Homeಮುಖಪುಟಮಣಿಪುರ: ಉಗ್ರರ ದಾಳಿಯಲ್ಲಿ ಸೇನಾ ಕರ್ನಲ್, ಪತ್ನಿ, ಮಗು ಸೇರಿ 7 ಮಂದಿ ಸಾವು

ಮಣಿಪುರ: ಉಗ್ರರ ದಾಳಿಯಲ್ಲಿ ಸೇನಾ ಕರ್ನಲ್, ಪತ್ನಿ, ಮಗು ಸೇರಿ 7 ಮಂದಿ ಸಾವು

- Advertisement -
- Advertisement -

ಮಣಿಪುರದ ಮ್ಯಾನ್ಮಾರ್ ಗಡಿಯಲ್ಲಿ ಉಗ್ರರು ನಡೆಸಿದ ದಾಳಿಯಲ್ಲಿ ಅಸ್ಸಾಂ ಸೇನಾ ಕರ್ನಲ್, ಅವರ ಪತ್ನಿ ಮತ್ತು ಎಂಟು ವರ್ಷದ ಮಗ ಸೇರಿದಂತೆ 7 ಮಂದಿ ಸಾವನ್ನಪ್ಪಿದ್ದಾರೆ. ಇತ್ತೀಚಿನ ದಿನಗಳಲ್ಲಿ ಈ ಪ್ರದೇಶದಲ್ಲಿ ನಡೆದ ಅತ್ಯಂತ ಭೀಕರ ದಾಳಿ ಇದಾಗಿದೆ ಎನ್ನಲಾಗಿದೆ.

46 ಅಸ್ಸಾಂ ರೈಫಲ್ಸ್‌ನ ಕಮಾಂಡಿಂಗ್ ಆಫೀಸರ್ ಕರ್ನಲ್ ವಿಪ್ಲವ್ ತ್ರಿಪಾಠಿ ಅವರು ಶನಿವಾರ ಕ್ಯಾಂಪ್‌ನಿಂದ  ಹಿಂದಿರುಗುತ್ತಿದ್ದಾಗ ಬೆಳಗ್ಗೆ 11 ಗಂಟೆಗೆ ದಾಳಿ ನಡೆದಿದೆ.

“46 ಅಸ್ಸಾಂ ರೈಫಲ್ಸ್‌ನ ಕಮಾಂಡಿಂಗ್ ಆಫೀಸರ್ ಕರ್ನಲ್ ವಿಪ್ಲವ್ ತ್ರಿಪಾಠಿ ಸೇರಿದಂತೆ ಐವರು ಸೈನಿಕರು ಕರ್ತವ್ಯದಲ್ಲಿದ್ದಾಗ ಪ್ರಾಣ ತ್ಯಾಗ ಮಾಡಿದ್ದಾರೆ. ಕಮಾಂಡಿಂಗ್ ಅಧಿಕಾರಿಯ ಪತ್ನಿ ಮತ್ತು ಮಗು ಸಹ ಪ್ರಾಣ ಕಳೆದುಕೊಂಡಿದ್ದಾರೆ” ಎಂದು ಅಸ್ಸಾಂ ರೈಫಲ್ಸ್ ಹೇಳಿಕೆಯಲ್ಲಿ ತಿಳಿಸಿದೆ.

ಮಣಿಪುರ ಮೂಲದ ಭಯೋತ್ಪಾದಕ ಗುಂಪು ಪೀಪಲ್ಸ್ ಲಿಬರೇಶನ್ ಆರ್ಮಿ ಈ ದಾಳಿಯ ಹಿಂದೆ ಇದೆ ಎಂದು ಹೇಳಲಾಗುತ್ತಿದೆ. ಆದರೆ, ಯಾವುದೇ ಗುಂಪು ಇನ್ನೂ ದಾಳಿಯ ಹೊಣೆಯನ್ನು ವಹಿಸಿಕೊಂಡಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಕಾಸ್‌ಗಂಜ್ ಮುಸ್ಲಿಂ ಯುವಕನ ಲಾಕಪ್ ಡೆತ್: ಸರ್ಕಾರದಿಂದ ವರದಿ ಕೇಳಿದ ಅಲ್ಪಸಂಖ್ಯಾತರ ಆಯೋಗ

ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದು, ಅಸ್ಸಾಂ ರೈಫಲ್ಸ್ ಬೆಂಗಾವಲು ಪಡೆಯ ಮೇಲಿನ ದಾಳಿಯನ್ನು ಖಂಡಿಸಿದ್ದಾರೆ. “ಮಣಿಪುರದಲ್ಲಿ ನಡೆದ ಅಸ್ಸಾಂ ರೈಫಲ್ಸ್ ಬೆಂಗಾವಲು ಪಡೆಯ ಮೇಲಿನ ದಾಳಿಯನ್ನು ಬಲವಾಗಿ ಖಂಡಿಸುತ್ತೇನೆ. ಇಂದು ಹುತಾತ್ಮರಾದ ಯೋಧರು ಮತ್ತು ಕುಟುಂಬ ಸದಸ್ಯರಿಗೆ ನಾನು ಗೌರವ ಸಲ್ಲಿಸುತ್ತೇನೆ. ಅವರ ತ್ಯಾಗವನ್ನು ಎಂದಿಗೂ ಮರೆಯುವುದಿಲ್ಲ” ಎಂದಿದ್ದಾರೆ.

ಮಣಿಪುರ ಮುಖ್ಯಮಂತ್ರಿ ಬಿರೇನ್ ಸಿಂಗ್ ಕೂಡ ಘಟನೆಯನ್ನು ಖಂಡಿಸಿದ್ದು, ಇದೊಂದು ಹೇಡಿತನದ ದಾಳಿ ಎಂದಿದ್ದಾರೆ. ಈ ಘಟನೆಗೆ ಕಾರಣವಾದ ಉಗ್ರಗಾಮಿಗಳನ್ನು ಪತ್ತೆ ಹಚ್ಚುವ ಕೆಲಸದಲ್ಲಿ ರಾಜ್ಯ ಪಡೆಗಳು ಮತ್ತು ಪ್ಯಾರಾ ಮಿಲಿಟರಿ ಪಡೆಗಳು ಈಗಾಗಲೇ ತೊಡಗಿವೆ’ ಎಂದು ಬಿರೇನ್ ಸಿಂಗ್ ಟ್ವಿಟರ್‌ನಲ್ಲಿ ತಿಳಿಸಿದ್ದಾರೆ.

2015 ರಲ್ಲಿ, ಮಣಿಪುರದಲ್ಲಿ ನಡೆದಿದ್ದ ಭಯೋತ್ಪಾದಕರ ದಾಳಿಯಲ್ಲಿ 20 ಸೈನಿಕರು ಸಾವನ್ನಪ್ಪಿದರು. ನಂತರ ಸೇನೆಯು ಭಯೋತ್ಪಾದಕರಶಿಬಿರದ ಮೇಲೆ ಸರ್ಜಿಕಲ್ ಸ್ಟ್ರೈಕ್ ನಡೆಸಿತ್ತು.


ಇದನ್ನೂ ಓದಿ: ‘ಮಿಸ್ಟರ್‌ 56 ಚೀನಾಗೆ ಹೆದರುತ್ತಿದ್ದಾರೆ’ – ಪ್ರಧಾನಿ ಮೋದಿ ವಿರುದ್ದ ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಸರ್ವೆಗೆ ರೈತರ ತೀವ್ರ ವಿರೋಧ: ಅಧಿಕಾರಿಗಳಿಗೆ ಪೊರಕೆ ಏಟು, ಕಾರುಗಳು ಜಖಂ

ರಾಮನಗರ: ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಯನ್ನು ವಿರೋಧಿಸಿ ಸ್ಥಳೀಯ ರೈತರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸೋಮವಾರ (ಜುಲೈ 13) ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಮಂಡಲಹಳ್ಳಿ...

ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ : ಜೆಡಿಎಸ್ ಶಾಸಕ ಹೆಚ್​​​.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್​ ನೋಟಿಸ್​

ಮಹಿಳೆಯ ಘನತೆಗೆ ಧಕ್ಕೆ ಹಾಗೂ ಲೈಂಗಿಕ ಕಿರುಕುಳ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‌ ಸೋಮವಾರ (ಜು.13) ಜೆಡಿಎಸ್‌...

