Homeಮುಖಪುಟಮಣಿಪುರ | ಮತ್ತೆ ಭುಗಿಲೆದ್ದ ಹಿಂಸಾಚಾರ; ನಾಗರಿಕರು, ಭದ್ರತಾ ಸಿಬ್ಬಂದಿಗೆ ಗಾಯ

ಮಣಿಪುರ | ಮತ್ತೆ ಭುಗಿಲೆದ್ದ ಹಿಂಸಾಚಾರ; ನಾಗರಿಕರು, ಭದ್ರತಾ ಸಿಬ್ಬಂದಿಗೆ ಗಾಯ

- Advertisement -
- Advertisement -

ಜನಾಂಗೀಯ ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಶನಿವಾರ ಮತ್ತೆ ಹೊಸದಾಗಿ ಹಿಂಸಾಚಾರ ನಡೆದಿದೆ ಎಂದು ವರದಿಯಾಗಿದೆ. ಇಂಫಾಲ್ ಪೂರ್ವ ಜಿಲ್ಲೆಯ ಸನಾಸಾಬಿ ಮತ್ತು ಥಮ್ನಾಪೋಕ್ಪಿ ಗ್ರಾಮಗಳಲ್ಲಿ ಶಸ್ತ್ರಸಜ್ಜಿತ ದಾಳಿಕೋರರೊಂದಿಗಿನ ಗುಂಡಿನ ಚಕಮಕಿ ನಡೆದಿದ್ದು, ದಾಳಿಯಲ್ಲಿ ಹಲವಾರು ನಾಗರಿಕರು ಮತ್ತು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಘಟನೆಯನ್ನು ಮಣಿಪುರ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಖಂಡಿಸಿದ್ದಾರೆ.

ಬಿಕ್ಕಟ್ಟನ್ನು ಎದುರಿಸಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಜಾರಿಗೊಳಿಸಲಾಗಿದೆ ಎಂದು ಒತ್ತಿ ಹೇಳಿರುವ ಮುಖ್ಯಮಂತ್ರಿ, ಶಾಂತಿ ಕಾಪಾಡಲು ಮತ್ತು ಏಕತೆಗಾಗಿ ಕರೆ ನೀಡಿದ್ದಾರೆ. ಹಿಂಸಾಚಾರ ಪೀಡಿತ ಪ್ರದೇಶಗಳಿಗೆ ಹೆಚ್ಚುವರಿ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ ಮತ್ತು ಗಾಯಾಳುಗಳಿಗೆ ಅಗತ್ಯವಾದ ವೈದ್ಯಕೀಯ ಆರೈಕೆಯನ್ನು ನೀಡಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಎಕ್ಸ್‌ನಲ್ಲಿ ಬರೆದಿರುವ ಎನ್.ಬಿರೇನ್ ಸಿಂಗ್, “ಇಂಫಾಲ್ ಪೂರ್ವದ ಸನಾಸಾಬಿ ಮತ್ತು ಥಮ್ನಾಪೊಕ್ಪಿಯಲ್ಲಿ ಕುಕಿ ಉಗ್ರಗಾಮಿಗಳು ನಡೆಸಿದ ವಿವೇಚನಾರಹಿತ ಗುಂಡಿನ ದಾಳಿಯನ್ನು ತೀವ್ರವಾಗಿ ಖಂಡಿಸುತ್ತೇವೆ. ಈ ದಾಳಿಯಿಂದಾಗಿ ನಾಗರಿಕರು ಮತ್ತು ಭದ್ರತಾ ಸಿಬ್ಬಂದಿಗಳು ಗಾಯಗೊಂಡಿದ್ದಾರೆ. ಅಮಾಯಕರ ಜೀವಗಳ ಮೇಲಿನ ಈ ಹೇಡಿತನ ಮತ್ತು ಅಪ್ರಚೋದಿತ ದಾಳಿಯು ಶಾಂತಿ ಮತ್ತು ಸಾಮರಸ್ಯದ ಮೇಲಿನ ದಾಳಿಯಾಗಿದೆ” ಎಂದು ಅವರು ಹೇಳಿದ್ದಾರೆ. ಮಣಿಪುರ

