Homeಮುಖಪುಟಮಣಿಪುರ | ಇಬ್ಬರ ಶವ ಪತ್ತೆ, ಪರಿಹಾರ ಶಿಬಿರದಿಂದ 6 ಮಂದಿ ನಾಪತ್ತೆ

ಮಣಿಪುರ | ಇಬ್ಬರ ಶವ ಪತ್ತೆ, ಪರಿಹಾರ ಶಿಬಿರದಿಂದ 6 ಮಂದಿ ನಾಪತ್ತೆ

- Advertisement -
- Advertisement -

ಮಣಿಪುರದ ಜಿರಿಬಾಮ್‌ನ ಬಳಿಯ ಮನೆಗಳಿಂದ ಮೈತೆಯಿ ಸಮುದಾಯದ ಇಬ್ಬರು ವ್ಯಕ್ತಿಗಳ ಶವಗಳನ್ನು ಮಂಗಳವಾರ ಬೆಳಗ್ಗೆ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಭದ್ರತಾ ಪಡೆಗಳು ಈ ಪ್ರದೇಶದಲ್ಲಿ 10 ಶಂಕಿತ ಉಗ್ರರನ್ನು ಹೊಡೆದುರುಳಿಸಿದ್ದಾಗಿ ಹೇಳಿದ ಒಂದು ದಿನದ ನಂತರ ಈ ಘಟನೆ ನಡೆದಿದೆ. ಮಣಿಪುರ

ಸೋಮವಾರ ನಡೆದ ಗುಂಡಿನ ಚಕಮಕಿಯಿಂದ ಆ ಪ್ರದೇಶದಲ್ಲಿನ ಪರಿಹಾರ ಶಿಬಿರದಲ್ಲಿ ವಾಸಿಸುತ್ತಿದ್ದ ಆರು ಮಂದಿ ನಾಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಹ್ಮಾರ್ ಸಮುದಾಯ ಬಹುಸಂಖ್ಯಾತರಾಗಿರುವ ನೆರೆಯ ಫೆರ್ಜಾಲ್ ಜಿಲ್ಲೆಯ ಬೆಟ್ಟಗಳ ಸಮೀಪವಿರುವ ಜಿರಿಬಾಮ್ ಜಿಲ್ಲೆಯ ಜಕುರಾಧೋರ್ ಮತ್ತು ಬೊರೊಬೆಕ್ರಾ ಪ್ರದೇಶಗಳಲ್ಲಿ ಸೋಮವಾರ ಮಧ್ಯಾಹ್ನ ಹ್ಮಾರ್ ಸಮುದಾಯ ಮತ್ತು ಭದ್ರತಾ ಪಡೆಗಳ ನಡುವೆ ದೊಡ್ಡ ಗುಂಡಿನ ಚಕಮಕಿಗೆ ನಡೆದಿತ್ತು. ಮಣಿಪುರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಜಕುರಾದೋರ್‌ನಲ್ಲಿರುವ ಸಿಆರ್‌ಪಿಎಫ್ ಪೋಸ್ಟ್ ಮತ್ತು ಹತ್ತಿರದ ಬೊರೊಬೆಕ್ರಾ ಪೊಲೀಸ್ ಠಾಣೆಯ ಮೇಲೆ ಗುಂಡಿನ ದಾಳಿ ನಡೆದ ನಂತರ ಈ ಗುಂಡಿನ ಚಕಮಕಿ ನಡೆದಿದೆ ಎಂದು ಪೊಲೀಸರು ಹೇಳಿದ್ದಾರೆ. ಶಂಕಿತ ಉಗ್ರರು ಮುಂಜಾನೆಯೇ ಈ ಪ್ರದೇಶದಲ್ಲಿನ ಮೈತೇಯಿ ಬಾಹುಳ್ಯದ ಪ್ರದೇಶಗಳ ಮನೆಗಳು ಮತ್ತು ಅಂಗಡಿಗಳ ಮೇಲೆ ದಾಳಿ ನಡೆಸಿದ್ದರು ಎಂದು ಸ್ಥಳೀಯ ನಿವಾಸಿಗಳು ತಿಳಿಸಿದ್ದಾರೆ.

ಮಂಗಳವಾರ ಬೆಳಗ್ಗೆ ಲೈಶ್ರಾಮ್ ಬರೇಲ್ ಸಿಂಗ್ (63) ಮತ್ತು ಮೈಬಮ್ ಕೇಶ್ವೋ ಸಿಂಗ್ (71) ಎಂದು ಗುರುತಿಸಲಾದ ಇಬ್ಬರ ಶವಗಳನ್ನು ಪೊಲೀಸರು ಜಕುರಾಧೋರ್ ಪ್ರದೇಶದ ಮನೆಗಳಿಂದ ವಶಪಡಿಸಿಕೊಂಡಿದ್ದಾರೆ. ಈ ಇಬ್ಬರು ಬೊರೊಬೆಕ್ರಾ ಪೊಲೀಸ್ ಠಾಣೆಯ ಪರಿಹಾರ ಶಿಬಿರದಲ್ಲಿ ತಂಗಿದ್ದರು ಎಂದು ಸ್ಥಳೀಯ ನಿವಾಸಿಗಳು ಹೇಳಿದ್ದಾರೆ. ಸೋಮವಾರದ ಗುಂಡಿನ ದಾಳಿಯಿಂದ ಶಿಬಿರದಿಂದ 10 ಮಂದಿ ನಾಪತ್ತೆಯಾಗಿದ್ದಾರೆ.

