಡೆಸಿದ ದಾಳಿಯಲ್ಲಿ ಅಸ್ಸಾಂ ಸೇನಾ ಕರ್ನಲ್, ಅವರ ಪತ್ನಿ ಮತ್ತು ಎಂಟು ವರ್ಷದ ಮಗ ಸೇರಿದಂತೆ 7 ಮಂದಿ ಸಾವನ್ನಪ್ಪಿದ್ದಾರೆ. ಇತ್ತೀಚಿನ ದಿನಗಳಲ್ಲಿ ಈ ಪ್ರದೇಶದಲ್ಲಿ ನಡೆದ ಅತ್ಯಂತ ಭೀಕರ ದಾಳಿ ಇದಾಗಿದೆ ಎನ್ನಲಾಗಿದೆ.

46 ಅಸ್ಸಾಂ ರೈಫಲ್ಸ್‌ನ ಕಮಾಂಡಿಂಗ್ ಆಫೀಸರ್ ಕರ್ನಲ್ ವಿಪ್ಲವ್ ತ್ರಿಪಾಠಿ ಅವರು ಶನಿವಾರ ಕ್ಯಾಂಪ್‌ನಿಂದ  ಹಿಂದಿರುಗುತ್ತಿದ್ದಾಗ ಬೆಳಗ್ಗೆ 11 ಗಂಟೆಗೆ ದಾಳಿ ನಡೆದಿದೆ.

“46 ಅಸ್ಸಾಂ ರೈಫಲ್ಸ್‌ನ ಕಮಾಂಡಿಂಗ್ ಆಫೀಸರ್ ಕರ್ನಲ್ ವಿಪ್ಲವ್ ತ್ರಿಪಾಠಿ ಸೇರಿದಂತೆ ಐವರು ಸೈನಿಕರು ಕರ್ತವ್ಯದಲ್ಲಿದ್ದಾಗ ಪ್ರಾಣ ತ್ಯಾಗ ಮಾಡಿದ್ದಾರೆ. ಕಮಾಂಡಿಂಗ್ ಅಧಿಕಾರಿಯ ಪತ್ನಿ ಮತ್ತು ಮಗು ಸಹ ಪ್ರಾಣ ಕಳೆದುಕೊಂಡಿದ್ದಾರೆ” ಎಂದು ಅಸ್ಸಾಂ ರೈಫಲ್ಸ್ ಹೇಳಿಕೆಯಲ್ಲಿ ತಿಳಿಸಿದೆ.

ಮಣಿಪುರ ಮೂಲದ ಭಯೋತ್ಪಾದಕ ಗುಂಪು ಪೀಪಲ್ಸ್ ಲಿಬರೇಶನ್ ಆರ್ಮಿ ಈ ದಾಳಿಯ ಹಿಂದೆ ಇದೆ ಎಂದು ಹೇಳಲಾಗುತ್ತಿದೆ. ಆದರೆ, ಯಾವುದೇ ಗುಂಪು ಇನ್ನೂ ದಾಳಿಯ ಹೊಣೆಯನ್ನು ವಹಿಸಿಕೊಂಡಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಕಾಸ್‌ಗಂಜ್ ಮುಸ್ಲಿಂ ಯುವಕನ ಲಾಕಪ್ ಡೆತ್: ಸರ್ಕಾರದಿಂದ ವರದಿ ಕೇಳಿದ ಅಲ್ಪಸಂಖ್ಯಾತರ ಆಯೋಗ

ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದು, ಅಸ್ಸಾಂ ರೈಫಲ್ಸ್ ಬೆಂಗಾವಲು ಪಡೆಯ ಮೇಲಿನ ದಾಳಿಯನ್ನು ಖಂಡಿಸಿದ್ದಾರೆ. “ಮಣಿಪುರದಲ್ಲಿ ನಡೆದ ಅಸ್ಸಾಂ ರೈಫಲ್ಸ್ ಬೆಂಗಾವಲು ಪಡೆಯ ಮೇಲಿನ ದಾಳಿಯನ್ನು ಬಲವಾಗಿ ಖಂಡಿಸುತ್ತೇನೆ. ಇಂದು ಹುತಾತ್ಮರಾದ ಯೋಧರು ಮತ್ತು ಕುಟುಂಬ ಸದಸ್ಯರಿಗೆ ನಾನು ಗೌರವ ಸಲ್ಲಿಸುತ್ತೇನೆ. ಅವರ ತ್ಯಾಗವನ್ನು ಎಂದಿಗೂ ಮರೆಯುವುದಿಲ್ಲ” ಎಂದಿದ್ದಾರೆ.