“ಪೀಡಿತ ಪ್ರದೇಶಗಳಿಗೆ ಸಾಕಷ್ಟು ಭದ್ರತಾ ಸಿಬ್ಬಂದಿಯನ್ನು ನೇಮಿಸಲಾಗಿದ್ದು, ಗಾಯಾಳುಗಳಿಗೆ ಅಗತ್ಯ ವೈದ್ಯಕೀಯ ನೆರವು ನೀಡಲಾಗುತ್ತಿದೆ. ಇಂತಹ ಸವಾಲುಗಳನ್ನು ಎದುರಿಸಲು ಸರ್ಕಾರವು ಶಾಂತಿ ಮತ್ತು ಏಕತೆಗಾಗಿ ಕರೆ ನೀಡುತ್ತದೆ. ಕೇಂದ್ರ ಪಡೆಗಳು ಮತ್ತು ರಾಜ್ಯ ಪೊಲೀಸರು ಅಂತಹ ಸನ್ನಿವೇಶಗಳೊಂದಿಗೆ ವ್ಯವಹರಿಸುವಾಗ ಸರಿಯಾದ ಸಮನ್ವಯ ಮತ್ತು ತಿಳುವಳಿಕೆಯನ್ನು ಹೊಂದಿರಬೇಕು.” ಎಂದು ಅವರು ಹೇಳಿದ್ದಾರೆ.

ಶುಕ್ರವಾರದಂದು ಮಣಿಪುರ ಪೊಲೀಸರು, ಅಸ್ಸಾಂ ರೈಫಲ್ಸ್, ಅರಣ್ಯ ಇಲಾಖೆ ಮತ್ತು ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ ಒಳಗೊಂಡ ಜಂಟಿ ತಂಡವು ಚುರಾಚಂದ್‌ಪುರ ಜಿಲ್ಲೆಯ ಟಿ.ಲಂಘೋಯಿಮೋಲ್ ಪ್ರದೇಶದಲ್ಲಿ ಅಫೀಮ್ ಬೆಳೆಯನ್ನು ನಾಶ ಕಾರ್ಯಾಚರಣೆ ನಡೆಸಿದೆ. ಅಲ್ಲಿ ಅವರು ಏಳು ಎಕರೆ ಅಫೀಮ್ ತೋಟಗಳನ್ನು ನಾಶಪಡಿಸಿದ್ದಾರೆ ಎಂದು ವರದಿಯಾಗಿದೆ. ಅಫೀಮ್ ಬೆಳೆದವರ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಅಧಿಕಾರಿಗಳು ಅವರನ್ನು ಗುರುತಿಸಿ ಬಂಧಿಸುವ ಕೆಲಸ ಮಾಡುತ್ತಿದ್ದಾರೆ.

ಹೆಚ್ಚುವರಿಯಾಗಿ, ಭದ್ರತಾ ಪಡೆಗಳು ಬೆಟ್ಟ ಮತ್ತು ಕಣಿವೆ ಜಿಲ್ಲೆಗಳ ಪ್ರದೇಶಗಳಲ್ಲಿ ಶೋಧ ಕಾರ್ಯಾಚರಣೆಗಳು ನಡೆಸಿದೆ. NH-37 ಮತ್ತು NH-2 ರ ಉದ್ದಕ್ಕೂ ಅಗತ್ಯ ಸಾಮಗ್ರಿಗಳನ್ನು ಸಾಗಿಸುವ 115 ಮತ್ತು 326 ವಾಹನಗಳ ಸಂಚಾರವನ್ನು ಸಹ ಖಾತ್ರಿಪಡಿಸಲಾಗಿದೆ. “ಎಲ್ಲಾ ಹಿಂಸಾಚಾರ ಪೀಡಿತ ಸ್ಥಳಗಳಲ್ಲಿ ಕಟ್ಟುನಿಟ್ಟಾದ ಭದ್ರತಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ವಾಹನಗಳ ಮುಕ್ತ ಮತ್ತು ಸುರಕ್ಷಿತ ಚಲನೆಯನ್ನು ಖಚಿತಪಡಿಸಿಕೊಳ್ಳಲು ಸೂಕ್ಷ್ಮ ಪ್ರದೇಶಗಳಲ್ಲಿ ಭದ್ರತಾ ಬೆಂಗಾವಲು ಒದಗಿಸಲಾಗಿದೆ” ಎಂದು ಮಣಿಪುರ ಪೊಲೀಸರು ಹೇಳಿದ್ದಾರೆ. ಮಣಿಪುರದ ವಿವಿಧ ಜಿಲ್ಲೆಗಳಲ್ಲಿ ಬೆಟ್ಟ ಮತ್ತು ಕಣಿವೆಯಲ್ಲಿ ಒಟ್ಟು 108 ನಾಕಾ/ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸಲಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ | ತಂದೆ, ಅಜ್ಜ, ಚಿಕ್ಕಪ್ಪನಿಂದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ

ಉತ್ತರ ಪ್ರದೇಶ | ತಂದೆ, ಅಜ್ಜ, ಚಿಕ್ಕಪ್ಪನಿಂದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....