Homeಮುಖಪುಟಮಣಿಪುರ: ಚುನಾವಣೆ ವೇಳೆಯ ಹಿಂಸಾಚಾರದಲ್ಲಿ ಇಬ್ಬರು ಸಾವು

ಮಣಿಪುರ: ಚುನಾವಣೆ ವೇಳೆಯ ಹಿಂಸಾಚಾರದಲ್ಲಿ ಇಬ್ಬರು ಸಾವು

- Advertisement -
- Advertisement -

ಮಾರ್ಚ್ 5 ರಂದು ಎರಡನೇ ಹಂತದ ವಿಧಾನಸಭೆ ಚುನಾವಣೆಯು ಮಣಿಪುರದಲ್ಲಿ ನಡೆದಿದ್ದು, ಚುನಾವಣಾ ಸಂಬಂಧಿತ ಹಿಂಸಾಚಾರದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಶೇಕಡಾ 78.49 ಮತದಾನವಾಗಿದ್ದು, ಮತದಾನ ವೇಳೆಯ ಹಿಂಸಾಚಾರದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ.

ವರದಿಯ ಪ್ರಕಾರ, ಒಂದು ಘಟನೆ ತೌಬಲ್ ಜಿಲ್ಲೆಯಲ್ಲಿ ನಡೆದಿದ್ದು, ಎರಡನೆಯ ಘಟನೆ ಸೇನಾಪತಿ ಜಿಲ್ಲೆಯಲ್ಲಿ ನಡೆದಿದೆ.

ಇಂಡಿಯಾ ಟುಡೇ ಪ್ರಕಾರ, ಸೇನಾಪತಿ ಜಿಲ್ಲೆಯ ಮತಗಟ್ಟೆಯೊಂದರಲ್ಲಿ ನಡೆದ ವಾಗ್ವಾದದ ಪರಿಣಾಮವಾಗಿ ಪೊಲೀಸರು ಗುಂಡು ಹಾರಿಸಿದ್ದಾರೆ. ಘಟನೆಯಲ್ಲಿ ಕೆ ಲಾಂಗ್ವಾವೋ ಎಂದು ಗುರುತಿಸಲಾದ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದು, ವಿ ಸಾಪೆ ಎಂಬ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಮಣಿಪುರದ ಕರೋಂಗ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಚುನಾವಣಾ ಆಯೋಗಕ್ಕೆ ಘಟನೆಯನ್ನು ವರದಿ ಮಾಡಿದ್ದಾರೆ. “ಸರಿಯಾದ ಕಾರಣ” ಇಲ್ಲದೆ ಇಬ್ಬರ ಮೇಲೆ ಗುಂಡು ಹಾರಿಸಲಾಗಿದೆ ಎಂದು ದೂರಿದ್ದಾರೆ.

ಜಿಲ್ಲಾ ಚುನಾವಣಾಧಿಕಾರಿಯವರು ವರದಿಗಾಗಿ ಕಾಯುತ್ತಿದ್ದಾರೆ ಎಂದು ಚುನಾವಣಾ ಆಯೋಗದ ಅಧಿಕಾರಿಗಳು ತಿಳಿಸಿದ್ದಾರೆ.

ತೌಬಲ್‌ನಲ್ಲಿ ಎರಡನೇ ಸಾವು ಸಂಭವಿಸಿದೆ. ಮತದಾನ ಪ್ರಾರಂಭವಾಗುವ ಮೊದಲು ಕಾಂಗ್ರೆಸ್ ಬೆಂಬಲಿಗರಿಂದ ಗುಂಡು ಹಾರಿಸಲಾಗಿದ್ದು, ಬಿಜೆಪಿ ಕಾರ್ಯಕರ್ತನ ಸಾವಾಗಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಮೃತರನ್ನು 25 ವರ್ಷದ ಎಲ್ ಅಮುಬಾ ಸಿಂಗ್ ಎಂದು ಗುರುತಿಸಲಾಗಿದೆ.

ಚುನಾವಣಾ ಪ್ರಚಾರವನ್ನು ನಿಲ್ಲಿಸುವಂತೆ ಹೇಳಲು ಸಿಂಗ್ ಅವರು ಬಿಜೆಪಿಯ ಕಾರ್ಯಕರ್ತರೊಂದಿಗೆ ಕಾಂಗ್ರೆಸ್ ಕಾರ್ಯಕರ್ತರ ಮನೆಗೆ ಭೇಟಿ ನೀಡಿದ್ದರು ಎಂದು ಅಧಿಕಾರಿಯೊಬ್ಬರು ದಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ. ಬಿಜೆಪಿ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿ ಗಾಯಗೊಳಿಸಿದ್ದು, ಈ ವೇಳೆ ನಡೆದ ವಾಗ್ವಾದದ ವೇಳೆ ಸಿಂಗ್ ಅವರ ಮೇಲೆ ಗುಂಡು ಹಾರಿಸಲಾಗಿದೆ ಎಂದು ವರದಿ ಹೇಳಿದೆ.

ಮಣಿಪುರದ ಮಾಜಿ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ನಾಯಕ ಒಕ್ರಾಮ್ ಇಬೋಬಿ ಸಿಂಗ್ ಅವರು ಶನಿವಾರ ಬೆಳಗ್ಗೆ ಮತ ಚಲಾಯಿಸಿದರು, ತಾಂತ್ರಿಕ ದೋಷದಿಂದ ಮತದಾನ ಕೇಂದ್ರದಲ್ಲಿ ಸ್ವಲ್ಪ ವಿಳಂಬವಾಗಿತ್ತು. “ಕೆಲವು ತಾಂತ್ರಿಕ ದೋಷವಿದೆ” ಎಂದು ಅವರು ದೂರಿದ್ದರು.

ಈ ಹಂತದಲ್ಲಿ ಆರು ಜಿಲ್ಲೆಗಳ 22 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆದಿದ್ದು, 92 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಚುನಾವಣೆಗಾಗಿ ಒಟ್ಟು 1,274 ಮತಗಟ್ಟೆಗಳನ್ನು ತೆರೆಯಲಾಗಿತ್ತು.


ಇದನ್ನೂ ಓದಿರಿ: ದೆಹಲಿಯಲ್ಲಿ ಮದ್ಯ ಮಾರಾಟ ದ್ವಿಗುಣ: ರಿಯಾಯಿತಿ ಹಿಂಪಡೆದ ದೆಹಲಿ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...