ಮಣಿಪುರ ಮುಖ್ಯಮಂತ್ರಿ ಬಿರೇನ್ ಸಿಂಗ್ ಕೂಡ ಘಟನೆಯನ್ನು ಖಂಡಿಸಿದ್ದು, ಇದೊಂದು ಹೇಡಿತನದ ದಾಳಿ ಎಂದಿದ್ದಾರೆ. ಈ ಘಟನೆಗೆ ಕಾರಣವಾದ ಉಗ್ರಗಾಮಿಗಳನ್ನು ಪತ್ತೆ ಹಚ್ಚುವ ಕೆಲಸದಲ್ಲಿ ರಾಜ್ಯ ಪಡೆಗಳು ಮತ್ತು ಪ್ಯಾರಾ ಮಿಲಿಟರಿ ಪಡೆಗಳು ಈಗಾಗಲೇ ತೊಡಗಿವೆ’ ಎಂದು ಬಿರೇನ್ ಸಿಂಗ್ ಟ್ವಿಟರ್‌ನಲ್ಲಿ ತಿಳಿಸಿದ್ದಾರೆ.

2015 ರಲ್ಲಿ, ಮಣಿಪುರದಲ್ಲಿ ನಡೆದಿದ್ದ ಭಯೋತ್ಪಾದಕರ ದಾಳಿಯಲ್ಲಿ 20 ಸೈನಿಕರು ಸಾವನ್ನಪ್ಪಿದರು. ನಂತರ ಸೇನೆಯು ಭಯೋತ್ಪಾದಕರಶಿಬಿರದ ಮೇಲೆ ಸರ್ಜಿಕಲ್ ಸ್ಟ್ರೈಕ್ ನಡೆಸಿತ್ತು.


ಇದನ್ನೂ ಓದಿ: ‘ಮಿಸ್ಟರ್‌ 56 ಚೀನಾಗೆ ಹೆದರುತ್ತಿದ್ದಾರೆ’ – ಪ್ರಧಾನಿ ಮೋದಿ ವಿರುದ್ದ ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಧಿಕಾರದಲ್ಲಿರುವವರ ವಿರುದ್ಧ ಮಾತನಾಡುವ ಭಯವನ್ನು ನೀಟ್ ಚಳವಳಿ ಹೋಗಲಾಡಿಸಿದೆ: ನೇಹಾ ಬೋರಾ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ 'ಜೆನ್ ಜಿ' ಚಳವಳಿಯು ಜನರಲ್ಲಿದ್ದ ಭಯವನ್ನು ಹೋಗಲಾಡಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಹಾಗೂ ಆರ್‌ಎಸ್‌ಎಸ್‌ನವರು ವಿದ್ಯಾರ್ಥಿ ಮತ್ತು ಯುವಜನರನ್ನು ತಲುಪುವಂತೆ ಮಾಡಿದೆ ಎಂದು ಆಲ್...

Karnataka SIR : ನಿರ್ದೋಷಿ ಜನರೇಕೆ ದಾಖಲೆಗಾಗಿ ಅಲೆದಾಡಬೇಕು? ಲಾಜಿಕಲ್ ಡಿಸ್ಕ್ರಿಪೆನ್ಸಿ ನೋಟಿಸ್‌ಗೆ ನಾಗರಿಕ ಸಂಘಟನೆಗಳ ಆಕ್ಷೇಪ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಭಾಗವಾಗಿ ಮತದಾರರಿಗೆ ನೋಟಿಸ್ ನೀಡಲು ಮುಂದಾಗಿರುವ ಚುನಾವಣಾ ಆಯೋಗದ ಕ್ರಮವನ್ನು ನಾಗರಿಕ ಸಂಘಟನೆಗಳು ತೀವ್ರವಾಗಿ ವಿರೋಧಿಸಿವೆ. ಆಗಸ್ಟ್ 25ರಂದು ಎಸ್‌ಐಆರ್‌ಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗದ...

