Homeಮುಖಪುಟಮಣಿಪುರ ಹಿಂಸಾಚಾರ: 87 ಮೃತದೇಹಗಳ ಸಾಮೂಹಿಕ ಅಂತ್ಯ ಸಂಸ್ಕಾರ

ಮಣಿಪುರ ಹಿಂಸಾಚಾರ: 87 ಮೃತದೇಹಗಳ ಸಾಮೂಹಿಕ ಅಂತ್ಯ ಸಂಸ್ಕಾರ

- Advertisement -
- Advertisement -

ಜನಾಂಗೀಯ ಹಿಂಸಾಚಾರಕ್ಕೆ ಬಲಿಯಾದ ಕುಕಿ ಝೋ ಸಮುದಾಯದ 87 ಜನರ ಮೃತದೇಹಗಳಿಗೆ ಮಣಿಪುರದ ಚುರಚಂದ್‌ಪುರ ಜಿಲ್ಲೆಯಲ್ಲಿ ಬುಧವಾರ(ಡಿ.20) ಸಾಮೂಹಿಕ ಅಂತ್ಯಸಂಸ್ಕಾರ ನೆರವೇರಿಸಲಾಗಿದೆ.

ಡಿಸೆಂಬರ್ 14 ರಂದು ಇಂಫಾಲ್‌ನ ವಿವಿಧ ಶವಾಗಾರಗಳಿಂದ 41 ಮೃತದೇಹಗಳನ್ನು ವಿಮಾನದಲ್ಲಿ ಏರ್‌ಲಿಫ್ಟ್‌ ಮಾಡಲಾಗಿತ್ತು ಮತ್ತು 46 ಮೃತದೇಹಗಳನ್ನು ಚುರಚಂದ್‌ಪುರ ಜಿಲ್ಲಾಸ್ಪತ್ರೆಯಿಂದ ತರಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಂತ್ಯ ಸಂಸ್ಕಾರಕ್ಕೂ ಮುನ್ನ ನಿಷೇಧಾಜ್ಞೆ ನಡುವೆಯೂ ಸಹಸ್ರಾರು ಜನರು ಆಗಮಿಸಿ ಮೃತರಿಗೆ ಅಂತಿಮ ನಮನ ಸಲ್ಲಿಸಿದರು.

ಹಿಂಸಾಚಾರದಲ್ಲಿ ಮೃತಪಟ್ಟ 30 ಮಂದಿಯ ಅಂತ್ಯ ಸಂಸ್ಕಾರ ಇನ್ನೂ ಬಾಕಿಯಿದೆ. ಈ ಸಂಬಂಧ ಕಳೆದ ಸೋಮವಾರ ರಾತ್ರಿ ಚುರಚಂದ್‌ಪುರ ಜಿಲ್ಲೆಯಲ್ಲಿ ಘರ್ಷಣೆ ನಡೆದಿತ್ತು. ನಂತರ ಸೆಕ್ಷನ್ 144ರಡಿ ಪೊಲೀಸರು ನಿಷೇಧಾಜ್ಞೆ ಜಾರಿಗೊಳಿಸಿದ್ದರು. ಈ ನಡುವೆ ಚುರಚಂದ್‌ಪುರದ ತುಯಿಬುಂಗ್‌ನಲ್ಲಿ ಮೃತದೇಹಗಳ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು.

ಇದಕ್ಕೂ ಮುನ್ನ ಡಿಸೆಂಬರ್ 15ರಂದು, ಕಾಂಗ್ಪೋಕ್ಪಿ ಜಿಲ್ಲೆಯಲ್ಲಿ 19 ಮೃತದೇಹಗಳಿಗೆ ಅಂತ್ಯ ಸಂಸ್ಕಾರ ಮಾಡಲಾಗಿದೆ.

ಮೈತೇಯಿ ಸಮುದಾಯಕ್ಕೆ ಪರಿಶಿಷ್ಟ ಪಂಗಡ (ಎಸ್‌ಟಿ) ಸ್ಥಾನಮಾನ ನೀಡುವುದನ್ನು ವಿರೋಧಿಸಿ ಮಣಿಪುರದ ಗುಡ್ಡಗಾಡು ಜಿಲ್ಲೆಗಳಲ್ಲಿ ಮೇ 3, 2023ರಂದು ‘ಬುಡಕಟ್ಟು ಐಕಮತ್ಯ ಮೆರವಣಿಗೆ’ ಆಯೋಜಿಸಲಾಗಿತ್ತು. ಇದು ಬಳಿಕ ಜನಾಂಗೀಯ ಹಿಂಸಾಚಾರಕ್ಕೆ ತಿರುಗಿತ್ತು.

ಪರಿಣಾಮ ನೂರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಅಪಾರ ಪ್ರಮಾಣ ಆಸ್ತಿ-ಪಾಸ್ತಿ ನಷ್ಟ ಸಂಭವಿಸಿದೆ. ಅನೇಕ ಜನರು ಜೈಲಿನಲ್ಲಿದ್ದಾರೆ. ಹಿಂಸಾಚಾರ ಪ್ರಾರಂಭಗೊಂಡು 7-8 ತಿಂಗಳು ಕಳೆದರೂ, ಇಂದಿಗೂ ಮಣಿಪುರದಲ್ಲಿ ಸಂಪೂರ್ಣ ಶಾಂತಿ ಸ್ಥಾಪನೆಯಾಗಿಲ್ಲ.