ದಲಿತ ಯುವಕರಿಗೆ ವಿದ್ಯುತ್ ಶಾಕ್‌ ಶಿಕ್ಷೆ: ಕಳ್ಳತನ ಆರೋಪದ ಮೇಲೆ ಇಬ್ಬರಿಗೆ ಚಿತ್ರಹಿಂಸೆ

ದಲಿತ ಯುವಕರ ಮೇಲೆ ಮಧ್ಯಪ್ರದೇಶದಲ್ಲಿ ನಡೆದಿರುವ ಅಮಾನವೀಯ ಕೃತ್ಯವೊಂದರ ವಿಡಿಯೋ ಇದೀಗ ನಾಗರಿಕ ಸಮಾಜವನ್ನೇ ಆಘಾತಕ್ಕೀಡು ಮಾಡಿದೆ. ನೀರಿನ ಪಂಪ್ ಮೋಟಾರ್ ಕದ್ದಿದ್ದಾರೆ ಎಂಬ ಶಂಕೆಯ ಮೇಲೆ ಇಬ್ಬರು ದಲಿತ ಯುವಕರನ್ನು ಕಂಬಕ್ಕೆ...

ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ 

ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ...

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...

27 ಮಂದಿಯನ್ನು ‘ವಿದೇಶಿಯರು’ ಎಂದಿದ್ದ ಅಸ್ಸಾಂ ನ್ಯಾಯಮಂಡಳಿಗಳ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಒಬ್ಬ ವ್ಯಕ್ತಿಯ ಪೌರತ್ವ ಮತ್ತು ವಿದೇಶಿಯರ ಸ್ಥಾನಮಾನವನ್ನು ನಿರ್ಧರಿಸುವಾಗ ಕೇವಲ ಯಾಂತ್ರಿಕವಾಗಿ ತೀರ್ಪು ನೀಡಲಾಗದು, ಬದಲಿಗೆ ಅತ್ಯಂತ ನ್ಯಾಯಯುತ, ಕಾನೂನುಬದ್ಧ ಹಾಗೂ ಸಮಂಜಸವಾದ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ...

ಶಿಕ್ಷಕ ‘ಖಾನ್ ಸರ್‌’ಗೆ ಪಟ್ನಾ ಕೋರ್ಟ್‌ನಲ್ಲಿ ಜಯ: ಕೋಚಿಂಗ್ ಸೆಂಟರ್ ದಾಳಿ ಪ್ರಕರಣದಲ್ಲಿ ಮುಂಗಡ ಜಾಮೀನು ಮಂಜೂರು

ಬಿಹಾರದ ಖ್ಯಾತ ಶಿಕ್ಷಕ ಫೈಸಲ್ ಖಾನ್ (ಜನಪ್ರಿಯವಾಗಿ ಖಾನ್ ಸರ್ ಎಂದು ಕರೆಯಲ್ಪಡುವ) ಅವರಿಗೆ ಪಟ್ನಾ ನ್ಯಾಯಾಲಯವು ಸೋಮವಾರ ಮುಂಗಡ ಜಾಮೀನು ಮಂಜೂರು ಮಾಡಿದೆ. ಈ ತಿಂಗಳ ಆರಂಭದಲ್ಲಿ ಅವರ ಕೋಚಿಂಗ್ ಇನ್ಸ್ಟಿಟ್ಯೂಟ್...

ಗುಜರಾತ್‌| ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನನ್ನು ಬೆದರಿಸಿದ ನಕಲಿ ಗೋರಕ್ಷಕರು

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸ್ವಘೋಷಿತ ಗೋರಕ್ಷಕರ ಗುಂಪೊಂದು ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಸುಮಾರು 100 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿ, ವಾಹನವನ್ನು ತಡೆದು ಗುಂಪು ಮುಸ್ಲಿಂ ಚಾಲಕನನ್ನು ನಿಂದಿಸಿ ಬೆದರಿಸಿದ್ದಾರೆ. 'ಕ್ಲಾರಿಯನ್ ಇಂಡಿಯಾ' ವರದಿ ಪ್ರಕಾರ,...

ವಿಜಯ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಜಯ: ತಮಿಳುನಾಡು ಗೋಹತ್ಯೆ ನಿಷೇಧದ ಹೈಕೋರ್ಟ್ ಆದೇಶಕ್ಕೆ ತಡೆ

ತಮಿಳುನಾಡಿನಲ್ಲಿ ಹಸು ಮತ್ತು ಕರುಗಳ ಹತ್ಯೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK)...