Homeಮುಖಪುಟಮಣಿಪುರ | ಮತ್ತೆ ಭುಗಿಲೆದ್ದ ಹಿಂಸಾಚಾರ; ನಾಗರಿಕರು, ಭದ್ರತಾ ಸಿಬ್ಬಂದಿಗೆ ಗಾಯ

ಮಣಿಪುರ | ಮತ್ತೆ ಭುಗಿಲೆದ್ದ ಹಿಂಸಾಚಾರ; ನಾಗರಿಕರು, ಭದ್ರತಾ ಸಿಬ್ಬಂದಿಗೆ ಗಾಯ

- Advertisement -
- Advertisement -

ಜನಾಂಗೀಯ ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಶನಿವಾರ ಮತ್ತೆ ಹೊಸದಾಗಿ ಹಿಂಸಾಚಾರ ನಡೆದಿದೆ ಎಂದು ವರದಿಯಾಗಿದೆ. ಇಂಫಾಲ್ ಪೂರ್ವ ಜಿಲ್ಲೆಯ ಸನಾಸಾಬಿ ಮತ್ತು ಥಮ್ನಾಪೋಕ್ಪಿ ಗ್ರಾಮಗಳಲ್ಲಿ ಶಸ್ತ್ರಸಜ್ಜಿತ ದಾಳಿಕೋರರೊಂದಿಗಿನ ಗುಂಡಿನ ಚಕಮಕಿ ನಡೆದಿದ್ದು, ದಾಳಿಯಲ್ಲಿ ಹಲವಾರು ನಾಗರಿಕರು ಮತ್ತು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಘಟನೆಯನ್ನು ಮಣಿಪುರ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಖಂಡಿಸಿದ್ದಾರೆ.

ಬಿಕ್ಕಟ್ಟನ್ನು ಎದುರಿಸಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಜಾರಿಗೊಳಿಸಲಾಗಿದೆ ಎಂದು ಒತ್ತಿ ಹೇಳಿರುವ ಮುಖ್ಯಮಂತ್ರಿ, ಶಾಂತಿ ಕಾಪಾಡಲು ಮತ್ತು ಏಕತೆಗಾಗಿ ಕರೆ ನೀಡಿದ್ದಾರೆ. ಹಿಂಸಾಚಾರ ಪೀಡಿತ ಪ್ರದೇಶಗಳಿಗೆ ಹೆಚ್ಚುವರಿ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ ಮತ್ತು ಗಾಯಾಳುಗಳಿಗೆ ಅಗತ್ಯವಾದ ವೈದ್ಯಕೀಯ ಆರೈಕೆಯನ್ನು ನೀಡಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಎಕ್ಸ್‌ನಲ್ಲಿ ಬರೆದಿರುವ ಎನ್.ಬಿರೇನ್ ಸಿಂಗ್, “ಇಂಫಾಲ್ ಪೂರ್ವದ ಸನಾಸಾಬಿ ಮತ್ತು ಥಮ್ನಾಪೊಕ್ಪಿಯಲ್ಲಿ ಕುಕಿ ಉಗ್ರಗಾಮಿಗಳು ನಡೆಸಿದ ವಿವೇಚನಾರಹಿತ ಗುಂಡಿನ ದಾಳಿಯನ್ನು ತೀವ್ರವಾಗಿ ಖಂಡಿಸುತ್ತೇವೆ. ಈ ದಾಳಿಯಿಂದಾಗಿ ನಾಗರಿಕರು ಮತ್ತು ಭದ್ರತಾ ಸಿಬ್ಬಂದಿಗಳು ಗಾಯಗೊಂಡಿದ್ದಾರೆ. ಅಮಾಯಕರ ಜೀವಗಳ ಮೇಲಿನ ಈ ಹೇಡಿತನ ಮತ್ತು ಅಪ್ರಚೋದಿತ ದಾಳಿಯು ಶಾಂತಿ ಮತ್ತು ಸಾಮರಸ್ಯದ ಮೇಲಿನ ದಾಳಿಯಾಗಿದೆ” ಎಂದು ಅವರು ಹೇಳಿದ್ದಾರೆ. ಮಣಿಪುರ

