Homeಮುಖಪುಟಮಣಿಪುರದಿಂದ ಮುಂಬೈ; 'ಭಾರತ ನ್ಯಾಯ ಯಾತ್ರೆ' ಆರಂಭಿಸಲಿರುವ ರಾಹುಲ್ ಗಾಂಧಿ

ಮಣಿಪುರದಿಂದ ಮುಂಬೈ; ‘ಭಾರತ ನ್ಯಾಯ ಯಾತ್ರೆ’ ಆರಂಭಿಸಲಿರುವ ರಾಹುಲ್ ಗಾಂಧಿ

- Advertisement -
- Advertisement -

ಕಳೆದ ವರ್ಷ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಡೆಸಿದ ‘ಭಾರತ ಜೋಡೋ’ ಪಾದಯಾತ್ರೆಗೆ ಭರ್ಜರಿ ಬೆಂಬಲ ವ್ಯಕ್ತವಾಗಿತ್ತು. ಒಂದು ವರ್ಷದ ನಂತರ ಮತ್ತೊಂದು ಪಾದಯಾತ್ರೆಗೆ ಮುಂದಾಗಿರುವ ಅವರು, 2024ರ ಜನವರಿ 14ರಿಂದ ಮಾರ್ಚ್ 20ರ ನಡುವೆ ಮಣಿಪುರದಿಂದ ಮುಂಬೈಗೆ ‘ಭಾರತ ನ್ಯಾಯ ಯಾತ್ರೆ’ ಹೆಸರಿನಲ್ಲಿ ಮತ್ತೊಂದು ಪಾದಯಾತ್ರೆ ನಡೆಸಲಿದ್ದಾರೆ.

ಅಸ್ಸಾಂ, ಪಶ್ಚಿಮ ಬಂಗಾಳ, ಬಿಹಾರ, ಜಾರ್ಖಂಡ್, ಒಡಿಶಾ, ಛತ್ತೀಸ್ಗಢ, ಉತ್ತರ ಪ್ರದೇಶ, ಮಧ್ಯಪ್ರದೇಶ, ರಾಜಸ್ಥಾನ, ಗುಜರಾತ್ ರಾಜ್ಯಗಳ ಮೂಲಕ 6,200 ಕಿಮೀ ಸಾಗುವ ರಾಹುಲ್ ಯಾತ್ರೆ ಮಹಾರಾಷ್ಟ್ರದಲ್ಲಿ ಕೊನೆಗೊಳ್ಳಲಿದೆ. ರಾಹುಲ್ ಭಾರತ್ ಜೋಡೋ ಯಾತ್ರೆಗೆ ಅಪಾರ ಜನಬೆಂಬಲ ಸಿಕ್ಕಿತ್ತು. ಆದರೆ, ಕರ್ನಾಟಕ-ತೆಲಂಗಾಣ ಹೊರತುಪಡಿಸಿ ಉತ್ತರದ ರಾಜ್ಯಗಳಲ್ಲಿ ನಡೆದ ಚುನಾವಣೆಗಳ ಮೇಲೆ ರಾಹುಲ್ ಪಾದಯಾತ್ರೆ ಅಷ್ಟಾಗಿ ಪರಿಣಾಮ ಬೀರಲಿಲ್ಲ.

2024ರಲ್ಲಿ ನಡೆಯುವ ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಮತ್ತೊಂದು ಪಾದಯಾತ್ರೆಗೆ ಮುಂದಾಗಿರುವ ರಾಹುಲ್, ಈಗ ಈಶಾನ್ಯ ಭಾರತ ರಾಜ್ಯಗಳು ಹಾಗೂ ಹಿಂದಿ ಭಾಷಿಕ ರಾಜ್ಯಗಳ ಮೇಲೆ ಕಣ್ಣಿಟ್ಟಿದ್ದಾರೆ.

