Homeಮುಖಪುಟಮಣಿಪುರ ಹಿಂಸಾಚಾರ: ಸಿಎಂ ಸಿಂಗ್‌ರನ್ನು ಪದಚ್ಯುತಗೊಳಿಸಲು ಸರ್ವಪಕ್ಷ ಸಭೆಯಲ್ಲಿ ಒತ್ತಾಯ

ಮಣಿಪುರ ಹಿಂಸಾಚಾರ: ಸಿಎಂ ಸಿಂಗ್‌ರನ್ನು ಪದಚ್ಯುತಗೊಳಿಸಲು ಸರ್ವಪಕ್ಷ ಸಭೆಯಲ್ಲಿ ಒತ್ತಾಯ

- Advertisement -
- Advertisement -

ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರನ್ನು ಪದಚ್ಯುತಗೊಳಿಸಬೇಕು. ಏಕೆಂದರೆ ರಾಜ್ಯದ ಜನರು ಅವರ ಮೇಲಿನ ನಂಬಿಕೆಯನ್ನು ಕಳೆದುಕೊಂಡಿದ್ದಾರೆ ಎಂದು ಎಂದು ಪ್ರತಿಪಕ್ಷ ನಾಯಕರು ಶನಿವಾರ ಒತ್ತಾಯಿಸಿದ್ದಾರೆ.

ದೆಹಲಿಯಲ್ಲಿ ನಡೆದ ಸರ್ವಪಕ್ಷ ಸಭೆಯ ನಂತರ ಮಾತನಾಡಿದ ಆರ್‌ಜೆಡಿ ಸಂಸದ ಮನೋಜ್ ಝಾ ಅವರು. ”ಮಣಿಪುರದಲ್ಲಿ ಆಡಳಿತದ ನೇತೃತ್ವ ವಹಿಸುವ ವ್ಯಕ್ತಿಯ ಮೇಲೆ ನಂಬಿಕೆ ಇಲ್ಲ ಎಂದು ಹೇಳುವ ಮಟ್ಟಕ್ಕೆ ಇಡೀ ಪ್ರತಿಪಕ್ಷಗಳು ಬಂದಿವೆ. ಆ ವ್ಯಕ್ತಿ ಉಸ್ತುವಾರಿಯಾಗುವವರೆಗೂ ನೀವು ಶಾಂತಿಯನ್ನು ಹೊಂದಲು ಸಾಧ್ಯವಿಲ್ಲ” ಎಂದು ಹೇಳಿದರು.

ಮಣಿಪುರದಲ್ಲಿ ನಡೆಯುತ್ತಿರುವ ಜನಾಂಗೀಯ ಹಿಂಸಾಚಾರದ ಕುರಿತು ಚರ್ಚಿಸಲು ಜೂನ್ 22 ರಂದು ಗೃಹ ಸಚಿವ ಅಮಿತ್ ಶಾ ಅವರು ಸರ್ವಪಕ್ಷ ಸಭೆಯನ್ನು ಕರೆದಿದ್ದರು. ಸಭೆಯಲ್ಲಿ ಕಾಂಗ್ರೆಸ್, ಭಾರತೀಯ ಜನತಾ ಪಕ್ಷ, ಆರ್‌ಜೆಡಿ, ಶಿವಸೇನೆ (ಉದ್ಧವ್ ಬಾಳಾಸಾಹೇಬ್ ಠಾಕ್ರೆ), ಆಮ್ ಆದ್ಮಿ ಪಕ್ಷ, ದ್ರಾವಿಡ ಮುನ್ನೇತ್ರ ಕಳಗಂ, ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ), ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ, ಸಮಾಜವಾದಿ ಪಕ್ಷ, ನ್ಯಾಷನಲ್ ಪೀಪಲ್ಸ್ ಪಾರ್ಟಿ ಮತ್ತು ಬಿಜು ಜನತಾ ದಳ ಇತರ ಮುಖಂಡರು ಭಾಗವಹಿಸಿದ್ದರು.

