ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರನ್ನು ಪದಚ್ಯುತಗೊಳಿಸಬೇಕು. ಏಕೆಂದರೆ ರಾಜ್ಯದ ಜನರು ಅವರ ಮೇಲಿನ ನಂಬಿಕೆಯನ್ನು ಕಳೆದುಕೊಂಡಿದ್ದಾರೆ ಎಂದು ಎಂದು ಪ್ರತಿಪಕ್ಷ ನಾಯಕರು ಶನಿವಾರ ಒತ್ತಾಯಿಸಿದ್ದಾರೆ.
ದೆಹಲಿಯಲ್ಲಿ ನಡೆದ ಸರ್ವಪಕ್ಷ ಸಭೆಯ ನಂತರ ಮಾತನಾಡಿದ ಆರ್ಜೆಡಿ ಸಂಸದ ಮನೋಜ್ ಝಾ ಅವರು. ”ಮಣಿಪುರದಲ್ಲಿ ಆಡಳಿತದ ನೇತೃತ್ವ ವಹಿಸುವ ವ್ಯಕ್ತಿಯ ಮೇಲೆ ನಂಬಿಕೆ ಇಲ್ಲ ಎಂದು ಹೇಳುವ ಮಟ್ಟಕ್ಕೆ ಇಡೀ ಪ್ರತಿಪಕ್ಷಗಳು ಬಂದಿವೆ. ಆ ವ್ಯಕ್ತಿ ಉಸ್ತುವಾರಿಯಾಗುವವರೆಗೂ ನೀವು ಶಾಂತಿಯನ್ನು ಹೊಂದಲು ಸಾಧ್ಯವಿಲ್ಲ” ಎಂದು ಹೇಳಿದರು.
VIDEO |"The entire opposition went to the extent of saying that the person who is heading the administration there (Manipur), there is absolutely no trust in him. You can't have peace until that person is in-charge," says RJD MP Manoj Jha after all-party meeting on #Manipur… pic.twitter.com/9l7D2dQEiz
— Press Trust of India (@PTI_News) June 24, 2023
ಮಣಿಪುರದಲ್ಲಿ ನಡೆಯುತ್ತಿರುವ ಜನಾಂಗೀಯ ಹಿಂಸಾಚಾರದ ಕುರಿತು ಚರ್ಚಿಸಲು ಜೂನ್ 22 ರಂದು ಗೃಹ ಸಚಿವ ಅಮಿತ್ ಶಾ ಅವರು ಸರ್ವಪಕ್ಷ ಸಭೆಯನ್ನು ಕರೆದಿದ್ದರು. ಸಭೆಯಲ್ಲಿ ಕಾಂಗ್ರೆಸ್, ಭಾರತೀಯ ಜನತಾ ಪಕ್ಷ, ಆರ್ಜೆಡಿ, ಶಿವಸೇನೆ (ಉದ್ಧವ್ ಬಾಳಾಸಾಹೇಬ್ ಠಾಕ್ರೆ), ಆಮ್ ಆದ್ಮಿ ಪಕ್ಷ, ದ್ರಾವಿಡ ಮುನ್ನೇತ್ರ ಕಳಗಂ, ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್ವಾದಿ), ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ, ಸಮಾಜವಾದಿ ಪಕ್ಷ, ನ್ಯಾಷನಲ್ ಪೀಪಲ್ಸ್ ಪಾರ್ಟಿ ಮತ್ತು ಬಿಜು ಜನತಾ ದಳ ಇತರ ಮುಖಂಡರು ಭಾಗವಹಿಸಿದ್ದರು.
ಮಣಿಪುರದಲ್ಲಿ ಮೇ 3ರಿಂದ ಮೈತಿ ಮತ್ತು ಕುಕಿ ಸಮುದಾಯಗಳ ನಡುವಿನ ಜನಾಂಗೀಯ ಘರ್ಷಣೆಗಳು ನಡೆಯುತ್ತಲೇ ಇವೆ. ಈ ಹಿಂಸಾಚಾರದಲ್ಲಿ 100ಕ್ಕೂ ಹೆಚ್ಚು ಜನರ ಸಾವಿಗೀಡಾಗಿದ್ದಾರೆ, 300 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಮತ್ತು ಸಾವಿರಾರು ಮಂದಿ ಸ್ಥಳಾಂತರಗೊಂಡಿದ್ದಾರೆ. ಪರಿಶಿಷ್ಟ ಪಂಗಡದ ವರ್ಗಕ್ಕೆ ಸೇರಿಸಬೇಕೆಂಬ ಬಹುಸಂಖ್ಯಾತ ಮೈತಿ ಸಮುದಾಯದ ಬೇಡಿಕೆಯನ್ನು ವಿರೋಧಿಸಿ ಸಾವಿರಾರು ಜನರು ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗವಹಿಸಿದ ನಂತರ ಹಿಂಸಾಚಾರ ಾರಂಭವಾಯಿತು.