ಚುನಾವಣೆಗೆ ಮುಂಚಿತವಾಗಿ ಮಾರ್ಚ್ 20 ರಂದು ಮುಕ್ತಾಯಗೊಳ್ಳಲಿರುವ ಈ ಯಾತ್ರೆಯು, ದೇಶದ ಪೂರ್ವ-ಪಶ್ಚಿಮ ರಾಜ್ಯಗಳನ್ನು ತಲುಪುವುದಾಗಿದೆ. ಕಳೆದ ವರ್ಷ ಅವರು ಭಾರತ್ ಜೋಡೋ ಹೆಸರಿನಲ್ಲಿ ಉತ್ತರ-ದಕ್ಷಿಣದ ರಾಜ್ಯಗಳಲ್ಲಿ ಪಾದಯಾತ್ರೆ ಮಾಡಿದ್ದರು.

ಹಿಂಸಾಚಾರ ಪೀಡಿತ ಮಣಿಪುರವನ್ನು ಆರಂಭಿಕ ಹಂತವಾಗಿ ಆರಿಸಿಕೊಂಡ ಕಾಂಗ್ರೆಸ್, ‘ಪಕ್ಷವು ಜನರ ಗಾಯಗಳನ್ನು ಗುಣಪಡಿಸುವ ಪ್ರಕ್ರಿಯೆಯನ್ನು ಪ್ರಾರಂಭಿಸಲು ಬಯಸಿದೆ. ನ್ಯಾಯ ಯಾತ್ರೆಯು ದೇಶದ ಜನರಿಗೆ ಆರ್ಥಿಕ, ಸಾಮಾಜಿಕ ಮತ್ತು ರಾಜಕೀಯ ನ್ಯಾಯವನ್ನು ಭದ್ರಪಡಿಸುವುದಾಗಿದೆ’ ಎಂದು ಹೇಳಿದೆ.

ಕಾಂಗ್ರೆಸ್ ಘೋಷಣೆಗೆ ಬಿಜೆಪಿ ವ್ಯಂಗ್ಯವಾಡಿದ್ದು, ‘ಭಾರತ್ ಜೋಡೋ ಯಾತ್ರೆಯ ಕಲ್ಪನೆಯನ್ನು ಜನರು ತಿರಸ್ಕರಿಸಿದ್ದಾರೆ. ಕೆಲವು ಘೋಷಣೆಗಳನ್ನು ಹಾಕಿ ಜನರನ್ನು ಮೂರ್ಖರನ್ನಾಗಿಸಲು ಸಾಧ್ಯವಿಲ್ಲ’ ಎಂದು ಬಿಜೆಪಿ ಹೇಳಿದೆ.

‘ಭಾರತದ ಜನರು ಭಾರತ್ ಜೋಡೋ ಯಾತ್ರೆಯ ಕಲ್ಪನೆಯನ್ನು ಸ್ಪಷ್ಟವಾಗಿ ತಿರಸ್ಕರಿಸಿದ್ದಾರೆ. ಏಕೆಂದರೆ, ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಈ ವಿಚಾರಗಳಲ್ಲಿ ದ್ವಂದ್ವವನ್ನು ಹೊಂದಲು ಸಾಧ್ಯವಿಲ್ಲ. ಕೆಲವು ಘೋಷಣೆಗಳನ್ನು ರೂಪಿಸುವ ಮೂಲಕ ಭಾರತದ ಜನರನ್ನು ಮೂರ್ಖರನ್ನಾಗಿ ಮಾಡಬಹುದು ಎಂದು ಅವರು ಭಾವಿಸುತ್ತಾರೆ’ ಎಂದು ಬಿಜೆಪಿ ವಕ್ತಾರ ನಳಿನ್ ಕೊಹ್ಲಿ ಹೇಳಿದ್ದಾರೆ.

ಇದನ್ನೂ ಓದಿ; WFI ವಿವಾದ: ಬಜರಂಗ್ ಪುನಿಯಾ ಸೇರಿ ಕುಸ್ತಿಪಟುಗಳ ಜೊತೆ ರಾಹುಲ್‌ ಗಾಂಧಿ ಮಾತುಕತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...