Homeಮುಖಪುಟಮಣಿಪುರ | ಮತ್ತೆ ಭುಗಿಲೆದ್ದ ಹಿಂಸಾಚಾರ; ನಾಗರಿಕರು, ಭದ್ರತಾ ಸಿಬ್ಬಂದಿಗೆ ಗಾಯ

ಮಣಿಪುರ | ಮತ್ತೆ ಭುಗಿಲೆದ್ದ ಹಿಂಸಾಚಾರ; ನಾಗರಿಕರು, ಭದ್ರತಾ ಸಿಬ್ಬಂದಿಗೆ ಗಾಯ

- Advertisement -
- Advertisement -

ಜನಾಂಗೀಯ ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಶನಿವಾರ ಮತ್ತೆ ಹೊಸದಾಗಿ ಹಿಂಸಾಚಾರ ನಡೆದಿದೆ ಎಂದು ವರದಿಯಾಗಿದೆ. ಇಂಫಾಲ್ ಪೂರ್ವ ಜಿಲ್ಲೆಯ ಸನಾಸಾಬಿ ಮತ್ತು ಥಮ್ನಾಪೋಕ್ಪಿ ಗ್ರಾಮಗಳಲ್ಲಿ ಶಸ್ತ್ರಸಜ್ಜಿತ ದಾಳಿಕೋರರೊಂದಿಗಿನ ಗುಂಡಿನ ಚಕಮಕಿ ನಡೆದಿದ್ದು, ದಾಳಿಯಲ್ಲಿ ಹಲವಾರು ನಾಗರಿಕರು ಮತ್ತು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಘಟನೆಯನ್ನು ಮಣಿಪುರ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಖಂಡಿಸಿದ್ದಾರೆ.

ಬಿಕ್ಕಟ್ಟನ್ನು ಎದುರಿಸಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಜಾರಿಗೊಳಿಸಲಾಗಿದೆ ಎಂದು ಒತ್ತಿ ಹೇಳಿರುವ ಮುಖ್ಯಮಂತ್ರಿ, ಶಾಂತಿ ಕಾಪಾಡಲು ಮತ್ತು ಏಕತೆಗಾಗಿ ಕರೆ ನೀಡಿದ್ದಾರೆ. ಹಿಂಸಾಚಾರ ಪೀಡಿತ ಪ್ರದೇಶಗಳಿಗೆ ಹೆಚ್ಚುವರಿ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ ಮತ್ತು ಗಾಯಾಳುಗಳಿಗೆ ಅಗತ್ಯವಾದ ವೈದ್ಯಕೀಯ ಆರೈಕೆಯನ್ನು ನೀಡಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಎಕ್ಸ್‌ನಲ್ಲಿ ಬರೆದಿರುವ ಎನ್.ಬಿರೇನ್ ಸಿಂಗ್, “ಇಂಫಾಲ್ ಪೂರ್ವದ ಸನಾಸಾಬಿ ಮತ್ತು ಥಮ್ನಾಪೊಕ್ಪಿಯಲ್ಲಿ ಕುಕಿ ಉಗ್ರಗಾಮಿಗಳು ನಡೆಸಿದ ವಿವೇಚನಾರಹಿತ ಗುಂಡಿನ ದಾಳಿಯನ್ನು ತೀವ್ರವಾಗಿ ಖಂಡಿಸುತ್ತೇವೆ. ಈ ದಾಳಿಯಿಂದಾಗಿ ನಾಗರಿಕರು ಮತ್ತು ಭದ್ರತಾ ಸಿಬ್ಬಂದಿಗಳು ಗಾಯಗೊಂಡಿದ್ದಾರೆ. ಅಮಾಯಕರ ಜೀವಗಳ ಮೇಲಿನ ಈ ಹೇಡಿತನ ಮತ್ತು ಅಪ್ರಚೋದಿತ ದಾಳಿಯು ಶಾಂತಿ ಮತ್ತು ಸಾಮರಸ್ಯದ ಮೇಲಿನ ದಾಳಿಯಾಗಿದೆ” ಎಂದು ಅವರು ಹೇಳಿದ್ದಾರೆ. ಮಣಿಪುರ

