Homeಮುಖಪುಟಮಣಿಪುರ | ಇಬ್ಬರ ಶವ ಪತ್ತೆ, ಪರಿಹಾರ ಶಿಬಿರದಿಂದ 6 ಮಂದಿ ನಾಪತ್ತೆ

ಮಣಿಪುರ | ಇಬ್ಬರ ಶವ ಪತ್ತೆ, ಪರಿಹಾರ ಶಿಬಿರದಿಂದ 6 ಮಂದಿ ನಾಪತ್ತೆ

- Advertisement -
- Advertisement -

ಮಣಿಪುರದ ಜಿರಿಬಾಮ್‌ನ ಬಳಿಯ ಮನೆಗಳಿಂದ ಮೈತೆಯಿ ಸಮುದಾಯದ ಇಬ್ಬರು ವ್ಯಕ್ತಿಗಳ ಶವಗಳನ್ನು ಮಂಗಳವಾರ ಬೆಳಗ್ಗೆ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಭದ್ರತಾ ಪಡೆಗಳು ಈ ಪ್ರದೇಶದಲ್ಲಿ 10 ಶಂಕಿತ ಉಗ್ರರನ್ನು ಹೊಡೆದುರುಳಿಸಿದ್ದಾಗಿ ಹೇಳಿದ ಒಂದು ದಿನದ ನಂತರ ಈ ಘಟನೆ ನಡೆದಿದೆ. ಮಣಿಪುರ

ಸೋಮವಾರ ನಡೆದ ಗುಂಡಿನ ಚಕಮಕಿಯಿಂದ ಆ ಪ್ರದೇಶದಲ್ಲಿನ ಪರಿಹಾರ ಶಿಬಿರದಲ್ಲಿ ವಾಸಿಸುತ್ತಿದ್ದ ಆರು ಮಂದಿ ನಾಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಹ್ಮಾರ್ ಸಮುದಾಯ ಬಹುಸಂಖ್ಯಾತರಾಗಿರುವ ನೆರೆಯ ಫೆರ್ಜಾಲ್ ಜಿಲ್ಲೆಯ ಬೆಟ್ಟಗಳ ಸಮೀಪವಿರುವ ಜಿರಿಬಾಮ್ ಜಿಲ್ಲೆಯ ಜಕುರಾಧೋರ್ ಮತ್ತು ಬೊರೊಬೆಕ್ರಾ ಪ್ರದೇಶಗಳಲ್ಲಿ ಸೋಮವಾರ ಮಧ್ಯಾಹ್ನ ಹ್ಮಾರ್ ಸಮುದಾಯ ಮತ್ತು ಭದ್ರತಾ ಪಡೆಗಳ ನಡುವೆ ದೊಡ್ಡ ಗುಂಡಿನ ಚಕಮಕಿಗೆ ನಡೆದಿತ್ತು. ಮಣಿಪುರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಜಕುರಾದೋರ್‌ನಲ್ಲಿರುವ ಸಿಆರ್‌ಪಿಎಫ್ ಪೋಸ್ಟ್ ಮತ್ತು ಹತ್ತಿರದ ಬೊರೊಬೆಕ್ರಾ ಪೊಲೀಸ್ ಠಾಣೆಯ ಮೇಲೆ ಗುಂಡಿನ ದಾಳಿ ನಡೆದ ನಂತರ ಈ ಗುಂಡಿನ ಚಕಮಕಿ ನಡೆದಿದೆ ಎಂದು ಪೊಲೀಸರು ಹೇಳಿದ್ದಾರೆ. ಶಂಕಿತ ಉಗ್ರರು ಮುಂಜಾನೆಯೇ ಈ ಪ್ರದೇಶದಲ್ಲಿನ ಮೈತೇಯಿ ಬಾಹುಳ್ಯದ ಪ್ರದೇಶಗಳ ಮನೆಗಳು ಮತ್ತು ಅಂಗಡಿಗಳ ಮೇಲೆ ದಾಳಿ ನಡೆಸಿದ್ದರು ಎಂದು ಸ್ಥಳೀಯ ನಿವಾಸಿಗಳು ತಿಳಿಸಿದ್ದಾರೆ.

ಮಂಗಳವಾರ ಬೆಳಗ್ಗೆ ಲೈಶ್ರಾಮ್ ಬರೇಲ್ ಸಿಂಗ್ (63) ಮತ್ತು ಮೈಬಮ್ ಕೇಶ್ವೋ ಸಿಂಗ್ (71) ಎಂದು ಗುರುತಿಸಲಾದ ಇಬ್ಬರ ಶವಗಳನ್ನು ಪೊಲೀಸರು ಜಕುರಾಧೋರ್ ಪ್ರದೇಶದ ಮನೆಗಳಿಂದ ವಶಪಡಿಸಿಕೊಂಡಿದ್ದಾರೆ. ಈ ಇಬ್ಬರು ಬೊರೊಬೆಕ್ರಾ ಪೊಲೀಸ್ ಠಾಣೆಯ ಪರಿಹಾರ ಶಿಬಿರದಲ್ಲಿ ತಂಗಿದ್ದರು ಎಂದು ಸ್ಥಳೀಯ ನಿವಾಸಿಗಳು ಹೇಳಿದ್ದಾರೆ. ಸೋಮವಾರದ ಗುಂಡಿನ ದಾಳಿಯಿಂದ ಶಿಬಿರದಿಂದ 10 ಮಂದಿ ನಾಪತ್ತೆಯಾಗಿದ್ದಾರೆ.