ಮಳೆಯೇ ಇಲ್ಲದೆ ನೇಪಾಳದಲ್ಲಿ ಸಂಭವಿಸಿದ ಭೀಕರ ಪ್ರವಾಹಕ್ಕೆ ಕಾರಣವೇನು?

ನೇಪಾಳ-ಟಿಬೆಟ್ ಗಡಿಭಾಗದ ಹಿಮಾಲಯ ಪ್ರದೇಶದಲ್ಲಿ ಹಿಮನದಿ ಇದ್ದಕ್ಕಿದ್ದಂತೆ ಕರಗಿ ಕುಸಿದ ಪರಿಣಾಮ ಭೀಕರ ಪ್ರವಾಹ ಉಂಟಾಗಿದೆ. ಈ ವಿಕೋಪದಲ್ಲಿ ಇದುವರೆಗೆ 160ಕ್ಕೂ ಹೆಚ್ಚು ಜನರು ಮೃತಪಟ್ಟಿರುವುದು ದೃಢಪಟ್ಟಿದ್ದು, 800ಕ್ಕೂ ಹೆಚ್ಚು ವಿದೇಶಿ ಪ್ರವಾಸಿಗರು...

ರಾಹುಲ್ ಗಾಂಧಿ ಅವರ ‘ಛಾತ್ರೋನ್ ಕೀ ಗೂಂಜ್’ಗೆ ಹೇಳಿಕೆಗಳ ಫ್ಯಾಕ್ಟ್-ಚೆಕ್: ಬಿಜೆಪಿಯಿಂದ ‘ಜೂಠ್ ಕೀ ಗೂಂಜ್’ ವೆಬ್‌ಸೈಟ್ ಆರಂಭ

ಲೋಕಸಭೆ ವಿಪಕ್ಷ ನಾಯಕ, ಕಾಂಗ್ರೆಸ್‌ ಸಂಸದ ರಾಹುಲ್ ಗಾಂಧಿ ಅವರ 'ಛಾತ್ರೋನ್ ಕೀ ಗೂಂಜ್' ಅಭಿಯಾನದ ವೇಳೆ ನೀಡಲಾದ ಹೇಳಿಕೆಗಳನ್ನು ಫ್ಯಾಕ್ಟ್-ಚೆಕ್ (ಸತ್ಯಾಸತ್ಯತೆ ಪರಿಶೀಲನೆ) ಮಾಡುವ ವೆಬ್‌ಸೈಟ್‌ ಒಂದನ್ನು ಉಲ್ಲೇಖಿಸಿರುವ ಬಿಜೆಪಿ, "ರಾಹುಲ್...

101 ತಾಲ್ಲೂಕುಗಳನ್ನು ಬರಪೀಡಿತ ಎಂದು ಅಧಿಕೃತವಾಗಿ ಘೋಷಿಸಿದ ರಾಜ್ಯ ಸರ್ಕಾರ

ಮಳೆ ಕೊರತೆಯಿಂದ ತತ್ತರಿಸಿರುವ ಕರ್ನಾಟಕದಲ್ಲಿ ತೀವ್ರ ಬರ ಪರಿಸ್ಥಿತಿ ನಿರ್ಮಾಣವಾಗಿದ್ದು, ಮೊದಲ ಹಂತದಲ್ಲಿ 101 ತಾಲ್ಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಅಧಿಕೃತವಾಗಿ ಘೋಷಿಸಿದೆ. ಬರ ನಿರ್ವಹಣೆ ಮತ್ತು ಪರಿಹಾರ ಕಾರ್ಯಗಳಿಗಾಗಿ ಸರ್ಕಾರವು ₹350...

ಕೊಟ್ಟ ಭರವಸೆ ಈಡೇರಿಸದ ಕೇಂದ್ರ ಸರ್ಕಾರ: ಸೆಪ್ಟೆಂಬರ್ 5ರಂದು ಸಿಜೆಪಿಯಿಂದ ದೆಹಲಿಯಲ್ಲಿ ಶಾಂತಿಯುತ ಮೆರವಣಿಗೆ

ಜುಲೈ 25ರಂದು ದೇಶದ ಯುವಜನತೆಗೆ ನೀಡಿದ್ದ ಭರವಸೆಗಳನ್ನು ಈಡೇರಿಸುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ), ಸೆಪ್ಟೆಂಬರ್ 5ರಂದು ರಾಷ್ಟ್ರ ರಾಜಧಾನಿಯಲ್ಲಿ ಶಾಂತಿಯುತ ಪ್ರತಿಭಟನಾ ಮೆರವಣಿಗೆ ನಡೆಸುವುದಾಗಿ...