“ಪೀಡಿತ ಪ್ರದೇಶಗಳಿಗೆ ಸಾಕಷ್ಟು ಭದ್ರತಾ ಸಿಬ್ಬಂದಿಯನ್ನು ನೇಮಿಸಲಾಗಿದ್ದು, ಗಾಯಾಳುಗಳಿಗೆ ಅಗತ್ಯ ವೈದ್ಯಕೀಯ ನೆರವು ನೀಡಲಾಗುತ್ತಿದೆ. ಇಂತಹ ಸವಾಲುಗಳನ್ನು ಎದುರಿಸಲು ಸರ್ಕಾರವು ಶಾಂತಿ ಮತ್ತು ಏಕತೆಗಾಗಿ ಕರೆ ನೀಡುತ್ತದೆ. ಕೇಂದ್ರ ಪಡೆಗಳು ಮತ್ತು ರಾಜ್ಯ ಪೊಲೀಸರು ಅಂತಹ ಸನ್ನಿವೇಶಗಳೊಂದಿಗೆ ವ್ಯವಹರಿಸುವಾಗ ಸರಿಯಾದ ಸಮನ್ವಯ ಮತ್ತು ತಿಳುವಳಿಕೆಯನ್ನು ಹೊಂದಿರಬೇಕು.” ಎಂದು ಅವರು ಹೇಳಿದ್ದಾರೆ.

ಶುಕ್ರವಾರದಂದು ಮಣಿಪುರ ಪೊಲೀಸರು, ಅಸ್ಸಾಂ ರೈಫಲ್ಸ್, ಅರಣ್ಯ ಇಲಾಖೆ ಮತ್ತು ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ ಒಳಗೊಂಡ ಜಂಟಿ ತಂಡವು ಚುರಾಚಂದ್‌ಪುರ ಜಿಲ್ಲೆಯ ಟಿ.ಲಂಘೋಯಿಮೋಲ್ ಪ್ರದೇಶದಲ್ಲಿ ಅಫೀಮ್ ಬೆಳೆಯನ್ನು ನಾಶ ಕಾರ್ಯಾಚರಣೆ ನಡೆಸಿದೆ. ಅಲ್ಲಿ ಅವರು ಏಳು ಎಕರೆ ಅಫೀಮ್ ತೋಟಗಳನ್ನು ನಾಶಪಡಿಸಿದ್ದಾರೆ ಎಂದು ವರದಿಯಾಗಿದೆ. ಅಫೀಮ್ ಬೆಳೆದವರ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಅಧಿಕಾರಿಗಳು ಅವರನ್ನು ಗುರುತಿಸಿ ಬಂಧಿಸುವ ಕೆಲಸ ಮಾಡುತ್ತಿದ್ದಾರೆ.

ಹೆಚ್ಚುವರಿಯಾಗಿ, ಭದ್ರತಾ ಪಡೆಗಳು ಬೆಟ್ಟ ಮತ್ತು ಕಣಿವೆ ಜಿಲ್ಲೆಗಳ ಪ್ರದೇಶಗಳಲ್ಲಿ ಶೋಧ ಕಾರ್ಯಾಚರಣೆಗಳು ನಡೆಸಿದೆ. NH-37 ಮತ್ತು NH-2 ರ ಉದ್ದಕ್ಕೂ ಅಗತ್ಯ ಸಾಮಗ್ರಿಗಳನ್ನು ಸಾಗಿಸುವ 115 ಮತ್ತು 326 ವಾಹನಗಳ ಸಂಚಾರವನ್ನು ಸಹ ಖಾತ್ರಿಪಡಿಸಲಾಗಿದೆ. “ಎಲ್ಲಾ ಹಿಂಸಾಚಾರ ಪೀಡಿತ ಸ್ಥಳಗಳಲ್ಲಿ ಕಟ್ಟುನಿಟ್ಟಾದ ಭದ್ರತಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ವಾಹನಗಳ ಮುಕ್ತ ಮತ್ತು ಸುರಕ್ಷಿತ ಚಲನೆಯನ್ನು ಖಚಿತಪಡಿಸಿಕೊಳ್ಳಲು ಸೂಕ್ಷ್ಮ ಪ್ರದೇಶಗಳಲ್ಲಿ ಭದ್ರತಾ ಬೆಂಗಾವಲು ಒದಗಿಸಲಾಗಿದೆ” ಎಂದು ಮಣಿಪುರ ಪೊಲೀಸರು ಹೇಳಿದ್ದಾರೆ. ಮಣಿಪುರದ ವಿವಿಧ ಜಿಲ್ಲೆಗಳಲ್ಲಿ ಬೆಟ್ಟ ಮತ್ತು ಕಣಿವೆಯಲ್ಲಿ ಒಟ್ಟು 108 ನಾಕಾ/ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸಲಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ | ತಂದೆ, ಅಜ್ಜ, ಚಿಕ್ಕಪ್ಪನಿಂದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ

ಉತ್ತರ ಪ್ರದೇಶ | ತಂದೆ, ಅಜ್ಜ, ಚಿಕ್ಕಪ್ಪನಿಂದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...