ಈ ವರ್ಷದ ಜೂನ್‌ನಲ್ಲಿ ಪ್ರದೇಶದಲ್ಲಿ ಮೊದಲ ಬಾರಿಗೆ ಹಿಂಸಾಚಾರ ಭುಗಿಲೆದ್ದು, ಬೆಂಕಿ ಹಚ್ಚಲ್ಪಟ್ಟ ನಂತರ ಸಮೀಪದ ಹಳ್ಳಿಗಳ ನಿವಾಸಿಗಳಿಗಾಗಿ ಪೊಲೀಸ್ ಠಾಣೆಯಲ್ಲಿ ಪರಿಹಾರ ಶಿಬಿರಗಳನ್ನು ಸ್ಥಾಪಿಸಲಾತ್ತು. ಈ ಶಿಬಿರದಲ್ಲಿ 118 ಜನರು ತಂಗಿದ್ದಾರೆ ಎಂದು ನಿವಾಸಿ ಯುರೆಂಬಮ್ ಸಂಜೋಯ್ ಸಿಂಗ್ ಹೇಳಿದ್ದಾರೆ. ಈ ಪ್ರದೇಶದಿಂದ ಸ್ಥಳಾಂತರಗೊಂಡ ಉಳಿದ ಮೈತೇಯಿ ಜನರು 20 ಕಿಮೀ ದೂರದಲ್ಲಿರುವ ಜಿರಿಬಾಮ್ ಜಿಲ್ಲಾ ಕೇಂದ್ರದಲ್ಲಿರುವ ಪರಿಹಾರ ಶಿಬಿರಗಳಲ್ಲಿ ತಂಗಿದ್ದಾರೆ.

“ಹಗಲಿನ ವೇಳೆಯಲ್ಲಿ, ಪರಿಹಾರ ಶಿಬಿರದಲ್ಲಿ ವಾಸಿಸುವ ಜನರು ಹೊರಗೆ ಹೋಗುತ್ತಾರೆ. ನಿನ್ನೆಯ ಗುಂಡಿನ ದಾಳಿ ನಂತರ ಜನರು ಇಲ್ಲಿಂದ ಓಡಲು ಪ್ರಾರಂಭಿಸಿದರು. ದಾಳಿ ಕಡಿಮೆಯಾದ ನಂತರ, ಪರಿಹಾರ ಶಿಬಿರದಿಂದ 10 ಜನರು ನಾಪತ್ತೆಯಾಗಿರುವುದನ್ನು ನಾವು ಕಂಡುಕೊಂಡಿದ್ದೇವೆ.” ಎಂದು ಅವರು ಹೇಳಿದ್ದಾರೆ.

“ಇಂದು ಬೆಳಿಗ್ಗೆ, ಎರಡು ಶವಗಳು ಪತ್ತೆಯಾಗಿವೆ ಮತ್ತು ಇನ್ನಿಬ್ಬರು ಜೀವಂತವಾಗಿ ಪತ್ತೆಯಾಗಿದ್ದಾರೆ … ಆರು ಜನರು ಇನ್ನೂ ಕಾಣೆಯಾಗಿದ್ದಾರೆ, ಅವರಲ್ಲಿ ಮೂವರು ಮಹಿಳೆಯರು ಮತ್ತು ಮೂವರು ಮಕ್ಕಳು ಮತ್ತು ಅವರು ಎಲ್ಲಿರಬಹುದು ಅಥವಾ ಅವರಿಗೆ ಏನಾರಿರಬಹುದು ಎಂದು ನಾವು ಆತಂಕದಲ್ಲಿದ್ದೇವೆ” ಎಂದು ಅವರು ಹೇಳಿದರು. ಹಿಂಸಾಚಾರದ ನಂತರ ಆರು ಮಂದಿ ನಾಪತ್ತೆಯಾಗಿದ್ದಾರೆ ಎಂದು ಪೊಲೀಸರು ಖಚಿತಪಡಿಸಿದ್ದಾರೆ.

ಇದನ್ನೂ ಓದಿ:11 ಜನ ಸರ್ಕಾರಿ ಅಧಿಕಾರಿಗಳಿಗೆ ಸಂಬಂಧಿಸಿದ 44 ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ

11 ಜನ ಸರ್ಕಾರಿ ಅಧಿಕಾರಿಗಳಿಗೆ ಸಂಬಂಧಿಸಿದ 44 ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...