ಮಣಿಪುರದಲ್ಲಿ ಮೇ 3ರಿಂದ ಮೈತಿ ಮತ್ತು ಕುಕಿ ಸಮುದಾಯಗಳ ನಡುವಿನ ಜನಾಂಗೀಯ ಘರ್ಷಣೆಗಳು ನಡೆಯುತ್ತಲೇ ಇವೆ. ಈ ಹಿಂಸಾಚಾರದಲ್ಲಿ 100ಕ್ಕೂ ಹೆಚ್ಚು ಜನರ ಸಾವಿಗೀಡಾಗಿದ್ದಾರೆ, 300 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಮತ್ತು ಸಾವಿರಾರು ಮಂದಿ ಸ್ಥಳಾಂತರಗೊಂಡಿದ್ದಾರೆ. ಪರಿಶಿಷ್ಟ ಪಂಗಡದ ವರ್ಗಕ್ಕೆ ಸೇರಿಸಬೇಕೆಂಬ ಬಹುಸಂಖ್ಯಾತ ಮೈತಿ ಸಮುದಾಯದ ಬೇಡಿಕೆಯನ್ನು ವಿರೋಧಿಸಿ ಸಾವಿರಾರು ಜನರು ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗವಹಿಸಿದ ನಂತರ ಹಿಂಸಾಚಾರ ಾರಂಭವಾಯಿತು.

ಮಣಿಪುರದಲ್ಲಿ ಹಿಂಸಾಚಾರವನ್ನು ಕೊನೆಗೊಳಿಸಲು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸರ್ಕಾರ ಮತ್ತು ರಾಜ್ಯದಲ್ಲಿರುವ ಬಿಜೆಪಿ ಸರ್ಕಾರಗಳು ಬೇಕಿರುವಷ್ಟು ಪ್ರಯತ್ನಗಳನ್ನು ಮಾಡಿಲ್ಲ ಎಂದು ಹಲವಾರು ವಿರೋಧ ಪಕ್ಷಗಳು ಟೀಕಿಸಿವೆ.

ಶನಿವಾರ, ಗೃಹ ಸಚಿವರು ಆಯೋಜಿಸಿದ ಸರ್ವಪಕ್ಷ ಸಭೆಯು “ಕೇವಲ ಕಣ್ಣು ಒರೆಸುವ” ಮತ್ತು ಔಪಚಾರಿಕವಾಗಿದೆ ಎಂದು ಕಾಂಗ್ರೆಸ್ ಹೇಳಿದೆ.

ಈ ಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಪ್ರತಿನಿಧಿ, ಮಣಿಪುರದ ಮಾಜಿ ಮುಖ್ಯಮಂತ್ರಿ ಒಕ್ರಾಮ್ ಇಬೋಬಿ ಸಿಂಗ್ ಅವರಿಗೆ ಹೆಚ್ಚಿಗೆ ಮಾತನಾಡಲು ಅವಕಾಶ ನೀಡಲಿಲ್ಲ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಆರೋಪಿಸಿದ್ದಾರೆ.

ಇದನ್ನೂ ಓದಿ: ಮಣಿಪುರ ಹಿಂಸಾಚಾರವು ಭಾರತದ ಆತ್ಮಸಾಕ್ಷಿಗಾದ ಆಳವಾದ ಗಾಯ: ಸೋನಿಯಾ ಗಾಂಧಿ

”ಇಂದು ನಡೆದ ಸರ್ವಪಕ್ಷ ಸಭೆಯಲ್ಲಿ ಮಣಿಪುರದ ಏಕೈಕ ನಾಯಕ ಹಾಗೂ ಮಣಿಪುರದ ಪ್ರತಿನಿಧಿಯಾಗಿರುವ ಮಾಜಿ ಸಿಎಂ ಒಕ್ರಾಮ್ ಇಬೋಬಿ ಸಿಂಗ್ ಅವರಿಗೆ ಸಂಪೂರ್ಣವಾಗಿ ವಿಚಾರವನ್ನು ಹೇಳಲು ಅವಕಾಶ ನೀಡದಿರುವುದು ಅವರಿಗೆ ಮತ್ತು ಕಾಂಗ್ರೆಸ್ ಪಕ್ಷಕ್ಕೆ ಮಾತ್ರವಲ್ಲ, ಮಣಿಪುರದ ಜನತೆಗೆ ಮಾಡಿದ ಅವಮಾನವಾಗಿದೆ” ಅವರು ಹೇಳಿದರು.

”ನಾನು ಮಣಿಪುರ ವಿವಿಧ ಸಮುದಾಯಗಳ ಗುಂಪುಗಳನ್ನು ಭೇಟಿ ಮಾಡಿದ್ದೇನೆ ಮತ್ತು ಅವರೆಲ್ಲರೂ ಮಣಿಪುರದ ಮುಖ್ಯಮಂತ್ರಿಯ ಮೇಲೆ ವಿಶ್ವಾಸವಿಲ್ಲ ಎನ್ನುವ ಮಾತುಗಳನ್ನೇ ಹೇಳಿದ್ದಾರೆ” ಎಂದು ಸಭೆಯ ನಂತರ ಶಿವಸೇನಾ (ಉದ್ಧವ್ ಬಾಳಾಸಾಹೇಬ್ ಠಾಕ್ರೆ) ನಾಯಕಿ ಪ್ರಿಯಾಂಕಾ ಚತುರ್ವೇದಿ ಹೇಳಿದ್ದಾರೆ.