ಮಣಿಪುರದಲ್ಲಿ ಹಿಂಸಾಚಾರವನ್ನು ಕೊನೆಗೊಳಿಸಲು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸರ್ಕಾರ ಮತ್ತು ರಾಜ್ಯದಲ್ಲಿರುವ ಬಿಜೆಪಿ ಸರ್ಕಾರಗಳು ಬೇಕಿರುವಷ್ಟು ಪ್ರಯತ್ನಗಳನ್ನು ಮಾಡಿಲ್ಲ ಎಂದು ಹಲವಾರು ವಿರೋಧ ಪಕ್ಷಗಳು ಟೀಕಿಸಿವೆ.
ಶನಿವಾರ, ಗೃಹ ಸಚಿವರು ಆಯೋಜಿಸಿದ ಸರ್ವಪಕ್ಷ ಸಭೆಯು “ಕೇವಲ ಕಣ್ಣು ಒರೆಸುವ” ಮತ್ತು ಔಪಚಾರಿಕವಾಗಿದೆ ಎಂದು ಕಾಂಗ್ರೆಸ್ ಹೇಳಿದೆ.
ಈ ಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಪ್ರತಿನಿಧಿ, ಮಣಿಪುರದ ಮಾಜಿ ಮುಖ್ಯಮಂತ್ರಿ ಒಕ್ರಾಮ್ ಇಬೋಬಿ ಸಿಂಗ್ ಅವರಿಗೆ ಹೆಚ್ಚಿಗೆ ಮಾತನಾಡಲು ಅವಕಾಶ ನೀಡಲಿಲ್ಲ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಆರೋಪಿಸಿದ್ದಾರೆ.
ಇದನ್ನೂ ಓದಿ: ಮಣಿಪುರ ಹಿಂಸಾಚಾರವು ಭಾರತದ ಆತ್ಮಸಾಕ್ಷಿಗಾದ ಆಳವಾದ ಗಾಯ: ಸೋನಿಯಾ ಗಾಂಧಿ
”ಇಂದು ನಡೆದ ಸರ್ವಪಕ್ಷ ಸಭೆಯಲ್ಲಿ ಮಣಿಪುರದ ಏಕೈಕ ನಾಯಕ ಹಾಗೂ ಮಣಿಪುರದ ಪ್ರತಿನಿಧಿಯಾಗಿರುವ ಮಾಜಿ ಸಿಎಂ ಒಕ್ರಾಮ್ ಇಬೋಬಿ ಸಿಂಗ್ ಅವರಿಗೆ ಸಂಪೂರ್ಣವಾಗಿ ವಿಚಾರವನ್ನು ಹೇಳಲು ಅವಕಾಶ ನೀಡದಿರುವುದು ಅವರಿಗೆ ಮತ್ತು ಕಾಂಗ್ರೆಸ್ ಪಕ್ಷಕ್ಕೆ ಮಾತ್ರವಲ್ಲ, ಮಣಿಪುರದ ಜನತೆಗೆ ಮಾಡಿದ ಅವಮಾನವಾಗಿದೆ” ಅವರು ಹೇಳಿದರು.
The all-party meeting organised by the Home Minister today was just an eye-wash and a formality.
As the principal Opposition party, our representative the senior most leader from Manipur, 3-time elected CM Okram Ibobi Singh, was not allowed to present his points representing… pic.twitter.com/XMjfWXYHBa
— Jairam Ramesh (@Jairam_Ramesh) June 24, 2023
”ನಾನು ಮಣಿಪುರ ವಿವಿಧ ಸಮುದಾಯಗಳ ಗುಂಪುಗಳನ್ನು ಭೇಟಿ ಮಾಡಿದ್ದೇನೆ ಮತ್ತು ಅವರೆಲ್ಲರೂ ಮಣಿಪುರದ ಮುಖ್ಯಮಂತ್ರಿಯ ಮೇಲೆ ವಿಶ್ವಾಸವಿಲ್ಲ ಎನ್ನುವ ಮಾತುಗಳನ್ನೇ ಹೇಳಿದ್ದಾರೆ” ಎಂದು ಸಭೆಯ ನಂತರ ಶಿವಸೇನಾ (ಉದ್ಧವ್ ಬಾಳಾಸಾಹೇಬ್ ಠಾಕ್ರೆ) ನಾಯಕಿ ಪ್ರಿಯಾಂಕಾ ಚತುರ್ವೇದಿ ಹೇಳಿದ್ದಾರೆ.
