Homeಮುಖಪುಟಮಣಿಪುರ ಹಿಂಸಾಚಾರ: ರಾಜ್ಯದ ಪ್ರಾದೇಶಿಕ ಸಮಗ್ರತೆಗೆ ಧಕ್ಕೆಯಾದರೆ ಪ್ರಶಸ್ತಿ ವಾಪಸ್; ಕ್ರೀಡಾಪಟುಗಳಿಂದ ಜ್ಞಾಪಕ ಪತ್ರ

ಮಣಿಪುರ ಹಿಂಸಾಚಾರ: ರಾಜ್ಯದ ಪ್ರಾದೇಶಿಕ ಸಮಗ್ರತೆಗೆ ಧಕ್ಕೆಯಾದರೆ ಪ್ರಶಸ್ತಿ ವಾಪಸ್; ಕ್ರೀಡಾಪಟುಗಳಿಂದ ಜ್ಞಾಪಕ ಪತ್ರ

- Advertisement -
- Advertisement -

ರಾಜ್ಯದ ಪ್ರಾದೇಶಿಕ ಸಮಗ್ರತೆಗೆ ಧಕ್ಕೆ ಉಂಟಾದರೆ ಸರ್ಕಾರ ನೀಡಿದ ಬಹುಮಾನಗಳನ್ನು ಹಿಂದಿರುಗಿಸುವುದಾಗಿ ಮಣಿಪುರದ ಅಂತರರಾಷ್ಟ್ರೀಯ ಮತ್ತು ರಾಷ್ಟ್ರ ಪ್ರಶಸ್ತಿ ವಿಜೇತ ಕ್ರೀಡಾಪಟುಗಳು ಮಂಗಳವಾರ ಹೇಳಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ರಾಜ್ಯ ಪ್ರವಾಸದ ಸಂದರ್ಭದಲ್ಲಿ ಎಲ್ ಅನಿತಾ ಚಾನು (ಧ್ಯಾನ್ ಚಂದ್ ಪ್ರಶಸ್ತಿ ಪುರಸ್ಕೃತರು), ಅರ್ಜುನ ಪ್ರಶಸ್ತಿ ಪುರಸ್ಕೃತರಾದ ಎನ್ ಕುಂಜರಾಣಿ ದೇವಿ (ಪದ್ಮಶ್ರೀ), ಎಲ್ ಸರಿತಾ ದೇವಿ ಮತ್ತು ಡಬ್ಲ್ಯು ಸಂಧ್ಯಾರಾಣಿ ದೇವಿ (ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರು) ಮತ್ತು ಎಸ್ ಮೀರಾಬಾಯಿ ಚಾನು (ಪದ್ಮಶ್ರೀ ಮತ್ತು ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿ ಪುರಸ್ಕೃತರು) ಸೇರಿದಂತೆ 11 ಕ್ರೀಡಾಪಟುಗಳು ಈ ವಿಷಯದ ಬಗ್ಗೆ ಜ್ಞಾಪಕ ಪತ್ರವನ್ನು ಸಲ್ಲಿಸಲಿದ್ದಾರೆ.

ಈ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಎಲ್ ಅನಿತಾ ಚಾನು, ”ಮಣಿಪುರದ ಸಮಗ್ರತೆಯ ರಕ್ಷಣೆಯ ಬಗ್ಗೆ ಅಮಿತ್ ಶಾ ನಮಗೆ ಭರವಸೆ ನೀಡದಿದ್ದರೆ, ಭಾರತ ಸರ್ಕಾರ ನೀಡಿದ ಪ್ರಶಸ್ತಿಗಳನ್ನು ಹಿಂದಿರುಗಿಸುತ್ತೇವೆ” ಎಂದು ಹೇಳಿದರು.

”ಬೇಡಿಕೆಯನ್ನು ಪೂರೈಸದಿದ್ದರೆ, ಕ್ರೀಡಾ ವ್ಯಕ್ತಿಗಳು ಭವಿಷ್ಯದಲ್ಲಿ ಭಾರತವನ್ನು ಪ್ರತಿನಿಧಿಸುವುದಿಲ್ಲ ಅಥವಾ ಅವರು ಯಾವುದೇ ಉದಯೋನ್ಮುಖ ಪ್ರತಿಭೆಗಳಿಗೆ ತರಬೇತಿ ನೀಡುವುದಿಲ್ಲ” ಎಂದು ಅವರು ಹೇಳಿದರು.

11 ಕ್ರೀಡಾಪಟುಗಳು ಪ್ರಧಾನಿ ನರೇಂದ್ರ ಮೋದಿ ಅವರನ್ನು ಉದ್ದೇಶಿಸಿ ಶಾ ಅವರಿಗೆ ಜ್ಞಾಪಕ ಪತ್ರವನ್ನು ಸಲ್ಲಿಸಲು ಹೋದರು ಆದರೆ ಕೇಂದ್ರ ಗೃಹ ಸಚಿವರು ಕುಕಿ ಸಂತ್ರಸ್ತರು ಮತ್ತು ಸಂಘಟನೆಗಳನ್ನು ಭೇಟಿ ಮಾಡಲು ಚುರಚಂದಪುರಕ್ಕೆ ತೆರಳಿದ್ದರಿಂದ ಅವರನ್ನು ನೇರವಾಗಿ ಭೇಟಿ ಮಾಡಲು ಸಾಧ್ಯವಾಗಲಿಲ್ಲ.