ಈ ವರ್ಷದ ಜೂನ್‌ನಲ್ಲಿ ಪ್ರದೇಶದಲ್ಲಿ ಮೊದಲ ಬಾರಿಗೆ ಹಿಂಸಾಚಾರ ಭುಗಿಲೆದ್ದು, ಬೆಂಕಿ ಹಚ್ಚಲ್ಪಟ್ಟ ನಂತರ ಸಮೀಪದ ಹಳ್ಳಿಗಳ ನಿವಾಸಿಗಳಿಗಾಗಿ ಪೊಲೀಸ್ ಠಾಣೆಯಲ್ಲಿ ಪರಿಹಾರ ಶಿಬಿರಗಳನ್ನು ಸ್ಥಾಪಿಸಲಾತ್ತು. ಈ ಶಿಬಿರದಲ್ಲಿ 118 ಜನರು ತಂಗಿದ್ದಾರೆ ಎಂದು ನಿವಾಸಿ ಯುರೆಂಬಮ್ ಸಂಜೋಯ್ ಸಿಂಗ್ ಹೇಳಿದ್ದಾರೆ. ಈ ಪ್ರದೇಶದಿಂದ ಸ್ಥಳಾಂತರಗೊಂಡ ಉಳಿದ ಮೈತೇಯಿ ಜನರು 20 ಕಿಮೀ ದೂರದಲ್ಲಿರುವ ಜಿರಿಬಾಮ್ ಜಿಲ್ಲಾ ಕೇಂದ್ರದಲ್ಲಿರುವ ಪರಿಹಾರ ಶಿಬಿರಗಳಲ್ಲಿ ತಂಗಿದ್ದಾರೆ.

“ಹಗಲಿನ ವೇಳೆಯಲ್ಲಿ, ಪರಿಹಾರ ಶಿಬಿರದಲ್ಲಿ ವಾಸಿಸುವ ಜನರು ಹೊರಗೆ ಹೋಗುತ್ತಾರೆ. ನಿನ್ನೆಯ ಗುಂಡಿನ ದಾಳಿ ನಂತರ ಜನರು ಇಲ್ಲಿಂದ ಓಡಲು ಪ್ರಾರಂಭಿಸಿದರು. ದಾಳಿ ಕಡಿಮೆಯಾದ ನಂತರ, ಪರಿಹಾರ ಶಿಬಿರದಿಂದ 10 ಜನರು ನಾಪತ್ತೆಯಾಗಿರುವುದನ್ನು ನಾವು ಕಂಡುಕೊಂಡಿದ್ದೇವೆ.” ಎಂದು ಅವರು ಹೇಳಿದ್ದಾರೆ.

“ಇಂದು ಬೆಳಿಗ್ಗೆ, ಎರಡು ಶವಗಳು ಪತ್ತೆಯಾಗಿವೆ ಮತ್ತು ಇನ್ನಿಬ್ಬರು ಜೀವಂತವಾಗಿ ಪತ್ತೆಯಾಗಿದ್ದಾರೆ … ಆರು ಜನರು ಇನ್ನೂ ಕಾಣೆಯಾಗಿದ್ದಾರೆ, ಅವರಲ್ಲಿ ಮೂವರು ಮಹಿಳೆಯರು ಮತ್ತು ಮೂವರು ಮಕ್ಕಳು ಮತ್ತು ಅವರು ಎಲ್ಲಿರಬಹುದು ಅಥವಾ ಅವರಿಗೆ ಏನಾರಿರಬಹುದು ಎಂದು ನಾವು ಆತಂಕದಲ್ಲಿದ್ದೇವೆ” ಎಂದು ಅವರು ಹೇಳಿದರು. ಹಿಂಸಾಚಾರದ ನಂತರ ಆರು ಮಂದಿ ನಾಪತ್ತೆಯಾಗಿದ್ದಾರೆ ಎಂದು ಪೊಲೀಸರು ಖಚಿತಪಡಿಸಿದ್ದಾರೆ.

ಇದನ್ನೂ ಓದಿ:11 ಜನ ಸರ್ಕಾರಿ ಅಧಿಕಾರಿಗಳಿಗೆ ಸಂಬಂಧಿಸಿದ 44 ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ

11 ಜನ ಸರ್ಕಾರಿ ಅಧಿಕಾರಿಗಳಿಗೆ ಸಂಬಂಧಿಸಿದ 44 ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...