“ಪೀಡಿತ ಪ್ರದೇಶಗಳಿಗೆ ಸಾಕಷ್ಟು ಭದ್ರತಾ ಸಿಬ್ಬಂದಿಯನ್ನು ನೇಮಿಸಲಾಗಿದ್ದು, ಗಾಯಾಳುಗಳಿಗೆ ಅಗತ್ಯ ವೈದ್ಯಕೀಯ ನೆರವು ನೀಡಲಾಗುತ್ತಿದೆ. ಇಂತಹ ಸವಾಲುಗಳನ್ನು ಎದುರಿಸಲು ಸರ್ಕಾರವು ಶಾಂತಿ ಮತ್ತು ಏಕತೆಗಾಗಿ ಕರೆ ನೀಡುತ್ತದೆ. ಕೇಂದ್ರ ಪಡೆಗಳು ಮತ್ತು ರಾಜ್ಯ ಪೊಲೀಸರು ಅಂತಹ ಸನ್ನಿವೇಶಗಳೊಂದಿಗೆ ವ್ಯವಹರಿಸುವಾಗ ಸರಿಯಾದ ಸಮನ್ವಯ ಮತ್ತು ತಿಳುವಳಿಕೆಯನ್ನು ಹೊಂದಿರಬೇಕು.” ಎಂದು ಅವರು ಹೇಳಿದ್ದಾರೆ.

ಶುಕ್ರವಾರದಂದು ಮಣಿಪುರ ಪೊಲೀಸರು, ಅಸ್ಸಾಂ ರೈಫಲ್ಸ್, ಅರಣ್ಯ ಇಲಾಖೆ ಮತ್ತು ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ ಒಳಗೊಂಡ ಜಂಟಿ ತಂಡವು ಚುರಾಚಂದ್‌ಪುರ ಜಿಲ್ಲೆಯ ಟಿ.ಲಂಘೋಯಿಮೋಲ್ ಪ್ರದೇಶದಲ್ಲಿ ಅಫೀಮ್ ಬೆಳೆಯನ್ನು ನಾಶ ಕಾರ್ಯಾಚರಣೆ ನಡೆಸಿದೆ. ಅಲ್ಲಿ ಅವರು ಏಳು ಎಕರೆ ಅಫೀಮ್ ತೋಟಗಳನ್ನು ನಾಶಪಡಿಸಿದ್ದಾರೆ ಎಂದು ವರದಿಯಾಗಿದೆ. ಅಫೀಮ್ ಬೆಳೆದವರ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಅಧಿಕಾರಿಗಳು ಅವರನ್ನು ಗುರುತಿಸಿ ಬಂಧಿಸುವ ಕೆಲಸ ಮಾಡುತ್ತಿದ್ದಾರೆ.

ಹೆಚ್ಚುವರಿಯಾಗಿ, ಭದ್ರತಾ ಪಡೆಗಳು ಬೆಟ್ಟ ಮತ್ತು ಕಣಿವೆ ಜಿಲ್ಲೆಗಳ ಪ್ರದೇಶಗಳಲ್ಲಿ ಶೋಧ ಕಾರ್ಯಾಚರಣೆಗಳು ನಡೆಸಿದೆ. NH-37 ಮತ್ತು NH-2 ರ ಉದ್ದಕ್ಕೂ ಅಗತ್ಯ ಸಾಮಗ್ರಿಗಳನ್ನು ಸಾಗಿಸುವ 115 ಮತ್ತು 326 ವಾಹನಗಳ ಸಂಚಾರವನ್ನು ಸಹ ಖಾತ್ರಿಪಡಿಸಲಾಗಿದೆ. “ಎಲ್ಲಾ ಹಿಂಸಾಚಾರ ಪೀಡಿತ ಸ್ಥಳಗಳಲ್ಲಿ ಕಟ್ಟುನಿಟ್ಟಾದ ಭದ್ರತಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ವಾಹನಗಳ ಮುಕ್ತ ಮತ್ತು ಸುರಕ್ಷಿತ ಚಲನೆಯನ್ನು ಖಚಿತಪಡಿಸಿಕೊಳ್ಳಲು ಸೂಕ್ಷ್ಮ ಪ್ರದೇಶಗಳಲ್ಲಿ ಭದ್ರತಾ ಬೆಂಗಾವಲು ಒದಗಿಸಲಾಗಿದೆ” ಎಂದು ಮಣಿಪುರ ಪೊಲೀಸರು ಹೇಳಿದ್ದಾರೆ. ಮಣಿಪುರದ ವಿವಿಧ ಜಿಲ್ಲೆಗಳಲ್ಲಿ ಬೆಟ್ಟ ಮತ್ತು ಕಣಿವೆಯಲ್ಲಿ ಒಟ್ಟು 108 ನಾಕಾ/ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸಲಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ | ತಂದೆ, ಅಜ್ಜ, ಚಿಕ್ಕಪ್ಪನಿಂದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ

ಉತ್ತರ ಪ್ರದೇಶ | ತಂದೆ, ಅಜ್ಜ, ಚಿಕ್ಕಪ್ಪನಿಂದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....