ಮುಂದಿನ ವಾರ ಮಣಿಪುರಕ್ಕೆ ಸರ್ವಪಕ್ಷಗಳ ನಿಯೋಗವನ್ನು ಕಳುಹಿಸಬೇಕೆಂದು ತೃಣಮೂಲ ಕಾಂಗ್ರೆಸ್ ಒತ್ತಾಯಿಸಿದೆ.

”ಮಣಿಪುರದ ಜನರ ವಿಶ್ವಾಸವನ್ನು ಹೆಚ್ಚಿಸಲು ಮತ್ತು ಅಲ್ಲಿ ಶಾಂತಿ ಸ್ಥಾಪಿಸಲುಯ, ಅಖಿಲ ಭಾರತ ತೃಣಮೂಲ ಕಾಂಗ್ರೆಸ್ ಮುಂದಿನ ವಾರದಲ್ಲಿ ರಾಜ್ಯಕ್ಕೆ ಸರ್ವಪಕ್ಷಗಳ ನಿಯೋಗವನ್ನು ಕಳುಹಿಸಬೇಕೆಂದು ಒತ್ತಾಯಿಸುತ್ತದೆ” ಎಂದು ಪಕ್ಷವು ಹೇಳಿದೆ.

”ಕೇಂದ್ರ ಸರ್ಕಾರವು ಮಣಿಪುರ ಬಿಕ್ಕಟ್ಟನ್ನು ನಿರ್ಲಕ್ಷಿಸುತ್ತಿದೆ ಎಂಬ ಸಂದೇಶ ಹೊರಬಿದ್ದಿದೆ. ಅದನ್ನು ಸರಿಪಡಿಸಲು, ಅಲ್ಲಿಯ ಜನಸಮುದಾಯವನ್ನು ಕಾಳಜಿ ಮಾಡಲು, ಶಾಂತಿ ಮತ್ತು ಸಾಮರಸ್ಯವನ್ನು ಪುನಃಸ್ಥಾಪಿಸುವ ಕೆಲಸವಾಗಬೇಕಿದೆ” ಎಂದು ಟಿಎಂಸಿ ಹೇಳಿದೆ.

ಈ ವೇಳೆ ಅಮಿತ್ ಶಾ ಮಾತನಾಡಿ, ಪ್ರಧಾನಿಯವರ ಸೂಚನೆಯ ಮೇರೆಗೆ ಬಿಜೆಪಿಯ ಮಣಿಪುರ ಉಸ್ತುವಾರಿ ಸಂಬಿತ್ ಪಾತ್ರಾ ಅವರು ಮಣಿಪುರದಲ್ಲಿ ಶಾಂತಿಯನ್ನು ಪುನಃಸ್ಥಾಪಿಸಲು ಎಲ್ಲಾ ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದು ಪ್ರತಿಪಕ್ಷಗಳಿಗೆ ತಿಳಿಸಿದರು.

”ರಾಜ್ಯದಲ್ಲಿ ಶಾಂತಿ ಮರುಸ್ಥಾಪನೆಗಾಗಿ ಎಲ್ಲಾ ರಾಜಕೀಯ ಪಕ್ಷಗಳು ತಮ್ಮ ಸಲಹೆಗಳನ್ನು ನೀಡಿವೆ. ಕೇಂದ್ರ ಸರ್ಕಾರವು ಅವುಗಳನ್ನು ಮುಕ್ತ ಮನಸ್ಸಿನಿಂದ ಪರಿಗಣಿಸುತ್ತದೆ” ಎಂದು ಹೇಳಿದ್ದಾರೆ.