ಮುಂದಿನ ವಾರ ಮಣಿಪುರಕ್ಕೆ ಸರ್ವಪಕ್ಷಗಳ ನಿಯೋಗವನ್ನು ಕಳುಹಿಸಬೇಕೆಂದು ತೃಣಮೂಲ ಕಾಂಗ್ರೆಸ್ ಒತ್ತಾಯಿಸಿದೆ.
”ಮಣಿಪುರದ ಜನರ ವಿಶ್ವಾಸವನ್ನು ಹೆಚ್ಚಿಸಲು ಮತ್ತು ಅಲ್ಲಿ ಶಾಂತಿ ಸ್ಥಾಪಿಸಲುಯ, ಅಖಿಲ ಭಾರತ ತೃಣಮೂಲ ಕಾಂಗ್ರೆಸ್ ಮುಂದಿನ ವಾರದಲ್ಲಿ ರಾಜ್ಯಕ್ಕೆ ಸರ್ವಪಕ್ಷಗಳ ನಿಯೋಗವನ್ನು ಕಳುಹಿಸಬೇಕೆಂದು ಒತ್ತಾಯಿಸುತ್ತದೆ” ಎಂದು ಪಕ್ಷವು ಹೇಳಿದೆ.
”ಕೇಂದ್ರ ಸರ್ಕಾರವು ಮಣಿಪುರ ಬಿಕ್ಕಟ್ಟನ್ನು ನಿರ್ಲಕ್ಷಿಸುತ್ತಿದೆ ಎಂಬ ಸಂದೇಶ ಹೊರಬಿದ್ದಿದೆ. ಅದನ್ನು ಸರಿಪಡಿಸಲು, ಅಲ್ಲಿಯ ಜನಸಮುದಾಯವನ್ನು ಕಾಳಜಿ ಮಾಡಲು, ಶಾಂತಿ ಮತ್ತು ಸಾಮರಸ್ಯವನ್ನು ಪುನಃಸ್ಥಾಪಿಸುವ ಕೆಲಸವಾಗಬೇಕಿದೆ” ಎಂದು ಟಿಎಂಸಿ ಹೇಳಿದೆ.
ಈ ವೇಳೆ ಅಮಿತ್ ಶಾ ಮಾತನಾಡಿ, ಪ್ರಧಾನಿಯವರ ಸೂಚನೆಯ ಮೇರೆಗೆ ಬಿಜೆಪಿಯ ಮಣಿಪುರ ಉಸ್ತುವಾರಿ ಸಂಬಿತ್ ಪಾತ್ರಾ ಅವರು ಮಣಿಪುರದಲ್ಲಿ ಶಾಂತಿಯನ್ನು ಪುನಃಸ್ಥಾಪಿಸಲು ಎಲ್ಲಾ ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದು ಪ್ರತಿಪಕ್ಷಗಳಿಗೆ ತಿಳಿಸಿದರು.
”ರಾಜ್ಯದಲ್ಲಿ ಶಾಂತಿ ಮರುಸ್ಥಾಪನೆಗಾಗಿ ಎಲ್ಲಾ ರಾಜಕೀಯ ಪಕ್ಷಗಳು ತಮ್ಮ ಸಲಹೆಗಳನ್ನು ನೀಡಿವೆ. ಕೇಂದ್ರ ಸರ್ಕಾರವು ಅವುಗಳನ್ನು ಮುಕ್ತ ಮನಸ್ಸಿನಿಂದ ಪರಿಗಣಿಸುತ್ತದೆ” ಎಂದು ಹೇಳಿದ್ದಾರೆ.
”ಮಣಿಪುರದಲ್ಲಿ ಶಾಂತಿ ಮರುಸ್ಥಾಪನೆಗಾಗಿ ಎಲ್ಲಾ ರಾಜಕೀಯ ಪಕ್ಷಗಳು ಸೂಕ್ಷ್ಮವಾಗಿ ಮತ್ತು ರಾಜಕೀಯವನ್ನು ಬದಿಗಿಟ್ಟು ತಮ್ಮ ಸಲಹೆಗಳನ್ನು ನೀಡಿವೆ. ಭಾರತ ಸರ್ಕಾರ ಈ ಸಲಹೆಗಳನ್ನು ಮುಕ್ತ ಮನಸ್ಸಿನಿಂದ ಪರಿಗಣಿಸುತ್ತದೆ. ಪ್ರಧಾನಿ ನರೇಂದ್ರ ಮೋದಿ ಮೊದಲ ದಿನದಿಂದ ಮಣಿಪುರದ ಪರಿಸ್ಥಿತಿಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತಿದ್ದಾರೆ. ಈ ಸಮಸ್ಯೆಗೆ ಪರಿಹಾರವನ್ನು ಕಂಡುಹಿಡಿಯಲು ನಮಗೆ ಮಾರ್ಗದರ್ಶನ ನೀಡುತ್ತಿದ್ದಾರೆ” ಎಂದು ಶಾ ಹೇಳಿದ್ದಾರೆ.
