Homeಮುಖಪುಟಮಣಿಪುರ ಹಿಂಸಾಚಾರಕ್ಕೆ ಸಿಎಂ ಬಿರೇನ್ ಸಿಂಗ್ ಕಾರಣ - ಸಿಪಿಐ(ಎಂ) ಆರೋಪ

ಮಣಿಪುರ ಹಿಂಸಾಚಾರಕ್ಕೆ ಸಿಎಂ ಬಿರೇನ್ ಸಿಂಗ್ ಕಾರಣ – ಸಿಪಿಐ(ಎಂ) ಆರೋಪ

- Advertisement -
- Advertisement -

ಮಣಿಪುರದಲ್ಲಿ ಆರಂಭದಿಂದಲೂ ಹದಗೆಟ್ಟ ಪರಿಸ್ಥಿತಿಗೆ ಮುಖ್ಯಮಂತ್ರಿ ಬಿರೇನ್ ಸಿಂಗ್ ಅವರೇ ಕಾರಣ ಎಂದು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಸೋಮವಾರ ಆರೋಪಿಸಿದೆ. ರಾಜ್ಯದ ಪರಿಸ್ಥಿತಿ ಹದಗೆಟ್ಟ ಹೊರತಾಗಿಯೂ, ಕೇಂದ್ರ ಸರ್ಕಾರ ಮತ್ತು ಆಡಳಿತಾರೂಢ ಬಿಜೆಪಿ ಅವರನ್ನು ತೆಗೆದುಹಾಕಲು ನಿರಾಕರಿಸಿ, ಅವರನ್ನೆ ಮುಂದುವರಿಸಲು ಅವಕಾಶ ಮಾಡಿಕೊಟ್ಟಿತು ಎಂದು ಪಕ್ಷದ ಪಾಲಿಟ್ ಬ್ಯೂರೋ ಹೊರಡಿಸಿದ ಹೇಳಿಕೆ ಹೇಳಿದೆ. ಮಣಿಪುರ

ಪರಿಸ್ಥಿತಿಯನ್ನು ‘ಗಂಭೀರ’ ಎಂದು ಬಣ್ಣಿಸಿರುವ ಸಿಪಿಐ(ಎಂ), ರಾಜ್ಯ ಸರ್ಕಾರ ಮತ್ತು ಆಡಳಿತ ಯಂತ್ರ ನಡೆಯದ ಪರಿಸ್ಥಿತಿ ಈಗ ಉದ್ಭವಿಸಿದೆ ಎಂದು ಹೇಳಿದೆ. “ಮಣಿಪುರದಲ್ಲಿ ಜನಾಂಗೀಯ ಹತ್ಯೆಗಳು ಮತ್ತು ಪ್ರತಿ-ಹತ್ಯೆಗಳಿಂದಾಗಿ ಹಿಂಸಾಚಾರ ತೀವ್ರಗೊಂಡಿದ್ದು, ಗಂಭೀರ ಪರಿಸ್ಥಿತಿ ನಿರ್ಮಾಣವಾಗಿದೆ. ನವೆಂಬರ್ 7 ರಿಂದ ವಿವಿಧ ಘಟನೆಗಳಲ್ಲಿ 20 ಜನರು ಸಾವನ್ನಪ್ಪಿದ್ದಾರೆ. ಈ ಹಿಂದೆ ಅಪಹರಣಕ್ಕೊಳಗಾದ ಮಹಿಳೆಯರು ಮತ್ತು ಮಕ್ಕಳ ಐದು ಮೃತದೇಹಗಳು ಪತ್ತೆಯಾಗಿವೆ. ಒಂದು ಭೀಕರ ಘಟನೆಯಲ್ಲಿ ಕಣಿವೆಯಲ್ಲಿ ಪರಿಸ್ಥಿತಿಯನ್ನು ಉಲ್ಬಣಗೊಳಿಸಿದೆ” ಎಂದು ಪಕ್ಷವು ಹೇಳಿದೆ. ಮಣಿಪುರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಮಣಿಪುರದಲ್ಲಿ ಇತ್ತೀಚೆಗೆ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದ ಮೂರು ಪ್ರಮುಖ ಪ್ರಕರಣಗಳ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಇತ್ತೀಚೆಗೆ ವಹಿಸಿಕೊಂಡಿದೆ. ಮೂರು ಪ್ರಕರಣಗಳಿಗೆ ಸಂಬಂಧಿಸಿದ ಹಿಂಸಾತ್ಮಕ ಘಟನೆಯಿಂದ ರಾಜ್ಯದಲ್ಲಿ ಸಾಮಾಜಿಕ ಅಶಾಂತಿ ಉಂಟಾಗಿದೆ. ಈ ನಡುವೆ ಗೃಹ ವ್ಯವಹಾರಗಳ ಸಚಿವಾಲಯವು ನವೆಂಬರ್ 16 ರಂದು,”ಪರಿಣಾಮಕಾರಿ ತನಿಖೆಗಾಗಿ ಪ್ರಮುಖ ಪ್ರಕರಣಗಳನ್ನು NIA ಗೆ ಹಸ್ತಾಂತರಿಸಲಾಗಿದೆ” ಎಂದು ಮಾಹಿತಿ ನೀಡಿದೆ.

ರಾಜ್ಯದಲ್ಲಿ ಶಾಂತಿಯನ್ನು ಮರುಸ್ಥಾಪಿಸಲು ಕೇಂದ್ರ ಸರ್ಕಾರವು ತಕ್ಷಣದ ಮಧ್ಯಸ್ಥಿಕೆ ವಹಿಸಬೇಕು ಎಂದು ಸಿಪಿಐ(ಎಂ) ಕೋರಿದೆ. “ಹಿಂಸಾಚಾರವನ್ನು ತಕ್ಷಣವೇ ಕೊನೆಗಾಣಿಸಲು ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಲು ಇದು ಸಮಯವಾಗಿದೆ. ಶಾಂತಿಯನ್ನು ಮರುಸ್ಥಾಪಿಸುವ ಮತ್ತು ರಾಜ್ಯದ ಎಲ್ಲಾ ಜನಾಂಗೀಯ ಸಮುದಾಯಗಳ ಹಕ್ಕುಗಳನ್ನು ರಕ್ಷಿಸುವ ರಾಜಕೀಯ ಇತ್ಯರ್ಥಕ್ಕಾಗಿ ಗಂಭೀರವಾದ ಕೆಲಸವನ್ನು ಪ್ರಾರಂಭಿಸಬೇಕಾಗಿದೆ” ಎಂದು ಪಕ್ಷವು ಹೇಳಿದೆ.

ಇದನ್ನೂ ಓದಿ: ಝಾನ್ಸಿ ಆಸ್ಪತ್ರೆ ಬೆಂಕಿ ಅವಘಡ: 7 ಶಿಶುಗಳನ್ನು ರಕ್ಷಿಸಿ, ತನ್ನದೇ ಅವಳಿ ಮಕ್ಕಳನ್ನು ಕಳೆದುಕೊಂಡ ಯಾಕೂಬ್ ಮನ್ಸೂರಿ

ಝಾನ್ಸಿ ಆಸ್ಪತ್ರೆ ಬೆಂಕಿ ಅವಘಡ: 7 ಶಿಶುಗಳನ್ನು ರಕ್ಷಿಸಿ, ತನ್ನದೇ ಅವಳಿ ಮಕ್ಕಳನ್ನು ಕಳೆದುಕೊಂಡ ಯಾಕೂಬ್ ಮನ್ಸೂರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...