”ಮಣಿಪುರದಲ್ಲಿ ಶಾಂತಿ ಮರುಸ್ಥಾಪನೆಗಾಗಿ ಎಲ್ಲಾ ರಾಜಕೀಯ ಪಕ್ಷಗಳು ಸೂಕ್ಷ್ಮವಾಗಿ ಮತ್ತು ರಾಜಕೀಯವನ್ನು ಬದಿಗಿಟ್ಟು ತಮ್ಮ ಸಲಹೆಗಳನ್ನು ನೀಡಿವೆ. ಭಾರತ ಸರ್ಕಾರ ಈ ಸಲಹೆಗಳನ್ನು ಮುಕ್ತ ಮನಸ್ಸಿನಿಂದ ಪರಿಗಣಿಸುತ್ತದೆ. ಪ್ರಧಾನಿ ನರೇಂದ್ರ ಮೋದಿ ಮೊದಲ ದಿನದಿಂದ ಮಣಿಪುರದ ಪರಿಸ್ಥಿತಿಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತಿದ್ದಾರೆ. ಈ ಸಮಸ್ಯೆಗೆ ಪರಿಹಾರವನ್ನು ಕಂಡುಹಿಡಿಯಲು ನಮಗೆ ಮಾರ್ಗದರ್ಶನ ನೀಡುತ್ತಿದ್ದಾರೆ” ಎಂದು ಶಾ ಹೇಳಿದ್ದಾರೆ.

”ಎಲ್ಲರನ್ನೂ ಒಗ್ಗೂಡಿಸಿ ಮಣಿಪುರ ಸಮಸ್ಯೆಯನ್ನು ಪರಿಹರಿಸಲು ಮೋದಿ ಸರ್ಕಾರ ಬದ್ಧವಾಗಿದೆ. ರಾಜ್ಯದಲ್ಲಿ ಹಿಂಸಾಚಾರದಿಂದ ಇನ್ನು ಮುಂದೆ ಯಾವುದೇ ಜೀವಗಳು ಬಲಿಯಾಗಬಾರದು ಎಂಬುದು ಮೋದಿ ಸರ್ಕಾರದ ಆದ್ಯತೆಯಾಗಿದೆ” ಎಂದು ಹೇಳಿದರು.

”ಮಣಿಪುರದಲ್ಲಿ ಪರಿಸ್ಥಿತಿ ನಿಧಾನವಾಗಿ ಸಹಜ ಸ್ಥಿತಿಗೆ ಮರಳುತ್ತಿದೆ. ಜೂನ್ 13 ರ ತಡರಾತ್ರಿಯಿಂದ ರಾಜ್ಯದಲ್ಲಿ ಹಿಂಸಾಚಾರದಲ್ಲಿ ಒಬ್ಬರೂ ಸಾವನ್ನಪ್ಪಿಲ್ಲ. ರಾಜ್ಯದಲ್ಲಿ 36,000 ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ, 40 ಐಪಿಎಸ್ ಅಧಿಕಾರಿಗಳನ್ನು ಮಣಿಪುರಕ್ಕೆ ಕಳುಹಿಸಲಾಗಿದೆ, 20 ವೈದ್ಯಕೀಯ ತಂಡಗಳನ್ನು ಕಳುಹಿಸಲಾಗಿದ. ಔಷಧಿಗಳು ಸೇರಿದಂತೆ ಎಲ್ಲಾ ಅಗತ್ಯ ವಸ್ತುಗಳ ಪೂರೈಕೆಯನ್ನು ಖಾತ್ರಿಪಡಿಸಲಾಗುತ್ತಿದೆ” ಎಂದು ಶಾ ಹೇಳಿದ್ದಾರೆ.

ಚುರಚಂದಪುರದಲ್ಲಿ ಮೌನ ರ್ಯಾಲಿ ನಡೆಯಿತು

ಮಣಿಪುರದ ಚುರಾಚಂದ್‌ಪುರ ಜಿಲ್ಲೆಯಲ್ಲಿ ಶನಿವಾರ ಜಂಟಿ ವಿದ್ಯಾರ್ಥಿ ಸಂಘಟನೆಯು ರಾಜ್ಯದಲ್ಲಿ ನಡೆದ ಹಿಂಸಾಚಾರದಲ್ಲಿ ಹುತಾತ್ಮರಾದ ಆದಿವಾಸಿಗಳನ್ನು ಸ್ಮರಿಸಲು ಮೌನ ರ್ಯಾಲಿಯನ್ನು ಆಯೋಜಿಸಿತ್ತು. ಕಪ್ಪು ಬಟ್ಟೆಗಳನ್ನು ಧರಿಸಿ, ಭಾಗವಹಿಸುವವರು ಜನಾಂಗೀಯ ಸಂಘರ್ಷದಲ್ಲಿ ಸತ್ತವರನ್ನು ಪ್ರತಿನಿಧಿಸಲು 100 ಡಮ್ಮಿ ಶವಪೆಟ್ಟಿಗೆಯನ್ನು ಹೊತ್ತುಕೊಂಡು ಮೌನವಾಗಿ ಭಾಗವಹಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...