Homeಮುಖಪುಟಮಣಿಪುರ ಹಿಂಸಾಚಾರ: ರಾಜ್ಯದ ಪ್ರಾದೇಶಿಕ ಸಮಗ್ರತೆಗೆ ಧಕ್ಕೆಯಾದರೆ ಪ್ರಶಸ್ತಿ ವಾಪಸ್; ಕ್ರೀಡಾಪಟುಗಳಿಂದ ಜ್ಞಾಪಕ ಪತ್ರ

ಮಣಿಪುರ ಹಿಂಸಾಚಾರ: ರಾಜ್ಯದ ಪ್ರಾದೇಶಿಕ ಸಮಗ್ರತೆಗೆ ಧಕ್ಕೆಯಾದರೆ ಪ್ರಶಸ್ತಿ ವಾಪಸ್; ಕ್ರೀಡಾಪಟುಗಳಿಂದ ಜ್ಞಾಪಕ ಪತ್ರ

- Advertisement -
- Advertisement -

ರಾಜ್ಯದ ಪ್ರಾದೇಶಿಕ ಸಮಗ್ರತೆಗೆ ಧಕ್ಕೆ ಉಂಟಾದರೆ ಸರ್ಕಾರ ನೀಡಿದ ಬಹುಮಾನಗಳನ್ನು ಹಿಂದಿರುಗಿಸುವುದಾಗಿ ಮಣಿಪುರದ ಅಂತರರಾಷ್ಟ್ರೀಯ ಮತ್ತು ರಾಷ್ಟ್ರ ಪ್ರಶಸ್ತಿ ವಿಜೇತ ಕ್ರೀಡಾಪಟುಗಳು ಮಂಗಳವಾರ ಹೇಳಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ರಾಜ್ಯ ಪ್ರವಾಸದ ಸಂದರ್ಭದಲ್ಲಿ ಎಲ್ ಅನಿತಾ ಚಾನು (ಧ್ಯಾನ್ ಚಂದ್ ಪ್ರಶಸ್ತಿ ಪುರಸ್ಕೃತರು), ಅರ್ಜುನ ಪ್ರಶಸ್ತಿ ಪುರಸ್ಕೃತರಾದ ಎನ್ ಕುಂಜರಾಣಿ ದೇವಿ (ಪದ್ಮಶ್ರೀ), ಎಲ್ ಸರಿತಾ ದೇವಿ ಮತ್ತು ಡಬ್ಲ್ಯು ಸಂಧ್ಯಾರಾಣಿ ದೇವಿ (ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರು) ಮತ್ತು ಎಸ್ ಮೀರಾಬಾಯಿ ಚಾನು (ಪದ್ಮಶ್ರೀ ಮತ್ತು ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿ ಪುರಸ್ಕೃತರು) ಸೇರಿದಂತೆ 11 ಕ್ರೀಡಾಪಟುಗಳು ಈ ವಿಷಯದ ಬಗ್ಗೆ ಜ್ಞಾಪಕ ಪತ್ರವನ್ನು ಸಲ್ಲಿಸಲಿದ್ದಾರೆ.

ಈ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಎಲ್ ಅನಿತಾ ಚಾನು, ”ಮಣಿಪುರದ ಸಮಗ್ರತೆಯ ರಕ್ಷಣೆಯ ಬಗ್ಗೆ ಅಮಿತ್ ಶಾ ನಮಗೆ ಭರವಸೆ ನೀಡದಿದ್ದರೆ, ಭಾರತ ಸರ್ಕಾರ ನೀಡಿದ ಪ್ರಶಸ್ತಿಗಳನ್ನು ಹಿಂದಿರುಗಿಸುತ್ತೇವೆ” ಎಂದು ಹೇಳಿದರು.

”ಬೇಡಿಕೆಯನ್ನು ಪೂರೈಸದಿದ್ದರೆ, ಕ್ರೀಡಾ ವ್ಯಕ್ತಿಗಳು ಭವಿಷ್ಯದಲ್ಲಿ ಭಾರತವನ್ನು ಪ್ರತಿನಿಧಿಸುವುದಿಲ್ಲ ಅಥವಾ ಅವರು ಯಾವುದೇ ಉದಯೋನ್ಮುಖ ಪ್ರತಿಭೆಗಳಿಗೆ ತರಬೇತಿ ನೀಡುವುದಿಲ್ಲ” ಎಂದು ಅವರು ಹೇಳಿದರು.

11 ಕ್ರೀಡಾಪಟುಗಳು ಪ್ರಧಾನಿ ನರೇಂದ್ರ ಮೋದಿ ಅವರನ್ನು ಉದ್ದೇಶಿಸಿ ಶಾ ಅವರಿಗೆ ಜ್ಞಾಪಕ ಪತ್ರವನ್ನು ಸಲ್ಲಿಸಲು ಹೋದರು ಆದರೆ ಕೇಂದ್ರ ಗೃಹ ಸಚಿವರು ಕುಕಿ ಸಂತ್ರಸ್ತರು ಮತ್ತು ಸಂಘಟನೆಗಳನ್ನು ಭೇಟಿ ಮಾಡಲು ಚುರಚಂದಪುರಕ್ಕೆ ತೆರಳಿದ್ದರಿಂದ ಅವರನ್ನು ನೇರವಾಗಿ ಭೇಟಿ ಮಾಡಲು ಸಾಧ್ಯವಾಗಲಿಲ್ಲ.