ಮಣಿಪುರದ ಜನಸಂಖ್ಯೆಯ ಶೇ. 53ರಷ್ಟಿರುವ ಮೈತೇಯಿಗಳು ಇಂಫಾಲ್ ಕಣಿವೆಯಲ್ಲಿ ಹೆಚ್ಚಾಗಿ ವಾಸಿಸುತ್ತಿದ್ದಾರೆ. ಬುಡಕಟ್ಟು ಜನಾಂಗದವರು, ನಾಗಾಗಳು ಮತ್ತು ಕುಕಿಗಳು ಶೇ. 40 ಕ್ಕಿಂತ ಹೆಚ್ಚಿದ್ದು, ಗುಡ್ಡಗಾಡು ಜಿಲ್ಲೆಗಳಲ್ಲಿ ವಾಸಿಸುತ್ತಿದ್ದಾರೆ.

ಮೃತದೇಹಗಳ ಅಂತ್ಯ ಸಂಸ್ಕಾರದ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಪತ್ರಕರ್ತ ಮೊಹಮ್ಮದ್ ಝುಬೈರ್, “ಮಣಿಪುರ ಹಿಂಸಾಚಾರದ 87 ಬಲಿಪಶುಗಳಿಗೆ ಅಂತಿಮವಾಗಿ ಚುರಚಂದ್‌ಪುರದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗಿದೆ. ಎಷ್ಟು ಮುಖ್ಯವಾಹಿನಿ ನ್ಯೂಸ್ ಏಜೆನ್ಸಿಗಳು ಮತ್ತು ನ್ಯೂಸ್ ಚಾನೆಲ್‌ಗಳು ಇದರ ಬಗ್ಗೆ ವರದಿ ಮಾಡಿವೆ?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ : ‘ನಮಗೆ ಕುಲಪತಿ ಬೇಕು, ಸಾವರ್ಕರ್‌ ಅಲ್ಲ’: ರಾಜ್ಯಪಾಲರ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್ ಬಳಿಕ 9 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಮತದಾರರ ಸಂಖ್ಯೆ 1.70 ಕೋಟಿ ಇಳಿಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ 9 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮತದಾರರ ಒಟ್ಟು ಸಂಖ್ಯೆಯಲ್ಲಿ 1.70 ಕೋಟಿ ಇಳಿಕೆ ಕಂಡಿದೆ. ಗುಜರಾತ್, ಪುದುಚೇರಿ, ಲಕ್ಷದ್ವೀಪ, ರಾಜಸ್ಥಾನ, ಛತ್ತೀಸ್‌ಗಢ, ಅಂಡಮಾನ್...

ಅಫ್ಘಾನ್ ಗಡಿಯಲ್ಲಿ ಪಾಕಿಸ್ತಾನ ವೈಮಾನಿಕ ದಾಳಿ : 20ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಶಂಕೆ

ಅಫ್ಘಾನಿಸ್ತಾನದ ಗಡಿ ಪ್ರದೇಶಗಳಲ್ಲಿ ಪಾಕಿಸ್ತಾನ ಭಾನುವಾರ (ಫೆ.22) ಭಾರೀ ವೈಮಾನಿಕ ದಾಳಿ ನಡೆಸಿರುವುದಾಗಿ ವರದಿಯಾಗಿದೆ. ಪಾಕಿಸ್ತಾನದ ವಾಯುಪಡೆಯು ಅಫ್ಘಾನಿಸ್ತಾನದ ಪಕ್ತಿಕಾ ಮತ್ತು ನಂಗರ್ಹಾರ್ ಪ್ರಾಂತ್ಯಗಳಲ್ಲಿರುವ ಏಳು ಸಶಸ್ತ್ರ ಗುಂಪುಗಳ ಅಡಗುತಾಣಗಳ ಮೇಲೆ ದಾಳಿ ನಡೆಸಿದೆ...

ಹೊಸ ಜಾಗತಿಕ ಸುಂಕವನ್ನು ಶೇ.15ಕ್ಕೆ ಏರಿಸಿದ ಟ್ರಂಪ್

ಪ್ರತಿ ಸುಂಕ ನೀತಿಯನ್ನು ರದ್ದುಗೊಳಿಸಿದ್ದ ಸುಪ್ರೀಂ ಕೋರ್ಟ್ ಆದೇಶಕ್ಕೆ ಸೆಡ್ಡು ಹೊಡೆದು, ಎಲ್ಲಾ ದೇಶಗಳ ಆಮದಿನ ಮೇಲೆ ಹೊಸದಾಗಿ 10 ಶೇಕಡ ಜಾಗತಿಕ ಸುಂಕ ಘೋಷಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಶನಿವಾರ...

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...