”ನಾವು ಜ್ಞಾಪಕದ ಪ್ರತಿಯನ್ನು ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರಿಗೆ ಸಲ್ಲಿಸಿದ್ದೇವೆ. ಚುರಾಚಂದ್‌ಪುರದಿಂದ ವಾಪಸಾದ ನಂತರ ಸಂಜೆ ಶಾ ಅವರೊಂದಿಗೆ ಸಭೆಯನ್ನು ಏರ್ಪಡಿಸುವುದಾಗಿ ಅವರು ಭರವಸೆ ನೀಡಿದ್ದಾರೆ. ನಂತರ ನಾವು ಅವರಿಗೆ ಜ್ಞಾಪಕ ಪತ್ರವನ್ನು ಹಸ್ತಾಂತರಿಸುತ್ತೇವೆ” ಎಂದು ಚಾನು ಹೇಳಿದ್ದಾರೆ.

ಇದನ್ನೂ ಓದಿ: ಮಣಿಪುರ ಸಹಜ ಸ್ಥತಿಗೆ ಬರಲು ರಾಷ್ಟ್ರಪತಿ ಮಧ್ಯಸ್ಥಿಕೆ ವಹಿಸಬೇಕು: ದ್ರೌಪದಿ ಮುರ್ಮುರನ್ನು ಭೇಟಿ ಮಾಡಿದ ಕಾಂಗ್ರೆಸ್ ನಿಯೋಗ

”ಜ್ಞಾಪಕ ಪತ್ರಕ್ಕೆ ರಾಜ್ಯದ ಇತರ ಅರ್ಜುನ್ ಪ್ರಶಸ್ತಿ ಪುರಸ್ಕೃತರು ಸಹ ಸಹಿ ಮಾಡಿದ್ದಾರೆ. ಅವರೆಂದರೆ ಒಯಿನಮ್ ಬೆಂಬೆಮ್ ದೇವಿ (ಪದ್ಮಶ್ರೀ ಕೂಡ), ಎನ್ ಸೋನಿಯಾ ಚಾನು, ಎಂ ಬಿಯೋಜಿತ್ ಸಿಂಗ್, ವೈ ಸನತೋಯ್ ದೇವಿ, ಎಲ್ ಶುಶೀಲಾ ದೇವಿ ಮತ್ತು ಎಂ ಸುರಂಜಯ್ ಸಿಂಗ್” ಎಂದು ತಿಳಿಸಿದರು.

”ಕುಕಿ ಭಯೋತ್ಪಾದಕರು ಮಣಿಪುರದ ಸಮಗ್ರತೆಗೆ ಸವಾಲು ಹಾಕುತ್ತಿದ್ದಾರೆ” ಜನರನ್ನು ಕೊಂದು ಮನೆಗಳನ್ನು ಸುಡುವ ಮೂಲಕ ಹಿಂಸಾಚಾರ ನಡೆಸುತ್ತಿದ್ದಾರೆ. ಕೇಂದ್ರ ಭದ್ರತಾ ಪಡೆಗಳು ಇದನ್ನು ನಿಯಂತ್ರಿಸುವಲ್ಲಿ ವಿಫಲಾಗಿವೆಯೇ? ಎಂದು ಕ್ರೀಡಾಪಟುಗಳು ಪ್ರಶ್ನಿಸಿದ್ದಾರೆ.

”ವಿಶೇಷವಾಗಿ ಕಣಿವೆ ಜಿಲ್ಲೆಗಳ ಬಾಹ್ಯ ಪ್ರದೇಶಗಳಲ್ಲಿ ನಿರಾಯುಧ ನಾಗರಿಕರ ಮೇಲೆ ನಡೆಯುತ್ತಿರುವ ಇಂತಹ ದಾಳಿಗಳನ್ನು ನಾವು ಖಂಡಿಸುತ್ತೇವೆ” ಎಂದು ಅವರು ಹೇಳಿದರು.

”ಕುಕಿ ಉಗ್ರಗಾಮಿ ಗುಂಪುಗಳೊಂದಿಗಿನ ಕಾರ್ಯಾಚರಣೆಯ ಅಮಾನತು (SoO) ಒಪ್ಪಂದವನ್ನು ರದ್ದುಗೊಳಿಸಬೇಕು, ಶಾಂತಿ ಮತ್ತು ಸಹಜತೆಯನ್ನು ಶೀಘ್ರವಾಗಿ ಮರುಸ್ಥಾಪಿಸಬೇಕು ಮತ್ತು ಮಣಿಪುರದ ಏಕತೆ ಮತ್ತು ಸಮಗ್ರತೆಯನ್ನು ರಕ್ಷಿಸಬೇಕು” ಎಂದು ಕ್ರೀಡಾಪಟುಗಳು ಒತ್ತಾಯಿಸಿದರು.

”ಮಣಿಪುರವನ್ನು ವಿಭಜಿಸುವ ಬೇಡಿಕೆಯು ಯಾವುದೇ ಸಂದರ್ಭದಲ್ಲೂ ಸ್ವೀಕಾರಾರ್ಹವಲ್ಲ, ಎಲ್ಲಾ ಅಕ್ರಮ ವಲಸಿಗರನ್ನು ಗಡೀಪಾರು ಮಾಡುಬೇಕು ಎಂದು ” ಎಂದು ಮೆಮೊರಾಂಡಮ್ ಒತ್ತಾಯಿಸಿದೆ.

ಅಗತ್ಯ ವಸ್ತುಗಳ ಬೆಲೆಗಳು ಗಗನಕ್ಕೇರಲು ಕಾರಣವಾಗಿರುವುದರಿಂದ NH2 ನಲ್ಲಿನ ದಿಗ್ಬಂಧನವನ್ನು ಹಿಂತೆಗೆದುಕೊಳ್ಳುವಂತೆ ಕ್ರೀಡಾಪಟುಗಳು ಸರ್ಕಾರವನ್ನು ಒತ್ತಾಯಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...