”ನಾವು ಜ್ಞಾಪಕದ ಪ್ರತಿಯನ್ನು ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರಿಗೆ ಸಲ್ಲಿಸಿದ್ದೇವೆ. ಚುರಾಚಂದ್‌ಪುರದಿಂದ ವಾಪಸಾದ ನಂತರ ಸಂಜೆ ಶಾ ಅವರೊಂದಿಗೆ ಸಭೆಯನ್ನು ಏರ್ಪಡಿಸುವುದಾಗಿ ಅವರು ಭರವಸೆ ನೀಡಿದ್ದಾರೆ. ನಂತರ ನಾವು ಅವರಿಗೆ ಜ್ಞಾಪಕ ಪತ್ರವನ್ನು ಹಸ್ತಾಂತರಿಸುತ್ತೇವೆ” ಎಂದು ಚಾನು ಹೇಳಿದ್ದಾರೆ.

ಇದನ್ನೂ ಓದಿ: ಮಣಿಪುರ ಸಹಜ ಸ್ಥತಿಗೆ ಬರಲು ರಾಷ್ಟ್ರಪತಿ ಮಧ್ಯಸ್ಥಿಕೆ ವಹಿಸಬೇಕು: ದ್ರೌಪದಿ ಮುರ್ಮುರನ್ನು ಭೇಟಿ ಮಾಡಿದ ಕಾಂಗ್ರೆಸ್ ನಿಯೋಗ

”ಜ್ಞಾಪಕ ಪತ್ರಕ್ಕೆ ರಾಜ್ಯದ ಇತರ ಅರ್ಜುನ್ ಪ್ರಶಸ್ತಿ ಪುರಸ್ಕೃತರು ಸಹ ಸಹಿ ಮಾಡಿದ್ದಾರೆ. ಅವರೆಂದರೆ ಒಯಿನಮ್ ಬೆಂಬೆಮ್ ದೇವಿ (ಪದ್ಮಶ್ರೀ ಕೂಡ), ಎನ್ ಸೋನಿಯಾ ಚಾನು, ಎಂ ಬಿಯೋಜಿತ್ ಸಿಂಗ್, ವೈ ಸನತೋಯ್ ದೇವಿ, ಎಲ್ ಶುಶೀಲಾ ದೇವಿ ಮತ್ತು ಎಂ ಸುರಂಜಯ್ ಸಿಂಗ್” ಎಂದು ತಿಳಿಸಿದರು.

”ಕುಕಿ ಭಯೋತ್ಪಾದಕರು ಮಣಿಪುರದ ಸಮಗ್ರತೆಗೆ ಸವಾಲು ಹಾಕುತ್ತಿದ್ದಾರೆ” ಜನರನ್ನು ಕೊಂದು ಮನೆಗಳನ್ನು ಸುಡುವ ಮೂಲಕ ಹಿಂಸಾಚಾರ ನಡೆಸುತ್ತಿದ್ದಾರೆ. ಕೇಂದ್ರ ಭದ್ರತಾ ಪಡೆಗಳು ಇದನ್ನು ನಿಯಂತ್ರಿಸುವಲ್ಲಿ ವಿಫಲಾಗಿವೆಯೇ? ಎಂದು ಕ್ರೀಡಾಪಟುಗಳು ಪ್ರಶ್ನಿಸಿದ್ದಾರೆ.

”ವಿಶೇಷವಾಗಿ ಕಣಿವೆ ಜಿಲ್ಲೆಗಳ ಬಾಹ್ಯ ಪ್ರದೇಶಗಳಲ್ಲಿ ನಿರಾಯುಧ ನಾಗರಿಕರ ಮೇಲೆ ನಡೆಯುತ್ತಿರುವ ಇಂತಹ ದಾಳಿಗಳನ್ನು ನಾವು ಖಂಡಿಸುತ್ತೇವೆ” ಎಂದು ಅವರು ಹೇಳಿದರು.

”ಕುಕಿ ಉಗ್ರಗಾಮಿ ಗುಂಪುಗಳೊಂದಿಗಿನ ಕಾರ್ಯಾಚರಣೆಯ ಅಮಾನತು (SoO) ಒಪ್ಪಂದವನ್ನು ರದ್ದುಗೊಳಿಸಬೇಕು, ಶಾಂತಿ ಮತ್ತು ಸಹಜತೆಯನ್ನು ಶೀಘ್ರವಾಗಿ ಮರುಸ್ಥಾಪಿಸಬೇಕು ಮತ್ತು ಮಣಿಪುರದ ಏಕತೆ ಮತ್ತು ಸಮಗ್ರತೆಯನ್ನು ರಕ್ಷಿಸಬೇಕು” ಎಂದು ಕ್ರೀಡಾಪಟುಗಳು ಒತ್ತಾಯಿಸಿದರು.

”ಮಣಿಪುರವನ್ನು ವಿಭಜಿಸುವ ಬೇಡಿಕೆಯು ಯಾವುದೇ ಸಂದರ್ಭದಲ್ಲೂ ಸ್ವೀಕಾರಾರ್ಹವಲ್ಲ, ಎಲ್ಲಾ ಅಕ್ರಮ ವಲಸಿಗರನ್ನು ಗಡೀಪಾರು ಮಾಡುಬೇಕು ಎಂದು ” ಎಂದು ಮೆಮೊರಾಂಡಮ್ ಒತ್ತಾಯಿಸಿದೆ.

ಅಗತ್ಯ ವಸ್ತುಗಳ ಬೆಲೆಗಳು ಗಗನಕ್ಕೇರಲು ಕಾರಣವಾಗಿರುವುದರಿಂದ NH2 ನಲ್ಲಿನ ದಿಗ್ಬಂಧನವನ್ನು ಹಿಂತೆಗೆದುಕೊಳ್ಳುವಂತೆ ಕ್ರೀಡಾಪಟುಗಳು ಸರ್ಕಾರವನ್ನು ಒತ್ತಾಯಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...