Karnataka SIR : ಮತಹರಣದ ವಿರುದ್ಧ ಕಾನೂನು ಸಮರಕ್ಕೆ ಮುಂದಾದ ನಾಗರಿಕ ಸಂಘಟನೆಗಳು

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಉಂಟಾದ ಮತಹರಣದ ವಿರುದ್ಧ ಕಾನೂನು ಸಮರ ನಡೆಸಲು ನಾಗರಿಕ ಸಂಘಟನೆಗಳು ಮುಂದಾಗಿವೆ. ಆಗಸ್ಟ್ 25ರಂದು ಎಸ್‌ಐಆರ್‌ಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗದ ವಿರುದ್ದ...

ಬೆಂಗಳೂರು ನ್ಯಾಷನಲ್ ಲಾ ಸ್ಕೂಲ್ ಘಟಿಕೋತ್ಸವ ರದ್ದು: ಸಿಜೆಐ, ಬಾರ್ ಕೌನ್ಸಿಲ್ ಮುಖ್ಯಸ್ಥರ ಆಹ್ವಾನಕ್ಕೆ ವಿದ್ಯಾರ್ಥಿಗಳ ತೀವ್ರ ವಿರೋಧ!

ಬೆಂಗಳೂರು: ದೇಶದ ಪ್ರತಿಷ್ಠಿತ ಕಾನೂನು ಶಿಕ್ಷಣ ಸಂಸ್ಥೆಯಾದ ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿ (NLSIU), ತನ್ನ 34ನೇ ವಾರ್ಷಿಕ ಘಟಿಕೋತ್ಸವ ಸಮಾರಂಭವನ್ನು ದಿಢೀರ್ ರದ್ದುಗೊಳಿಸಿದೆ. ಸೆಪ್ಟೆಂಬರ್ 12 ರಂದು...

ತಮಿಳುನಾಡು| ದಲಿತ ಯುವಕನ ಲಾಕಪ್ ಡೆತ್ ಪ್ರಕರಣ; ಆರು ಜನ ಪೊಲೀಸರ ವಿರುದ್ಧ ಪ್ರಕರಣ ದಾಖಲು

ಕಲೆದ ಮಾರ್ಚ್‌ನಲ್ಲಿ ತಮಿಳುನಾಡಿನ ಶಿವಗಂಗೈ ಜಿಲ್ಲೆಯಲ್ಲಿ ನಡೆಸಿದ್ದ 26 ವರ್ಷದ ದಲಿತ ಯುವಕ ಆಕಾಶ್ ಡೆಲಿಸನ್ ಲಾಕಪ್ ಡೆತ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿ-ಸಿಐಡಿ ಸಲ್ಲಿಸಿರುವ ದೋಷಾರೋಪಣೆ ಪಟ್ಟಿಯಲ್ಲಿ (ಚಾರ್ಜ್‌ಶೀಟ್), ಆರೋಪಿಗಳಾದ ಆರು ಮಂದಿ...

Karnataka SIR | ಡಿಲೀಟ್ ಪಟ್ಟಿಯಲ್ಲಿ ಅಂದಾಜು 52 ಲಕ್ಷ ಅರ್ಹ ಮತದಾರರಿದ್ದಾರೆ : ನಾಗರಿಕ ಸಂಘಟನೆಗಳಿಂದ ಗಂಭೀರ ಆರೋಪ

ಕರ್ನಾಟಕದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ ಮತದಾರರ ಪಟ್ಟಿಯಿಂದ ಈಗಾಗಲೇ ಹೊರಗಿಟ್ಟಿರುವ 1.08 ಕೋಟಿ (1,07,96,415) ಮತದಾರರ ಪೈಕಿ ಅಂದಾಜು 52 ಲಕ್ಷ ಮಂದಿ ಅರ್ಹರಿದ್ದಾರೆ ಎಂದು ನಾಗರಿಕ ಸಂಘಟನೆಗಳು ಗಂಭೀರ...