”ಎಲ್ಲರನ್ನೂ ಒಗ್ಗೂಡಿಸಿ ಮಣಿಪುರ ಸಮಸ್ಯೆಯನ್ನು ಪರಿಹರಿಸಲು ಮೋದಿ ಸರ್ಕಾರ ಬದ್ಧವಾಗಿದೆ. ರಾಜ್ಯದಲ್ಲಿ ಹಿಂಸಾಚಾರದಿಂದ ಇನ್ನು ಮುಂದೆ ಯಾವುದೇ ಜೀವಗಳು ಬಲಿಯಾಗಬಾರದು ಎಂಬುದು ಮೋದಿ ಸರ್ಕಾರದ ಆದ್ಯತೆಯಾಗಿದೆ” ಎಂದು ಹೇಳಿದರು.
”ಮಣಿಪುರದಲ್ಲಿ ಪರಿಸ್ಥಿತಿ ನಿಧಾನವಾಗಿ ಸಹಜ ಸ್ಥಿತಿಗೆ ಮರಳುತ್ತಿದೆ. ಜೂನ್ 13 ರ ತಡರಾತ್ರಿಯಿಂದ ರಾಜ್ಯದಲ್ಲಿ ಹಿಂಸಾಚಾರದಲ್ಲಿ ಒಬ್ಬರೂ ಸಾವನ್ನಪ್ಪಿಲ್ಲ. ರಾಜ್ಯದಲ್ಲಿ 36,000 ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ, 40 ಐಪಿಎಸ್ ಅಧಿಕಾರಿಗಳನ್ನು ಮಣಿಪುರಕ್ಕೆ ಕಳುಹಿಸಲಾಗಿದೆ, 20 ವೈದ್ಯಕೀಯ ತಂಡಗಳನ್ನು ಕಳುಹಿಸಲಾಗಿದ. ಔಷಧಿಗಳು ಸೇರಿದಂತೆ ಎಲ್ಲಾ ಅಗತ್ಯ ವಸ್ತುಗಳ ಪೂರೈಕೆಯನ್ನು ಖಾತ್ರಿಪಡಿಸಲಾಗುತ್ತಿದೆ” ಎಂದು ಶಾ ಹೇಳಿದ್ದಾರೆ.
ಚುರಚಂದಪುರದಲ್ಲಿ ಮೌನ ರ್ಯಾಲಿ ನಡೆಯಿತು
ಮಣಿಪುರದ ಚುರಾಚಂದ್ಪುರ ಜಿಲ್ಲೆಯಲ್ಲಿ ಶನಿವಾರ ಜಂಟಿ ವಿದ್ಯಾರ್ಥಿ ಸಂಘಟನೆಯು ರಾಜ್ಯದಲ್ಲಿ ನಡೆದ ಹಿಂಸಾಚಾರದಲ್ಲಿ ಹುತಾತ್ಮರಾದ ಆದಿವಾಸಿಗಳನ್ನು ಸ್ಮರಿಸಲು ಮೌನ ರ್ಯಾಲಿಯನ್ನು ಆಯೋಜಿಸಿತ್ತು. ಕಪ್ಪು ಬಟ್ಟೆಗಳನ್ನು ಧರಿಸಿ, ಭಾಗವಹಿಸುವವರು ಜನಾಂಗೀಯ ಸಂಘರ್ಷದಲ್ಲಿ ಸತ್ತವರನ್ನು ಪ್ರತಿನಿಧಿಸಲು 100 ಡಮ್ಮಿ ಶವಪೆಟ್ಟಿಗೆಯನ್ನು ಹೊತ್ತುಕೊಂಡು ಮೌನವಾಗಿ ಭಾಗವಹಿಸಿದರು.
Coffin protest held at Churachandpur to mourn death of Kuki-Zo tribals
A silent coffin rally was organized on 24 June 2023 by the joint student body in Lamka (formerly known as Churachandpur) to mourn and commemorate Kuki-Zo tribals who have died in the ethnic conflict in… pic.twitter.com/IfJO1DNtx7
— ब्लिस नियांग नगैह वुंग सिंगसन (@bliss_singson) June 24, 2023